Homeಕರ್ನಾಟಕಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಸ್ಕೃತ ಕಲಿತು ಸಂಸ್ಕೃತ ಮೇಷ್ಟ್ರಾಗಬೇಕೇ ಹೊರತು, ಬೇರೆ ಅವಕಾಶಗಳಿಲ್ಲ” ಎಂದು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಎಚ್‌.ವಿ.ವೇಣುಗೋಪಾಲ್‌ ತಿಳಿಸಿದ್ದಾರೆ.

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ವೇಣುಗೋಪಾಲ್ ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಹಾಗೂ ‘ನ್ಯಾಯಪಥ’ ವಾರಪತ್ರಿಕೆಯೊಂದಿಗೆ ಹಂಚಿಕೊಂಡರು.

“ಸಂಸ್ಕೃತವನ್ನು ಜ್ಞಾನಕ್ಕಾಗಿ ಕಲಿಯುತ್ತಾರಷ್ಟೇ. ಅದು ಒಂದೇ ಚಾನೆಲ್‌. ಒಂದು ಪೈಪ್‌ನೊಳಗೆ ಹಾಕಿ ಹುಡುಗರನ್ನು ಕಳಿಸಿದ ಹಾಗೆ ಆಗುತ್ತದೆ. ಈ ಕಡೆಯಿಂದ ಹೋದರೆ, ಆ ಕಡೆಯಿಂದ ಹೊರಗೆ ಬರಬೇಕಾಗುತ್ತದೆಯಷ್ಟೇ. ಇನ್ನೊಂದು ದಾರಿ ಇಲ್ಲವೇ ಇಲ್ಲ” ಎಂದರು.

“ಮೇಷ್ಟ್ರಾಗದಿದ್ದರೆ ಸಂಶೋಧನೆ ಮಾಡಿ, ಪೇಪರ್‌ ಪಬ್ಲಿಷ್ ಮಾಡಬಹುದು. ಆ ಮೇಲೆ ಪುಸ್ತಕ ಬರೆದು ಪಬ್ಲಿಷ್ ಮಾಡಿ, ಎಲ್ಲ ಜನರಿಗೂ ಹಂಚಬೇಕು. ಯಾರು ಕೊಂಡುಕೊಳ್ಳುತ್ತಾರೆ? ದೇವರ ಬಗ್ಗೆ, ವ್ರತದ ಬಗ್ಗೆ ಬರೆದರೆ ಹೆಚ್ಚು ಜನ ಕೊಂಡುಕೊಳ್ಳುತ್ತಾರೆ. ಬ್ರಹ್ಮಸೂತ್ರದಲ್ಲಿ ಹೀಗೆ ಹೇಳಿದೆ, ಶಂಕರಚಾರ್ಯರು ಹೀಗೆ ಹೇಳಿದ್ದಾರೆ ಎಂದು ಬರೆದರೆ ನಾಲ್ಕು ಜನ ಶಂಕರರು, ನಾಲ್ಕು ಜನ ಮಾಧ್ವರು ಕೊಂಡುಕೊಳ್ಳುತ್ತಾರಷ್ಟೇ” ಎಂದು ಪ್ರತಿಕ್ರಿಯಿಸಿದರು.

“ಸಾಮಾನ್ಯ ಜನರು, ಸಂಸ್ಕೃತ ಗೊತ್ತಿಲ್ಲದವರು ತಿಳಿದಿರುವಂತೆ ಸಂಸ್ಕೃತ ವಿವಿಯಲ್ಲಿ ಮಂತ್ರ ಕಲಿಸುತ್ತಾರೆ, ಪೂಜೆ ಮಾಡೋದನ್ನು ಕಲಿಸುತ್ತಾರೆ ಎಂಬುದು ತಪ್ಪು ಅಭಿಪ್ರಾಯ. ಪಾರಂಪರಿಕವಾದ ತರ್ಕ, ನ್ಯಾಯ, ವೇದವಿದ್ಯೆ ಮುಂತಾದವನ್ನು ಇಲ್ಲಿ ಕಲಿಸುತ್ತಾರೆ. ಅಂದರೆ ಜ್ಞಾನಶಾಖೆಗಳನ್ನು ಅಧ್ಯಯನ ಮಾಡಲಾಗುತ್ತದೆ. ಅದರಲ್ಲಿ ವಿಶೇಷವೇನೂ ಇಲ್ಲ. ಸಂಸ್ಕೃತ ವಿಶ್ವವಿದ್ಯಾನಿಲಯ ಇಲ್ಲದಿದ್ದರೂ ಈ ವಿಷಯಗಳನ್ನು ಆಸಕ್ತರು ಈವರೆಗೆ ಕಲಿಯುತ್ತಿದ್ದರು. ಮೊದಲೆಲ್ಲ ಸಂಸ್ಕೃತದ ಬಿ.ಎ., ಎಂ.ಎ. ಇರಲಿಲ್ಲ. ಸಂಸ್ಕೃತ ವಿವಿಯಿಂದ ಬಿ.ಎ., ಎಂ.ಎ. ಸಾಧ್ಯವಾಗುತ್ತದೆ. ಸಂಸ್ಕೃತ ವಿವಿಯಲ್ಲಿ ಕಲಿತು ಮೇಷ್ಟ್ರಾಗಬಹುದೇ ಹೊರತು ಬೇರೇನೂ ಆಗಲು ಸಾಧ್ಯವಿಲ್ಲ” ಎಂದು ಸುಮಾರು 38 ವರ್ಷಗಳ ಕಾಲ ಸಂಸ್ಕೃತ ಬೋಧಿಸಿರುವ ವೇಣುಗೋಪಾಲ್‌ ಹೇಳಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಬಹಳ ವರ್ಷಗಳಾಗಿವೆ. ಕೆಲಸವೂ ನಡೆಯುತ್ತಿವೆ. ಹೊಸದಾಗಿ ಸ್ಥಾಪನೆಯನ್ನೇನೂ ಮಾಡುತ್ತಿಲ್ಲ. ಆದರೆ ಅದನ್ನು ವಿಸ್ತಾರ ಮಾಡುತ್ತಿದ್ದಾರೆ. ಈಗ ಆಗುತ್ತಿರುವ ಚರ್ಚೆಯನ್ನು ಗಮನಿಸಿದೆ. ಕನ್ನಡಕ್ಕೆ ಆದ್ಯತೆ ಕೊಡಿ ಸಂಸ್ಕೃತ ಆಮೇಲಿಡಿ ಎಂಬ ವಾದ ಸರಿ ಇದೆ” ಎಂದು ಸ್ಪಷ್ಟಪಡಿಸಿದರು.

“ಈಗ ಬರುತ್ತಿರುವ ವಿರೋಧಗಳು ನಿಜವಾಗಿವೆ. ಹಣ ಹಾಗೂ ಜಾಗದ ದುರುಪಯೋಗದ ಪ್ರಶ್ನೆ ಮೇಲೆದ್ದಿರುವುದು ಸರಿಯೇ ಇದೆ. ಸಂಸ್ಕೃತ ವಿವಿ ಈಗ ಇರುವ ಮಾದರಿಯಲ್ಲೇ ಇದ್ದರೆ ನಷ್ಟವೇನೂ ಆಗಲ್ಲ. ಯಾಕೆಂದರೆ ಸಂಸ್ಕೃತ ಓದುತ್ತಿರುವವರೂ ಕಡಿಮೆ ಇದ್ದಾರೆ. ಸಂಸ್ಕೃತದಿಂದ ಉಪಯೋಗ ಪಡೆಯುವವರೂ ಕಡಿಮೆ” ಎಂದು ಹೇಳಿದರು.

“ತುಂಬಾ ಸಂಪ್ರದಾಯಸ್ಥರು ಸಂಸ್ಕೃತ ಓದುತ್ತಾರೆ. ತ್ರಿಮಸ್ಥರು ಬೇರೆ ಬೇರೆ ಸಂಸ್ಕೃತ ಕಾಲೇಜುಗಳನ್ನು ರೂಪಿಸಿಕೊಂಡು ಅವರಿಗೆ ಸಂಬಂಧಿಸಿದ್ದನ್ನು ಮಾತ್ರ ಬೋಧಿಸುತ್ತಾರೆ. ಇದೆಲ್ಲ ಮಾಮೂಲಿಯಾಗಿ ನಡೆದುಕೊಂಡು ಬಂದಿದೆ. ಇದರಿಂದ ಯಾರಿಗೇನೂ ತೊಂದರೆಯಾಗಿರಲಿಲ್ಲ. ಆದರೆ ಒಂದು ಸರ್ಕಾರ ಇಷ್ಟು ದೊಡ್ಡ ಪ್ರಮಾಣದ ದುಡ್ಡು ಕೊಟ್ಟು, ಜಾಗ ಕೊಟ್ಟು ಏನೋ ಮಾಡುತ್ತೇನೆ ಎನ್ನುವುದು ಸದ್ಯದ ಸಂದರ್ಭದಲ್ಲಿ ತಪ್ಪಾಗಿದೆ” ಎಂದು ಅಭಿಪ್ರಾಯಪಟ್ಟರು.

ಸಂಶೋಧನೆಗಳು ಮಗ್ಗುಮ್ಮಾಗಿ ನಡೆಯುತ್ತದೆ. ಇದಕ್ಕೆ ತಕರಾರು ತೆಗೆಯಬೇಕಿಲ್ಲ. ಕೆಲವರು ಸಂಶೋಧನೆಯಲ್ಲೇ ತೊಡಗಿಸಿಕೊಂಡು ಅದೇ ಕೆಲಸವನ್ನು ಮಾಡುತ್ತಿರುತ್ತಾರೆ. ಬೇರೆಯವರು ಆ ಕಡೆ ಹೋಗುವುದೂ ಇಲ್ಲ. ಹೋಗಬೇಕಾಗಿಯೂ ಇಲ್ಲ” ಎಂದು ವಿವರಿಸಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯವನ್ನು ವಿರೋಧಿಸುವುದಕ್ಕಿಂತ ವಿಶ್ವವಿದ್ಯಾನಿಲಯಕ್ಕೆ ಇಷ್ಟು ಜಾಗ ಕೊಟ್ಟು, ದುಡ್ಡು ಕೊಡುತ್ತಿರುವುದನ್ನು ವಿರೋಧಿಸಬೇಕು ಎನ್ನುವುದು ಸರಿ. ಸಂಸ್ಕೃತ ಸಂಶೋಧನೆಗೆ ಹಣ ಕೊಟ್ಟಿಲ್ಲ. ಸಂಶೋಧನೆಗೆ ಹಣ ಕೊಡಲಿ. ಈ ಹಿಂದಿನ ವಿದ್ವಾಂಸರು ತಮ್ಮ ವೈಯಕ್ತಿಕ ಖರ್ಚು ವೆಚ್ಚದಲ್ಲಿ ರೂಪಿಸಿದ ಸಂಸ್ಕೃತ ಕೃತಿಗಳನ್ನು ಓದುತ್ತಾ ಬಂದಿದ್ದೇವೆ. ಹೀಗಾಗಿ ಹೊಸ ಸಂಶೋಧನೆಗಳಿಗೆ ಸರ್ಕಾರ ಹಣ ನೀಡಬೇಕು” ಎಂದು ಆಗ್ರಹಿಸಿದರು.

ಕೊನೆಯದಾಗಿ, “ಇಷ್ಟೆಲ್ಲ ದೊಡ್ಡ ಮಟ್ಟದಲ್ಲಿ ಹಣ ಕೊಟ್ಟು, ಸಂಸ್ಕೃತ ವಿವಿಯನ್ನು ಬೃಹತ್ತಾಗಿ ರೂಪಿಸುತ್ತೇವೆ ಎಂದು ಭಾವಿಸೋಣ. ಇಷ್ಟಾದರೂ ಸಂಸ್ಕೃತ ಜನಭಾಷೆಯಾಗಿ ರೂಪುಗೊಳ್ಳಲು ಸಾಧ್ಯವೆ?” ಎಂದು ‘ನಾನುಗೌರಿ.ಕಾಂ’ ಪ್ರಶ್ನಿಸಿತು. ಇದಕ್ಕೆ ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ ವೇಣುಗೋಪಾಲ್‌ ಅವರು, “ಖಂಡಿತವಾಗಿಯೂ ಜನಭಾಷೆಯಾಗಿ ಸಂಸ್ಕೃತ ರೂಪುಗೊಳ್ಳುವುದಿಲ್ಲ. ಜನಭಾಷೆಯಾಗಿ ಮಾಡುವ ಅಗತ್ಯವೂ ಇಲ್ಲ. ಇಷ್ಟವಿದ್ದರೆ ಓದಿಕೊಳ್ಳಬಹುದು. ನನಗೆ ಇಷ್ಟವಿದೆ ಓದಿಕೊಳ್ಳುತ್ತೇನೆ. ನನಗೊಂದು ವಿಷಯ ಬೇಕಾದರೆ ಪುಸ್ತಕ ತಿರುವು ಹಾಕಿ ರೆಫರ್‌ ಮಾಡುತ್ತೇನೆ. ಅದು ಬಿಟ್ಟು ಸಂಸ್ಕೃತವನ್ನು ಇಂಜೆಕ್ಟ್‌ ಮಾಡಲು ಸಾಧ್ಯವಿಲ್ಲ- ನಿನಗೊಂದು ಡೋಸ್, ಸೆಕೆಂಡ್ ಡೋಸ್‌ ಎನ್ನಲು ಸಾಧ್ಯವಿಲ್ಲ” ಎಂದರು.


ಇದನ್ನೂ ಓದಿರಿ: ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಂಗೂ ಅನ್ನ ಕೊಟ್ಟ ತಪ್ಪಿಗೆ ಸಂಸ್ಕೃತಮಾತೆ ಪಶ್ವಾತ್ತಾಪ ಪಡುತ್ತಿರಬಹುದು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...