ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ನೀತಿಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ಆಂದೋಲನ ಇಂದಿಗೆ 6 ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಇಂದು ರೈತರನ್ನು ಮಾತುಕತೆಗೆ ಕರೆದಿದ್ದು, ಆದರೆ ದೇಶದ ಎಲ್ಲಾ ರೈತ ಸಂಘಗಳನ್ನು ಮಾತುಕತೆಗೆ ಆಹ್ವಾನಿಸದ ಹೊರತು ಚರ್ಚೆಗೆ ಬರುವುದಿಲ್ಲ ಎಂದು ರೈತರು ಹೇಳಿದ್ದಾರೆ.
ರೈತರು ತಮ್ಮ ಪ್ರತಿಭಟನೆಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿರುವ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಚಳಿ ಮತ್ತು ಕೊರೊನಾವನ್ನು ಗಮನದಲ್ಲಿಟ್ಟುಕೊಂಡು ಡಿಸೆಂಬರ್ 3 ಕ್ಕಿಂತಲೂ ಮೊದಲೇ ನಾವು ರೈತ ಸಂಘಗಳ ಮುಖಂಡರನ್ನು ಚರ್ಚೆಗೆ ಆಹ್ವಾನಿಸಿದ್ದೇವೆ ಎಂದು ಹೇಳಿದ್ದರು.
ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!
ಪಂಜಾಬ್ ರೈತ ಸಂಘರ್ಘ ಸಮಿತಿ ಜಂಟಿ ಕಾರ್ಯದರ್ಶಿ ಸುಖ್ವಿಂದರ್ ಎಸ್ ಸಭರನ್, “ದೇಶದಲ್ಲಿ 500ಕ್ಕೂ ಹೆಚ್ಚು ರೈತ ಸಂಘಟನೆಗಳಿವೆ. ಆದರೆ ಸರ್ಕಾರ ಕೇವಲ 32 ಸಂಘಟನೆಗಳನ್ನು ಮಾತುಕತೆಗೆ ಕರೆದಿದೆ. ಮಾತುಕತೆಗೆ ಕರೆಯುವುದಾದರೆ ದೇಶದಲ್ಲಿರುವ ಎಲ್ಲ ರೈತ ಸಂಘಟನೆಗಳನ್ನು ಆಹ್ವಾನಿಸಬೇಕು. ಇಲ್ಲದಿದ್ದರೆ ಚರ್ಚೆಗೆ ಬರುವುದಿಲ್ಲ” ಎಂದು ಹೇಳಿದ್ದಾರೆ.
There are more than 500 groups of farmers in the country, but the Govt has invited only 32 groups for talks. The rest haven't been called by the govt. We won't be going for talks till all groups are called: Sukhvinder S Sabhran, Jt Secy, Punjab Kisan Sangarsh Committee in Delhi pic.twitter.com/jYGQlEMKSk
— ANI (@ANI) December 1, 2020
ಭಾರತಿ ಕಿಸಾನ್ ಯುನಿಯನ್(ಡಕೌಂಡ) ಪ್ರಧಾನ ಕಾರ್ಯದರ್ಶಿ ಜಗನ್ ಮೋಹನ್ ಸಿಂಗ್, “ಪಂಜಾಬ್ಗೆ ಮಾತ್ರ ಪ್ಯಾಕೇಜ್ ಅಥವಾ ಕೊಡುಗೆ ನೀಡುವುದಾದರೆ ಅದು ಸ್ವೀಕಾರಾರ್ಹವಲ್ಲ. ಇಡೀ ದೇಶದ ರೈತರಿಗೆ ಸಾಮಾನ್ಯ ನಿರ್ಧಾರವನ್ನು ಪಡೆಯುವ ನಿರೀಕ್ಷೆಯಿದೆ” ಎಂದು ಹೇಳಿದ್ದಾರೆ.
ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!