Homeಮುಖಪುಟಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಕೈವಾಡದ ಬಗ್ಗೆ ಪುರಾವೆ ಇಲ್ಲ: NIA

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಕೈವಾಡದ ಬಗ್ಗೆ ಪುರಾವೆ ಇಲ್ಲ: NIA

ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿಯ ವಿರುದ್ದ ಕೂಡಾ ಯಾವುದೆ ಚಾರ್ಜ್‌ಶೀಟ್ ದಾಖಲಿಸಲಾಗಿಲ್ಲ ಎಂದು ಏಜೆನ್ಸಿಯು ತಿಳಿಸಿದೆ

- Advertisement -
- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆದೇಶದ ಮೇರೆಗೆ ಸ್ವಪ್ನಾ ಸುರೇಶ್ ಅವರ ಚಿನ್ನ ಕಳ್ಳಸಾಗಣೆ ನಡೆದಿದೆ ಎಂಬ ಆರೋಪಕ್ಕೆ, ಪ್ರಕರಣವನ್ನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA) ಅಡಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯು ಈ ಹೇಳಿಕೆಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿದೆ.

ಕಳೆದ ಅಕ್ಟೋಬರ್‌ನಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಬಂಧಿಸಿದ್ದ ಸ್ವಪ್ನಾ ಅವರನ್ನು ದೀರ್ಘವಾಗಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಮ್ಮ ವಿಚಾರಣೆಯಲ್ಲಿ, ಅಂತಹ ಯಾವುದೇ ವಿಷಯ ತಿಳಿದು ಬಂದಿಲ್ಲ. ಸ್ವಪ್ನಾ ಸುರೇಶ್ ನಮಗೆ ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೆ ಬೇರೆ ಯಾವುದೇ ತನಿಖಾ ಏಜೆನ್ಸಿಯ ತನಿಖೆಯ ಕುರಿತು ನಾವು ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಎನ್‌ಐಎ ಮೂಲಗಳು ತಿಳಿಸಿದೆ.

ಇದನ್ನೂ ಓದಿ: ಸರ್ಕಾರ ಮೌನವಾಗಿದೆ ಎಂದರೆ ಮುಂದೆ ಏನೋ ಸಂಭವಿಸಲಿದೆ: ರಾಕೇಶ್ ಟಿಕಾಯತ್ ಕಳವಳ

ಈ ವರ್ಷದ ಜನವರಿಯಲ್ಲಿ ಎನ್‌ಐಎ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಕೂಡಾ ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ವಿರುದ್ಧ ಯಾವುದೆ ಪ್ರಕರಣ ದಾಖಲಿಸಿಲ್ಲ. ಸ್ವಪ್ನಾ ಅವರೊಂದಿಗಿನ ಸಂಪರ್ಕಕ್ಕಾಗಿ ಶಿವಶಂಕರ್ ಅವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿತ್ತು ಮತ್ತು ಅವರನ್ನು ಜಾರಿ ನಿರ್ದೇಶನಾಲಯವೂ ಬಂಧಿಸಿತ್ತು.

ಕಳೆದ ಸೆಪ್ಟೆಂಬರ್‌ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಶಿವಶಂಕರ್ ಅವರನ್ನು ವಿಚಾರಣೆ ನಡೆಸಿತ್ತು. ಇದಾಗಿ ಒಂದು ತಿಂಗಳ ನಂತರ, ಮನಿ ಲಾಂಡರಿಂಗ್ ಆರೋಪದ ಮೇಲೆ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಈ ವೇಳೆ ಶಿವಶಂಕರ್ ಮುಖ್ಯಮಂತ್ರಿ ಕಚೇರಿಯ ಭಾಗವಾಗಿದ್ದಾಗ ಅನುಮೋದನೆ ಪಡೆದ ಹಲವಾರು ಪ್ರಮುಖ ಸರ್ಕಾರಿ ಯೋಜನೆಗಳ ಬಗ್ಗೆ ಇದು ತನಿಖೆಯನ್ನು ಪ್ರಾರಂಭಿಸಿತ್ತು.

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಶಿವಶಂಕರ್‌ನನ್ನು ಬಂಧಿಸಲು ಅಥವಾ ಆರೋಪಿಸಲು ಸಾಕಷ್ಟು ಪುರಾವೆಗಳು ದೊರೆತಿಲ್ಲ ಎಂದು ಎನ್‌ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

“ಜೂನ್ 2019 ರಿಂದ ಆರೋಪಿಗಳು ಉದ್ದೇಶಪೂರ್ವಕವಾಗಿ ಸಂಚು ಹೂಡಿ, ತಿರುವನಂತಪುರಂನ ಯುಎಇ ಕಾನ್ಸುಲೇಟ್ ಜನರಲ್‌ನಲ್ಲಿ ರಾಜತಾಂತ್ರಿಕರನ್ನು ಬಳಸಿಕೊಂಡು ಆಮದು ಸರಕು ಮೂಲಕ 167 ಕೆ.ಜಿ. ಚಿನ್ನವನ್ನು ನವೆಂಬರ್ 2019 ಮತ್ತು ಜೂನ್ 2020 ರ ನಡುವೆ ಯುಎಇಯಿಂದ ಕಳ್ಳಸಾಗಣೆ ಮಾಡಲಾಗಿದೆ. ವಿಶೇಷವೆಂದರೆ, ಈ ಪ್ರಕರಣದ ಪ್ರಮುಖ ಆರೋಪಿಗಳು ಬಹ್ರೇನ್, ಸೌದಿ ಅರೇಬಿಯಾ ಮತ್ತು ಮಲೇಷ್ಯಾದಂತಹ ದೇಶಗಳಿಂದ ಹೆಚ್ಚಿನ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯೋಜಿಸಿದ್ದರು” ಎಂದು ಸ್ವಪ್ನಾ ಮತ್ತು ಇತರ 19 ಜನರ ವಿರುದ್ಧ ದಾಖಲಾದ ಚಾರ್ಜ್‌ಶೀಟ್‌ನಲ್ಲಿ ಎನ್‌ಐಎ ತಿಳಿಸಿತ್ತು.

2020 ರ ಜುಲೈ 5 ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಟರ್ಮಿನಲ್‌ನಲ್ಲಿ ಯುಎಇಯಿಂದ ಬಂದ ರಾಜತಾಂತ್ರಿಕ ಸಾಮಾನು ಸರಂಜಾಮುಗಳಿಂದ 14.82 ಕೋಟಿ ರೂ.ಗಳ 30 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಯಿತು.

ಈ ಪ್ರಕರಣದ ತನಿಖೆಗಾಗಿ ಆರಂಭದಲ್ಲಿ ಸರಿತ್ ಪಿಎಸ್, ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರನ್ನು ಬಂಧಿಸಲಾಗಿತ್ತು. ಇಲ್ಲಿಯವರೆಗೆ ಈ ಪ್ರಕರಣದಲ್ಲಿ ಎನ್‌ಐಎಯು 21 ಜನರನ್ನು ಬಂಧಿಸಿದೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...