Homeಚಳವಳಿಕೃಷಿ ಶ್ರಮಿಕರ ಬೆವರನ್ನು ಅವಮಾನಿಸುವ ಮಾತುಗಳು ಬೇಡ - ಅವರ ಮಾತು ಆಲಿಸಿ

ಕೃಷಿ ಶ್ರಮಿಕರ ಬೆವರನ್ನು ಅವಮಾನಿಸುವ ಮಾತುಗಳು ಬೇಡ – ಅವರ ಮಾತು ಆಲಿಸಿ

ಉದ್ಯೋಗ ಸೃಷ್ಟಿಯಲ್ಲಿ ಈಗಲೂ ಕೃಷಿ ಕ್ಷೇತ್ರದ್ದೆ ಸಿಂಹಪಾಲು. ಇಂದಿಗೂ ದೇಶದ ಉದ್ಯೋಗ ಸೃಷ್ಟಿಯಲ್ಲಿ ಕೃಷಿ ಕ್ಷೇತ್ರದ ಪಾಲು ಶೇ.53ರಷ್ಟು.

- Advertisement -
- Advertisement -

‘ಪ್ರಧಾನಿ ನರೇಂದ್ರ ಮೋದಿ ಸೇವಿಸುತ್ತಿರುವ ರೊಟ್ಟಿ ರೈತರು ತಮ್ಮ ಹೊಲಗಳಲ್ಲಿ ಬೆಳೆದ ಧಾನ್ಯದಿಂದ ತಯಾರಿಸಿದ್ದು ಎಂದು ಹೇಳಿ’. ಇದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತದ ಮೂರು ಮಸೂದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಎಪ್ಪತ್ತು ವರ್ಷದ ದೇವ್‍ಸಿಂಗ್ ನೀಡಿರುವ ಎಚ್ಚರಿಕೆ. ಕಳೆದ ಹಲವು ವರ್ಷಗಳಿಂದ ಮನ್‍ಕಿ ಬಾತ್ ಕೇಳಿದ್ದು ಸಾಕು, ಇನ್ನು ರೈತರ ಮಾತನ್ನು ಪ್ರಧಾನಿಗಳು ಆಲಿಸಬೇಕೆಂದು ಆಕ್ರೋಶಭರಿತರಾಗಿ ಹೇಳಿದ್ದಾರೆ. ದೇವ್‍ಸಿಂಗ್ ಅವರ ಪತ್ನಿ, ಸೇರಿದಂತೆ ಇಡೀ ಕುಟುಂಬ ಪ್ರತಿಭಟನೆಯಲ್ಲಿ ಪಾಲ್ಗೊಂಡಿದೆ. ದೇವ್‍ಸಿಂಗ್ ಅವರ ಆರೋಗ್ಯಕ್ಕೆ ಏನಾದರೂ ತೊಂದರೆಯಾದೀತು ಎಂಬುದು ಅವರ ಮನೆಯವರ ಆತಂಕ. ಆದರೆ ದೇವ್‍ಸಿಂಗ್ ಮಾತ್ರ ನನಗೆ ಏನಾದರೂ ಸರಿಯೇ ನಮ್ಮ ಮಕ್ಕಳ ಭವಿಷ್ಯ ಉಳಿಸುವುದು ನನ್ನ ಜವಾಬ್ದಾರಿ ಎಂದು ಹಗಲು ರಾತ್ರಿ ಈ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದು ಕೇವಲ ಒಂದು ಕುಟುಂಬದ ಪ್ರಶ್ನೆ ಅಲ್ಲ. ದೇಶದ ವಿವಿಧ ರಾಜ್ಯಗಳ ಎರಡು ಲಕ್ಷ ರೈತರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಉದ್ಯಮಿಯೊಬ್ಬ ಕಚ್ಚಾ ಉತ್ಪನ್ನಗಳನ್ನು ಖರೀದಿಸುತ್ತಾನೆ. ಸಿದ್ಧ ಉತ್ಪನ್ನಗಳನ್ನು ತಯಾರಿಸಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಾನೆ. ಅದೇ ರೀತಿ ರೈತನೊಬ್ಬ ತನಗೆ ಬೇಕಾದ ಬೀಜ, ರಸಗೊಬ್ಬರ, ಕ್ರಿಮಿನಾಶಕಗಳನ್ನು ಖರೀದಿಸುತ್ತಾನೆ ಬೆಳೆದ ಫಸಲನ್ನು ಕೊಯ್ಲು ಮಾಡಿ ಮಾರುಕಟ್ಟೆಗೆ ಸಾಗಿಸುತ್ತಾನೆ. ಇಲ್ಲಿ ಮೇಲ್ನೋಟಕ್ಕೆ ಇಬ್ಬರೂ ಒಂದೇ ರೀತಿ ಕಾಣಿಸುತ್ತಾರೆ. ಆದರೆ ಇಲ್ಲಿರುವ ವ್ಯತ್ಯಾಸವನ್ನು ಗಮನಿಸಬೇಕು. ಅದೆಂದರೆ ಉದ್ಯಮಿ ವ್ಯಾಪಾರ ಮಾಡುತ್ತಾನೆ ಕೃಷಿಕ ಕರ್ತವ್ಯ ನಿರ್ವಹಿಸುತ್ತಾನೆ. ಈ ವ್ಯತ್ಯಾಸವನ್ನು ಅರಿಯದಿದ್ದರೆ ಜಗತ್ತು ನಾಶವಾಗುತ್ತೆ. ಈ ಆಯಾಮದಲ್ಲಿ ನಾವು ರೈತರ ಪ್ರತಿಭಟನೆಯನ್ನು ನೋಡುವ ಅಗತ್ಯವಿದೆ.

ರೈತರು ಭಯೋತ್ಪಾದಕರು, ಈ ರೈತರ ಪ್ರತಿಭಟನೆಗೆ ಖಲಿಸ್ತಾನ್ ಬೆಂಬಲವಿದೆ, ಕಮ್ಯೂನಿಸ್ಟರು ಮತ್ತು ಕಾಂಗ್ರೆಸ್‍ನವರು ಪ್ರೇರೇಪಣೆ ನೀಡುತ್ತಿದ್ದಾರೆ ಎಂದು ಹೇಳುವುದು ಸುಲಭ. ಅಂತವರು ಕೃಷಿಕನ ಹೃದಯದಲ್ಲಿ ಕೂತು ಮಾತನಾಡಿದರೆ ಅರಿವಿಗೆ ಬರುತ್ತೆ ಕೃಷಿ ಮತ್ತು ಕೃಷಿಕ ಅಂದರೆ ಏನು ಅಂತ. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವವರು ದೇಶಕ್ಕೆ ಅನ್ನವನ್ನಷ್ಟೆ ನೀಡುತ್ತಿಲ್ಲ. ಆ ರೈತರ ಕುಟುಂಬಗಳಲ್ಲಿ ಜನಿಸಿದ ಹಲವಾರು ಯುವಕರು ಗಡಿಯಲ್ಲಿ ಈ ದೇಶದ ರಕ್ಷಣೆಗಾಗಿ ಪ್ರಾಣ ಕೊಟ್ಟಿದ್ದಾರೆ ಎಂಬುದನ್ನು ಅರಿಯಬೇಕು. ಅಪ್ಪ ಅಮ್ಮ ಹೊಲ, ತೋಟಗಳಲ್ಲಿ ದುಡಿಯುತ್ತಿದ್ದರೆ ಅವರ ಮಕ್ಕಳು ದೇಶ ರಕ್ಷಣೆಗಾಗಿ ಸೇನೆಯಲ್ಲಿ ದುಡಿಯುತ್ತಿದ್ದಾರೆ. ಮುಂಬೈನ ದಲಾಲ್ ಸ್ಟ್ರೀಟ್, ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತು ಶ್ರಮಿಕರ ಬೆವರನ್ನು ಕದಿಯುವವರ ನಾಲಿಗೆಗಳು ಮಾತ್ರ ಹೀಗೆ ಒದರಲು ಸಾಧ್ಯ.

ಅರ್ಥಶಾಸ್ತ್ರ ವ್ಯಾಖ್ಯಾನದ ಅನುಸಾರ ಕೃಷಿ ಪ್ರಾಥಮಿಕ ವಲಯ, ತಯಾರಿಕಾ ಕ್ಷೇತ್ರ ದ್ವಿತೀಯ ಮತ್ತು ಸೇವಾ ಕ್ಷೇತ್ರ ತೃತೀಯ ವಲಯ. ತೃತೀಯ ವಲಯ ಇಲ್ಲದಿದ್ದರೂ ದ್ವಿತೀಯ ವಲಯ ಉಳಿಯಬಲ್ಲದು. ದ್ವಿತೀಯ ವಲಯ ಇಲ್ಲದಿದ್ದರೂ ಪ್ರಾಥಮಿಕ ವಲಯ ಉಳಿಯಬಲ್ಲದು. ಆದರೆ ಪ್ರಾಥಮಿಕ ವಲಯ ಇಲ್ಲದಿದ್ದರೆ ಉಳಿದ ಯಾವ ವಲಯಗಳೂ ಉಳಿಯಲು ಸಾಧ್ಯವಿಲ್ಲ. ಹೀಗಾಗಿಯೇ ಕೃಷಿಗೆ ಪ್ರಾಥಮಿಕ ವಲಯದ ಮಾನ್ಯತೆ ನೀಡಿರುವುದು. ಸದ್ಯ ದ್ವಿತೀಯ ಮತ್ತು ತೃತೀಯ ವಲಯವನ್ನು ಕಾರ್ಪೊರೆಟ್‍ಗಳು ಆಕ್ರಮಿಸಿದ್ದಾರೆ. ಇನ್ನು ಉಳಿದಿರುವುದು ಪ್ರಾಥಮಿಕ ವಲಯ. ಅದನ್ನೂ ಆಕ್ರಮಿಸಿದರೆ ಮತ್ತೆ ಉಳಿಯುವುದು ಬೇರೇನೂ ಇಲ್ಲ. ಇಂತಹ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ. ಭಾರತ ಇಂದು ಆಹಾರ ಧಾನ್ಯಗಳು, ಸಕ್ಕರೆ ಮತ್ತು ಹಾಲು ಉತ್ಪಾದನೆಯಲ್ಲಿ ಸ್ವಾವಲಂಬನೆ ಸ್ಥಾಪಿಸಿದೆ. ಇದರಿಂದ ಪ್ರತಿ ವ್ಯಕ್ತಿಯ ಸಂವಿಧಾನಬದ್ಧವಾದ ಆಹಾರದ ಹಕ್ಕು ಜೀವಂತವಾಗಿದೆ. ಒಂದು ವೇಳೆ ಕೃಷಿ ಕ್ಷೇತ್ರ ಕಾರ್ಪೊರೇಟ್‍ಗಳ ಹಿಡಿತಕ್ಕೆ ಸಿಲುಕಿದರೆ ಆಹಾರದ ಹಕ್ಕು ಉಳಿಯುವುದೇ ಇಲ್ಲ. ಈ ಹಿನ್ನೆಲೆಯಲ್ಲಿ ರೈತರ ಇಂದಿನ ಪ್ರತಿಭಟನೆಯನ್ನು ನೋಡುವ ಅಗತ್ಯತೆ ಇದೆ.

ದೇಶದ ಜಿಡಿಪಿಗೆ ಸೇವಾ ಕ್ಷೇತ್ರದ ಕೊಡುಗೆಗೆ ಹೋಲಿಸಿದರೆ ಕೃಷಿ ಕ್ಷೇತ್ರದ ಕೊಡುಗೆ ಕಡಿಮೆ. ಆದರೆ ಉದ್ಯೋಗ ಸೃಷ್ಟಿಯಲ್ಲಿ ಈಗಲೂ ಕೃಷಿ ಕ್ಷೇತ್ರದ್ದೆ ಸಿಂಹಪಾಲು. ಇಂದಿಗೂ ದೇಶದ ಉದ್ಯೋಗ ಸೃಷ್ಟಿಯಲ್ಲಿ ಕೃಷಿ ಕ್ಷೇತ್ರದ ಪಾಲು ಶೇ.53ರಷ್ಟು. ಉಳಿದಿದ್ದರಲ್ಲಿ ತಯಾರಿಕೆ ಮತ್ತು ಸೇವಾಕ್ಷೇತ್ರಗಳು ಹಂಚಿಕೊಂಡಿವೆ. ಇಂತಹ ಕ್ಷೇತ್ರವನ್ನು ಕಾರ್ಪೊರೆಟ್‍ಗಳ ಹಿಡಿತಕ್ಕೆ ನೀಡುವುದರಿಂದ ಯುವಕರು ನಿರುದ್ಯೋಗಿಗಳಾಗುವುದರೊಂದಿಗೆ ಆಹಾರದ ಹಕ್ಕು ಇಲ್ಲವಾಗಿ ಅರಾಜಕತೆ ಸೃಷ್ಟಿಯಾಗಲಿದೆ ಎಂಬ ಎಚ್ಚರಿಕೆ ಕೇಂದ್ರ ಸರ್ಕಾರಕ್ಕೆ ಇರಬೇಕಾಗಿದೆ. ಈ ನಾಗರಿಕತೆ ಯಾವುದರ ಆಧಾರದಲ್ಲಿ ಇಲ್ಲಿವರೆಗೂ ವಿಕಾಸವಾಗುತ್ತಾ ಬಂದಿದೆಯೋ ಆ ವ್ಯವಸ್ಥೆಯೇ ನಾಶವಾಗುತ್ತದೆ.

ಪ್ರತಿಭಟನೆ ನಡೆಸುವುದು ಈ ದೇಶದ ಪ್ರತಿಯೊಬ್ಬರಿಗೂ ನಮ್ಮ ಸಂವಿಧಾನ ನೀಡಿರುವ ಹಕ್ಕು. ಸಂವಿಧಾನ ಕರಡನ್ನು ಸಮರ್ಪಿಸಿದ ಸಂವಿಧಾನ ದಿನವಾದ ನ.26ರಂದೇ ರೈತರ ಮೇಲೆ ಲಾಠಿ ಚಾರ್ಜ್ ಮಾಡಿ, ಜಲಫಿರಂಗಿಗಳು, ಟಿಯರ್‌ಗ್ಯಾಸ್‍ಗಳನ್ನು ಬಳಸಿರುವುದು ಕನಿಷ್ಠ ನಾಚಿಕೆಯೂ ಇಲ್ಲದವರು ಎಸಗುವ ಕೃತ್ಯವಲ್ಲದೆ ಮತ್ತೇನೂ ಅಲ್ಲ. ಭಟಿಂಡಾದ ಕೃಷಿ ಮಹಿಳೆ ಹರಿಂದರ್ ಭಾನು ಈ ಪ್ರತಿಭಟನೆಯಲ್ಲಿ ಹತ್ತು ಸಾವಿರ ಕೃಷಿ ಮಹಿಳೆಯರನ್ನು ಮುನ್ನಡೆಸುತ್ತಿದ್ದಾಳೆ. ಈ ಮೂರೂ ಮಸೂದೆಗೆ ಅನುಷ್ಠಾನಕ್ಕೆ ಬಂದರೆ ಕೃಷಿಕರು ಅವರ ಮನೆಗಳಲ್ಲಿ ರೊಟ್ಟಿ ಮಾಡುವುದನ್ನೇ ನಿಲ್ಲಿಸಬೇಕಾಗುತ್ತದೆ ಎಂದು ತಮ್ಮ ಅಂತರಾಳದ ನೋವನ್ನು ಹೊರಗೆಡಹಿದ್ದಾರೆ. ಕೃಷಿ ಎಂದೂ ಬಿಸಿನೆಸ್ ಅಲ್ಲ ಅದೊಂದು ಧರ್ಮ ಮತ್ತು ಕರ್ತವ್ಯ. ತಾನೂ ಉಂಡು ಮತ್ತೊಬ್ಬರಿಗೂ ಉಣಬಡಿಸುವುದೇ ಆ ಧರ್ಮ. ನವಿಲು ಮತ್ತು ಗಿಣಿಗಳನ್ನು ಸಾಕಿದಂತಲ್ಲ.

ದೇಶದ ರೈತರ ಪರಿಸ್ಥಿತಿ ಎಷ್ಟೊಂದು ಗಂಭೀರವಾಗಿದೆ ಎಂಬುದನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಕೇಂದ್ರದ ಅಂಕಿಅಂಶಗಳತ್ತ ನೋಟ ಹರಿಸಿದರೆ ಅರಿವಿಗೆ ಬರಲಿದೆ. 1995ರಿಂದ ಇಲ್ಲಿವರೆಗೂ ದೇಶದಲ್ಲಿ 2,96,438 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದರೆ ದೇಶದಲ್ಲಿ ದಾಖಲಾಗಿರುವ ಒಟ್ಟಾರೆ ಆತ್ಮಹತ್ಯೆಗಳ ಸಂಖ್ಯೆಯಲ್ಲಿ ಇದರ ಪ್ರಮಾಣ ಶೇ.11.2. ಈ ಪೈಕಿ ಮಹಾರಾಷ್ಟ್ರದಲ್ಲಿ ಮಾತ್ರವೇ 60,750 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಳಿದಂತೆ ಉತ್ತರ ಪ್ರದೇಶ, ಹರಿಯಾಣ, ಛತ್ತೀಸ್‍ಗಡ, ಆಂದ್ರ, ತೆಲಂಗಾಣ, ಒಡಿಸಾ ಮತ್ತಿತರ ರಾಜ್ಯಗಳ ರೈತರು ಈ ಹಾದಿ ಹಿಡಿದಿದ್ದಾರೆ. ಅತಿಹೆಚ್ಚು ಆತ್ಮಹತ್ಯೆ ಸಂಭವಿಸಿರುವ ರಾಜ್ಯಗಳಲ್ಲಿ ಕೃಷಿಗೆ ಹೆಚ್ಚಿನ ಬಂಡವಾಳ ಹೂಡಿಕೆ ಮಾಡದಿರುವುದು ಮತ್ತು ಕೃಷಿ ಮಾರುಕಟ್ಟೆಗಳಲ್ಲಿ ಖಾಸಗಿ ಭಾಗವಹಿಸುವಿಕೆಗೆ ಹೆಚ್ಚು ಅವಕಾಶ ನೀಡಿದ್ದು ಕಾರಣವಾಗಿದೆ.

ಈಗ ಪ್ರತಿಭಟನೆಯಲ್ಲಿ ತೊಡಗಿರುವುದು ಹರಿಯಾಣ ಮತ್ತು ಪಂಜಾಬ್ ರೈತರು ಮಾತ್ರವಲ್ಲ. ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಕರ್ನಾಟಕ, ರಾಜಸ್ತಾನ, ಮಧ್ಯಪ್ರದೇಶ, ಆಂಧ್ರ, ತೆಲಂಗಾಣ ಸೇರಿದಂತೆ ದೇಶದ ಎಲ್ಲ ರಾಜ್ಯಗಳ ರೈತರು ಭಾಗವಹಿಸಿದ್ದಾರೆ. ಅವರು ವಾರ, ಹದಿನೈದು ದಿನ, ತಿಂಗಳಿಗೆ ಸಾಕಾಗುವಷ್ಟು ದವಸಧಾನ್ಯಗಳನ್ನೂ ತಮ್ಮೊಂದಿಗೆ ಕೊಂಡೊಯ್ದಿದ್ದಾರೆ. ಪ್ರತಿಭಟನೆಗೆ ಬಂದು ಸೇರುವ ರೈತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಬೇರೆ ಪ್ರತಿಭಟನೆಗಳಾದರೆ ದಾರಿ ತಪ್ಪಿಸಲು ನೂರು ಪಿತೂರಿಗಳನ್ನು ಮಾಡಬಹುದು. ಆದರೆ ದೇಶದ ಬೆನ್ನೆಲುಬು ರೈತರು ಬೀದಿಗಿಳಿದಿದ್ದಾರೆ.

  • ಮುರಳಿಕೃಷ್ಣ ಜಿ ಆರ್

ಹಿರಿಯ ಪತ್ರಕರ್ತ, ಅಂಕಣಕಾರ. ಗ್ರಾಮೀಣ ಆರ್ಥಿಕತೆ ಮತ್ತು ಮೈಕ್ರೋ ಎಕಾನಾಮಿಕ್ಸ್ ಸಂಬಂಧಿಸಿ ಅಂಕಣಗಳನ್ನು ಪ್ರಕಟಿಸಿದ್ದಾರೆ. ಪ್ರಸ್ತುತ ಕೃಷಿಕರು


ಇದನ್ನೂ ಓದಿ: ಇದು ರೈತರು ಮತ್ತು ಕೇಂದ್ರದ ನಡುವಿನ ಸಂಘರ್ಷ: ಪಂಜಾಬ್ ಮುಖ್ಯಮಂತ್ರಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...