Homeಮುಖಪುಟಈಗ ಯಾವುದೇ ಚುನಾವಣೆ ಇಲ್ಲ, ಜೆಡಿಎಸ್​ ಜೊತೆಗೆ ಮೈತ್ರಿ ಅವಶ್ಯಕತೆ ಇಲ್ಲ; ಬಿ.ಸಿ. ಪಾಟೀಲ್

ಈಗ ಯಾವುದೇ ಚುನಾವಣೆ ಇಲ್ಲ, ಜೆಡಿಎಸ್​ ಜೊತೆಗೆ ಮೈತ್ರಿ ಅವಶ್ಯಕತೆ ಇಲ್ಲ; ಬಿ.ಸಿ. ಪಾಟೀಲ್

ಜೆಡಿಎಸ್​ ಸ್ವಾಭಿಮಾನಿಗಳ ಪಕ್ಷ, ನಮಗೆ ಯಾವುದೇ ಇತರೆ ಪಕ್ಷಗಳ ಜೊತೆಗೆ ವಿಲೀನವಾಗುವ ಅಥವಾ ಮೈತ್ರಿ ಸಾಧಿಸುವ ಅಗತ್ಯವಿಲ್ಲ ಎಂದು ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ಸಹ ಕಿಡಿಕಾರಿದ್ದರು.

- Advertisement -
- Advertisement -

ಪ್ರಸ್ತುತ ಬಿಜೆಪಿ-ಜೆಡಿಎಸ್​ ಮೈತ್ರಿ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಜೆಡಿಎಸ್​ ಬಿಜೆಪಿಯ ‘ಬಿ ಟೀಮ್’​ ಎಂದು ಟೀಕಿಸಲಾಗುತ್ತಿದೆ. ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಸಹ ಸ್ಪಷ್ಟನೆ ನೀಡಿದ್ದರು. ಇದರ ಬೆನ್ನಿಗೆ ಬಿಜೆಪಿ-ಜೆಡಿಎಸ್​ ಮೈತ್ರಿ ಬಗ್ಗೆ ಮಾತನಾಡಿರುವ ಕೃಷಿ ಸಚಿವ ಬಿ.ಸಿ. ಪಾಟೀಲ್​ “ಈಗ ಯಾವುದೇ ಚುನಾವಣೆ ಇಲ್ಲ. ಹೀಗಾಗಿ ಜೆಡಿಎಸ್ ಜೊತೆ ಹೊಂದಾಣಿಕೆ ಅವಶ್ಯಕತೆ ಇಲ್ಲ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ-ಜೆಡಿಎಸ್​ ಮೈತ್ರಿ ಎಂಬ ವದಂತಿ ಜೆಡಿಎಸ್​ನವರೇ ಸೃಷ್ಟಿಸಿರುವ ಗಿಮಿಕ್​ ಎಂದು ಕಿಡಿಕಾರಿರುವ ಸಚಿವ ಬಿ.ಸಿ. ಪಾಟೀಲ್, “ಬಿಜೆಪಿ ಸರ್ಕಾರ ಸುಭದ್ರವಾಗಿದೆ. ನಮಗೆ ಯಾರ ಬೆಂಬವೂ ಅಗತ್ಯವಿಲ್ಲ. ಅಲ್ಲದೆ, ಈಗ ಚುನಾವಣೆ ಇಲ್ಲವಾದ ಕಾರಣ ಜೆಡಿಎಸ್​ ಮೈತ್ರಿ ನಮಗೆ ಅಗತ್ಯವೂ ಇಲ್ಲ. ಅಸಲಿಗೆ ಇದೊಂದು ಗಿಮಿಕ್ ನಡೆಯುತ್ತಿದೆ. ಜೆಡಿಎಸ್ ನವರೇ ಗಿಮಿಕ್ ಮಾಡುತ್ತಿದ್ದಾರೆ. ಆದರೆ, ಯಾವ ಕಾರಣಕ್ಕಾಗಿ ಈ ಗಿಮಿಕ್​ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಅದನ್ನ ನನ್ನ ಬಾಯಿಂದ ಯಾಕೆ ಹೇಳಿಸ್ತೀರಾ?” ಎಂದು ಕಿಡಿಕಾರಿದ್ದಾರೆ.

ಅಲ್ಲದೆ, “ಯಾರಾದರೂ ಬಿಜೆಪಿ ತತ್ವ ಸಿದ್ದಾಂತ ಮೆಚ್ಚಿ ಪಕ್ಷಕ್ಕೆ ಬಂದರೆ ನಾವು ಎಲ್ಲರನ್ನೂ ಸ್ವಾಗತಿಸುತ್ತೇವೆ. ಆದರೆ, ಯಾವ ಕಾಲದಲ್ಲೂ ಜೆಡಿಎಸ್​ ಜೊತೆಗೆ ಮಾತ್ರ ಮೈತ್ರಿ ಸಾಧ್ಯವಿಲ್ಲ. ಇವೆಲ್ಲಾ ಊಹಾಪೋಹ ವದಂತಿಗಳಾಗಿದ್ದು, ಜನ ಇದಕ್ಕೆ ಕಿವಿಗೊಡದೆ ಇರುವುದು ಒಳ್ಳೆಯದು” ಎಂದು ತಿಳಿಸಿದ್ಧಾರೆ.

ಇದೇ ವಿಚಾರವಾಗಿ ಇಂದು ಬೆಳಗ್ಗೆಯೇ ಕಿಡಿಕಾರಿದ್ದ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ, “ಜೆಡಿಎಸ್​ ಸ್ವಾಭಿಮಾನಿಗಳ ಪಕ್ಷ, ನಮಗೆ ಯಾವುದೇ ಇತರೆ ಪಕ್ಷಗಳ ಜೊತೆಗೆ ವಿಲೀನವಾಗುವ ಅಥವಾ ಮೈತ್ರಿ ಸಾಧಿಸುವ ಅಗತ್ಯವಿಲ್ಲ. ಜನವರಿಯಿಂದ ಬೇರೆ ರೀತಿಯಲ್ಲಿ ಜೆಡಿಎಸ್​ ಪಕ್ಷವನ್ನು ಸಂಘಟಿಸಲಾಗುವುದು. ಅಲ್ಲದೆ, ರಾಜ್ಯದಲ್ಲಿ ಸ್ವಂತ ಬಲದ ಮೇಲೆ ಜೆಡಿಎಸ್​ ಶೀಘ್ರದಲ್ಲೇ ಸರ್ಕಾರ ರಚಿಸಲಿದೆ” ಎಂದಿದ್ದರು.


ಇದನ್ನೂ ಓದಿ :ಈ ದೇಶದಲ್ಲಿ ಯಾವ ಪಕ್ಷಕ್ಕೂ ಯಾವ ಸಿದ್ಧಾಂತವೂ ಇಲ್ಲ: ಎಚ್.ಡಿ ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...