Homeಕರ್ನಾಟಕಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಸ್ಕೃತ ಕಲಿತು ಸಂಸ್ಕೃತ ಮೇಷ್ಟ್ರಾಗಬೇಕೇ ಹೊರತು, ಬೇರೆ ಅವಕಾಶಗಳಿಲ್ಲ” ಎಂದು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಎಚ್‌.ವಿ.ವೇಣುಗೋಪಾಲ್‌ ತಿಳಿಸಿದ್ದಾರೆ.

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ವೇಣುಗೋಪಾಲ್ ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಹಾಗೂ ‘ನ್ಯಾಯಪಥ’ ವಾರಪತ್ರಿಕೆಯೊಂದಿಗೆ ಹಂಚಿಕೊಂಡರು.

“ಸಂಸ್ಕೃತವನ್ನು ಜ್ಞಾನಕ್ಕಾಗಿ ಕಲಿಯುತ್ತಾರಷ್ಟೇ. ಅದು ಒಂದೇ ಚಾನೆಲ್‌. ಒಂದು ಪೈಪ್‌ನೊಳಗೆ ಹಾಕಿ ಹುಡುಗರನ್ನು ಕಳಿಸಿದ ಹಾಗೆ ಆಗುತ್ತದೆ. ಈ ಕಡೆಯಿಂದ ಹೋದರೆ, ಆ ಕಡೆಯಿಂದ ಹೊರಗೆ ಬರಬೇಕಾಗುತ್ತದೆಯಷ್ಟೇ. ಇನ್ನೊಂದು ದಾರಿ ಇಲ್ಲವೇ ಇಲ್ಲ” ಎಂದರು.

“ಮೇಷ್ಟ್ರಾಗದಿದ್ದರೆ ಸಂಶೋಧನೆ ಮಾಡಿ, ಪೇಪರ್‌ ಪಬ್ಲಿಷ್ ಮಾಡಬಹುದು. ಆ ಮೇಲೆ ಪುಸ್ತಕ ಬರೆದು ಪಬ್ಲಿಷ್ ಮಾಡಿ, ಎಲ್ಲ ಜನರಿಗೂ ಹಂಚಬೇಕು. ಯಾರು ಕೊಂಡುಕೊಳ್ಳುತ್ತಾರೆ? ದೇವರ ಬಗ್ಗೆ, ವ್ರತದ ಬಗ್ಗೆ ಬರೆದರೆ ಹೆಚ್ಚು ಜನ ಕೊಂಡುಕೊಳ್ಳುತ್ತಾರೆ. ಬ್ರಹ್ಮಸೂತ್ರದಲ್ಲಿ ಹೀಗೆ ಹೇಳಿದೆ, ಶಂಕರಚಾರ್ಯರು ಹೀಗೆ ಹೇಳಿದ್ದಾರೆ ಎಂದು ಬರೆದರೆ ನಾಲ್ಕು ಜನ ಶಂಕರರು, ನಾಲ್ಕು ಜನ ಮಾಧ್ವರು ಕೊಂಡುಕೊಳ್ಳುತ್ತಾರಷ್ಟೇ” ಎಂದು ಪ್ರತಿಕ್ರಿಯಿಸಿದರು.

“ಸಾಮಾನ್ಯ ಜನರು, ಸಂಸ್ಕೃತ ಗೊತ್ತಿಲ್ಲದವರು ತಿಳಿದಿರುವಂತೆ ಸಂಸ್ಕೃತ ವಿವಿಯಲ್ಲಿ ಮಂತ್ರ ಕಲಿಸುತ್ತಾರೆ, ಪೂಜೆ ಮಾಡೋದನ್ನು ಕಲಿಸುತ್ತಾರೆ ಎಂಬುದು ತಪ್ಪು ಅಭಿಪ್ರಾಯ. ಪಾರಂಪರಿಕವಾದ ತರ್ಕ, ನ್ಯಾಯ, ವೇದವಿದ್ಯೆ ಮುಂತಾದವನ್ನು ಇಲ್ಲಿ ಕಲಿಸುತ್ತಾರೆ. ಅಂದರೆ ಜ್ಞಾನಶಾಖೆಗಳನ್ನು ಅಧ್ಯಯನ ಮಾಡಲಾಗುತ್ತದೆ. ಅದರಲ್ಲಿ ವಿಶೇಷವೇನೂ ಇಲ್ಲ. ಸಂಸ್ಕೃತ ವಿಶ್ವವಿದ್ಯಾನಿಲಯ ಇಲ್ಲದಿದ್ದರೂ ಈ ವಿಷಯಗಳನ್ನು ಆಸಕ್ತರು ಈವರೆಗೆ ಕಲಿಯುತ್ತಿದ್ದರು. ಮೊದಲೆಲ್ಲ ಸಂಸ್ಕೃತದ ಬಿ.ಎ., ಎಂ.ಎ. ಇರಲಿಲ್ಲ. ಸಂಸ್ಕೃತ ವಿವಿಯಿಂದ ಬಿ.ಎ., ಎಂ.ಎ. ಸಾಧ್ಯವಾಗುತ್ತದೆ. ಸಂಸ್ಕೃತ ವಿವಿಯಲ್ಲಿ ಕಲಿತು ಮೇಷ್ಟ್ರಾಗಬಹುದೇ ಹೊರತು ಬೇರೇನೂ ಆಗಲು ಸಾಧ್ಯವಿಲ್ಲ” ಎಂದು ಸುಮಾರು 38 ವರ್ಷಗಳ ಕಾಲ ಸಂಸ್ಕೃತ ಬೋಧಿಸಿರುವ ವೇಣುಗೋಪಾಲ್‌ ಹೇಳಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಬಹಳ ವರ್ಷಗಳಾಗಿವೆ. ಕೆಲಸವೂ ನಡೆಯುತ್ತಿವೆ. ಹೊಸದಾಗಿ ಸ್ಥಾಪನೆಯನ್ನೇನೂ ಮಾಡುತ್ತಿಲ್ಲ. ಆದರೆ ಅದನ್ನು ವಿಸ್ತಾರ ಮಾಡುತ್ತಿದ್ದಾರೆ. ಈಗ ಆಗುತ್ತಿರುವ ಚರ್ಚೆಯನ್ನು ಗಮನಿಸಿದೆ. ಕನ್ನಡಕ್ಕೆ ಆದ್ಯತೆ ಕೊಡಿ ಸಂಸ್ಕೃತ ಆಮೇಲಿಡಿ ಎಂಬ ವಾದ ಸರಿ ಇದೆ” ಎಂದು ಸ್ಪಷ್ಟಪಡಿಸಿದರು.

“ಈಗ ಬರುತ್ತಿರುವ ವಿರೋಧಗಳು ನಿಜವಾಗಿವೆ. ಹಣ ಹಾಗೂ ಜಾಗದ ದುರುಪಯೋಗದ ಪ್ರಶ್ನೆ ಮೇಲೆದ್ದಿರುವುದು ಸರಿಯೇ ಇದೆ. ಸಂಸ್ಕೃತ ವಿವಿ ಈಗ ಇರುವ ಮಾದರಿಯಲ್ಲೇ ಇದ್ದರೆ ನಷ್ಟವೇನೂ ಆಗಲ್ಲ. ಯಾಕೆಂದರೆ ಸಂಸ್ಕೃತ ಓದುತ್ತಿರುವವರೂ ಕಡಿಮೆ ಇದ್ದಾರೆ. ಸಂಸ್ಕೃತದಿಂದ ಉಪಯೋಗ ಪಡೆಯುವವರೂ ಕಡಿಮೆ” ಎಂದು ಹೇಳಿದರು.

“ತುಂಬಾ ಸಂಪ್ರದಾಯಸ್ಥರು ಸಂಸ್ಕೃತ ಓದುತ್ತಾರೆ. ತ್ರಿಮಸ್ಥರು ಬೇರೆ ಬೇರೆ ಸಂಸ್ಕೃತ ಕಾಲೇಜುಗಳನ್ನು ರೂಪಿಸಿಕೊಂಡು ಅವರಿಗೆ ಸಂಬಂಧಿಸಿದ್ದನ್ನು ಮಾತ್ರ ಬೋಧಿಸುತ್ತಾರೆ. ಇದೆಲ್ಲ ಮಾಮೂಲಿಯಾಗಿ ನಡೆದುಕೊಂಡು ಬಂದಿದೆ. ಇದರಿಂದ ಯಾರಿಗೇನೂ ತೊಂದರೆಯಾಗಿರಲಿಲ್ಲ. ಆದರೆ ಒಂದು ಸರ್ಕಾರ ಇಷ್ಟು ದೊಡ್ಡ ಪ್ರಮಾಣದ ದುಡ್ಡು ಕೊಟ್ಟು, ಜಾಗ ಕೊಟ್ಟು ಏನೋ ಮಾಡುತ್ತೇನೆ ಎನ್ನುವುದು ಸದ್ಯದ ಸಂದರ್ಭದಲ್ಲಿ ತಪ್ಪಾಗಿದೆ” ಎಂದು ಅಭಿಪ್ರಾಯಪಟ್ಟರು.

ಸಂಶೋಧನೆಗಳು ಮಗ್ಗುಮ್ಮಾಗಿ ನಡೆಯುತ್ತದೆ. ಇದಕ್ಕೆ ತಕರಾರು ತೆಗೆಯಬೇಕಿಲ್ಲ. ಕೆಲವರು ಸಂಶೋಧನೆಯಲ್ಲೇ ತೊಡಗಿಸಿಕೊಂಡು ಅದೇ ಕೆಲಸವನ್ನು ಮಾಡುತ್ತಿರುತ್ತಾರೆ. ಬೇರೆಯವರು ಆ ಕಡೆ ಹೋಗುವುದೂ ಇಲ್ಲ. ಹೋಗಬೇಕಾಗಿಯೂ ಇಲ್ಲ” ಎಂದು ವಿವರಿಸಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯವನ್ನು ವಿರೋಧಿಸುವುದಕ್ಕಿಂತ ವಿಶ್ವವಿದ್ಯಾನಿಲಯಕ್ಕೆ ಇಷ್ಟು ಜಾಗ ಕೊಟ್ಟು, ದುಡ್ಡು ಕೊಡುತ್ತಿರುವುದನ್ನು ವಿರೋಧಿಸಬೇಕು ಎನ್ನುವುದು ಸರಿ. ಸಂಸ್ಕೃತ ಸಂಶೋಧನೆಗೆ ಹಣ ಕೊಟ್ಟಿಲ್ಲ. ಸಂಶೋಧನೆಗೆ ಹಣ ಕೊಡಲಿ. ಈ ಹಿಂದಿನ ವಿದ್ವಾಂಸರು ತಮ್ಮ ವೈಯಕ್ತಿಕ ಖರ್ಚು ವೆಚ್ಚದಲ್ಲಿ ರೂಪಿಸಿದ ಸಂಸ್ಕೃತ ಕೃತಿಗಳನ್ನು ಓದುತ್ತಾ ಬಂದಿದ್ದೇವೆ. ಹೀಗಾಗಿ ಹೊಸ ಸಂಶೋಧನೆಗಳಿಗೆ ಸರ್ಕಾರ ಹಣ ನೀಡಬೇಕು” ಎಂದು ಆಗ್ರಹಿಸಿದರು.

ಕೊನೆಯದಾಗಿ, “ಇಷ್ಟೆಲ್ಲ ದೊಡ್ಡ ಮಟ್ಟದಲ್ಲಿ ಹಣ ಕೊಟ್ಟು, ಸಂಸ್ಕೃತ ವಿವಿಯನ್ನು ಬೃಹತ್ತಾಗಿ ರೂಪಿಸುತ್ತೇವೆ ಎಂದು ಭಾವಿಸೋಣ. ಇಷ್ಟಾದರೂ ಸಂಸ್ಕೃತ ಜನಭಾಷೆಯಾಗಿ ರೂಪುಗೊಳ್ಳಲು ಸಾಧ್ಯವೆ?” ಎಂದು ‘ನಾನುಗೌರಿ.ಕಾಂ’ ಪ್ರಶ್ನಿಸಿತು. ಇದಕ್ಕೆ ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ ವೇಣುಗೋಪಾಲ್‌ ಅವರು, “ಖಂಡಿತವಾಗಿಯೂ ಜನಭಾಷೆಯಾಗಿ ಸಂಸ್ಕೃತ ರೂಪುಗೊಳ್ಳುವುದಿಲ್ಲ. ಜನಭಾಷೆಯಾಗಿ ಮಾಡುವ ಅಗತ್ಯವೂ ಇಲ್ಲ. ಇಷ್ಟವಿದ್ದರೆ ಓದಿಕೊಳ್ಳಬಹುದು. ನನಗೆ ಇಷ್ಟವಿದೆ ಓದಿಕೊಳ್ಳುತ್ತೇನೆ. ನನಗೊಂದು ವಿಷಯ ಬೇಕಾದರೆ ಪುಸ್ತಕ ತಿರುವು ಹಾಕಿ ರೆಫರ್‌ ಮಾಡುತ್ತೇನೆ. ಅದು ಬಿಟ್ಟು ಸಂಸ್ಕೃತವನ್ನು ಇಂಜೆಕ್ಟ್‌ ಮಾಡಲು ಸಾಧ್ಯವಿಲ್ಲ- ನಿನಗೊಂದು ಡೋಸ್, ಸೆಕೆಂಡ್ ಡೋಸ್‌ ಎನ್ನಲು ಸಾಧ್ಯವಿಲ್ಲ” ಎಂದರು.


ಇದನ್ನೂ ಓದಿರಿ: ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಂಗೂ ಅನ್ನ ಕೊಟ್ಟ ತಪ್ಪಿಗೆ ಸಂಸ್ಕೃತಮಾತೆ ಪಶ್ವಾತ್ತಾಪ ಪಡುತ್ತಿರಬಹುದು.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...