Homeಮುಖಪುಟಭಾರತದಲ್ಲಿ ಕೈಯಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಪದ್ದತಿಯಿಲ್ಲ; ಆದರೆ ಸ್ವಚ್ಛಗೊಳಿಸುವ ವೇಳೆ 330 ಜನರು ಸಾವಿಗೀಡಾಗಿದ್ದಾರೆ: ಕೇಂದ್ರ...

ಭಾರತದಲ್ಲಿ ಕೈಯಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಪದ್ದತಿಯಿಲ್ಲ; ಆದರೆ ಸ್ವಚ್ಛಗೊಳಿಸುವ ವೇಳೆ 330 ಜನರು ಸಾವಿಗೀಡಾಗಿದ್ದಾರೆ: ಕೇಂದ್ರ ಸರ್ಕಾರ

ಕಳೆದ ಐದು ವರ್ಷಗಳಲ್ಲಿ ಕೈಯಿಂದ ಶೌಚಗುಂಡಿಗಳ ಸ್ವಚ್ಛಗೊಳಿಸುವಿಕೆಯಿಂದಾಗಿ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ಸರ್ಕಾರ ಹೇಳಿದೆ

- Advertisement -
- Advertisement -

ಭಾರತದಲ್ಲಿ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಕೆಲಸದಲ್ಲಿ ಯಾರೂ ತೊಡಗಿಸಿಕೊಂಡಿಲ್ಲ, ಆದರೆ 2017 ಮತ್ತು 2021 ರ ನಡುವೆ ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ 330 ಜನರು ಮೃತಪಟ್ಟಿದ್ದಾರೆ ಎಂದು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ. ಬಹುಜನ ಸಮಾಜ ಪಕ್ಷದ ಸಂಸದ ಗಿರೀಶ್ ಚಂದ್ರ ಅವರು ಕೇಳಿದ ಪ್ರಶ್ನೆಗೆ ಉತ್ತರವಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ಅವರು ‘ಮ್ಯಾನುಯಲ್ ಸ್ಕ್ಯಾವೆಂಜಿಂಗ್’ ಕುರಿತ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಒಳಚರಂಡಿ ಅಥವಾ ಶೌಚಗುಂಡಿಯಿಂದ ಕೈಗಳ ಮೂಲಕ ಮಲವನ್ನು ತೆಗೆಯುವ ಪದ್ದತಿಯನ್ನು, ‘ಮ್ಯಾನುಯಲ್ ಸ್ಕ್ಯಾವೆಂಜರ್‍ಸ್‌‌‌ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆ-2013’ ರ ಅಡಿಯಲ್ಲಿ ನಿಷೇಧಿಸಲಾಗಿದೆ. ಅದಾಗಿಯೂ ಈ ಪದ್ದತಿ ಭಾರತದ ಅನೇಕ ಭಾಗಗಳಲ್ಲಿ ಪ್ರಚಲಿತದಲ್ಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಿರೀಶ್‌ ಚಂದ್ರ ಅವರು, ದೇಶದಲ್ಲಿ ಶೌಚಗುಂಡಿಗಳಲ್ಲಿ ಕೆಲಸ ಮಾಡುವವರು ಗುತ್ತಿಗೆ, ವಲಸೆ ಮತ್ತು ಸಾಂದರ್ಭಿಕ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಯೇ ಅಥವಾ ಬಂಧಿತ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಯೇ ಹಾಗೂ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿವರಗಳನ್ನು ಕೋರಿದ್ದರು.

ಇದನ್ನೂ ಓದಿ: ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆಯಡಿಯಲ್ಲಿ 20% ಕ್ಕಿಂತ ಹೆಚ್ಚು ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ನೋಂದಾಯಿಸಲ್ಪಟ್ಟಿಲ್ಲವೇ ಎಂದು ಅವರು ಕೇಳಿದ್ದರು. ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಅಪಾಯಕಾರಿಯಾಗಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಸಂಖ್ಯೆಯ ಕುರಿತು ಚಂದ್ರಾ ಅವರು ರಾಜ್ಯವಾರು ಮಾಹಿತಿಯನ್ನು ಕೋರಿದ್ದರು.

“2013 ರ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆಯ ಸೆಕ್ಷನ್ 2 (1) (ಜಿ) ಅಡಿಯಲ್ಲಿ ವ್ಯಾಖ್ಯಾನಿಸಲಾದ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ದತಿಯಲ್ಲಿ ತೊಡಗಿರುವ ಜನರ ಯಾವುದೇ ವರದಿಯಿಲ್ಲ” ಎಂದು ಸಚಿವ ರಾಮದಾಸ್ ಅಠಾವಳೆ ಪ್ರತಿಕ್ರಿಯಿಸಿದ್ದಾರೆ.

“ಡಿಸೆಂಬರ್ 6, 2013 ರಿಂದ ಜಾರಿಗೆ ಬರುವಂತೆ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ದತಿಯನ್ನು ನಿಷೇಧಿಸಲಾಗಿದೆ. ಹೇಳಿದ ದಿನಾಂಕದಿಂದ ಯಾವುದೇ ವ್ಯಕ್ತಿ ಅಥವಾ ಏಜೆನ್ಸಿಯು ಯಾವುದೇ ವ್ಯಕ್ತಿಯನ್ನು ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಂತೆ ತೊಡಗಿಸಿಕೊಳ್ಳಲು ಅಥವಾ ಬಳಸಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಕಳೆದ ಮೂರು ವರ್ಷಗಳಲ್ಲಿ ದೇಶದಲ್ಲಿ 58,098 ಮ್ಯಾನುವಲ್ ಸ್ಕ್ಯಾವೆಂಜರ್‌ಗಳನ್ನು ಸರ್ಕಾರ ಗುರುತಿಸಿದೆ ಎಂದು ಜುಲೈ 26 ರಂದು ಅಠಾವಳೆ ಲೋಕಸಭೆಗೆ ತಿಳಿಸಿದ್ದರು. ಜುಲೈ 19 ರಂದು, 2017 ರಿಂದ ಭಾರತದಾದ್ಯಂತ 347 ನೈರ್ಮಲ್ಯ ಕಾರ್ಮಿಕರು ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಲೋಕಸಭೆಗೆ ತಿಳಿಸಿತ್ತು.

ಮಂಗಳವಾರ, 2017 ರಿಂದ 2021 ರವರೆಗೆ ದೇಶದಲ್ಲಿ ಕೈಯಿಂದ ಶೌಚಗುಂಡಿಗಳ ಸ್ವಚ್ಛಗೊಳಿಸುವಿಕೆಯಿಂದಾಗಿ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ಅಠವಾಲೆ ಹೇಳಿದ್ದಾರೆ.

“ಆದಾಗ್ಯೂ, ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಅಪಾಯಕಾರಿಯಾಗಿ ಸ್ವಚ್ಛಗೊಳಿಸುವ ಸಂದರ್ಭ 330 ಜನರು ಸಾವನ್ನಪ್ಪಿದ್ದಾರೆ” ಎಂದು ಸಚಿವ ಅಠಾವಳೆ ಹೇಳಿದ್ದಾರೆ.

2017 ಮತ್ತು 2021 ರ ನಡುವೆ ಉತ್ತರ ಪ್ರದೇಶದಲ್ಲಿ ಇಂತಹ 47 ಸಾವುನೋವುಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ 43 ಮತ್ತು ದೆಹಲಿಯಲ್ಲಿ 42, ಹರಿಯಾಣದಲ್ಲಿ 36 ಮತ್ತು ಮಹಾರಾಷ್ಟ್ರದಲ್ಲಿ 30 ಸಾವುಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

‘ಸ್ವಚ್ಛ ಭಾರತ್ ಮಿಷನ್  ಕೈಯಿಂದ ಶೌಚಗುಂಡಿಗಳ ಸ್ವಚ್ಛಗೊಳಿಸುವಿಕೆ ಪದ್ದತಿಯನ್ನು ಕೊನೆಗೊಳಿಸಿದೆ’ ಎಂದು ಅಠಾವಳೆ ಪ್ರತಿಪಾದಿಸಿದ್ದಾರೆ. ಅಕ್ಟೋಬರ್ 2014 ರಿಂದ, ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 10.99 ಕೋಟಿಗೂ ಹೆಚ್ಚು ಮತ್ತು ನಗರ ಪ್ರದೇಶಗಳಲ್ಲಿ 62.65 ಲಕ್ಷಕ್ಕೂ ಹೆಚ್ಚು ನೈರ್ಮಲ್ಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೈಯಿಂದ ಶೌಚವನ್ನು ಸ್ವಚ್ಛಗೊಳಿಸುವ ಪದ್ದತಿಯನ್ನು ಕೊನೆಗೊಳಿಸಲು ಈ ಸ್ವಚ್ಛ ಭಾರತ್‌ ಮಿಷನ್‌ ದೊಡ್ಡ ಕೊಡುಗೆ ನೀಡಿದೆ ಎಂದು ಅವರು ಹೇಳಿದ್ದಾರೆ. “ಈ ಪದ್ದತಿಯ ಮುಂದುವರಿಕೆಯ ಬಗ್ಗೆ ಸಾಮಾಜಿಕ ಸಂಸ್ಥೆಗಳಿಂದ ವರದಿಗಳನ್ನು ಪಡೆದ ನಂತರ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಇನ್ನೂ ಅಸ್ತಿತ್ವದಲ್ಲಿರುವ ಈ ಪದ್ದತಿಯ ಮಾಹಿತಿ ಪಡೆಯಲು ಡಿಸೆಂಬರ್ 24, 2020 ರಂದು ‘ಸ್ವಚ್ಛತಾ ಅಭಿಯಾನ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಆದರೆ, ಇದುವರೆಗೆ ಒಂದೇ ಒಂದು ಪ್ರಕರಣ ದೃಢಪಟ್ಟಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತರೊಬ್ಬರು, “ಒಂದು ಕಡೆ ಸರ್ಕಾರವೇ ಶೌಚಗುಂಡಿ ಶುಚಿಕೊಳಿಸುವಾಗ 330 ಜನರು ಸಾವಿಗೀಡಾಗಿದ್ದಾರೆ ಎಂದು ಹೇಳುತ್ತಿದೆ. ಇನ್ನೊಂದು ಕಡೆ ಕೈಯಿಂದ ಸ್ವಚ್ಛಗೊಳಿಸುವ ಪದ್ದತಿಯಿಲ್ಲ ಎಂದು ಹೇಳುತ್ತಿದೆ. ಆದರೆ ಇವೆಲ್ಲಾ ಸುಳ್ಳು ಹೇಳಿಕೆಯಾಗಿದ್ದು, ದೇಶದಾದ್ಯಂತ ಕೈಯಿಂದ ಸ್ವಚ್ಛಗೊಳಿಸುವ ಎಷ್ಟೊ ಪ್ರಕರಣಗಳು ಪತ್ರಿಕೆಗಳಲ್ಲಿ ವರದಿಯಾವೆ. ಆದರೆ ಈ ಸರ್ಕಾರ ಅಂಕಿ ಅಂಶ ನೀಡಲು ಹೆದರಿಕೊಳ್ಳುತ್ತಿವೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...