Homeಮುಖಪುಟಭಾರತದಲ್ಲಿ ಕೈಯಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಪದ್ದತಿಯಿಲ್ಲ; ಆದರೆ ಸ್ವಚ್ಛಗೊಳಿಸುವ ವೇಳೆ 330 ಜನರು ಸಾವಿಗೀಡಾಗಿದ್ದಾರೆ: ಕೇಂದ್ರ...

ಭಾರತದಲ್ಲಿ ಕೈಯಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಪದ್ದತಿಯಿಲ್ಲ; ಆದರೆ ಸ್ವಚ್ಛಗೊಳಿಸುವ ವೇಳೆ 330 ಜನರು ಸಾವಿಗೀಡಾಗಿದ್ದಾರೆ: ಕೇಂದ್ರ ಸರ್ಕಾರ

ಕಳೆದ ಐದು ವರ್ಷಗಳಲ್ಲಿ ಕೈಯಿಂದ ಶೌಚಗುಂಡಿಗಳ ಸ್ವಚ್ಛಗೊಳಿಸುವಿಕೆಯಿಂದಾಗಿ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ಸರ್ಕಾರ ಹೇಳಿದೆ

- Advertisement -
- Advertisement -

ಭಾರತದಲ್ಲಿ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಕೆಲಸದಲ್ಲಿ ಯಾರೂ ತೊಡಗಿಸಿಕೊಂಡಿಲ್ಲ, ಆದರೆ 2017 ಮತ್ತು 2021 ರ ನಡುವೆ ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ 330 ಜನರು ಮೃತಪಟ್ಟಿದ್ದಾರೆ ಎಂದು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ. ಬಹುಜನ ಸಮಾಜ ಪಕ್ಷದ ಸಂಸದ ಗಿರೀಶ್ ಚಂದ್ರ ಅವರು ಕೇಳಿದ ಪ್ರಶ್ನೆಗೆ ಉತ್ತರವಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ಅವರು ‘ಮ್ಯಾನುಯಲ್ ಸ್ಕ್ಯಾವೆಂಜಿಂಗ್’ ಕುರಿತ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಒಳಚರಂಡಿ ಅಥವಾ ಶೌಚಗುಂಡಿಯಿಂದ ಕೈಗಳ ಮೂಲಕ ಮಲವನ್ನು ತೆಗೆಯುವ ಪದ್ದತಿಯನ್ನು, ‘ಮ್ಯಾನುಯಲ್ ಸ್ಕ್ಯಾವೆಂಜರ್‍ಸ್‌‌‌ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆ-2013’ ರ ಅಡಿಯಲ್ಲಿ ನಿಷೇಧಿಸಲಾಗಿದೆ. ಅದಾಗಿಯೂ ಈ ಪದ್ದತಿ ಭಾರತದ ಅನೇಕ ಭಾಗಗಳಲ್ಲಿ ಪ್ರಚಲಿತದಲ್ಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಿರೀಶ್‌ ಚಂದ್ರ ಅವರು, ದೇಶದಲ್ಲಿ ಶೌಚಗುಂಡಿಗಳಲ್ಲಿ ಕೆಲಸ ಮಾಡುವವರು ಗುತ್ತಿಗೆ, ವಲಸೆ ಮತ್ತು ಸಾಂದರ್ಭಿಕ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಯೇ ಅಥವಾ ಬಂಧಿತ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಯೇ ಹಾಗೂ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿವರಗಳನ್ನು ಕೋರಿದ್ದರು.

ಇದನ್ನೂ ಓದಿ: ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆಯಡಿಯಲ್ಲಿ 20% ಕ್ಕಿಂತ ಹೆಚ್ಚು ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ನೋಂದಾಯಿಸಲ್ಪಟ್ಟಿಲ್ಲವೇ ಎಂದು ಅವರು ಕೇಳಿದ್ದರು. ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಅಪಾಯಕಾರಿಯಾಗಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಸಂಖ್ಯೆಯ ಕುರಿತು ಚಂದ್ರಾ ಅವರು ರಾಜ್ಯವಾರು ಮಾಹಿತಿಯನ್ನು ಕೋರಿದ್ದರು.

“2013 ರ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆಯ ಸೆಕ್ಷನ್ 2 (1) (ಜಿ) ಅಡಿಯಲ್ಲಿ ವ್ಯಾಖ್ಯಾನಿಸಲಾದ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ದತಿಯಲ್ಲಿ ತೊಡಗಿರುವ ಜನರ ಯಾವುದೇ ವರದಿಯಿಲ್ಲ” ಎಂದು ಸಚಿವ ರಾಮದಾಸ್ ಅಠಾವಳೆ ಪ್ರತಿಕ್ರಿಯಿಸಿದ್ದಾರೆ.

“ಡಿಸೆಂಬರ್ 6, 2013 ರಿಂದ ಜಾರಿಗೆ ಬರುವಂತೆ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ದತಿಯನ್ನು ನಿಷೇಧಿಸಲಾಗಿದೆ. ಹೇಳಿದ ದಿನಾಂಕದಿಂದ ಯಾವುದೇ ವ್ಯಕ್ತಿ ಅಥವಾ ಏಜೆನ್ಸಿಯು ಯಾವುದೇ ವ್ಯಕ್ತಿಯನ್ನು ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಂತೆ ತೊಡಗಿಸಿಕೊಳ್ಳಲು ಅಥವಾ ಬಳಸಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಕಳೆದ ಮೂರು ವರ್ಷಗಳಲ್ಲಿ ದೇಶದಲ್ಲಿ 58,098 ಮ್ಯಾನುವಲ್ ಸ್ಕ್ಯಾವೆಂಜರ್‌ಗಳನ್ನು ಸರ್ಕಾರ ಗುರುತಿಸಿದೆ ಎಂದು ಜುಲೈ 26 ರಂದು ಅಠಾವಳೆ ಲೋಕಸಭೆಗೆ ತಿಳಿಸಿದ್ದರು. ಜುಲೈ 19 ರಂದು, 2017 ರಿಂದ ಭಾರತದಾದ್ಯಂತ 347 ನೈರ್ಮಲ್ಯ ಕಾರ್ಮಿಕರು ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಲೋಕಸಭೆಗೆ ತಿಳಿಸಿತ್ತು.

ಮಂಗಳವಾರ, 2017 ರಿಂದ 2021 ರವರೆಗೆ ದೇಶದಲ್ಲಿ ಕೈಯಿಂದ ಶೌಚಗುಂಡಿಗಳ ಸ್ವಚ್ಛಗೊಳಿಸುವಿಕೆಯಿಂದಾಗಿ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ಅಠವಾಲೆ ಹೇಳಿದ್ದಾರೆ.

“ಆದಾಗ್ಯೂ, ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಅಪಾಯಕಾರಿಯಾಗಿ ಸ್ವಚ್ಛಗೊಳಿಸುವ ಸಂದರ್ಭ 330 ಜನರು ಸಾವನ್ನಪ್ಪಿದ್ದಾರೆ” ಎಂದು ಸಚಿವ ಅಠಾವಳೆ ಹೇಳಿದ್ದಾರೆ.

2017 ಮತ್ತು 2021 ರ ನಡುವೆ ಉತ್ತರ ಪ್ರದೇಶದಲ್ಲಿ ಇಂತಹ 47 ಸಾವುನೋವುಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ 43 ಮತ್ತು ದೆಹಲಿಯಲ್ಲಿ 42, ಹರಿಯಾಣದಲ್ಲಿ 36 ಮತ್ತು ಮಹಾರಾಷ್ಟ್ರದಲ್ಲಿ 30 ಸಾವುಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

‘ಸ್ವಚ್ಛ ಭಾರತ್ ಮಿಷನ್  ಕೈಯಿಂದ ಶೌಚಗುಂಡಿಗಳ ಸ್ವಚ್ಛಗೊಳಿಸುವಿಕೆ ಪದ್ದತಿಯನ್ನು ಕೊನೆಗೊಳಿಸಿದೆ’ ಎಂದು ಅಠಾವಳೆ ಪ್ರತಿಪಾದಿಸಿದ್ದಾರೆ. ಅಕ್ಟೋಬರ್ 2014 ರಿಂದ, ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 10.99 ಕೋಟಿಗೂ ಹೆಚ್ಚು ಮತ್ತು ನಗರ ಪ್ರದೇಶಗಳಲ್ಲಿ 62.65 ಲಕ್ಷಕ್ಕೂ ಹೆಚ್ಚು ನೈರ್ಮಲ್ಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೈಯಿಂದ ಶೌಚವನ್ನು ಸ್ವಚ್ಛಗೊಳಿಸುವ ಪದ್ದತಿಯನ್ನು ಕೊನೆಗೊಳಿಸಲು ಈ ಸ್ವಚ್ಛ ಭಾರತ್‌ ಮಿಷನ್‌ ದೊಡ್ಡ ಕೊಡುಗೆ ನೀಡಿದೆ ಎಂದು ಅವರು ಹೇಳಿದ್ದಾರೆ. “ಈ ಪದ್ದತಿಯ ಮುಂದುವರಿಕೆಯ ಬಗ್ಗೆ ಸಾಮಾಜಿಕ ಸಂಸ್ಥೆಗಳಿಂದ ವರದಿಗಳನ್ನು ಪಡೆದ ನಂತರ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಇನ್ನೂ ಅಸ್ತಿತ್ವದಲ್ಲಿರುವ ಈ ಪದ್ದತಿಯ ಮಾಹಿತಿ ಪಡೆಯಲು ಡಿಸೆಂಬರ್ 24, 2020 ರಂದು ‘ಸ್ವಚ್ಛತಾ ಅಭಿಯಾನ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಆದರೆ, ಇದುವರೆಗೆ ಒಂದೇ ಒಂದು ಪ್ರಕರಣ ದೃಢಪಟ್ಟಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತರೊಬ್ಬರು, “ಒಂದು ಕಡೆ ಸರ್ಕಾರವೇ ಶೌಚಗುಂಡಿ ಶುಚಿಕೊಳಿಸುವಾಗ 330 ಜನರು ಸಾವಿಗೀಡಾಗಿದ್ದಾರೆ ಎಂದು ಹೇಳುತ್ತಿದೆ. ಇನ್ನೊಂದು ಕಡೆ ಕೈಯಿಂದ ಸ್ವಚ್ಛಗೊಳಿಸುವ ಪದ್ದತಿಯಿಲ್ಲ ಎಂದು ಹೇಳುತ್ತಿದೆ. ಆದರೆ ಇವೆಲ್ಲಾ ಸುಳ್ಳು ಹೇಳಿಕೆಯಾಗಿದ್ದು, ದೇಶದಾದ್ಯಂತ ಕೈಯಿಂದ ಸ್ವಚ್ಛಗೊಳಿಸುವ ಎಷ್ಟೊ ಪ್ರಕರಣಗಳು ಪತ್ರಿಕೆಗಳಲ್ಲಿ ವರದಿಯಾವೆ. ಆದರೆ ಈ ಸರ್ಕಾರ ಅಂಕಿ ಅಂಶ ನೀಡಲು ಹೆದರಿಕೊಳ್ಳುತ್ತಿವೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...