Homeಚಳವಳಿಕೃಷಿ ಶ್ರಮಿಕರ ಬೆವರನ್ನು ಅವಮಾನಿಸುವ ಮಾತುಗಳು ಬೇಡ - ಅವರ ಮಾತು ಆಲಿಸಿ

ಕೃಷಿ ಶ್ರಮಿಕರ ಬೆವರನ್ನು ಅವಮಾನಿಸುವ ಮಾತುಗಳು ಬೇಡ – ಅವರ ಮಾತು ಆಲಿಸಿ

ಉದ್ಯೋಗ ಸೃಷ್ಟಿಯಲ್ಲಿ ಈಗಲೂ ಕೃಷಿ ಕ್ಷೇತ್ರದ್ದೆ ಸಿಂಹಪಾಲು. ಇಂದಿಗೂ ದೇಶದ ಉದ್ಯೋಗ ಸೃಷ್ಟಿಯಲ್ಲಿ ಕೃಷಿ ಕ್ಷೇತ್ರದ ಪಾಲು ಶೇ.53ರಷ್ಟು.

- Advertisement -
- Advertisement -

‘ಪ್ರಧಾನಿ ನರೇಂದ್ರ ಮೋದಿ ಸೇವಿಸುತ್ತಿರುವ ರೊಟ್ಟಿ ರೈತರು ತಮ್ಮ ಹೊಲಗಳಲ್ಲಿ ಬೆಳೆದ ಧಾನ್ಯದಿಂದ ತಯಾರಿಸಿದ್ದು ಎಂದು ಹೇಳಿ’. ಇದು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತದ ಮೂರು ಮಸೂದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವ ಎಪ್ಪತ್ತು ವರ್ಷದ ದೇವ್‍ಸಿಂಗ್ ನೀಡಿರುವ ಎಚ್ಚರಿಕೆ. ಕಳೆದ ಹಲವು ವರ್ಷಗಳಿಂದ ಮನ್‍ಕಿ ಬಾತ್ ಕೇಳಿದ್ದು ಸಾಕು, ಇನ್ನು ರೈತರ ಮಾತನ್ನು ಪ್ರಧಾನಿಗಳು ಆಲಿಸಬೇಕೆಂದು ಆಕ್ರೋಶಭರಿತರಾಗಿ ಹೇಳಿದ್ದಾರೆ. ದೇವ್‍ಸಿಂಗ್ ಅವರ ಪತ್ನಿ, ಸೇರಿದಂತೆ ಇಡೀ ಕುಟುಂಬ ಪ್ರತಿಭಟನೆಯಲ್ಲಿ ಪಾಲ್ಗೊಂಡಿದೆ. ದೇವ್‍ಸಿಂಗ್ ಅವರ ಆರೋಗ್ಯಕ್ಕೆ ಏನಾದರೂ ತೊಂದರೆಯಾದೀತು ಎಂಬುದು ಅವರ ಮನೆಯವರ ಆತಂಕ. ಆದರೆ ದೇವ್‍ಸಿಂಗ್ ಮಾತ್ರ ನನಗೆ ಏನಾದರೂ ಸರಿಯೇ ನಮ್ಮ ಮಕ್ಕಳ ಭವಿಷ್ಯ ಉಳಿಸುವುದು ನನ್ನ ಜವಾಬ್ದಾರಿ ಎಂದು ಹಗಲು ರಾತ್ರಿ ಈ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದು ಕೇವಲ ಒಂದು ಕುಟುಂಬದ ಪ್ರಶ್ನೆ ಅಲ್ಲ. ದೇಶದ ವಿವಿಧ ರಾಜ್ಯಗಳ ಎರಡು ಲಕ್ಷ ರೈತರು ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಉದ್ಯಮಿಯೊಬ್ಬ ಕಚ್ಚಾ ಉತ್ಪನ್ನಗಳನ್ನು ಖರೀದಿಸುತ್ತಾನೆ. ಸಿದ್ಧ ಉತ್ಪನ್ನಗಳನ್ನು ತಯಾರಿಸಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಾನೆ. ಅದೇ ರೀತಿ ರೈತನೊಬ್ಬ ತನಗೆ ಬೇಕಾದ ಬೀಜ, ರಸಗೊಬ್ಬರ, ಕ್ರಿಮಿನಾಶಕಗಳನ್ನು ಖರೀದಿಸುತ್ತಾನೆ ಬೆಳೆದ ಫಸಲನ್ನು ಕೊಯ್ಲು ಮಾಡಿ ಮಾರುಕಟ್ಟೆಗೆ ಸಾಗಿಸುತ್ತಾನೆ. ಇಲ್ಲಿ ಮೇಲ್ನೋಟಕ್ಕೆ ಇಬ್ಬರೂ ಒಂದೇ ರೀತಿ ಕಾಣಿಸುತ್ತಾರೆ. ಆದರೆ ಇಲ್ಲಿರುವ ವ್ಯತ್ಯಾಸವನ್ನು ಗಮನಿಸಬೇಕು. ಅದೆಂದರೆ ಉದ್ಯಮಿ ವ್ಯಾಪಾರ ಮಾಡುತ್ತಾನೆ ಕೃಷಿಕ ಕರ್ತವ್ಯ ನಿರ್ವಹಿಸುತ್ತಾನೆ. ಈ ವ್ಯತ್ಯಾಸವನ್ನು ಅರಿಯದಿದ್ದರೆ ಜಗತ್ತು ನಾಶವಾಗುತ್ತೆ. ಈ ಆಯಾಮದಲ್ಲಿ ನಾವು ರೈತರ ಪ್ರತಿಭಟನೆಯನ್ನು ನೋಡುವ ಅಗತ್ಯವಿದೆ.

ರೈತರು ಭಯೋತ್ಪಾದಕರು, ಈ ರೈತರ ಪ್ರತಿಭಟನೆಗೆ ಖಲಿಸ್ತಾನ್ ಬೆಂಬಲವಿದೆ, ಕಮ್ಯೂನಿಸ್ಟರು ಮತ್ತು ಕಾಂಗ್ರೆಸ್‍ನವರು ಪ್ರೇರೇಪಣೆ ನೀಡುತ್ತಿದ್ದಾರೆ ಎಂದು ಹೇಳುವುದು ಸುಲಭ. ಅಂತವರು ಕೃಷಿಕನ ಹೃದಯದಲ್ಲಿ ಕೂತು ಮಾತನಾಡಿದರೆ ಅರಿವಿಗೆ ಬರುತ್ತೆ ಕೃಷಿ ಮತ್ತು ಕೃಷಿಕ ಅಂದರೆ ಏನು ಅಂತ. ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿರುವವರು ದೇಶಕ್ಕೆ ಅನ್ನವನ್ನಷ್ಟೆ ನೀಡುತ್ತಿಲ್ಲ. ಆ ರೈತರ ಕುಟುಂಬಗಳಲ್ಲಿ ಜನಿಸಿದ ಹಲವಾರು ಯುವಕರು ಗಡಿಯಲ್ಲಿ ಈ ದೇಶದ ರಕ್ಷಣೆಗಾಗಿ ಪ್ರಾಣ ಕೊಟ್ಟಿದ್ದಾರೆ ಎಂಬುದನ್ನು ಅರಿಯಬೇಕು. ಅಪ್ಪ ಅಮ್ಮ ಹೊಲ, ತೋಟಗಳಲ್ಲಿ ದುಡಿಯುತ್ತಿದ್ದರೆ ಅವರ ಮಕ್ಕಳು ದೇಶ ರಕ್ಷಣೆಗಾಗಿ ಸೇನೆಯಲ್ಲಿ ದುಡಿಯುತ್ತಿದ್ದಾರೆ. ಮುಂಬೈನ ದಲಾಲ್ ಸ್ಟ್ರೀಟ್, ಹವಾನಿಯಂತ್ರಿತ ಕೊಠಡಿಗಳಲ್ಲಿ ಕುಳಿತು ಶ್ರಮಿಕರ ಬೆವರನ್ನು ಕದಿಯುವವರ ನಾಲಿಗೆಗಳು ಮಾತ್ರ ಹೀಗೆ ಒದರಲು ಸಾಧ್ಯ.

ಅರ್ಥಶಾಸ್ತ್ರ ವ್ಯಾಖ್ಯಾನದ ಅನುಸಾರ ಕೃಷಿ ಪ್ರಾಥಮಿಕ ವಲಯ, ತಯಾರಿಕಾ ಕ್ಷೇತ್ರ ದ್ವಿತೀಯ ಮತ್ತು ಸೇವಾ ಕ್ಷೇತ್ರ ತೃತೀಯ ವಲಯ. ತೃತೀಯ ವಲಯ ಇಲ್ಲದಿದ್ದರೂ ದ್ವಿತೀಯ ವಲಯ ಉಳಿಯಬಲ್ಲದು. ದ್ವಿತೀಯ ವಲಯ ಇಲ್ಲದಿದ್ದರೂ ಪ್ರಾಥಮಿಕ ವಲಯ ಉಳಿಯಬಲ್ಲದು. ಆದರೆ ಪ್ರಾಥಮಿಕ ವಲಯ ಇಲ್ಲದಿದ್ದರೆ ಉಳಿದ ಯಾವ ವಲಯಗಳೂ ಉಳಿಯಲು ಸಾಧ್ಯವಿಲ್ಲ. ಹೀಗಾಗಿಯೇ ಕೃಷಿಗೆ ಪ್ರಾಥಮಿಕ ವಲಯದ ಮಾನ್ಯತೆ ನೀಡಿರುವುದು. ಸದ್ಯ ದ್ವಿತೀಯ ಮತ್ತು ತೃತೀಯ ವಲಯವನ್ನು ಕಾರ್ಪೊರೆಟ್‍ಗಳು ಆಕ್ರಮಿಸಿದ್ದಾರೆ. ಇನ್ನು ಉಳಿದಿರುವುದು ಪ್ರಾಥಮಿಕ ವಲಯ. ಅದನ್ನೂ ಆಕ್ರಮಿಸಿದರೆ ಮತ್ತೆ ಉಳಿಯುವುದು ಬೇರೇನೂ ಇಲ್ಲ. ಇಂತಹ ಹುನ್ನಾರವನ್ನು ಕೇಂದ್ರ ಸರ್ಕಾರ ವ್ಯವಸ್ಥಿತವಾಗಿ ಮಾಡುತ್ತಿದೆ. ಭಾರತ ಇಂದು ಆಹಾರ ಧಾನ್ಯಗಳು, ಸಕ್ಕರೆ ಮತ್ತು ಹಾಲು ಉತ್ಪಾದನೆಯಲ್ಲಿ ಸ್ವಾವಲಂಬನೆ ಸ್ಥಾಪಿಸಿದೆ. ಇದರಿಂದ ಪ್ರತಿ ವ್ಯಕ್ತಿಯ ಸಂವಿಧಾನಬದ್ಧವಾದ ಆಹಾರದ ಹಕ್ಕು ಜೀವಂತವಾಗಿದೆ. ಒಂದು ವೇಳೆ ಕೃಷಿ ಕ್ಷೇತ್ರ ಕಾರ್ಪೊರೇಟ್‍ಗಳ ಹಿಡಿತಕ್ಕೆ ಸಿಲುಕಿದರೆ ಆಹಾರದ ಹಕ್ಕು ಉಳಿಯುವುದೇ ಇಲ್ಲ. ಈ ಹಿನ್ನೆಲೆಯಲ್ಲಿ ರೈತರ ಇಂದಿನ ಪ್ರತಿಭಟನೆಯನ್ನು ನೋಡುವ ಅಗತ್ಯತೆ ಇದೆ.

ದೇಶದ ಜಿಡಿಪಿಗೆ ಸೇವಾ ಕ್ಷೇತ್ರದ ಕೊಡುಗೆಗೆ ಹೋಲಿಸಿದರೆ ಕೃಷಿ ಕ್ಷೇತ್ರದ ಕೊಡುಗೆ ಕಡಿಮೆ. ಆದರೆ ಉದ್ಯೋಗ ಸೃಷ್ಟಿಯಲ್ಲಿ ಈಗಲೂ ಕೃಷಿ ಕ್ಷೇತ್ರದ್ದೆ ಸಿಂಹಪಾಲು. ಇಂದಿಗೂ ದೇಶದ ಉದ್ಯೋಗ ಸೃಷ್ಟಿಯಲ್ಲಿ ಕೃಷಿ ಕ್ಷೇತ್ರದ ಪಾಲು ಶೇ.53ರಷ್ಟು. ಉಳಿದಿದ್ದರಲ್ಲಿ ತಯಾರಿಕೆ ಮತ್ತು ಸೇವಾಕ್ಷೇತ್ರಗಳು ಹಂಚಿಕೊಂಡಿವೆ. ಇಂತಹ ಕ್ಷೇತ್ರವನ್ನು ಕಾರ್ಪೊರೆಟ್‍ಗಳ ಹಿಡಿತಕ್ಕೆ ನೀಡುವುದರಿಂದ ಯುವಕರು ನಿರುದ್ಯೋಗಿಗಳಾಗುವುದರೊಂದಿಗೆ ಆಹಾರದ ಹಕ್ಕು ಇಲ್ಲವಾಗಿ ಅರಾಜಕತೆ ಸೃಷ್ಟಿಯಾಗಲಿದೆ ಎಂಬ ಎಚ್ಚರಿಕೆ ಕೇಂದ್ರ ಸರ್ಕಾರಕ್ಕೆ ಇರಬೇಕಾಗಿದೆ. ಈ ನಾಗರಿಕತೆ ಯಾವುದರ ಆಧಾರದಲ್ಲಿ ಇಲ್ಲಿವರೆಗೂ ವಿಕಾಸವಾಗುತ್ತಾ ಬಂದಿದೆಯೋ ಆ ವ್ಯವಸ್ಥೆಯೇ ನಾಶವಾಗುತ್ತದೆ.

ಪ್ರತಿಭಟನೆ ನಡೆಸುವುದು ಈ ದೇಶದ ಪ್ರತಿಯೊಬ್ಬರಿಗೂ ನಮ್ಮ ಸಂವಿಧಾನ ನೀಡಿರುವ ಹಕ್ಕು. ಸಂವಿಧಾನ ಕರಡನ್ನು ಸಮರ್ಪಿಸಿದ ಸಂವಿಧಾನ ದಿನವಾದ ನ.26ರಂದೇ ರೈತರ ಮೇಲೆ ಲಾಠಿ ಚಾರ್ಜ್ ಮಾಡಿ, ಜಲಫಿರಂಗಿಗಳು, ಟಿಯರ್‌ಗ್ಯಾಸ್‍ಗಳನ್ನು ಬಳಸಿರುವುದು ಕನಿಷ್ಠ ನಾಚಿಕೆಯೂ ಇಲ್ಲದವರು ಎಸಗುವ ಕೃತ್ಯವಲ್ಲದೆ ಮತ್ತೇನೂ ಅಲ್ಲ. ಭಟಿಂಡಾದ ಕೃಷಿ ಮಹಿಳೆ ಹರಿಂದರ್ ಭಾನು ಈ ಪ್ರತಿಭಟನೆಯಲ್ಲಿ ಹತ್ತು ಸಾವಿರ ಕೃಷಿ ಮಹಿಳೆಯರನ್ನು ಮುನ್ನಡೆಸುತ್ತಿದ್ದಾಳೆ. ಈ ಮೂರೂ ಮಸೂದೆಗೆ ಅನುಷ್ಠಾನಕ್ಕೆ ಬಂದರೆ ಕೃಷಿಕರು ಅವರ ಮನೆಗಳಲ್ಲಿ ರೊಟ್ಟಿ ಮಾಡುವುದನ್ನೇ ನಿಲ್ಲಿಸಬೇಕಾಗುತ್ತದೆ ಎಂದು ತಮ್ಮ ಅಂತರಾಳದ ನೋವನ್ನು ಹೊರಗೆಡಹಿದ್ದಾರೆ. ಕೃಷಿ ಎಂದೂ ಬಿಸಿನೆಸ್ ಅಲ್ಲ ಅದೊಂದು ಧರ್ಮ ಮತ್ತು ಕರ್ತವ್ಯ. ತಾನೂ ಉಂಡು ಮತ್ತೊಬ್ಬರಿಗೂ ಉಣಬಡಿಸುವುದೇ ಆ ಧರ್ಮ. ನವಿಲು ಮತ್ತು ಗಿಣಿಗಳನ್ನು ಸಾಕಿದಂತಲ್ಲ.

ದೇಶದ ರೈತರ ಪರಿಸ್ಥಿತಿ ಎಷ್ಟೊಂದು ಗಂಭೀರವಾಗಿದೆ ಎಂಬುದನ್ನು ರಾಷ್ಟ್ರೀಯ ಅಪರಾಧ ದಾಖಲೆಗಳ ಕೇಂದ್ರದ ಅಂಕಿಅಂಶಗಳತ್ತ ನೋಟ ಹರಿಸಿದರೆ ಅರಿವಿಗೆ ಬರಲಿದೆ. 1995ರಿಂದ ಇಲ್ಲಿವರೆಗೂ ದೇಶದಲ್ಲಿ 2,96,438 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂದರೆ ದೇಶದಲ್ಲಿ ದಾಖಲಾಗಿರುವ ಒಟ್ಟಾರೆ ಆತ್ಮಹತ್ಯೆಗಳ ಸಂಖ್ಯೆಯಲ್ಲಿ ಇದರ ಪ್ರಮಾಣ ಶೇ.11.2. ಈ ಪೈಕಿ ಮಹಾರಾಷ್ಟ್ರದಲ್ಲಿ ಮಾತ್ರವೇ 60,750 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಳಿದಂತೆ ಉತ್ತರ ಪ್ರದೇಶ, ಹರಿಯಾಣ, ಛತ್ತೀಸ್‍ಗಡ, ಆಂದ್ರ, ತೆಲಂಗಾಣ, ಒಡಿಸಾ ಮತ್ತಿತರ ರಾಜ್ಯಗಳ ರೈತರು ಈ ಹಾದಿ ಹಿಡಿದಿದ್ದಾರೆ. ಅತಿಹೆಚ್ಚು ಆತ್ಮಹತ್ಯೆ ಸಂಭವಿಸಿರುವ ರಾಜ್ಯಗಳಲ್ಲಿ ಕೃಷಿಗೆ ಹೆಚ್ಚಿನ ಬಂಡವಾಳ ಹೂಡಿಕೆ ಮಾಡದಿರುವುದು ಮತ್ತು ಕೃಷಿ ಮಾರುಕಟ್ಟೆಗಳಲ್ಲಿ ಖಾಸಗಿ ಭಾಗವಹಿಸುವಿಕೆಗೆ ಹೆಚ್ಚು ಅವಕಾಶ ನೀಡಿದ್ದು ಕಾರಣವಾಗಿದೆ.

ಈಗ ಪ್ರತಿಭಟನೆಯಲ್ಲಿ ತೊಡಗಿರುವುದು ಹರಿಯಾಣ ಮತ್ತು ಪಂಜಾಬ್ ರೈತರು ಮಾತ್ರವಲ್ಲ. ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಕರ್ನಾಟಕ, ರಾಜಸ್ತಾನ, ಮಧ್ಯಪ್ರದೇಶ, ಆಂಧ್ರ, ತೆಲಂಗಾಣ ಸೇರಿದಂತೆ ದೇಶದ ಎಲ್ಲ ರಾಜ್ಯಗಳ ರೈತರು ಭಾಗವಹಿಸಿದ್ದಾರೆ. ಅವರು ವಾರ, ಹದಿನೈದು ದಿನ, ತಿಂಗಳಿಗೆ ಸಾಕಾಗುವಷ್ಟು ದವಸಧಾನ್ಯಗಳನ್ನೂ ತಮ್ಮೊಂದಿಗೆ ಕೊಂಡೊಯ್ದಿದ್ದಾರೆ. ಪ್ರತಿಭಟನೆಗೆ ಬಂದು ಸೇರುವ ರೈತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಬೇರೆ ಪ್ರತಿಭಟನೆಗಳಾದರೆ ದಾರಿ ತಪ್ಪಿಸಲು ನೂರು ಪಿತೂರಿಗಳನ್ನು ಮಾಡಬಹುದು. ಆದರೆ ದೇಶದ ಬೆನ್ನೆಲುಬು ರೈತರು ಬೀದಿಗಿಳಿದಿದ್ದಾರೆ.

  • ಮುರಳಿಕೃಷ್ಣ ಜಿ ಆರ್

ಹಿರಿಯ ಪತ್ರಕರ್ತ, ಅಂಕಣಕಾರ. ಗ್ರಾಮೀಣ ಆರ್ಥಿಕತೆ ಮತ್ತು ಮೈಕ್ರೋ ಎಕಾನಾಮಿಕ್ಸ್ ಸಂಬಂಧಿಸಿ ಅಂಕಣಗಳನ್ನು ಪ್ರಕಟಿಸಿದ್ದಾರೆ. ಪ್ರಸ್ತುತ ಕೃಷಿಕರು


ಇದನ್ನೂ ಓದಿ: ಇದು ರೈತರು ಮತ್ತು ಕೇಂದ್ರದ ನಡುವಿನ ಸಂಘರ್ಷ: ಪಂಜಾಬ್ ಮುಖ್ಯಮಂತ್ರಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...