Homeಕರ್ನಾಟಕಉಪಮುಖ್ಯಮಂತ್ರಿಗಳ ಅಗತ್ಯವಿದೆಯೇ? : ರೇಣುಕಾಚಾರ್ಯ ಪುನರುಚ್ಚಾರ!

ಉಪಮುಖ್ಯಮಂತ್ರಿಗಳ ಅಗತ್ಯವಿದೆಯೇ? : ರೇಣುಕಾಚಾರ್ಯ ಪುನರುಚ್ಚಾರ!

- Advertisement -
- Advertisement -

ರಾಜ್ಯದಲ್ಲಿ ಸಮರ್ಥ ಮುಖ್ಯಮಂತ್ರಿ ಇದ್ದಾಗ ಉಪಮುಖ್ಯಮಂತ್ರಿಗಳು ಬೇಕೆ ಎಂಬ ಮಾಹಿತಿಯನ್ನು ಬಿಜೆಪಿ ರಾಜ್ಯಾಧ್ಯಕ್ಷರ ಮೂಲಕ ಯಾರಿಗೆ ತಲುಪಿಸಬೇಕೋ ಅವರಿಗೆ ತಲುಪಿಸಿಯಾಗಿದೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಉಪಮುಖ್ಯಮಂತ್ರಿಗಳ ಹುದ್ದೆ ಬೇಡ ಎಂಬುದನ್ನು ಪರೋಕ್ಷವಾಗಿ ಸಮರ್ಥಿಸಿಕೊಂಡಿದರು. .

ತುಮಕೂರಿಗೆ ಆಗಮಿಸಿದ್ದ ಅವರು, “ನಾನು ಪಕ್ಷದ ಹೈಕಮಾಂಡ್ ವಿರುದ್ಧ ಮಾತನಾಡಲಾರೆ. ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಕಾರ್ಯಕರ್ತರು ಹೇಳಿದ ಅಭಿಪ್ರಾಯಗಳನ್ನೇ ನಾನು ರಾಜ್ಯಾಧ್ಯಕ್ಷರಿಗೆ ಹೇಳಿದ್ದೇನೆ. ನಾನು ದಾವಣಗೆರೆ ಮತ್ತು ಬೆಂಗಳೂರಿನಲ್ಲಿ 15 ದಿನಗಳಿಂದ ಹೇಳುತ್ತ ಬಂದಿರುವ ಮಾತುಗಳಿಗೆ ಬದ್ದನಾಗಿದ್ದೇನೆ. ಆದರೆ ಎಲ್ಲವನ್ನೂ ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ” ಎಂದು ತಿಳಿಸಿದರು.

ಉಪಮುಖ್ಯಮಂತ್ರಿಗಳ ವಿರುದ್ಧ ಸಹಿಸಂಗ್ರಹ ಮಾಡಿಲ್ಲ. ಬೇರೆಯವರು ಮಾಡಿರುವ ಬಗ್ಗೆ ಮಾಹಿತಿ ಇಲ್ಲ. ಅದು ನನ್ನ ಗಮನಕ್ಕೂ ಬಂದಿಲ್ಲ. ಉಪಮುಖ್ಯಮಂತ್ರಿಗಳ ವಿರುದ್ಧ ಸಹಿ ಸಂಗ್ರಹಕ್ಕೆ ಮುಖ್ಯಮಂತ್ರಿಗಳು ಬೆಂಬಲ ನೀಡಿದ್ದಾರೆಂಬುದು ಸುಳ್ಳು. ಅವರು ನನಗೆ ಏನೂ ಹೇಳಿಯೂ ಇಲ್ಲ. ಬೆಂಬಲಿಸಿಯೂ ಇಲ್ಲ. ಆದರೆ ಹಲವಾರು ಶಾಸಕರ, ಕಾರ್ಯಕರ್ತರ ಅಭಿಪ್ರಾಯಗಳನ್ನು ಹೈಕಮಾಂಡ್ ನಾಯಕರಿಗೆ ತಲುಪಿಸಿಯಾಗಿದೆ ಎಂದರು.

ನಾನು ಹಾದಿಬೀದಿಯಲ್ಲಿ ಮಲಗಿ ಹೋರಾಟ ಮಾಡಿದ್ದೇನೆ. ಹೊನ್ನಾಳಿಯ ಜನ ನನ್ನನ್ನು ಮೂರು ಬಾರಿ ಶಾಸಕರನ್ನಾಗಿ ಮಾಡಿದ್ದಾರೆ. ನನ್ನ ಮೇಲೆ 200 ಕೇಸುಗಳಿವೆ. ಜನರ ಪರವಾಗಿ ಹೋರಾಟ ಮಾಡಿದ್ದರಿಂದಲೇ ನನ್ನ ಮತ್ತೆಮತ್ತೆ ಆಯ್ಕೆ ಮಾಡಿರುವುದು ಎನ್ನುವ ಮೂಲಕ ನಾನೂ ಕೂಡ ಸಚಿವನಾಗಲು ಸಮರ್ಥ ಎಂಬುದನ್ನು ಒತ್ತಿಹೇಳಿದರು.

ಬೆಂಗಳೂರು, ದಾವಣಗೆರೆಯಲ್ಲಿ ಮಾತನಾಡಿದ ಮೇಲೆ ಅವರು ಉಪಮುಖ್ಯಮಂತ್ರಿಗಳು ಕೂಡ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಏಕೆ ಹೇಳಿದರು. ಪಕ್ಷದ ವೇದಿಕೆಯಲ್ಲಿ ಚರ್ಚಿಸಬಹುದಿಲ್ಲವೇ? ಹೈಕಮಾಂಡ್ ಗಮನಕ್ಕೆ ತರಬಹುದಿಲ್ಲವೇ? ನಾನು ಮಾತನಾಡಿದರೆ ಹಾದಿಬೀದಿಯಲ್ಲಿ ಮಾತನಾಡುತ್ತಾರೆ ಎನ್ನುವುದು. ಅವರು ಮಾತನಾಡಿದರೆ ಹಾದಿಬೀದಿಯಲ್ಲವೇ ಎಂದು ಕಿಡಿಕಾರಿದರು.

ಉಪಮುಖ್ಯಮಂತ್ರಿ ಬೇಡವೆಂಬುದು ಬಹುತೇಕ ಶಾಸಕರ ಭಾವನೆಯಾಗಿದೆ ಎಂದು ಪರೋಕ್ಷವಾಗಿ ಒತ್ತಿ ಹೇಳಿದರು. ಯಡಿಯೂರಪ್ಪ ಸಮರ್ಥ ನಾಯಕರೆಂದು ಬಲವಾಗಿ ಸಮರ್ಥಿಸಿಕೊಂಡರು. ಮಾತುಮಾತಿಗೂ ನಾನು ಮೂರು ಬಾರಿ ಆಯ್ಕೆಯಾಗಿದ್ದೇನೆ. ನಾನು ದಿಢೀರ್ ಹುಟ್ಟಿಕೊಂಡ ನಾಯಕನಲ್ಲ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ವಿರುದ್ಧ ಬೇಗುದಿ ಹೊರಹಾಕಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮಗಳ ಮುಂದೆ ಯಾವುದನ್ನೂ ಚರ್ಚಿಸಬೇಡಿ ಎಂದು ಹೇಳಿದ್ದಾರೆ. ಆ ಕಾರಣಕ್ಕೋಸ್ಕರ ಸುಮ್ಮನಿದ್ದೇನೆ. ನಾನು ಆರ್‌ಎಸ್ಎಸ್ ಹಿನ್ನೆಲೆಯಿಂದ ಬಂದವನು. ನನಗೂ ರಾಜಕಾರಣ ಏನೆಂಬುದು ತಿಳಿಯುತ್ತದೆ. ಪಕ್ಷದ ಹೈಕಮಾಂಡ್ ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...