Homeಮುಖಪುಟದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ಬಂಗಾಲಿ ಕ್ಯಾಲೆಂಡರ್‌ ಪ್ರಕಾರ ಆಗಸ್ಟ್ 5 ರಂದು ಈ ಕವಿತೆಗೆ ಸರಿಯಾಗಿ 120 ವರ್ಷ ಆಗುತ್ತದೆ ಎಂದು ಜೆಎನ್‌ಯು ಹಳೆವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ನಡೆಯುತ್ತಿದ್ದಂತೆ ನೋಬೆಲ್ ಪುರಸ್ಕೃತ ಕವಿ ರವೀಂದ್ರನಾಥ ಠಾಕೂರರ 120 ವರ್ಷಗಳಷ್ಟು ಹಳೆಯ ಕವನವೊಂದು ವೈರಲ್ ಆಗಿದೆ.

ರವೀಂದ್ರನಾಥ ಟ್ಯಾಗೋರ್‌ರ ‘ದೀನೋ ದಾನ್’ (ನಿರ್ಗತಿಕರಿಗೆ ದಾನ ಮಾಡುವುದು) ಶಿರ್ಷಿಕೆಯಿರುವ “ದೇಗುಲದಲ್ಲಿ ದೇವರಿಲ್ಲ” ಎಂಬ ಕವಿತೆಯು ಆಗಸ್ಟ್ 5 ರಿಂದ ಸಾಮಾಜಿಕ ಜಾಲತಾಣದಲ್ಲಿ ಸುತ್ತುತ್ತಿದೆ. ಹಲವಾರು ಜನರು ಇದನ್ನು ತಮ್ಮ ಜಾಲತಾಣದ ಖಾತೆಗಳಲ್ಲಿ ಹಂಚುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಈ ಸಮಾರಂಭದ ಮಧ್ಯೆ ಭಾರತದಲ್ಲಿ ಕೊರೊನಾದಿಂದಾದ ಸಾವುಗಳು  40,000 ಗಡಿ ದಾಟಿದ್ದವು. ಬುಧವಾರ ಒಂದೇ ದಿನ 918 ಜನರು ಸಾವಿಗೀಡಾಗುವುದರೊಂದಿಗೆ ದೇಶವು ತನ್ನ ಅತಿದೊಡ್ಡ ಏಕದಿನ ಸಾವಿನ ಪ್ರಮಾಣವನ್ನು ದಾಖಲಿಸಿತು.

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಠಾಗೋರ್ ಕವಿತೆ ಮತ್ತು ರಾಮ ಮಂದಿರ ಸಮಾರಂಭದ ನಡುವೆ ಸಾಮ್ಯತೆಯನ್ನು ಕಂಡುಕೊಂಡಿದ್ದಾರೆ.

ಕನ್ನಡದ ಪ್ರಸಿದ್ದ ವಿಜ್ಞಾನ ಲೇಖಕ ಡಾ. ನಾಗೇಶ ಹೆಗ್ಡೆ ಈ ಕವಿತೆಯ ಕನ್ನಡ ಅನುವಾದವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಈ ದೇಗುಲದಲ್ಲಿ ದೇವರಿಲ್ಲ …. [ನಿನ್ನೆ ಅಯೋಧ್ಯೆಯಲ್ಲಿ ಶಿಲಾನ್ಯಾಸ ನಡೆಯುತ್ತಿದ್ದ ಸಂದರ್ಭದಲ್ಲಿ ಕವಿ ರವೀಂದ್ರನಾಥ ಠಾಕೂರರ ಕವನವೊಂದು…

Posted by Nagesh Hegde on Thursday, August 6, 2020

ನಾಗೆಶ್ ಹಗ್ಡೆ ಅವರ ಫೇಸ್‌ಬುಕ್‌ ವಾಲಲ್ಲಿ ಇರುವ ಕವನದವ ಪೂರ್ಣ ಪಠ್ಯ ಕೆಳಗಿನಂತಿದೆ:

“ಈ ದೇಗುಲದಲ್ಲಿ ದೇವರಿಲ್ಲʼʼ ಎಂದುಸುರಿದ ಆ ಸಂತ
ರಾಜನಿಗೆ ಕೋಪ ಉಕ್ಕಿ ಬಂತು
“ಏನೆಂದೆ ದೇವನಿಲ್ಲವೆ? ನೀನೇನು ಸಂತನೋ ನಾಸ್ತಿಕನೊ?
ಕಾಣುವುದಿಲ್ಲವೆ ನಿನಗೆ ವಜ್ರಖಚಿತ ಪೀಠ
ದೇವಮೂರ್ತಿಯ ಮಿನುಗುವ ಮುಕುಟ?”

“ಕಾಣುತ್ತಿವೆ ನನಗೆ. ರಾಜನ ಡೌಲತ್ತಿನ ಚಿಹ್ನೆಗಳಷ್ಟೇ ಕಾಣುತ್ತಿವೆ.
ಹೇ ರಾಜಾ, ನೀನು ನಿನ್ನ ಪ್ರತಿಷ್ಠೆಯನ್ನೇ ಅಲ್ಲಿ ಪ್ರತಿಷ್ಠಾಪಿಸಿಕೊಂಡಿರುವೆ,
ದೇವರನ್ನಲ್ಲ” ಸಂತ ಉಸುರಿದ

ಕೆಂಗಣ್ಣು ಬೀರಿ ರಾಜ ಗುಡುಗಿದ: ಗಗನಚುಂಬಿ ಈ
ದೇಗುಲದ ಮೇಲೆ ಇಪ್ಪತ್ತು ಲಕ್ಷ
ಚಿನ್ನದ ವರಹಗಳನ್ನು ಸುರಿದಿದ್ದೇನೆ, ಶಾಸ್ತ್ರೋಕ್ತ
ಪೂಜೆ ಮಾಡಿದ್ದೇನೆ, ದೇವರಿಲ್ಲವೆನ್ನಲು ನಿನಗೆಷ್ಟು ಧೈರ್ಯ?

ಸಂತ ಶಾಂತವಾಣಿಯಲ್ಲಿ ಹೇಳಿದ: ಇದೇ ವರ್ಷ ನಿನ್ನ ಇಪ್ಪತ್ತು ಲಕ್ಷ
ಪ್ರಜೆಗಳು ಬರಗಾಲಕ್ಕೆ ತುತ್ತಾಗಿದ್ದಾರೆ
ಕೂಳಿಲ್ಲದೆ, ನೀರಿಲ್ಲದೆ ಕಂಗಾಲಾಗಿದ್ದಾರೆ
ನಿನ್ನ ಬಾಗಿಲಿಗೆ ಬಂದು ಅಂಗಲಾಚಿದ್ದಾರೆ
ನಿನ್ನರಮನೆಯಿಂದ ನೂಕಿಸಿಕೊಂಡಿದ್ದಾರೆ.
ಅವರೆಲ್ಲ ಗುಡ್ಡಬೆಟ್ಟಗಳಲ್ಲಿ, ರಸ್ತೆಬದಿಗಳಲ್ಲಿ,
ಪಾಳುಗುಡಿಗಳಲ್ಲಿ ಆಸರೆ ಪಡೆದು ಒರಗಿದ್ದಾರೆ

ಇದೇ ವರ್ಷ ನೀನು ಇಪ್ಪತ್ತು ಲಕ್ಷ ಚಿನ್ನದ ವರಹಗಳನ್ನು
ಸುರಿದು ದೇಗುಲ ಕಟ್ಟಿದ್ದೀಯೆ. ಅದನ್ನು ನೋಡಿ
ದೇವರು ಹೇಳಿದ್ದೇನು ಗೊತ್ತೆ?

ʼʼನೀಲಾಕಾಶದ ಮಿನುಗುವ ತಾರೆಗಳಲ್ಲಿ ನಾನಿದ್ದೇನೆ
ಸತ್ಯ, ಶಾಂತಿ, ದಯೆ ಮತ್ತು ಪ್ರೀತಿಯೇ
ನನ್ನ ಮನೆಯ ಅಡಿಪಾಯಗಳಾಗಿವೆ
ತನ್ನದೇ ಪ್ರಜೆಗಳಿಗೆ ಆಸರೆ ಕೊಡಲಾಗದ ಈ ಜಿಪುಣ ರಾಜ
ನನಗೇನು ದೇಗುಲ ಕಟ್ಟಿಸಿಯಾನು” ಎನ್ನುತ್ತ ದೇವರು ನಿನ್ನ ಆ
ದೇಗುಲವನ್ನು ಬಿಟ್ಟು ದೂರ ನಡೆದಿದ್ದಾನೆ ರಾಜನ್

ಸಾಲುಮರಗಳ ನೆರಳಿನಲ್ಲಿ ಬಿದ್ದಿರುವ ಆ ಗರೀಬರ
ಮನದಲ್ಲಿ ನೆಲೆಸಿದ್ದಾನೆ ಅವನೀಗ
ವಿಶಾಲ ಸಾಗರದ ಮೇಲಿನ ನೀರ್ಗುಳ್ಳೆಗಳಂತೆ
ಈ ನಿನ್ನ ದೇಗುಲ ಟೊಳ್ಳುಪೊಳ್ಳಾಗಿ ಮಿನುಗುತ್ತಿದೆ
ನಿನ್ನ ಪ್ರತಿಷ್ಠೆ ಮತ್ತು ಸಂಪತ್ತಿನ ಪ್ರತೀಕವಾಗಿ ….

ಇಷ್ಟೇ ಅಲ್ಲದೆ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ಮತ್ತು ಜೆಎನ್‌ಯುನ ಹಳೆಯ ವಿದ್ಯಾರ್ಥಿ ಬನೋಜ್ಯೋತ್ಸ್‌ನಾ ಲಾಹಿರಿ ಅವರು ಈ ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಮೊದಲು ಪೋಸ್ಟ್ ಮಾಡಿದ್ದಾರೆ. ಬಂಗಾಳಿ ಕ್ಯಾಲೆಂಡರ್ ಪ್ರಕಾರ ನಿಖರವಾಗಿ 120 ವರ್ಷಗಳ ಹಿಂದೆ ಈ ಕವಿತೆಯನ್ನು ಬರೆಯಲಾಗಿದೆ ಎಂದು ಅವರು ಪೇಸ್‌ಬುಕ್‌ನಲ್ಲಿ ವಿವರಿಸಿದ್ದಾರೆ.

Is this a coincidence that exactly 120 years ago, on this very day, Rabindranath Tagore wrote a poem "Deeno Daan". It…

Posted by Banojyotsna Lahiri on Wednesday, August 5, 2020

ಇವರನ್ನು ಅನುಸರಿಸಿ, ಈ ಕವಿತೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೊರೊಣಾ ವೈರಸ್ ಕಾಲದ ನಡುವೆ ಕವಿತೆಯು ಅನೇಕ ಸಾಮ್ಯತೆಗಳನ್ನು ಕಂಡುಕೊಂಡಿದೆ. ಅನೇಕರು ಟ್ಯಾಗೋರ್‌ರನ್ನು ಶ್ಲಾಘಿಸಿದ್ದಾರೆ.

1900 ರಲ್ಲಿ (ಬಂಗಾಳಿ ವರ್ಷ 1307) ಬರೆದ ಟ್ಯಾಗೋರ್ ಅವರ ಕವನ ಸಂಕಲನವಾದ ಕಹಿನಿಯ ಭಾಗವೇ ‘ಡೀನೋ ಡಾನ್’.  ಶತಮಾನದ ನಂತರ ವೈರಲ್ ಆದ ಕವನ ನಮ್ಮನ್ನು ಎಚ್ಚರಿಸುವುದೇನೆಂದರೆ ”ಠಾಗೋರ್‌ಗೆ ಎಂದಿಗೂ ವಯಸ್ಸಾಗುವುದಿಲ್ಲ” ಎಂದು ದಿ ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದೆ.


ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....