Homeಮುಖಪುಟದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ಬಂಗಾಲಿ ಕ್ಯಾಲೆಂಡರ್‌ ಪ್ರಕಾರ ಆಗಸ್ಟ್ 5 ರಂದು ಈ ಕವಿತೆಗೆ ಸರಿಯಾಗಿ 120 ವರ್ಷ ಆಗುತ್ತದೆ ಎಂದು ಜೆಎನ್‌ಯು ಹಳೆವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ನಡೆಯುತ್ತಿದ್ದಂತೆ ನೋಬೆಲ್ ಪುರಸ್ಕೃತ ಕವಿ ರವೀಂದ್ರನಾಥ ಠಾಕೂರರ 120 ವರ್ಷಗಳಷ್ಟು ಹಳೆಯ ಕವನವೊಂದು ವೈರಲ್ ಆಗಿದೆ.

ರವೀಂದ್ರನಾಥ ಟ್ಯಾಗೋರ್‌ರ ‘ದೀನೋ ದಾನ್’ (ನಿರ್ಗತಿಕರಿಗೆ ದಾನ ಮಾಡುವುದು) ಶಿರ್ಷಿಕೆಯಿರುವ “ದೇಗುಲದಲ್ಲಿ ದೇವರಿಲ್ಲ” ಎಂಬ ಕವಿತೆಯು ಆಗಸ್ಟ್ 5 ರಿಂದ ಸಾಮಾಜಿಕ ಜಾಲತಾಣದಲ್ಲಿ ಸುತ್ತುತ್ತಿದೆ. ಹಲವಾರು ಜನರು ಇದನ್ನು ತಮ್ಮ ಜಾಲತಾಣದ ಖಾತೆಗಳಲ್ಲಿ ಹಂಚುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಈ ಸಮಾರಂಭದ ಮಧ್ಯೆ ಭಾರತದಲ್ಲಿ ಕೊರೊನಾದಿಂದಾದ ಸಾವುಗಳು  40,000 ಗಡಿ ದಾಟಿದ್ದವು. ಬುಧವಾರ ಒಂದೇ ದಿನ 918 ಜನರು ಸಾವಿಗೀಡಾಗುವುದರೊಂದಿಗೆ ದೇಶವು ತನ್ನ ಅತಿದೊಡ್ಡ ಏಕದಿನ ಸಾವಿನ ಪ್ರಮಾಣವನ್ನು ದಾಖಲಿಸಿತು.

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಠಾಗೋರ್ ಕವಿತೆ ಮತ್ತು ರಾಮ ಮಂದಿರ ಸಮಾರಂಭದ ನಡುವೆ ಸಾಮ್ಯತೆಯನ್ನು ಕಂಡುಕೊಂಡಿದ್ದಾರೆ.

ಕನ್ನಡದ ಪ್ರಸಿದ್ದ ವಿಜ್ಞಾನ ಲೇಖಕ ಡಾ. ನಾಗೇಶ ಹೆಗ್ಡೆ ಈ ಕವಿತೆಯ ಕನ್ನಡ ಅನುವಾದವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಈ ದೇಗುಲದಲ್ಲಿ ದೇವರಿಲ್ಲ …. [ನಿನ್ನೆ ಅಯೋಧ್ಯೆಯಲ್ಲಿ ಶಿಲಾನ್ಯಾಸ ನಡೆಯುತ್ತಿದ್ದ ಸಂದರ್ಭದಲ್ಲಿ ಕವಿ ರವೀಂದ್ರನಾಥ ಠಾಕೂರರ ಕವನವೊಂದು…

Posted by Nagesh Hegde on Thursday, August 6, 2020

ನಾಗೆಶ್ ಹಗ್ಡೆ ಅವರ ಫೇಸ್‌ಬುಕ್‌ ವಾಲಲ್ಲಿ ಇರುವ ಕವನದವ ಪೂರ್ಣ ಪಠ್ಯ ಕೆಳಗಿನಂತಿದೆ:

“ಈ ದೇಗುಲದಲ್ಲಿ ದೇವರಿಲ್ಲʼʼ ಎಂದುಸುರಿದ ಆ ಸಂತ
ರಾಜನಿಗೆ ಕೋಪ ಉಕ್ಕಿ ಬಂತು
“ಏನೆಂದೆ ದೇವನಿಲ್ಲವೆ? ನೀನೇನು ಸಂತನೋ ನಾಸ್ತಿಕನೊ?
ಕಾಣುವುದಿಲ್ಲವೆ ನಿನಗೆ ವಜ್ರಖಚಿತ ಪೀಠ
ದೇವಮೂರ್ತಿಯ ಮಿನುಗುವ ಮುಕುಟ?”

“ಕಾಣುತ್ತಿವೆ ನನಗೆ. ರಾಜನ ಡೌಲತ್ತಿನ ಚಿಹ್ನೆಗಳಷ್ಟೇ ಕಾಣುತ್ತಿವೆ.
ಹೇ ರಾಜಾ, ನೀನು ನಿನ್ನ ಪ್ರತಿಷ್ಠೆಯನ್ನೇ ಅಲ್ಲಿ ಪ್ರತಿಷ್ಠಾಪಿಸಿಕೊಂಡಿರುವೆ,
ದೇವರನ್ನಲ್ಲ” ಸಂತ ಉಸುರಿದ

ಕೆಂಗಣ್ಣು ಬೀರಿ ರಾಜ ಗುಡುಗಿದ: ಗಗನಚುಂಬಿ ಈ
ದೇಗುಲದ ಮೇಲೆ ಇಪ್ಪತ್ತು ಲಕ್ಷ
ಚಿನ್ನದ ವರಹಗಳನ್ನು ಸುರಿದಿದ್ದೇನೆ, ಶಾಸ್ತ್ರೋಕ್ತ
ಪೂಜೆ ಮಾಡಿದ್ದೇನೆ, ದೇವರಿಲ್ಲವೆನ್ನಲು ನಿನಗೆಷ್ಟು ಧೈರ್ಯ?

ಸಂತ ಶಾಂತವಾಣಿಯಲ್ಲಿ ಹೇಳಿದ: ಇದೇ ವರ್ಷ ನಿನ್ನ ಇಪ್ಪತ್ತು ಲಕ್ಷ
ಪ್ರಜೆಗಳು ಬರಗಾಲಕ್ಕೆ ತುತ್ತಾಗಿದ್ದಾರೆ
ಕೂಳಿಲ್ಲದೆ, ನೀರಿಲ್ಲದೆ ಕಂಗಾಲಾಗಿದ್ದಾರೆ
ನಿನ್ನ ಬಾಗಿಲಿಗೆ ಬಂದು ಅಂಗಲಾಚಿದ್ದಾರೆ
ನಿನ್ನರಮನೆಯಿಂದ ನೂಕಿಸಿಕೊಂಡಿದ್ದಾರೆ.
ಅವರೆಲ್ಲ ಗುಡ್ಡಬೆಟ್ಟಗಳಲ್ಲಿ, ರಸ್ತೆಬದಿಗಳಲ್ಲಿ,
ಪಾಳುಗುಡಿಗಳಲ್ಲಿ ಆಸರೆ ಪಡೆದು ಒರಗಿದ್ದಾರೆ

ಇದೇ ವರ್ಷ ನೀನು ಇಪ್ಪತ್ತು ಲಕ್ಷ ಚಿನ್ನದ ವರಹಗಳನ್ನು
ಸುರಿದು ದೇಗುಲ ಕಟ್ಟಿದ್ದೀಯೆ. ಅದನ್ನು ನೋಡಿ
ದೇವರು ಹೇಳಿದ್ದೇನು ಗೊತ್ತೆ?

ʼʼನೀಲಾಕಾಶದ ಮಿನುಗುವ ತಾರೆಗಳಲ್ಲಿ ನಾನಿದ್ದೇನೆ
ಸತ್ಯ, ಶಾಂತಿ, ದಯೆ ಮತ್ತು ಪ್ರೀತಿಯೇ
ನನ್ನ ಮನೆಯ ಅಡಿಪಾಯಗಳಾಗಿವೆ
ತನ್ನದೇ ಪ್ರಜೆಗಳಿಗೆ ಆಸರೆ ಕೊಡಲಾಗದ ಈ ಜಿಪುಣ ರಾಜ
ನನಗೇನು ದೇಗುಲ ಕಟ್ಟಿಸಿಯಾನು” ಎನ್ನುತ್ತ ದೇವರು ನಿನ್ನ ಆ
ದೇಗುಲವನ್ನು ಬಿಟ್ಟು ದೂರ ನಡೆದಿದ್ದಾನೆ ರಾಜನ್

ಸಾಲುಮರಗಳ ನೆರಳಿನಲ್ಲಿ ಬಿದ್ದಿರುವ ಆ ಗರೀಬರ
ಮನದಲ್ಲಿ ನೆಲೆಸಿದ್ದಾನೆ ಅವನೀಗ
ವಿಶಾಲ ಸಾಗರದ ಮೇಲಿನ ನೀರ್ಗುಳ್ಳೆಗಳಂತೆ
ಈ ನಿನ್ನ ದೇಗುಲ ಟೊಳ್ಳುಪೊಳ್ಳಾಗಿ ಮಿನುಗುತ್ತಿದೆ
ನಿನ್ನ ಪ್ರತಿಷ್ಠೆ ಮತ್ತು ಸಂಪತ್ತಿನ ಪ್ರತೀಕವಾಗಿ ….

ಇಷ್ಟೇ ಅಲ್ಲದೆ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ಮತ್ತು ಜೆಎನ್‌ಯುನ ಹಳೆಯ ವಿದ್ಯಾರ್ಥಿ ಬನೋಜ್ಯೋತ್ಸ್‌ನಾ ಲಾಹಿರಿ ಅವರು ಈ ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಮೊದಲು ಪೋಸ್ಟ್ ಮಾಡಿದ್ದಾರೆ. ಬಂಗಾಳಿ ಕ್ಯಾಲೆಂಡರ್ ಪ್ರಕಾರ ನಿಖರವಾಗಿ 120 ವರ್ಷಗಳ ಹಿಂದೆ ಈ ಕವಿತೆಯನ್ನು ಬರೆಯಲಾಗಿದೆ ಎಂದು ಅವರು ಪೇಸ್‌ಬುಕ್‌ನಲ್ಲಿ ವಿವರಿಸಿದ್ದಾರೆ.

Is this a coincidence that exactly 120 years ago, on this very day, Rabindranath Tagore wrote a poem "Deeno Daan". It…

Posted by Banojyotsna Lahiri on Wednesday, August 5, 2020

ಇವರನ್ನು ಅನುಸರಿಸಿ, ಈ ಕವಿತೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೊರೊಣಾ ವೈರಸ್ ಕಾಲದ ನಡುವೆ ಕವಿತೆಯು ಅನೇಕ ಸಾಮ್ಯತೆಗಳನ್ನು ಕಂಡುಕೊಂಡಿದೆ. ಅನೇಕರು ಟ್ಯಾಗೋರ್‌ರನ್ನು ಶ್ಲಾಘಿಸಿದ್ದಾರೆ.

1900 ರಲ್ಲಿ (ಬಂಗಾಳಿ ವರ್ಷ 1307) ಬರೆದ ಟ್ಯಾಗೋರ್ ಅವರ ಕವನ ಸಂಕಲನವಾದ ಕಹಿನಿಯ ಭಾಗವೇ ‘ಡೀನೋ ಡಾನ್’.  ಶತಮಾನದ ನಂತರ ವೈರಲ್ ಆದ ಕವನ ನಮ್ಮನ್ನು ಎಚ್ಚರಿಸುವುದೇನೆಂದರೆ ”ಠಾಗೋರ್‌ಗೆ ಎಂದಿಗೂ ವಯಸ್ಸಾಗುವುದಿಲ್ಲ” ಎಂದು ದಿ ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದೆ.


ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...