Homeಮುಖಪುಟದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ಬಂಗಾಲಿ ಕ್ಯಾಲೆಂಡರ್‌ ಪ್ರಕಾರ ಆಗಸ್ಟ್ 5 ರಂದು ಈ ಕವಿತೆಗೆ ಸರಿಯಾಗಿ 120 ವರ್ಷ ಆಗುತ್ತದೆ ಎಂದು ಜೆಎನ್‌ಯು ಹಳೆವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ನಡೆಯುತ್ತಿದ್ದಂತೆ ನೋಬೆಲ್ ಪುರಸ್ಕೃತ ಕವಿ ರವೀಂದ್ರನಾಥ ಠಾಕೂರರ 120 ವರ್ಷಗಳಷ್ಟು ಹಳೆಯ ಕವನವೊಂದು ವೈರಲ್ ಆಗಿದೆ.

ರವೀಂದ್ರನಾಥ ಟ್ಯಾಗೋರ್‌ರ ‘ದೀನೋ ದಾನ್’ (ನಿರ್ಗತಿಕರಿಗೆ ದಾನ ಮಾಡುವುದು) ಶಿರ್ಷಿಕೆಯಿರುವ “ದೇಗುಲದಲ್ಲಿ ದೇವರಿಲ್ಲ” ಎಂಬ ಕವಿತೆಯು ಆಗಸ್ಟ್ 5 ರಿಂದ ಸಾಮಾಜಿಕ ಜಾಲತಾಣದಲ್ಲಿ ಸುತ್ತುತ್ತಿದೆ. ಹಲವಾರು ಜನರು ಇದನ್ನು ತಮ್ಮ ಜಾಲತಾಣದ ಖಾತೆಗಳಲ್ಲಿ ಹಂಚುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಈ ಸಮಾರಂಭದ ಮಧ್ಯೆ ಭಾರತದಲ್ಲಿ ಕೊರೊನಾದಿಂದಾದ ಸಾವುಗಳು  40,000 ಗಡಿ ದಾಟಿದ್ದವು. ಬುಧವಾರ ಒಂದೇ ದಿನ 918 ಜನರು ಸಾವಿಗೀಡಾಗುವುದರೊಂದಿಗೆ ದೇಶವು ತನ್ನ ಅತಿದೊಡ್ಡ ಏಕದಿನ ಸಾವಿನ ಪ್ರಮಾಣವನ್ನು ದಾಖಲಿಸಿತು.

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಠಾಗೋರ್ ಕವಿತೆ ಮತ್ತು ರಾಮ ಮಂದಿರ ಸಮಾರಂಭದ ನಡುವೆ ಸಾಮ್ಯತೆಯನ್ನು ಕಂಡುಕೊಂಡಿದ್ದಾರೆ.

ಕನ್ನಡದ ಪ್ರಸಿದ್ದ ವಿಜ್ಞಾನ ಲೇಖಕ ಡಾ. ನಾಗೇಶ ಹೆಗ್ಡೆ ಈ ಕವಿತೆಯ ಕನ್ನಡ ಅನುವಾದವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಈ ದೇಗುಲದಲ್ಲಿ ದೇವರಿಲ್ಲ …. [ನಿನ್ನೆ ಅಯೋಧ್ಯೆಯಲ್ಲಿ ಶಿಲಾನ್ಯಾಸ ನಡೆಯುತ್ತಿದ್ದ ಸಂದರ್ಭದಲ್ಲಿ ಕವಿ ರವೀಂದ್ರನಾಥ ಠಾಕೂರರ ಕವನವೊಂದು…

Posted by Nagesh Hegde on Thursday, August 6, 2020

ನಾಗೆಶ್ ಹಗ್ಡೆ ಅವರ ಫೇಸ್‌ಬುಕ್‌ ವಾಲಲ್ಲಿ ಇರುವ ಕವನದವ ಪೂರ್ಣ ಪಠ್ಯ ಕೆಳಗಿನಂತಿದೆ:

“ಈ ದೇಗುಲದಲ್ಲಿ ದೇವರಿಲ್ಲʼʼ ಎಂದುಸುರಿದ ಆ ಸಂತ
ರಾಜನಿಗೆ ಕೋಪ ಉಕ್ಕಿ ಬಂತು
“ಏನೆಂದೆ ದೇವನಿಲ್ಲವೆ? ನೀನೇನು ಸಂತನೋ ನಾಸ್ತಿಕನೊ?
ಕಾಣುವುದಿಲ್ಲವೆ ನಿನಗೆ ವಜ್ರಖಚಿತ ಪೀಠ
ದೇವಮೂರ್ತಿಯ ಮಿನುಗುವ ಮುಕುಟ?”

“ಕಾಣುತ್ತಿವೆ ನನಗೆ. ರಾಜನ ಡೌಲತ್ತಿನ ಚಿಹ್ನೆಗಳಷ್ಟೇ ಕಾಣುತ್ತಿವೆ.
ಹೇ ರಾಜಾ, ನೀನು ನಿನ್ನ ಪ್ರತಿಷ್ಠೆಯನ್ನೇ ಅಲ್ಲಿ ಪ್ರತಿಷ್ಠಾಪಿಸಿಕೊಂಡಿರುವೆ,
ದೇವರನ್ನಲ್ಲ” ಸಂತ ಉಸುರಿದ

ಕೆಂಗಣ್ಣು ಬೀರಿ ರಾಜ ಗುಡುಗಿದ: ಗಗನಚುಂಬಿ ಈ
ದೇಗುಲದ ಮೇಲೆ ಇಪ್ಪತ್ತು ಲಕ್ಷ
ಚಿನ್ನದ ವರಹಗಳನ್ನು ಸುರಿದಿದ್ದೇನೆ, ಶಾಸ್ತ್ರೋಕ್ತ
ಪೂಜೆ ಮಾಡಿದ್ದೇನೆ, ದೇವರಿಲ್ಲವೆನ್ನಲು ನಿನಗೆಷ್ಟು ಧೈರ್ಯ?

ಸಂತ ಶಾಂತವಾಣಿಯಲ್ಲಿ ಹೇಳಿದ: ಇದೇ ವರ್ಷ ನಿನ್ನ ಇಪ್ಪತ್ತು ಲಕ್ಷ
ಪ್ರಜೆಗಳು ಬರಗಾಲಕ್ಕೆ ತುತ್ತಾಗಿದ್ದಾರೆ
ಕೂಳಿಲ್ಲದೆ, ನೀರಿಲ್ಲದೆ ಕಂಗಾಲಾಗಿದ್ದಾರೆ
ನಿನ್ನ ಬಾಗಿಲಿಗೆ ಬಂದು ಅಂಗಲಾಚಿದ್ದಾರೆ
ನಿನ್ನರಮನೆಯಿಂದ ನೂಕಿಸಿಕೊಂಡಿದ್ದಾರೆ.
ಅವರೆಲ್ಲ ಗುಡ್ಡಬೆಟ್ಟಗಳಲ್ಲಿ, ರಸ್ತೆಬದಿಗಳಲ್ಲಿ,
ಪಾಳುಗುಡಿಗಳಲ್ಲಿ ಆಸರೆ ಪಡೆದು ಒರಗಿದ್ದಾರೆ

ಇದೇ ವರ್ಷ ನೀನು ಇಪ್ಪತ್ತು ಲಕ್ಷ ಚಿನ್ನದ ವರಹಗಳನ್ನು
ಸುರಿದು ದೇಗುಲ ಕಟ್ಟಿದ್ದೀಯೆ. ಅದನ್ನು ನೋಡಿ
ದೇವರು ಹೇಳಿದ್ದೇನು ಗೊತ್ತೆ?

ʼʼನೀಲಾಕಾಶದ ಮಿನುಗುವ ತಾರೆಗಳಲ್ಲಿ ನಾನಿದ್ದೇನೆ
ಸತ್ಯ, ಶಾಂತಿ, ದಯೆ ಮತ್ತು ಪ್ರೀತಿಯೇ
ನನ್ನ ಮನೆಯ ಅಡಿಪಾಯಗಳಾಗಿವೆ
ತನ್ನದೇ ಪ್ರಜೆಗಳಿಗೆ ಆಸರೆ ಕೊಡಲಾಗದ ಈ ಜಿಪುಣ ರಾಜ
ನನಗೇನು ದೇಗುಲ ಕಟ್ಟಿಸಿಯಾನು” ಎನ್ನುತ್ತ ದೇವರು ನಿನ್ನ ಆ
ದೇಗುಲವನ್ನು ಬಿಟ್ಟು ದೂರ ನಡೆದಿದ್ದಾನೆ ರಾಜನ್

ಸಾಲುಮರಗಳ ನೆರಳಿನಲ್ಲಿ ಬಿದ್ದಿರುವ ಆ ಗರೀಬರ
ಮನದಲ್ಲಿ ನೆಲೆಸಿದ್ದಾನೆ ಅವನೀಗ
ವಿಶಾಲ ಸಾಗರದ ಮೇಲಿನ ನೀರ್ಗುಳ್ಳೆಗಳಂತೆ
ಈ ನಿನ್ನ ದೇಗುಲ ಟೊಳ್ಳುಪೊಳ್ಳಾಗಿ ಮಿನುಗುತ್ತಿದೆ
ನಿನ್ನ ಪ್ರತಿಷ್ಠೆ ಮತ್ತು ಸಂಪತ್ತಿನ ಪ್ರತೀಕವಾಗಿ ….

ಇಷ್ಟೇ ಅಲ್ಲದೆ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ಮತ್ತು ಜೆಎನ್‌ಯುನ ಹಳೆಯ ವಿದ್ಯಾರ್ಥಿ ಬನೋಜ್ಯೋತ್ಸ್‌ನಾ ಲಾಹಿರಿ ಅವರು ಈ ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಮೊದಲು ಪೋಸ್ಟ್ ಮಾಡಿದ್ದಾರೆ. ಬಂಗಾಳಿ ಕ್ಯಾಲೆಂಡರ್ ಪ್ರಕಾರ ನಿಖರವಾಗಿ 120 ವರ್ಷಗಳ ಹಿಂದೆ ಈ ಕವಿತೆಯನ್ನು ಬರೆಯಲಾಗಿದೆ ಎಂದು ಅವರು ಪೇಸ್‌ಬುಕ್‌ನಲ್ಲಿ ವಿವರಿಸಿದ್ದಾರೆ.

Is this a coincidence that exactly 120 years ago, on this very day, Rabindranath Tagore wrote a poem "Deeno Daan". It…

Posted by Banojyotsna Lahiri on Wednesday, August 5, 2020

ಇವರನ್ನು ಅನುಸರಿಸಿ, ಈ ಕವಿತೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೊರೊಣಾ ವೈರಸ್ ಕಾಲದ ನಡುವೆ ಕವಿತೆಯು ಅನೇಕ ಸಾಮ್ಯತೆಗಳನ್ನು ಕಂಡುಕೊಂಡಿದೆ. ಅನೇಕರು ಟ್ಯಾಗೋರ್‌ರನ್ನು ಶ್ಲಾಘಿಸಿದ್ದಾರೆ.

1900 ರಲ್ಲಿ (ಬಂಗಾಳಿ ವರ್ಷ 1307) ಬರೆದ ಟ್ಯಾಗೋರ್ ಅವರ ಕವನ ಸಂಕಲನವಾದ ಕಹಿನಿಯ ಭಾಗವೇ ‘ಡೀನೋ ಡಾನ್’.  ಶತಮಾನದ ನಂತರ ವೈರಲ್ ಆದ ಕವನ ನಮ್ಮನ್ನು ಎಚ್ಚರಿಸುವುದೇನೆಂದರೆ ”ಠಾಗೋರ್‌ಗೆ ಎಂದಿಗೂ ವಯಸ್ಸಾಗುವುದಿಲ್ಲ” ಎಂದು ದಿ ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದೆ.


ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...