Homeಮುಖಪುಟದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ಬಂಗಾಲಿ ಕ್ಯಾಲೆಂಡರ್‌ ಪ್ರಕಾರ ಆಗಸ್ಟ್ 5 ರಂದು ಈ ಕವಿತೆಗೆ ಸರಿಯಾಗಿ 120 ವರ್ಷ ಆಗುತ್ತದೆ ಎಂದು ಜೆಎನ್‌ಯು ಹಳೆವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ನಡೆಯುತ್ತಿದ್ದಂತೆ ನೋಬೆಲ್ ಪುರಸ್ಕೃತ ಕವಿ ರವೀಂದ್ರನಾಥ ಠಾಕೂರರ 120 ವರ್ಷಗಳಷ್ಟು ಹಳೆಯ ಕವನವೊಂದು ವೈರಲ್ ಆಗಿದೆ.

ರವೀಂದ್ರನಾಥ ಟ್ಯಾಗೋರ್‌ರ ‘ದೀನೋ ದಾನ್’ (ನಿರ್ಗತಿಕರಿಗೆ ದಾನ ಮಾಡುವುದು) ಶಿರ್ಷಿಕೆಯಿರುವ “ದೇಗುಲದಲ್ಲಿ ದೇವರಿಲ್ಲ” ಎಂಬ ಕವಿತೆಯು ಆಗಸ್ಟ್ 5 ರಿಂದ ಸಾಮಾಜಿಕ ಜಾಲತಾಣದಲ್ಲಿ ಸುತ್ತುತ್ತಿದೆ. ಹಲವಾರು ಜನರು ಇದನ್ನು ತಮ್ಮ ಜಾಲತಾಣದ ಖಾತೆಗಳಲ್ಲಿ ಹಂಚುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಈ ಸಮಾರಂಭದ ಮಧ್ಯೆ ಭಾರತದಲ್ಲಿ ಕೊರೊನಾದಿಂದಾದ ಸಾವುಗಳು  40,000 ಗಡಿ ದಾಟಿದ್ದವು. ಬುಧವಾರ ಒಂದೇ ದಿನ 918 ಜನರು ಸಾವಿಗೀಡಾಗುವುದರೊಂದಿಗೆ ದೇಶವು ತನ್ನ ಅತಿದೊಡ್ಡ ಏಕದಿನ ಸಾವಿನ ಪ್ರಮಾಣವನ್ನು ದಾಖಲಿಸಿತು.

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಠಾಗೋರ್ ಕವಿತೆ ಮತ್ತು ರಾಮ ಮಂದಿರ ಸಮಾರಂಭದ ನಡುವೆ ಸಾಮ್ಯತೆಯನ್ನು ಕಂಡುಕೊಂಡಿದ್ದಾರೆ.

ಕನ್ನಡದ ಪ್ರಸಿದ್ದ ವಿಜ್ಞಾನ ಲೇಖಕ ಡಾ. ನಾಗೇಶ ಹೆಗ್ಡೆ ಈ ಕವಿತೆಯ ಕನ್ನಡ ಅನುವಾದವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಈ ದೇಗುಲದಲ್ಲಿ ದೇವರಿಲ್ಲ …. [ನಿನ್ನೆ ಅಯೋಧ್ಯೆಯಲ್ಲಿ ಶಿಲಾನ್ಯಾಸ ನಡೆಯುತ್ತಿದ್ದ ಸಂದರ್ಭದಲ್ಲಿ ಕವಿ ರವೀಂದ್ರನಾಥ ಠಾಕೂರರ ಕವನವೊಂದು…

Posted by Nagesh Hegde on Thursday, August 6, 2020

ನಾಗೆಶ್ ಹಗ್ಡೆ ಅವರ ಫೇಸ್‌ಬುಕ್‌ ವಾಲಲ್ಲಿ ಇರುವ ಕವನದವ ಪೂರ್ಣ ಪಠ್ಯ ಕೆಳಗಿನಂತಿದೆ:

“ಈ ದೇಗುಲದಲ್ಲಿ ದೇವರಿಲ್ಲʼʼ ಎಂದುಸುರಿದ ಆ ಸಂತ
ರಾಜನಿಗೆ ಕೋಪ ಉಕ್ಕಿ ಬಂತು
“ಏನೆಂದೆ ದೇವನಿಲ್ಲವೆ? ನೀನೇನು ಸಂತನೋ ನಾಸ್ತಿಕನೊ?
ಕಾಣುವುದಿಲ್ಲವೆ ನಿನಗೆ ವಜ್ರಖಚಿತ ಪೀಠ
ದೇವಮೂರ್ತಿಯ ಮಿನುಗುವ ಮುಕುಟ?”

“ಕಾಣುತ್ತಿವೆ ನನಗೆ. ರಾಜನ ಡೌಲತ್ತಿನ ಚಿಹ್ನೆಗಳಷ್ಟೇ ಕಾಣುತ್ತಿವೆ.
ಹೇ ರಾಜಾ, ನೀನು ನಿನ್ನ ಪ್ರತಿಷ್ಠೆಯನ್ನೇ ಅಲ್ಲಿ ಪ್ರತಿಷ್ಠಾಪಿಸಿಕೊಂಡಿರುವೆ,
ದೇವರನ್ನಲ್ಲ” ಸಂತ ಉಸುರಿದ

ಕೆಂಗಣ್ಣು ಬೀರಿ ರಾಜ ಗುಡುಗಿದ: ಗಗನಚುಂಬಿ ಈ
ದೇಗುಲದ ಮೇಲೆ ಇಪ್ಪತ್ತು ಲಕ್ಷ
ಚಿನ್ನದ ವರಹಗಳನ್ನು ಸುರಿದಿದ್ದೇನೆ, ಶಾಸ್ತ್ರೋಕ್ತ
ಪೂಜೆ ಮಾಡಿದ್ದೇನೆ, ದೇವರಿಲ್ಲವೆನ್ನಲು ನಿನಗೆಷ್ಟು ಧೈರ್ಯ?

ಸಂತ ಶಾಂತವಾಣಿಯಲ್ಲಿ ಹೇಳಿದ: ಇದೇ ವರ್ಷ ನಿನ್ನ ಇಪ್ಪತ್ತು ಲಕ್ಷ
ಪ್ರಜೆಗಳು ಬರಗಾಲಕ್ಕೆ ತುತ್ತಾಗಿದ್ದಾರೆ
ಕೂಳಿಲ್ಲದೆ, ನೀರಿಲ್ಲದೆ ಕಂಗಾಲಾಗಿದ್ದಾರೆ
ನಿನ್ನ ಬಾಗಿಲಿಗೆ ಬಂದು ಅಂಗಲಾಚಿದ್ದಾರೆ
ನಿನ್ನರಮನೆಯಿಂದ ನೂಕಿಸಿಕೊಂಡಿದ್ದಾರೆ.
ಅವರೆಲ್ಲ ಗುಡ್ಡಬೆಟ್ಟಗಳಲ್ಲಿ, ರಸ್ತೆಬದಿಗಳಲ್ಲಿ,
ಪಾಳುಗುಡಿಗಳಲ್ಲಿ ಆಸರೆ ಪಡೆದು ಒರಗಿದ್ದಾರೆ

ಇದೇ ವರ್ಷ ನೀನು ಇಪ್ಪತ್ತು ಲಕ್ಷ ಚಿನ್ನದ ವರಹಗಳನ್ನು
ಸುರಿದು ದೇಗುಲ ಕಟ್ಟಿದ್ದೀಯೆ. ಅದನ್ನು ನೋಡಿ
ದೇವರು ಹೇಳಿದ್ದೇನು ಗೊತ್ತೆ?

ʼʼನೀಲಾಕಾಶದ ಮಿನುಗುವ ತಾರೆಗಳಲ್ಲಿ ನಾನಿದ್ದೇನೆ
ಸತ್ಯ, ಶಾಂತಿ, ದಯೆ ಮತ್ತು ಪ್ರೀತಿಯೇ
ನನ್ನ ಮನೆಯ ಅಡಿಪಾಯಗಳಾಗಿವೆ
ತನ್ನದೇ ಪ್ರಜೆಗಳಿಗೆ ಆಸರೆ ಕೊಡಲಾಗದ ಈ ಜಿಪುಣ ರಾಜ
ನನಗೇನು ದೇಗುಲ ಕಟ್ಟಿಸಿಯಾನು” ಎನ್ನುತ್ತ ದೇವರು ನಿನ್ನ ಆ
ದೇಗುಲವನ್ನು ಬಿಟ್ಟು ದೂರ ನಡೆದಿದ್ದಾನೆ ರಾಜನ್

ಸಾಲುಮರಗಳ ನೆರಳಿನಲ್ಲಿ ಬಿದ್ದಿರುವ ಆ ಗರೀಬರ
ಮನದಲ್ಲಿ ನೆಲೆಸಿದ್ದಾನೆ ಅವನೀಗ
ವಿಶಾಲ ಸಾಗರದ ಮೇಲಿನ ನೀರ್ಗುಳ್ಳೆಗಳಂತೆ
ಈ ನಿನ್ನ ದೇಗುಲ ಟೊಳ್ಳುಪೊಳ್ಳಾಗಿ ಮಿನುಗುತ್ತಿದೆ
ನಿನ್ನ ಪ್ರತಿಷ್ಠೆ ಮತ್ತು ಸಂಪತ್ತಿನ ಪ್ರತೀಕವಾಗಿ ….

ಇಷ್ಟೇ ಅಲ್ಲದೆ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ಮತ್ತು ಜೆಎನ್‌ಯುನ ಹಳೆಯ ವಿದ್ಯಾರ್ಥಿ ಬನೋಜ್ಯೋತ್ಸ್‌ನಾ ಲಾಹಿರಿ ಅವರು ಈ ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಮೊದಲು ಪೋಸ್ಟ್ ಮಾಡಿದ್ದಾರೆ. ಬಂಗಾಳಿ ಕ್ಯಾಲೆಂಡರ್ ಪ್ರಕಾರ ನಿಖರವಾಗಿ 120 ವರ್ಷಗಳ ಹಿಂದೆ ಈ ಕವಿತೆಯನ್ನು ಬರೆಯಲಾಗಿದೆ ಎಂದು ಅವರು ಪೇಸ್‌ಬುಕ್‌ನಲ್ಲಿ ವಿವರಿಸಿದ್ದಾರೆ.

Is this a coincidence that exactly 120 years ago, on this very day, Rabindranath Tagore wrote a poem "Deeno Daan". It…

Posted by Banojyotsna Lahiri on Wednesday, August 5, 2020

ಇವರನ್ನು ಅನುಸರಿಸಿ, ಈ ಕವಿತೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೊರೊಣಾ ವೈರಸ್ ಕಾಲದ ನಡುವೆ ಕವಿತೆಯು ಅನೇಕ ಸಾಮ್ಯತೆಗಳನ್ನು ಕಂಡುಕೊಂಡಿದೆ. ಅನೇಕರು ಟ್ಯಾಗೋರ್‌ರನ್ನು ಶ್ಲಾಘಿಸಿದ್ದಾರೆ.

1900 ರಲ್ಲಿ (ಬಂಗಾಳಿ ವರ್ಷ 1307) ಬರೆದ ಟ್ಯಾಗೋರ್ ಅವರ ಕವನ ಸಂಕಲನವಾದ ಕಹಿನಿಯ ಭಾಗವೇ ‘ಡೀನೋ ಡಾನ್’.  ಶತಮಾನದ ನಂತರ ವೈರಲ್ ಆದ ಕವನ ನಮ್ಮನ್ನು ಎಚ್ಚರಿಸುವುದೇನೆಂದರೆ ”ಠಾಗೋರ್‌ಗೆ ಎಂದಿಗೂ ವಯಸ್ಸಾಗುವುದಿಲ್ಲ” ಎಂದು ದಿ ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದೆ.


ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...