Homeಮುಖಪುಟದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ಬಂಗಾಲಿ ಕ್ಯಾಲೆಂಡರ್‌ ಪ್ರಕಾರ ಆಗಸ್ಟ್ 5 ರಂದು ಈ ಕವಿತೆಗೆ ಸರಿಯಾಗಿ 120 ವರ್ಷ ಆಗುತ್ತದೆ ಎಂದು ಜೆಎನ್‌ಯು ಹಳೆವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ನಡೆಯುತ್ತಿದ್ದಂತೆ ನೋಬೆಲ್ ಪುರಸ್ಕೃತ ಕವಿ ರವೀಂದ್ರನಾಥ ಠಾಕೂರರ 120 ವರ್ಷಗಳಷ್ಟು ಹಳೆಯ ಕವನವೊಂದು ವೈರಲ್ ಆಗಿದೆ.

ರವೀಂದ್ರನಾಥ ಟ್ಯಾಗೋರ್‌ರ ‘ದೀನೋ ದಾನ್’ (ನಿರ್ಗತಿಕರಿಗೆ ದಾನ ಮಾಡುವುದು) ಶಿರ್ಷಿಕೆಯಿರುವ “ದೇಗುಲದಲ್ಲಿ ದೇವರಿಲ್ಲ” ಎಂಬ ಕವಿತೆಯು ಆಗಸ್ಟ್ 5 ರಿಂದ ಸಾಮಾಜಿಕ ಜಾಲತಾಣದಲ್ಲಿ ಸುತ್ತುತ್ತಿದೆ. ಹಲವಾರು ಜನರು ಇದನ್ನು ತಮ್ಮ ಜಾಲತಾಣದ ಖಾತೆಗಳಲ್ಲಿ ಹಂಚುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಈ ಸಮಾರಂಭದ ಮಧ್ಯೆ ಭಾರತದಲ್ಲಿ ಕೊರೊನಾದಿಂದಾದ ಸಾವುಗಳು  40,000 ಗಡಿ ದಾಟಿದ್ದವು. ಬುಧವಾರ ಒಂದೇ ದಿನ 918 ಜನರು ಸಾವಿಗೀಡಾಗುವುದರೊಂದಿಗೆ ದೇಶವು ತನ್ನ ಅತಿದೊಡ್ಡ ಏಕದಿನ ಸಾವಿನ ಪ್ರಮಾಣವನ್ನು ದಾಖಲಿಸಿತು.

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಠಾಗೋರ್ ಕವಿತೆ ಮತ್ತು ರಾಮ ಮಂದಿರ ಸಮಾರಂಭದ ನಡುವೆ ಸಾಮ್ಯತೆಯನ್ನು ಕಂಡುಕೊಂಡಿದ್ದಾರೆ.

ಕನ್ನಡದ ಪ್ರಸಿದ್ದ ವಿಜ್ಞಾನ ಲೇಖಕ ಡಾ. ನಾಗೇಶ ಹೆಗ್ಡೆ ಈ ಕವಿತೆಯ ಕನ್ನಡ ಅನುವಾದವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಈ ದೇಗುಲದಲ್ಲಿ ದೇವರಿಲ್ಲ …. [ನಿನ್ನೆ ಅಯೋಧ್ಯೆಯಲ್ಲಿ ಶಿಲಾನ್ಯಾಸ ನಡೆಯುತ್ತಿದ್ದ ಸಂದರ್ಭದಲ್ಲಿ ಕವಿ ರವೀಂದ್ರನಾಥ ಠಾಕೂರರ ಕವನವೊಂದು…

Posted by Nagesh Hegde on Thursday, August 6, 2020

ನಾಗೆಶ್ ಹಗ್ಡೆ ಅವರ ಫೇಸ್‌ಬುಕ್‌ ವಾಲಲ್ಲಿ ಇರುವ ಕವನದವ ಪೂರ್ಣ ಪಠ್ಯ ಕೆಳಗಿನಂತಿದೆ:

“ಈ ದೇಗುಲದಲ್ಲಿ ದೇವರಿಲ್ಲʼʼ ಎಂದುಸುರಿದ ಆ ಸಂತ
ರಾಜನಿಗೆ ಕೋಪ ಉಕ್ಕಿ ಬಂತು
“ಏನೆಂದೆ ದೇವನಿಲ್ಲವೆ? ನೀನೇನು ಸಂತನೋ ನಾಸ್ತಿಕನೊ?
ಕಾಣುವುದಿಲ್ಲವೆ ನಿನಗೆ ವಜ್ರಖಚಿತ ಪೀಠ
ದೇವಮೂರ್ತಿಯ ಮಿನುಗುವ ಮುಕುಟ?”

“ಕಾಣುತ್ತಿವೆ ನನಗೆ. ರಾಜನ ಡೌಲತ್ತಿನ ಚಿಹ್ನೆಗಳಷ್ಟೇ ಕಾಣುತ್ತಿವೆ.
ಹೇ ರಾಜಾ, ನೀನು ನಿನ್ನ ಪ್ರತಿಷ್ಠೆಯನ್ನೇ ಅಲ್ಲಿ ಪ್ರತಿಷ್ಠಾಪಿಸಿಕೊಂಡಿರುವೆ,
ದೇವರನ್ನಲ್ಲ” ಸಂತ ಉಸುರಿದ

ಕೆಂಗಣ್ಣು ಬೀರಿ ರಾಜ ಗುಡುಗಿದ: ಗಗನಚುಂಬಿ ಈ
ದೇಗುಲದ ಮೇಲೆ ಇಪ್ಪತ್ತು ಲಕ್ಷ
ಚಿನ್ನದ ವರಹಗಳನ್ನು ಸುರಿದಿದ್ದೇನೆ, ಶಾಸ್ತ್ರೋಕ್ತ
ಪೂಜೆ ಮಾಡಿದ್ದೇನೆ, ದೇವರಿಲ್ಲವೆನ್ನಲು ನಿನಗೆಷ್ಟು ಧೈರ್ಯ?

ಸಂತ ಶಾಂತವಾಣಿಯಲ್ಲಿ ಹೇಳಿದ: ಇದೇ ವರ್ಷ ನಿನ್ನ ಇಪ್ಪತ್ತು ಲಕ್ಷ
ಪ್ರಜೆಗಳು ಬರಗಾಲಕ್ಕೆ ತುತ್ತಾಗಿದ್ದಾರೆ
ಕೂಳಿಲ್ಲದೆ, ನೀರಿಲ್ಲದೆ ಕಂಗಾಲಾಗಿದ್ದಾರೆ
ನಿನ್ನ ಬಾಗಿಲಿಗೆ ಬಂದು ಅಂಗಲಾಚಿದ್ದಾರೆ
ನಿನ್ನರಮನೆಯಿಂದ ನೂಕಿಸಿಕೊಂಡಿದ್ದಾರೆ.
ಅವರೆಲ್ಲ ಗುಡ್ಡಬೆಟ್ಟಗಳಲ್ಲಿ, ರಸ್ತೆಬದಿಗಳಲ್ಲಿ,
ಪಾಳುಗುಡಿಗಳಲ್ಲಿ ಆಸರೆ ಪಡೆದು ಒರಗಿದ್ದಾರೆ

ಇದೇ ವರ್ಷ ನೀನು ಇಪ್ಪತ್ತು ಲಕ್ಷ ಚಿನ್ನದ ವರಹಗಳನ್ನು
ಸುರಿದು ದೇಗುಲ ಕಟ್ಟಿದ್ದೀಯೆ. ಅದನ್ನು ನೋಡಿ
ದೇವರು ಹೇಳಿದ್ದೇನು ಗೊತ್ತೆ?

ʼʼನೀಲಾಕಾಶದ ಮಿನುಗುವ ತಾರೆಗಳಲ್ಲಿ ನಾನಿದ್ದೇನೆ
ಸತ್ಯ, ಶಾಂತಿ, ದಯೆ ಮತ್ತು ಪ್ರೀತಿಯೇ
ನನ್ನ ಮನೆಯ ಅಡಿಪಾಯಗಳಾಗಿವೆ
ತನ್ನದೇ ಪ್ರಜೆಗಳಿಗೆ ಆಸರೆ ಕೊಡಲಾಗದ ಈ ಜಿಪುಣ ರಾಜ
ನನಗೇನು ದೇಗುಲ ಕಟ್ಟಿಸಿಯಾನು” ಎನ್ನುತ್ತ ದೇವರು ನಿನ್ನ ಆ
ದೇಗುಲವನ್ನು ಬಿಟ್ಟು ದೂರ ನಡೆದಿದ್ದಾನೆ ರಾಜನ್

ಸಾಲುಮರಗಳ ನೆರಳಿನಲ್ಲಿ ಬಿದ್ದಿರುವ ಆ ಗರೀಬರ
ಮನದಲ್ಲಿ ನೆಲೆಸಿದ್ದಾನೆ ಅವನೀಗ
ವಿಶಾಲ ಸಾಗರದ ಮೇಲಿನ ನೀರ್ಗುಳ್ಳೆಗಳಂತೆ
ಈ ನಿನ್ನ ದೇಗುಲ ಟೊಳ್ಳುಪೊಳ್ಳಾಗಿ ಮಿನುಗುತ್ತಿದೆ
ನಿನ್ನ ಪ್ರತಿಷ್ಠೆ ಮತ್ತು ಸಂಪತ್ತಿನ ಪ್ರತೀಕವಾಗಿ ….

ಇಷ್ಟೇ ಅಲ್ಲದೆ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ಮತ್ತು ಜೆಎನ್‌ಯುನ ಹಳೆಯ ವಿದ್ಯಾರ್ಥಿ ಬನೋಜ್ಯೋತ್ಸ್‌ನಾ ಲಾಹಿರಿ ಅವರು ಈ ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಮೊದಲು ಪೋಸ್ಟ್ ಮಾಡಿದ್ದಾರೆ. ಬಂಗಾಳಿ ಕ್ಯಾಲೆಂಡರ್ ಪ್ರಕಾರ ನಿಖರವಾಗಿ 120 ವರ್ಷಗಳ ಹಿಂದೆ ಈ ಕವಿತೆಯನ್ನು ಬರೆಯಲಾಗಿದೆ ಎಂದು ಅವರು ಪೇಸ್‌ಬುಕ್‌ನಲ್ಲಿ ವಿವರಿಸಿದ್ದಾರೆ.

Is this a coincidence that exactly 120 years ago, on this very day, Rabindranath Tagore wrote a poem "Deeno Daan". It…

Posted by Banojyotsna Lahiri on Wednesday, August 5, 2020

ಇವರನ್ನು ಅನುಸರಿಸಿ, ಈ ಕವಿತೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೊರೊಣಾ ವೈರಸ್ ಕಾಲದ ನಡುವೆ ಕವಿತೆಯು ಅನೇಕ ಸಾಮ್ಯತೆಗಳನ್ನು ಕಂಡುಕೊಂಡಿದೆ. ಅನೇಕರು ಟ್ಯಾಗೋರ್‌ರನ್ನು ಶ್ಲಾಘಿಸಿದ್ದಾರೆ.

1900 ರಲ್ಲಿ (ಬಂಗಾಳಿ ವರ್ಷ 1307) ಬರೆದ ಟ್ಯಾಗೋರ್ ಅವರ ಕವನ ಸಂಕಲನವಾದ ಕಹಿನಿಯ ಭಾಗವೇ ‘ಡೀನೋ ಡಾನ್’.  ಶತಮಾನದ ನಂತರ ವೈರಲ್ ಆದ ಕವನ ನಮ್ಮನ್ನು ಎಚ್ಚರಿಸುವುದೇನೆಂದರೆ ”ಠಾಗೋರ್‌ಗೆ ಎಂದಿಗೂ ವಯಸ್ಸಾಗುವುದಿಲ್ಲ” ಎಂದು ದಿ ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದೆ.


ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...