Homeಮುಖಪುಟದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ದೇಗುಲದಲ್ಲಿ ದೇವರಿಲ್ಲ; 120 ವರ್ಷ ಹಳೆಯ ರವೀಂದ್ರನಾಥ ಠಾಕೂರರ ಕವಿತೆ ವೈರಲ್

ಬಂಗಾಲಿ ಕ್ಯಾಲೆಂಡರ್‌ ಪ್ರಕಾರ ಆಗಸ್ಟ್ 5 ರಂದು ಈ ಕವಿತೆಗೆ ಸರಿಯಾಗಿ 120 ವರ್ಷ ಆಗುತ್ತದೆ ಎಂದು ಜೆಎನ್‌ಯು ಹಳೆವಿದ್ಯಾರ್ಥಿಯೊಬ್ಬರು ಹೇಳಿದ್ದಾರೆ.

- Advertisement -
- Advertisement -

ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಶಿಲಾನ್ಯಾಸ ನಡೆಯುತ್ತಿದ್ದಂತೆ ನೋಬೆಲ್ ಪುರಸ್ಕೃತ ಕವಿ ರವೀಂದ್ರನಾಥ ಠಾಕೂರರ 120 ವರ್ಷಗಳಷ್ಟು ಹಳೆಯ ಕವನವೊಂದು ವೈರಲ್ ಆಗಿದೆ.

ರವೀಂದ್ರನಾಥ ಟ್ಯಾಗೋರ್‌ರ ‘ದೀನೋ ದಾನ್’ (ನಿರ್ಗತಿಕರಿಗೆ ದಾನ ಮಾಡುವುದು) ಶಿರ್ಷಿಕೆಯಿರುವ “ದೇಗುಲದಲ್ಲಿ ದೇವರಿಲ್ಲ” ಎಂಬ ಕವಿತೆಯು ಆಗಸ್ಟ್ 5 ರಿಂದ ಸಾಮಾಜಿಕ ಜಾಲತಾಣದಲ್ಲಿ ಸುತ್ತುತ್ತಿದೆ. ಹಲವಾರು ಜನರು ಇದನ್ನು ತಮ್ಮ ಜಾಲತಾಣದ ಖಾತೆಗಳಲ್ಲಿ ಹಂಚುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಈ ಸಮಾರಂಭದ ಮಧ್ಯೆ ಭಾರತದಲ್ಲಿ ಕೊರೊನಾದಿಂದಾದ ಸಾವುಗಳು  40,000 ಗಡಿ ದಾಟಿದ್ದವು. ಬುಧವಾರ ಒಂದೇ ದಿನ 918 ಜನರು ಸಾವಿಗೀಡಾಗುವುದರೊಂದಿಗೆ ದೇಶವು ತನ್ನ ಅತಿದೊಡ್ಡ ಏಕದಿನ ಸಾವಿನ ಪ್ರಮಾಣವನ್ನು ದಾಖಲಿಸಿತು.

ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಅನೇಕರು ಠಾಗೋರ್ ಕವಿತೆ ಮತ್ತು ರಾಮ ಮಂದಿರ ಸಮಾರಂಭದ ನಡುವೆ ಸಾಮ್ಯತೆಯನ್ನು ಕಂಡುಕೊಂಡಿದ್ದಾರೆ.

ಕನ್ನಡದ ಪ್ರಸಿದ್ದ ವಿಜ್ಞಾನ ಲೇಖಕ ಡಾ. ನಾಗೇಶ ಹೆಗ್ಡೆ ಈ ಕವಿತೆಯ ಕನ್ನಡ ಅನುವಾದವನ್ನು ತಮ್ಮ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಈ ದೇಗುಲದಲ್ಲಿ ದೇವರಿಲ್ಲ …. [ನಿನ್ನೆ ಅಯೋಧ್ಯೆಯಲ್ಲಿ ಶಿಲಾನ್ಯಾಸ ನಡೆಯುತ್ತಿದ್ದ ಸಂದರ್ಭದಲ್ಲಿ ಕವಿ ರವೀಂದ್ರನಾಥ ಠಾಕೂರರ ಕವನವೊಂದು…

Posted by Nagesh Hegde on Thursday, August 6, 2020

ನಾಗೆಶ್ ಹಗ್ಡೆ ಅವರ ಫೇಸ್‌ಬುಕ್‌ ವಾಲಲ್ಲಿ ಇರುವ ಕವನದವ ಪೂರ್ಣ ಪಠ್ಯ ಕೆಳಗಿನಂತಿದೆ:

“ಈ ದೇಗುಲದಲ್ಲಿ ದೇವರಿಲ್ಲʼʼ ಎಂದುಸುರಿದ ಆ ಸಂತ
ರಾಜನಿಗೆ ಕೋಪ ಉಕ್ಕಿ ಬಂತು
“ಏನೆಂದೆ ದೇವನಿಲ್ಲವೆ? ನೀನೇನು ಸಂತನೋ ನಾಸ್ತಿಕನೊ?
ಕಾಣುವುದಿಲ್ಲವೆ ನಿನಗೆ ವಜ್ರಖಚಿತ ಪೀಠ
ದೇವಮೂರ್ತಿಯ ಮಿನುಗುವ ಮುಕುಟ?”

“ಕಾಣುತ್ತಿವೆ ನನಗೆ. ರಾಜನ ಡೌಲತ್ತಿನ ಚಿಹ್ನೆಗಳಷ್ಟೇ ಕಾಣುತ್ತಿವೆ.
ಹೇ ರಾಜಾ, ನೀನು ನಿನ್ನ ಪ್ರತಿಷ್ಠೆಯನ್ನೇ ಅಲ್ಲಿ ಪ್ರತಿಷ್ಠಾಪಿಸಿಕೊಂಡಿರುವೆ,
ದೇವರನ್ನಲ್ಲ” ಸಂತ ಉಸುರಿದ

ಕೆಂಗಣ್ಣು ಬೀರಿ ರಾಜ ಗುಡುಗಿದ: ಗಗನಚುಂಬಿ ಈ
ದೇಗುಲದ ಮೇಲೆ ಇಪ್ಪತ್ತು ಲಕ್ಷ
ಚಿನ್ನದ ವರಹಗಳನ್ನು ಸುರಿದಿದ್ದೇನೆ, ಶಾಸ್ತ್ರೋಕ್ತ
ಪೂಜೆ ಮಾಡಿದ್ದೇನೆ, ದೇವರಿಲ್ಲವೆನ್ನಲು ನಿನಗೆಷ್ಟು ಧೈರ್ಯ?

ಸಂತ ಶಾಂತವಾಣಿಯಲ್ಲಿ ಹೇಳಿದ: ಇದೇ ವರ್ಷ ನಿನ್ನ ಇಪ್ಪತ್ತು ಲಕ್ಷ
ಪ್ರಜೆಗಳು ಬರಗಾಲಕ್ಕೆ ತುತ್ತಾಗಿದ್ದಾರೆ
ಕೂಳಿಲ್ಲದೆ, ನೀರಿಲ್ಲದೆ ಕಂಗಾಲಾಗಿದ್ದಾರೆ
ನಿನ್ನ ಬಾಗಿಲಿಗೆ ಬಂದು ಅಂಗಲಾಚಿದ್ದಾರೆ
ನಿನ್ನರಮನೆಯಿಂದ ನೂಕಿಸಿಕೊಂಡಿದ್ದಾರೆ.
ಅವರೆಲ್ಲ ಗುಡ್ಡಬೆಟ್ಟಗಳಲ್ಲಿ, ರಸ್ತೆಬದಿಗಳಲ್ಲಿ,
ಪಾಳುಗುಡಿಗಳಲ್ಲಿ ಆಸರೆ ಪಡೆದು ಒರಗಿದ್ದಾರೆ

ಇದೇ ವರ್ಷ ನೀನು ಇಪ್ಪತ್ತು ಲಕ್ಷ ಚಿನ್ನದ ವರಹಗಳನ್ನು
ಸುರಿದು ದೇಗುಲ ಕಟ್ಟಿದ್ದೀಯೆ. ಅದನ್ನು ನೋಡಿ
ದೇವರು ಹೇಳಿದ್ದೇನು ಗೊತ್ತೆ?

ʼʼನೀಲಾಕಾಶದ ಮಿನುಗುವ ತಾರೆಗಳಲ್ಲಿ ನಾನಿದ್ದೇನೆ
ಸತ್ಯ, ಶಾಂತಿ, ದಯೆ ಮತ್ತು ಪ್ರೀತಿಯೇ
ನನ್ನ ಮನೆಯ ಅಡಿಪಾಯಗಳಾಗಿವೆ
ತನ್ನದೇ ಪ್ರಜೆಗಳಿಗೆ ಆಸರೆ ಕೊಡಲಾಗದ ಈ ಜಿಪುಣ ರಾಜ
ನನಗೇನು ದೇಗುಲ ಕಟ್ಟಿಸಿಯಾನು” ಎನ್ನುತ್ತ ದೇವರು ನಿನ್ನ ಆ
ದೇಗುಲವನ್ನು ಬಿಟ್ಟು ದೂರ ನಡೆದಿದ್ದಾನೆ ರಾಜನ್

ಸಾಲುಮರಗಳ ನೆರಳಿನಲ್ಲಿ ಬಿದ್ದಿರುವ ಆ ಗರೀಬರ
ಮನದಲ್ಲಿ ನೆಲೆಸಿದ್ದಾನೆ ಅವನೀಗ
ವಿಶಾಲ ಸಾಗರದ ಮೇಲಿನ ನೀರ್ಗುಳ್ಳೆಗಳಂತೆ
ಈ ನಿನ್ನ ದೇಗುಲ ಟೊಳ್ಳುಪೊಳ್ಳಾಗಿ ಮಿನುಗುತ್ತಿದೆ
ನಿನ್ನ ಪ್ರತಿಷ್ಠೆ ಮತ್ತು ಸಂಪತ್ತಿನ ಪ್ರತೀಕವಾಗಿ ….

ಇಷ್ಟೇ ಅಲ್ಲದೆ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ ಮತ್ತು ಜೆಎನ್‌ಯುನ ಹಳೆಯ ವಿದ್ಯಾರ್ಥಿ ಬನೋಜ್ಯೋತ್ಸ್‌ನಾ ಲಾಹಿರಿ ಅವರು ಈ ಕವಿತೆಯನ್ನು ಫೇಸ್‌ಬುಕ್‌ನಲ್ಲಿ ಮೊದಲು ಪೋಸ್ಟ್ ಮಾಡಿದ್ದಾರೆ. ಬಂಗಾಳಿ ಕ್ಯಾಲೆಂಡರ್ ಪ್ರಕಾರ ನಿಖರವಾಗಿ 120 ವರ್ಷಗಳ ಹಿಂದೆ ಈ ಕವಿತೆಯನ್ನು ಬರೆಯಲಾಗಿದೆ ಎಂದು ಅವರು ಪೇಸ್‌ಬುಕ್‌ನಲ್ಲಿ ವಿವರಿಸಿದ್ದಾರೆ.

Is this a coincidence that exactly 120 years ago, on this very day, Rabindranath Tagore wrote a poem "Deeno Daan". It…

Posted by Banojyotsna Lahiri on Wednesday, August 5, 2020

ಇವರನ್ನು ಅನುಸರಿಸಿ, ಈ ಕವಿತೆಯು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೊರೊಣಾ ವೈರಸ್ ಕಾಲದ ನಡುವೆ ಕವಿತೆಯು ಅನೇಕ ಸಾಮ್ಯತೆಗಳನ್ನು ಕಂಡುಕೊಂಡಿದೆ. ಅನೇಕರು ಟ್ಯಾಗೋರ್‌ರನ್ನು ಶ್ಲಾಘಿಸಿದ್ದಾರೆ.

1900 ರಲ್ಲಿ (ಬಂಗಾಳಿ ವರ್ಷ 1307) ಬರೆದ ಟ್ಯಾಗೋರ್ ಅವರ ಕವನ ಸಂಕಲನವಾದ ಕಹಿನಿಯ ಭಾಗವೇ ‘ಡೀನೋ ಡಾನ್’.  ಶತಮಾನದ ನಂತರ ವೈರಲ್ ಆದ ಕವನ ನಮ್ಮನ್ನು ಎಚ್ಚರಿಸುವುದೇನೆಂದರೆ ”ಠಾಗೋರ್‌ಗೆ ಎಂದಿಗೂ ವಯಸ್ಸಾಗುವುದಿಲ್ಲ” ಎಂದು ದಿ ಟೆಲಿಗ್ರಾಫ್ ಪತ್ರಿಕೆ ವರದಿ ಮಾಡಿದೆ.


ಓದಿ: ಮಂದಿರ ಭವ್ಯವಾಗಬಹುದು; ಪವಿತ್ರವಾಗಿರುವುದಿಲ್ಲ: ಜಿ ರಾಜಶೇಖರ್


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...