Homeಮುಖಪುಟಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಕೈವಾಡದ ಬಗ್ಗೆ ಪುರಾವೆ ಇಲ್ಲ: NIA

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಪಿಣರಾಯಿ ವಿಜಯನ್ ಕೈವಾಡದ ಬಗ್ಗೆ ಪುರಾವೆ ಇಲ್ಲ: NIA

ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿಯ ವಿರುದ್ದ ಕೂಡಾ ಯಾವುದೆ ಚಾರ್ಜ್‌ಶೀಟ್ ದಾಖಲಿಸಲಾಗಿಲ್ಲ ಎಂದು ಏಜೆನ್ಸಿಯು ತಿಳಿಸಿದೆ

- Advertisement -
- Advertisement -

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಆದೇಶದ ಮೇರೆಗೆ ಸ್ವಪ್ನಾ ಸುರೇಶ್ ಅವರ ಚಿನ್ನ ಕಳ್ಳಸಾಗಣೆ ನಡೆದಿದೆ ಎಂಬ ಆರೋಪಕ್ಕೆ, ಪ್ರಕರಣವನ್ನು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ(UAPA) ಅಡಿ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಯು ಈ ಹೇಳಿಕೆಗೆ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ಹೇಳಿದೆ.

ಕಳೆದ ಅಕ್ಟೋಬರ್‌ನಲ್ಲಿ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಎನ್‌ಐಎ ಬಂಧಿಸಿದ್ದ ಸ್ವಪ್ನಾ ಅವರನ್ನು ದೀರ್ಘವಾಗಿ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ನಮ್ಮ ವಿಚಾರಣೆಯಲ್ಲಿ, ಅಂತಹ ಯಾವುದೇ ವಿಷಯ ತಿಳಿದು ಬಂದಿಲ್ಲ. ಸ್ವಪ್ನಾ ಸುರೇಶ್ ನಮಗೆ ಅಂತಹ ಯಾವುದೇ ಹೇಳಿಕೆಯನ್ನು ನೀಡಿಲ್ಲ. ಆದರೆ ಬೇರೆ ಯಾವುದೇ ತನಿಖಾ ಏಜೆನ್ಸಿಯ ತನಿಖೆಯ ಕುರಿತು ನಾವು ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಎನ್‌ಐಎ ಮೂಲಗಳು ತಿಳಿಸಿದೆ.

ಇದನ್ನೂ ಓದಿ: ಸರ್ಕಾರ ಮೌನವಾಗಿದೆ ಎಂದರೆ ಮುಂದೆ ಏನೋ ಸಂಭವಿಸಲಿದೆ: ರಾಕೇಶ್ ಟಿಕಾಯತ್ ಕಳವಳ

ಈ ವರ್ಷದ ಜನವರಿಯಲ್ಲಿ ಎನ್‌ಐಎ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಕೂಡಾ ಮುಖ್ಯಮಂತ್ರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರ್ ವಿರುದ್ಧ ಯಾವುದೆ ಪ್ರಕರಣ ದಾಖಲಿಸಿಲ್ಲ. ಸ್ವಪ್ನಾ ಅವರೊಂದಿಗಿನ ಸಂಪರ್ಕಕ್ಕಾಗಿ ಶಿವಶಂಕರ್ ಅವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿತ್ತು ಮತ್ತು ಅವರನ್ನು ಜಾರಿ ನಿರ್ದೇಶನಾಲಯವೂ ಬಂಧಿಸಿತ್ತು.

ಕಳೆದ ಸೆಪ್ಟೆಂಬರ್‌ನಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಶಿವಶಂಕರ್ ಅವರನ್ನು ವಿಚಾರಣೆ ನಡೆಸಿತ್ತು. ಇದಾಗಿ ಒಂದು ತಿಂಗಳ ನಂತರ, ಮನಿ ಲಾಂಡರಿಂಗ್ ಆರೋಪದ ಮೇಲೆ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿತ್ತು. ಈ ವೇಳೆ ಶಿವಶಂಕರ್ ಮುಖ್ಯಮಂತ್ರಿ ಕಚೇರಿಯ ಭಾಗವಾಗಿದ್ದಾಗ ಅನುಮೋದನೆ ಪಡೆದ ಹಲವಾರು ಪ್ರಮುಖ ಸರ್ಕಾರಿ ಯೋಜನೆಗಳ ಬಗ್ಗೆ ಇದು ತನಿಖೆಯನ್ನು ಪ್ರಾರಂಭಿಸಿತ್ತು.

ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಶಿವಶಂಕರ್‌ನನ್ನು ಬಂಧಿಸಲು ಅಥವಾ ಆರೋಪಿಸಲು ಸಾಕಷ್ಟು ಪುರಾವೆಗಳು ದೊರೆತಿಲ್ಲ ಎಂದು ಎನ್‌ಐಎ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

“ಜೂನ್ 2019 ರಿಂದ ಆರೋಪಿಗಳು ಉದ್ದೇಶಪೂರ್ವಕವಾಗಿ ಸಂಚು ಹೂಡಿ, ತಿರುವನಂತಪುರಂನ ಯುಎಇ ಕಾನ್ಸುಲೇಟ್ ಜನರಲ್‌ನಲ್ಲಿ ರಾಜತಾಂತ್ರಿಕರನ್ನು ಬಳಸಿಕೊಂಡು ಆಮದು ಸರಕು ಮೂಲಕ 167 ಕೆ.ಜಿ. ಚಿನ್ನವನ್ನು ನವೆಂಬರ್ 2019 ಮತ್ತು ಜೂನ್ 2020 ರ ನಡುವೆ ಯುಎಇಯಿಂದ ಕಳ್ಳಸಾಗಣೆ ಮಾಡಲಾಗಿದೆ. ವಿಶೇಷವೆಂದರೆ, ಈ ಪ್ರಕರಣದ ಪ್ರಮುಖ ಆರೋಪಿಗಳು ಬಹ್ರೇನ್, ಸೌದಿ ಅರೇಬಿಯಾ ಮತ್ತು ಮಲೇಷ್ಯಾದಂತಹ ದೇಶಗಳಿಂದ ಹೆಚ್ಚಿನ ಚಿನ್ನವನ್ನು ಕಳ್ಳಸಾಗಣೆ ಮಾಡಲು ಯೋಜಿಸಿದ್ದರು” ಎಂದು ಸ್ವಪ್ನಾ ಮತ್ತು ಇತರ 19 ಜನರ ವಿರುದ್ಧ ದಾಖಲಾದ ಚಾರ್ಜ್‌ಶೀಟ್‌ನಲ್ಲಿ ಎನ್‌ಐಎ ತಿಳಿಸಿತ್ತು.

2020 ರ ಜುಲೈ 5 ರಂದು ಕೊಚ್ಚಿಯ ಕಸ್ಟಮ್ಸ್ (ಪ್ರಿವೆಂಟಿವ್) ಕಮಿಷನರೇಟ್, ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಏರ್ ಕಾರ್ಗೋ ಟರ್ಮಿನಲ್‌ನಲ್ಲಿ ಯುಎಇಯಿಂದ ಬಂದ ರಾಜತಾಂತ್ರಿಕ ಸಾಮಾನು ಸರಂಜಾಮುಗಳಿಂದ 14.82 ಕೋಟಿ ರೂ.ಗಳ 30 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿತ್ತು. ನಂತರ ಈ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಲಾಯಿತು.

ಈ ಪ್ರಕರಣದ ತನಿಖೆಗಾಗಿ ಆರಂಭದಲ್ಲಿ ಸರಿತ್ ಪಿಎಸ್, ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರನ್ನು ಬಂಧಿಸಲಾಗಿತ್ತು. ಇಲ್ಲಿಯವರೆಗೆ ಈ ಪ್ರಕರಣದಲ್ಲಿ ಎನ್‌ಐಎಯು 21 ಜನರನ್ನು ಬಂಧಿಸಿದೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....