Homeಮುಖಪುಟಭಾರತದಲ್ಲಿ ಕೈಯಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಪದ್ದತಿಯಿಲ್ಲ; ಆದರೆ ಸ್ವಚ್ಛಗೊಳಿಸುವ ವೇಳೆ 330 ಜನರು ಸಾವಿಗೀಡಾಗಿದ್ದಾರೆ: ಕೇಂದ್ರ...

ಭಾರತದಲ್ಲಿ ಕೈಯಿಂದ ಶೌಚಗುಂಡಿ ಸ್ವಚ್ಛಗೊಳಿಸುವ ಪದ್ದತಿಯಿಲ್ಲ; ಆದರೆ ಸ್ವಚ್ಛಗೊಳಿಸುವ ವೇಳೆ 330 ಜನರು ಸಾವಿಗೀಡಾಗಿದ್ದಾರೆ: ಕೇಂದ್ರ ಸರ್ಕಾರ

ಕಳೆದ ಐದು ವರ್ಷಗಳಲ್ಲಿ ಕೈಯಿಂದ ಶೌಚಗುಂಡಿಗಳ ಸ್ವಚ್ಛಗೊಳಿಸುವಿಕೆಯಿಂದಾಗಿ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ಸರ್ಕಾರ ಹೇಳಿದೆ

- Advertisement -
- Advertisement -

ಭಾರತದಲ್ಲಿ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಕೆಲಸದಲ್ಲಿ ಯಾರೂ ತೊಡಗಿಸಿಕೊಂಡಿಲ್ಲ, ಆದರೆ 2017 ಮತ್ತು 2021 ರ ನಡುವೆ ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ 330 ಜನರು ಮೃತಪಟ್ಟಿದ್ದಾರೆ ಎಂದು ಮೋದಿ ನೇತೃತ್ವದ ಒಕ್ಕೂಟ ಸರ್ಕಾರ ಮಂಗಳವಾರ ಲೋಕಸಭೆಗೆ ತಿಳಿಸಿದೆ. ಬಹುಜನ ಸಮಾಜ ಪಕ್ಷದ ಸಂಸದ ಗಿರೀಶ್ ಚಂದ್ರ ಅವರು ಕೇಳಿದ ಪ್ರಶ್ನೆಗೆ ಉತ್ತರವಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್ ಅಠಾವಳೆ ಅವರು ‘ಮ್ಯಾನುಯಲ್ ಸ್ಕ್ಯಾವೆಂಜಿಂಗ್’ ಕುರಿತ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಒಳಚರಂಡಿ ಅಥವಾ ಶೌಚಗುಂಡಿಯಿಂದ ಕೈಗಳ ಮೂಲಕ ಮಲವನ್ನು ತೆಗೆಯುವ ಪದ್ದತಿಯನ್ನು, ‘ಮ್ಯಾನುಯಲ್ ಸ್ಕ್ಯಾವೆಂಜರ್‍ಸ್‌‌‌ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆ-2013’ ರ ಅಡಿಯಲ್ಲಿ ನಿಷೇಧಿಸಲಾಗಿದೆ. ಅದಾಗಿಯೂ ಈ ಪದ್ದತಿ ಭಾರತದ ಅನೇಕ ಭಾಗಗಳಲ್ಲಿ ಪ್ರಚಲಿತದಲ್ಲಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗಿರೀಶ್‌ ಚಂದ್ರ ಅವರು, ದೇಶದಲ್ಲಿ ಶೌಚಗುಂಡಿಗಳಲ್ಲಿ ಕೆಲಸ ಮಾಡುವವರು ಗುತ್ತಿಗೆ, ವಲಸೆ ಮತ್ತು ಸಾಂದರ್ಭಿಕ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಯೇ ಅಥವಾ ಬಂಧಿತ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆಯೇ ಹಾಗೂ ಈ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿವರಗಳನ್ನು ಕೋರಿದ್ದರು.

ಇದನ್ನೂ ಓದಿ: ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆಯಡಿಯಲ್ಲಿ 20% ಕ್ಕಿಂತ ಹೆಚ್ಚು ಮ್ಯಾನುಯಲ್ ಸ್ಕ್ಯಾವೆಂಜರ್‌ಗಳು ನೋಂದಾಯಿಸಲ್ಪಟ್ಟಿಲ್ಲವೇ ಎಂದು ಅವರು ಕೇಳಿದ್ದರು. ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಅಪಾಯಕಾರಿಯಾಗಿ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸಾವನ್ನಪ್ಪಿದ ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಸಂಖ್ಯೆಯ ಕುರಿತು ಚಂದ್ರಾ ಅವರು ರಾಜ್ಯವಾರು ಮಾಹಿತಿಯನ್ನು ಕೋರಿದ್ದರು.

“2013 ರ ಉದ್ಯೋಗ ನಿಷೇಧ ಮತ್ತು ಪುನರ್ವಸತಿ ಕಾಯಿದೆಯ ಸೆಕ್ಷನ್ 2 (1) (ಜಿ) ಅಡಿಯಲ್ಲಿ ವ್ಯಾಖ್ಯಾನಿಸಲಾದ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ದತಿಯಲ್ಲಿ ತೊಡಗಿರುವ ಜನರ ಯಾವುದೇ ವರದಿಯಿಲ್ಲ” ಎಂದು ಸಚಿವ ರಾಮದಾಸ್ ಅಠಾವಳೆ ಪ್ರತಿಕ್ರಿಯಿಸಿದ್ದಾರೆ.

“ಡಿಸೆಂಬರ್ 6, 2013 ರಿಂದ ಜಾರಿಗೆ ಬರುವಂತೆ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ದತಿಯನ್ನು ನಿಷೇಧಿಸಲಾಗಿದೆ. ಹೇಳಿದ ದಿನಾಂಕದಿಂದ ಯಾವುದೇ ವ್ಯಕ್ತಿ ಅಥವಾ ಏಜೆನ್ಸಿಯು ಯಾವುದೇ ವ್ಯಕ್ತಿಯನ್ನು ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಂತೆ ತೊಡಗಿಸಿಕೊಳ್ಳಲು ಅಥವಾ ಬಳಸಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌: ಪ್ರಶ್ನಿಸಿದ್ದಕ್ಕೆ ‘ಈ ಕೆಲಸ ಮಾಡಲೆಂದೇ ಜಾತಿಗಳಿವೆ’ ಎಂದ ಇಂಜಿನಿಯರ್‌‌‌!

ಕಳೆದ ಮೂರು ವರ್ಷಗಳಲ್ಲಿ ದೇಶದಲ್ಲಿ 58,098 ಮ್ಯಾನುವಲ್ ಸ್ಕ್ಯಾವೆಂಜರ್‌ಗಳನ್ನು ಸರ್ಕಾರ ಗುರುತಿಸಿದೆ ಎಂದು ಜುಲೈ 26 ರಂದು ಅಠಾವಳೆ ಲೋಕಸಭೆಗೆ ತಿಳಿಸಿದ್ದರು. ಜುಲೈ 19 ರಂದು, 2017 ರಿಂದ ಭಾರತದಾದ್ಯಂತ 347 ನೈರ್ಮಲ್ಯ ಕಾರ್ಮಿಕರು ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ಲೋಕಸಭೆಗೆ ತಿಳಿಸಿತ್ತು.

ಮಂಗಳವಾರ, 2017 ರಿಂದ 2021 ರವರೆಗೆ ದೇಶದಲ್ಲಿ ಕೈಯಿಂದ ಶೌಚಗುಂಡಿಗಳ ಸ್ವಚ್ಛಗೊಳಿಸುವಿಕೆಯಿಂದಾಗಿ ಯಾವುದೇ ಸಾವುಗಳು ವರದಿಯಾಗಿಲ್ಲ ಎಂದು ಅಠವಾಲೆ ಹೇಳಿದ್ದಾರೆ.

“ಆದಾಗ್ಯೂ, ಕಳೆದ ಐದು ವರ್ಷಗಳಲ್ಲಿ ಒಳಚರಂಡಿ ಮತ್ತು ಶೌಚಗುಂಡಿಗಳನ್ನು ಅಪಾಯಕಾರಿಯಾಗಿ ಸ್ವಚ್ಛಗೊಳಿಸುವ ಸಂದರ್ಭ 330 ಜನರು ಸಾವನ್ನಪ್ಪಿದ್ದಾರೆ” ಎಂದು ಸಚಿವ ಅಠಾವಳೆ ಹೇಳಿದ್ದಾರೆ.

2017 ಮತ್ತು 2021 ರ ನಡುವೆ ಉತ್ತರ ಪ್ರದೇಶದಲ್ಲಿ ಇಂತಹ 47 ಸಾವುನೋವುಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ 43 ಮತ್ತು ದೆಹಲಿಯಲ್ಲಿ 42, ಹರಿಯಾಣದಲ್ಲಿ 36 ಮತ್ತು ಮಹಾರಾಷ್ಟ್ರದಲ್ಲಿ 30 ಸಾವುಗಳು ವರದಿಯಾಗಿವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಮ್ಯಾನ್‌ಹೋಲ್‌ಗೆ ಇಳಿದ ಪರಿಣಾಮ ಗಂಭೀರ ಆರೋಗ್ಯ ಸಮಸ್ಯೆ: ಪೌರಕಾರ್ಮಿಕ ICU ಗೆ ದಾಖಲು

‘ಸ್ವಚ್ಛ ಭಾರತ್ ಮಿಷನ್  ಕೈಯಿಂದ ಶೌಚಗುಂಡಿಗಳ ಸ್ವಚ್ಛಗೊಳಿಸುವಿಕೆ ಪದ್ದತಿಯನ್ನು ಕೊನೆಗೊಳಿಸಿದೆ’ ಎಂದು ಅಠಾವಳೆ ಪ್ರತಿಪಾದಿಸಿದ್ದಾರೆ. ಅಕ್ಟೋಬರ್ 2014 ರಿಂದ, ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 10.99 ಕೋಟಿಗೂ ಹೆಚ್ಚು ಮತ್ತು ನಗರ ಪ್ರದೇಶಗಳಲ್ಲಿ 62.65 ಲಕ್ಷಕ್ಕೂ ಹೆಚ್ಚು ನೈರ್ಮಲ್ಯ ಶೌಚಾಲಯಗಳನ್ನು ನಿರ್ಮಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕೈಯಿಂದ ಶೌಚವನ್ನು ಸ್ವಚ್ಛಗೊಳಿಸುವ ಪದ್ದತಿಯನ್ನು ಕೊನೆಗೊಳಿಸಲು ಈ ಸ್ವಚ್ಛ ಭಾರತ್‌ ಮಿಷನ್‌ ದೊಡ್ಡ ಕೊಡುಗೆ ನೀಡಿದೆ ಎಂದು ಅವರು ಹೇಳಿದ್ದಾರೆ. “ಈ ಪದ್ದತಿಯ ಮುಂದುವರಿಕೆಯ ಬಗ್ಗೆ ಸಾಮಾಜಿಕ ಸಂಸ್ಥೆಗಳಿಂದ ವರದಿಗಳನ್ನು ಪಡೆದ ನಂತರ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಇನ್ನೂ ಅಸ್ತಿತ್ವದಲ್ಲಿರುವ ಈ ಪದ್ದತಿಯ ಮಾಹಿತಿ ಪಡೆಯಲು ಡಿಸೆಂಬರ್ 24, 2020 ರಂದು ‘ಸ್ವಚ್ಛತಾ ಅಭಿಯಾನ’ ಎಂಬ ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಆದರೆ, ಇದುವರೆಗೆ ಒಂದೇ ಒಂದು ಪ್ರಕರಣ ದೃಢಪಟ್ಟಿಲ್ಲ” ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತರೊಬ್ಬರು, “ಒಂದು ಕಡೆ ಸರ್ಕಾರವೇ ಶೌಚಗುಂಡಿ ಶುಚಿಕೊಳಿಸುವಾಗ 330 ಜನರು ಸಾವಿಗೀಡಾಗಿದ್ದಾರೆ ಎಂದು ಹೇಳುತ್ತಿದೆ. ಇನ್ನೊಂದು ಕಡೆ ಕೈಯಿಂದ ಸ್ವಚ್ಛಗೊಳಿಸುವ ಪದ್ದತಿಯಿಲ್ಲ ಎಂದು ಹೇಳುತ್ತಿದೆ. ಆದರೆ ಇವೆಲ್ಲಾ ಸುಳ್ಳು ಹೇಳಿಕೆಯಾಗಿದ್ದು, ದೇಶದಾದ್ಯಂತ ಕೈಯಿಂದ ಸ್ವಚ್ಛಗೊಳಿಸುವ ಎಷ್ಟೊ ಪ್ರಕರಣಗಳು ಪತ್ರಿಕೆಗಳಲ್ಲಿ ವರದಿಯಾವೆ. ಆದರೆ ಈ ಸರ್ಕಾರ ಅಂಕಿ ಅಂಶ ನೀಡಲು ಹೆದರಿಕೊಳ್ಳುತ್ತಿವೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...