Homeಮುಖಪುಟದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ಬಂಗಾಲಿ ಕ್ಯಾಲೆಂಡರ್‌ ಪ್ರಕಾರ ಆಗಸ್ಟ್ 5 ರಂದು ಈ ಕವಿತೆಗೆ ಸರಿಯಾಗಿ 120 ವರ್ಷ ಆಗುತ್ತದೆ ಎಂದು ಜೆಎನ್‌ಯು ಹಳೆವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ನಡೆಯುತ್ತಿದ್ದಂತೆ ನೋಬೆಲ್ ಪುರಸ್ಕೃತ ಕವಿ ರವೀಂದ್ರನಾಥ ಠಾಕೂರರ 120 ವರ್ಷಗಳಷ್ಟು ಹಳೆಯ ಕವನವೊಂದು ವೈರಲ್ ಆಗಿದೆ.

ರವೀಂದ್ರನಾಥ ಟ್ಯಾಗೋರ್‌ರ ‘ದೀನೋ ದಾನ್’ (ನಿರ್ಗತಿಕರಿಗೆ ದಾನ ಮಾಡುವುದು) ಶಿರ್ಷಿಕೆಯಿರುವ “ದೇಗುಲದಲ್ಲಿ ದೇವರಿಲ್ಲ” ಎಂಬ ಕವಿತೆಯು ಆಗಸ್ಟ್ 5 ರಿಂದ ಸಾಮಾಜಿಕ ಜಾಲತಾಣದಲ್ಲಿ ಸುತ್ತುತ್ತಿದೆ. ಹಲವಾರು ಜನರು ಇದನ್ನು ತಮ್ಮ ಜಾಲತಾಣದ ಖಾತೆಗಳಲ್ಲಿ ಹಂಚುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಈ ಸಮಾರಂಭದ ಮಧ್ಯೆ ಭಾರತದಲ್ಲಿ ಕೊರೊನಾದಿಂದಾದ ಸಾವುಗಳು  40,000 ಗಡಿ ದಾಟಿದ್ದವು. ಬುಧವಾರ ಒಂದೇ ದಿನ 918 ಜನರು ಸಾವಿಗೀಡಾಗುವುದರೊಂದಿಗೆ ದೇಶವು ತನ್ನ ಅತಿದೊಡ್ಡ ಏಕದಿನ ಸಾವಿನ ಪ್ರಮಾಣವನ್ನು ದಾಖಲಿಸಿತು.

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಠಾಗೋರ್ ಕವಿತೆ ಮತ್ತು ರಾಮ ಮಂದಿರ ಸಮಾರಂಭದ ನಡುವೆ ಸಾಮ್ಯತೆಯನ್ನು ಕಂಡುಕೊಂಡಿದ್ದಾರೆ.

ಕನ್ನಡದ ಪ್ರಸಿದ್ದ ವಿಜ್ಞಾನ ಲೇಖಕ ಡಾ. ನಾಗೇಶ ಹೆಗ್ಡೆ ಈ ಕವಿತೆಯ ಕನ್ನಡ ಅನುವಾದವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಈ ದೇಗುಲದಲ್ಲಿ ದೇವರಿಲ್ಲ …. [ನಿನ್ನೆ ಅಯೋಧ್ಯೆಯಲ್ಲಿ ಶಿಲಾನ್ಯಾಸ ನಡೆಯುತ್ತಿದ್ದ ಸಂದರ್ಭದಲ್ಲಿ ಕವಿ ರವೀಂದ್ರನಾಥ ಠಾಕೂರರ ಕವನವೊಂದು…

Posted by Nagesh Hegde on Thursday, August 6, 2020

ನಾಗೆಶ್ ಹಗ್ಡೆ ಅವರ ಫೇಸ್‌ಬುಕ್‌ ವಾಲಲ್ಲಿ ಇರುವ ಕವನದವ ಪೂರ್ಣ ಪಠ್ಯ ಕೆಳಗಿನಂತಿದೆ:

“ಈ ದೇಗುಲದಲ್ಲಿ ದೇವರಿಲ್ಲʼʼ ಎಂದುಸುರಿದ ಆ ಸಂತ
ರಾಜನಿಗೆ ಕೋಪ ಉಕ್ಕಿ ಬಂತು
“ಏನೆಂದೆ ದೇವನಿಲ್ಲವೆ? ನೀನೇನು ಸಂತನೋ ನಾಸ್ತಿಕನೊ?
ಕಾಣುವುದಿಲ್ಲವೆ ನಿನಗೆ ವಜ್ರಖಚಿತ ಪೀಠ
ದೇವಮೂರ್ತಿಯ ಮಿನುಗುವ ಮುಕುಟ?”

“ಕಾಣುತ್ತಿವೆ ನನಗೆ. ರಾಜನ ಡೌಲತ್ತಿನ ಚಿಹ್ನೆಗಳಷ್ಟೇ ಕಾಣುತ್ತಿವೆ.
ಹೇ ರಾಜಾ, ನೀನು ನಿನ್ನ ಪ್ರತಿಷ್ಠೆಯನ್ನೇ ಅಲ್ಲಿ ಪ್ರತಿಷ್ಠಾಪಿಸಿಕೊಂಡಿರುವೆ,
ದೇವರನ್ನಲ್ಲ” ಸಂತ ಉಸುರಿದ

ಕೆಂಗಣ್ಣು ಬೀರಿ ರಾಜ ಗುಡುಗಿದ: ಗಗನಚುಂಬಿ ಈ
ದೇಗುಲದ ಮೇಲೆ ಇಪ್ಪತ್ತು ಲಕ್ಷ
ಚಿನ್ನದ ವರಹಗಳನ್ನು ಸುರಿದಿದ್ದೇನೆ, ಶಾಸ್ತ್ರೋಕ್ತ
ಪೂಜೆ ಮಾಡಿದ್ದೇನೆ, ದೇವರಿಲ್ಲವೆನ್ನಲು ನಿನಗೆಷ್ಟು ಧೈರ್ಯ?

ಸಂತ ಶಾಂತವಾಣಿಯಲ್ಲಿ ಹೇಳಿದ: ಇದೇ ವರ್ಷ ನಿನ್ನ ಇಪ್ಪತ್ತು ಲಕ್ಷ
ಪ್ರಜೆಗಳು ಬರಗಾಲಕ್ಕೆ ತುತ್ತಾಗಿದ್ದಾರೆ
ಕೂಳಿಲ್ಲದೆ, ನೀರಿಲ್ಲದೆ ಕಂಗಾಲಾಗಿದ್ದಾರೆ
ನಿನ್ನ ಬಾಗಿಲಿಗೆ ಬಂದು ಅಂಗಲಾಚಿದ್ದಾರೆ
ನಿನ್ನರಮನೆಯಿಂದ ನೂಕಿಸಿಕೊಂಡಿದ್ದಾರೆ.
ಅವರೆಲ್ಲ ಗುಡ್ಡಬೆಟ್ಟಗಳಲ್ಲಿ, ರಸ್ತೆಬದಿಗಳಲ್ಲಿ,
ಪಾಳುಗುಡಿಗಳಲ್ಲಿ ಆಸರೆ ಪಡೆದು ಒರಗಿದ್ದಾರೆ

ಇದೇ ವರ್ಷ ನೀನು ಇಪ್ಪತ್ತು ಲಕ್ಷ ಚಿನ್ನದ ವರಹಗಳನ್ನು
ಸುರಿದು ದೇಗುಲ ಕಟ್ಟಿದ್ದೀಯೆ. ಅದನ್ನು ನೋಡಿ
ದೇವರು ಹೇಳಿದ್ದೇನು ಗೊತ್ತೆ?

ʼʼನೀಲಾಕಾಶದ ಮಿನುಗುವ ತಾರೆಗಳಲ್ಲಿ ನಾನಿದ್ದೇನೆ
ಸತ್ಯ, ಶಾಂತಿ, ದಯೆ ಮತ್ತು ಪ್ರೀತಿಯೇ
ನನ್ನ ಮನೆಯ ಅಡಿಪಾಯಗಳಾಗಿವೆ
ತನ್ನದೇ ಪ್ರಜೆಗಳಿಗೆ ಆಸರೆ ಕೊಡಲಾಗದ ಈ ಜಿಪುಣ ರಾಜ
ನನಗೇನು ದೇಗುಲ ಕಟ್ಟಿಸಿಯಾನು” ಎನ್ನುತ್ತ ದೇವರು ನಿನ್ನ ಆ
ದೇಗುಲವನ್ನು ಬಿಟ್ಟು ದೂರ ನಡೆದಿದ್ದಾನೆ ರಾಜನ್

ಸಾಲುಮರಗಳ ನೆರಳಿನಲ್ಲಿ ಬಿದ್ದಿರುವ ಆ ಗರೀಬರ
ಮನದಲ್ಲಿ ನೆಲೆಸಿದ್ದಾನೆ ಅವನೀಗ
ವಿಶಾಲ ಸಾಗರದ ಮೇಲಿನ ನೀರ್ಗುಳ್ಳೆಗಳಂತೆ
ಈ ನಿನ್ನ ದೇಗುಲ ಟೊಳ್ಳುಪೊಳ್ಳಾಗಿ ಮಿನುಗುತ್ತಿದೆ
ನಿನ್ನ ಪ್ರತಿಷ್ಠೆ ಮತ್ತು ಸಂಪತ್ತಿನ ಪ್ರತೀಕವಾಗಿ ….

ಇಷ್ಟೇ ಅಲ್ಲದೆ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ಮತ್ತು ಜೆಎನ್‌ಯುನ ಹಳೆಯ ವಿದ್ಯಾರ್ಥಿ ಬನೋಜ್ಯೋತ್ಸ್‌ನಾ ಲಾಹಿರಿ ಅವರು ಈ ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಮೊದಲು ಪೋಸ್ಟ್ ಮಾಡಿದ್ದಾರೆ. ಬಂಗಾಳಿ ಕ್ಯಾಲೆಂಡರ್ ಪ್ರಕಾರ ನಿಖರವಾಗಿ 120 ವರ್ಷಗಳ ಹಿಂದೆ ಈ ಕವಿತೆಯನ್ನು ಬರೆಯಲಾಗಿದೆ ಎಂದು ಅವರು ಪೇಸ್‌ಬುಕ್‌ನಲ್ಲಿ ವಿವರಿಸಿದ್ದಾರೆ.

Is this a coincidence that exactly 120 years ago, on this very day, Rabindranath Tagore wrote a poem "Deeno Daan". It…

Posted by Banojyotsna Lahiri on Wednesday, August 5, 2020

ಇವರನ್ನು ಅನುಸರಿಸಿ, ಈ ಕವಿತೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೊರೊಣಾ ವೈರಸ್ ಕಾಲದ ನಡುವೆ ಕವಿತೆಯು ಅನೇಕ ಸಾಮ್ಯತೆಗಳನ್ನು ಕಂಡುಕೊಂಡಿದೆ. ಅನೇಕರು ಟ್ಯಾಗೋರ್‌ರನ್ನು ಶ್ಲಾಘಿಸಿದ್ದಾರೆ.

1900 ರಲ್ಲಿ (ಬಂಗಾಳಿ ವರ್ಷ 1307) ಬರೆದ ಟ್ಯಾಗೋರ್ ಅವರ ಕವನ ಸಂಕಲನವಾದ ಕಹಿನಿಯ ಭಾಗವೇ ‘ಡೀನೋ ಡಾನ್’.  ಶತಮಾನದ ನಂತರ ವೈರಲ್ ಆದ ಕವನ ನಮ್ಮನ್ನು ಎಚ್ಚರಿಸುವುದೇನೆಂದರೆ ”ಠಾಗೋರ್‌ಗೆ ಎಂದಿಗೂ ವಯಸ್ಸಾಗುವುದಿಲ್ಲ” ಎಂದು ದಿ ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದೆ.


ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...