Homeಕರ್ನಾಟಕಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಸ್ಕೃತ ಕಲಿತು ಸಂಸ್ಕೃತ ಮೇಷ್ಟ್ರಾಗಬೇಕೇ ಹೊರತು, ಬೇರೆ ಅವಕಾಶಗಳಿಲ್ಲ” ಎಂದು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಎಚ್‌.ವಿ.ವೇಣುಗೋಪಾಲ್‌ ತಿಳಿಸಿದ್ದಾರೆ.

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ವೇಣುಗೋಪಾಲ್ ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಹಾಗೂ ‘ನ್ಯಾಯಪಥ’ ವಾರಪತ್ರಿಕೆಯೊಂದಿಗೆ ಹಂಚಿಕೊಂಡರು.

“ಸಂಸ್ಕೃತವನ್ನು ಜ್ಞಾನಕ್ಕಾಗಿ ಕಲಿಯುತ್ತಾರಷ್ಟೇ. ಅದು ಒಂದೇ ಚಾನೆಲ್‌. ಒಂದು ಪೈಪ್‌ನೊಳಗೆ ಹಾಕಿ ಹುಡುಗರನ್ನು ಕಳಿಸಿದ ಹಾಗೆ ಆಗುತ್ತದೆ. ಈ ಕಡೆಯಿಂದ ಹೋದರೆ, ಆ ಕಡೆಯಿಂದ ಹೊರಗೆ ಬರಬೇಕಾಗುತ್ತದೆಯಷ್ಟೇ. ಇನ್ನೊಂದು ದಾರಿ ಇಲ್ಲವೇ ಇಲ್ಲ” ಎಂದರು.

“ಮೇಷ್ಟ್ರಾಗದಿದ್ದರೆ ಸಂಶೋಧನೆ ಮಾಡಿ, ಪೇಪರ್‌ ಪಬ್ಲಿಷ್ ಮಾಡಬಹುದು. ಆ ಮೇಲೆ ಪುಸ್ತಕ ಬರೆದು ಪಬ್ಲಿಷ್ ಮಾಡಿ, ಎಲ್ಲ ಜನರಿಗೂ ಹಂಚಬೇಕು. ಯಾರು ಕೊಂಡುಕೊಳ್ಳುತ್ತಾರೆ? ದೇವರ ಬಗ್ಗೆ, ವ್ರತದ ಬಗ್ಗೆ ಬರೆದರೆ ಹೆಚ್ಚು ಜನ ಕೊಂಡುಕೊಳ್ಳುತ್ತಾರೆ. ಬ್ರಹ್ಮಸೂತ್ರದಲ್ಲಿ ಹೀಗೆ ಹೇಳಿದೆ, ಶಂಕರಚಾರ್ಯರು ಹೀಗೆ ಹೇಳಿದ್ದಾರೆ ಎಂದು ಬರೆದರೆ ನಾಲ್ಕು ಜನ ಶಂಕರರು, ನಾಲ್ಕು ಜನ ಮಾಧ್ವರು ಕೊಂಡುಕೊಳ್ಳುತ್ತಾರಷ್ಟೇ” ಎಂದು ಪ್ರತಿಕ್ರಿಯಿಸಿದರು.

“ಸಾಮಾನ್ಯ ಜನರು, ಸಂಸ್ಕೃತ ಗೊತ್ತಿಲ್ಲದವರು ತಿಳಿದಿರುವಂತೆ ಸಂಸ್ಕೃತ ವಿವಿಯಲ್ಲಿ ಮಂತ್ರ ಕಲಿಸುತ್ತಾರೆ, ಪೂಜೆ ಮಾಡೋದನ್ನು ಕಲಿಸುತ್ತಾರೆ ಎಂಬುದು ತಪ್ಪು ಅಭಿಪ್ರಾಯ. ಪಾರಂಪರಿಕವಾದ ತರ್ಕ, ನ್ಯಾಯ, ವೇದವಿದ್ಯೆ ಮುಂತಾದವನ್ನು ಇಲ್ಲಿ ಕಲಿಸುತ್ತಾರೆ. ಅಂದರೆ ಜ್ಞಾನಶಾಖೆಗಳನ್ನು ಅಧ್ಯಯನ ಮಾಡಲಾಗುತ್ತದೆ. ಅದರಲ್ಲಿ ವಿಶೇಷವೇನೂ ಇಲ್ಲ. ಸಂಸ್ಕೃತ ವಿಶ್ವವಿದ್ಯಾನಿಲಯ ಇಲ್ಲದಿದ್ದರೂ ಈ ವಿಷಯಗಳನ್ನು ಆಸಕ್ತರು ಈವರೆಗೆ ಕಲಿಯುತ್ತಿದ್ದರು. ಮೊದಲೆಲ್ಲ ಸಂಸ್ಕೃತದ ಬಿ.ಎ., ಎಂ.ಎ. ಇರಲಿಲ್ಲ. ಸಂಸ್ಕೃತ ವಿವಿಯಿಂದ ಬಿ.ಎ., ಎಂ.ಎ. ಸಾಧ್ಯವಾಗುತ್ತದೆ. ಸಂಸ್ಕೃತ ವಿವಿಯಲ್ಲಿ ಕಲಿತು ಮೇಷ್ಟ್ರಾಗಬಹುದೇ ಹೊರತು ಬೇರೇನೂ ಆಗಲು ಸಾಧ್ಯವಿಲ್ಲ” ಎಂದು ಸುಮಾರು 38 ವರ್ಷಗಳ ಕಾಲ ಸಂಸ್ಕೃತ ಬೋಧಿಸಿರುವ ವೇಣುಗೋಪಾಲ್‌ ಹೇಳಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಬಹಳ ವರ್ಷಗಳಾಗಿವೆ. ಕೆಲಸವೂ ನಡೆಯುತ್ತಿವೆ. ಹೊಸದಾಗಿ ಸ್ಥಾಪನೆಯನ್ನೇನೂ ಮಾಡುತ್ತಿಲ್ಲ. ಆದರೆ ಅದನ್ನು ವಿಸ್ತಾರ ಮಾಡುತ್ತಿದ್ದಾರೆ. ಈಗ ಆಗುತ್ತಿರುವ ಚರ್ಚೆಯನ್ನು ಗಮನಿಸಿದೆ. ಕನ್ನಡಕ್ಕೆ ಆದ್ಯತೆ ಕೊಡಿ ಸಂಸ್ಕೃತ ಆಮೇಲಿಡಿ ಎಂಬ ವಾದ ಸರಿ ಇದೆ” ಎಂದು ಸ್ಪಷ್ಟಪಡಿಸಿದರು.

“ಈಗ ಬರುತ್ತಿರುವ ವಿರೋಧಗಳು ನಿಜವಾಗಿವೆ. ಹಣ ಹಾಗೂ ಜಾಗದ ದುರುಪಯೋಗದ ಪ್ರಶ್ನೆ ಮೇಲೆದ್ದಿರುವುದು ಸರಿಯೇ ಇದೆ. ಸಂಸ್ಕೃತ ವಿವಿ ಈಗ ಇರುವ ಮಾದರಿಯಲ್ಲೇ ಇದ್ದರೆ ನಷ್ಟವೇನೂ ಆಗಲ್ಲ. ಯಾಕೆಂದರೆ ಸಂಸ್ಕೃತ ಓದುತ್ತಿರುವವರೂ ಕಡಿಮೆ ಇದ್ದಾರೆ. ಸಂಸ್ಕೃತದಿಂದ ಉಪಯೋಗ ಪಡೆಯುವವರೂ ಕಡಿಮೆ” ಎಂದು ಹೇಳಿದರು.

“ತುಂಬಾ ಸಂಪ್ರದಾಯಸ್ಥರು ಸಂಸ್ಕೃತ ಓದುತ್ತಾರೆ. ತ್ರಿಮಸ್ಥರು ಬೇರೆ ಬೇರೆ ಸಂಸ್ಕೃತ ಕಾಲೇಜುಗಳನ್ನು ರೂಪಿಸಿಕೊಂಡು ಅವರಿಗೆ ಸಂಬಂಧಿಸಿದ್ದನ್ನು ಮಾತ್ರ ಬೋಧಿಸುತ್ತಾರೆ. ಇದೆಲ್ಲ ಮಾಮೂಲಿಯಾಗಿ ನಡೆದುಕೊಂಡು ಬಂದಿದೆ. ಇದರಿಂದ ಯಾರಿಗೇನೂ ತೊಂದರೆಯಾಗಿರಲಿಲ್ಲ. ಆದರೆ ಒಂದು ಸರ್ಕಾರ ಇಷ್ಟು ದೊಡ್ಡ ಪ್ರಮಾಣದ ದುಡ್ಡು ಕೊಟ್ಟು, ಜಾಗ ಕೊಟ್ಟು ಏನೋ ಮಾಡುತ್ತೇನೆ ಎನ್ನುವುದು ಸದ್ಯದ ಸಂದರ್ಭದಲ್ಲಿ ತಪ್ಪಾಗಿದೆ” ಎಂದು ಅಭಿಪ್ರಾಯಪಟ್ಟರು.

ಸಂಶೋಧನೆಗಳು ಮಗ್ಗುಮ್ಮಾಗಿ ನಡೆಯುತ್ತದೆ. ಇದಕ್ಕೆ ತಕರಾರು ತೆಗೆಯಬೇಕಿಲ್ಲ. ಕೆಲವರು ಸಂಶೋಧನೆಯಲ್ಲೇ ತೊಡಗಿಸಿಕೊಂಡು ಅದೇ ಕೆಲಸವನ್ನು ಮಾಡುತ್ತಿರುತ್ತಾರೆ. ಬೇರೆಯವರು ಆ ಕಡೆ ಹೋಗುವುದೂ ಇಲ್ಲ. ಹೋಗಬೇಕಾಗಿಯೂ ಇಲ್ಲ” ಎಂದು ವಿವರಿಸಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯವನ್ನು ವಿರೋಧಿಸುವುದಕ್ಕಿಂತ ವಿಶ್ವವಿದ್ಯಾನಿಲಯಕ್ಕೆ ಇಷ್ಟು ಜಾಗ ಕೊಟ್ಟು, ದುಡ್ಡು ಕೊಡುತ್ತಿರುವುದನ್ನು ವಿರೋಧಿಸಬೇಕು ಎನ್ನುವುದು ಸರಿ. ಸಂಸ್ಕೃತ ಸಂಶೋಧನೆಗೆ ಹಣ ಕೊಟ್ಟಿಲ್ಲ. ಸಂಶೋಧನೆಗೆ ಹಣ ಕೊಡಲಿ. ಈ ಹಿಂದಿನ ವಿದ್ವಾಂಸರು ತಮ್ಮ ವೈಯಕ್ತಿಕ ಖರ್ಚು ವೆಚ್ಚದಲ್ಲಿ ರೂಪಿಸಿದ ಸಂಸ್ಕೃತ ಕೃತಿಗಳನ್ನು ಓದುತ್ತಾ ಬಂದಿದ್ದೇವೆ. ಹೀಗಾಗಿ ಹೊಸ ಸಂಶೋಧನೆಗಳಿಗೆ ಸರ್ಕಾರ ಹಣ ನೀಡಬೇಕು” ಎಂದು ಆಗ್ರಹಿಸಿದರು.

ಕೊನೆಯದಾಗಿ, “ಇಷ್ಟೆಲ್ಲ ದೊಡ್ಡ ಮಟ್ಟದಲ್ಲಿ ಹಣ ಕೊಟ್ಟು, ಸಂಸ್ಕೃತ ವಿವಿಯನ್ನು ಬೃಹತ್ತಾಗಿ ರೂಪಿಸುತ್ತೇವೆ ಎಂದು ಭಾವಿಸೋಣ. ಇಷ್ಟಾದರೂ ಸಂಸ್ಕೃತ ಜನಭಾಷೆಯಾಗಿ ರೂಪುಗೊಳ್ಳಲು ಸಾಧ್ಯವೆ?” ಎಂದು ‘ನಾನುಗೌರಿ.ಕಾಂ’ ಪ್ರಶ್ನಿಸಿತು. ಇದಕ್ಕೆ ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ ವೇಣುಗೋಪಾಲ್‌ ಅವರು, “ಖಂಡಿತವಾಗಿಯೂ ಜನಭಾಷೆಯಾಗಿ ಸಂಸ್ಕೃತ ರೂಪುಗೊಳ್ಳುವುದಿಲ್ಲ. ಜನಭಾಷೆಯಾಗಿ ಮಾಡುವ ಅಗತ್ಯವೂ ಇಲ್ಲ. ಇಷ್ಟವಿದ್ದರೆ ಓದಿಕೊಳ್ಳಬಹುದು. ನನಗೆ ಇಷ್ಟವಿದೆ ಓದಿಕೊಳ್ಳುತ್ತೇನೆ. ನನಗೊಂದು ವಿಷಯ ಬೇಕಾದರೆ ಪುಸ್ತಕ ತಿರುವು ಹಾಕಿ ರೆಫರ್‌ ಮಾಡುತ್ತೇನೆ. ಅದು ಬಿಟ್ಟು ಸಂಸ್ಕೃತವನ್ನು ಇಂಜೆಕ್ಟ್‌ ಮಾಡಲು ಸಾಧ್ಯವಿಲ್ಲ- ನಿನಗೊಂದು ಡೋಸ್, ಸೆಕೆಂಡ್ ಡೋಸ್‌ ಎನ್ನಲು ಸಾಧ್ಯವಿಲ್ಲ” ಎಂದರು.


ಇದನ್ನೂ ಓದಿರಿ: ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಂಗೂ ಅನ್ನ ಕೊಟ್ಟ ತಪ್ಪಿಗೆ ಸಂಸ್ಕೃತಮಾತೆ ಪಶ್ವಾತ್ತಾಪ ಪಡುತ್ತಿರಬಹುದು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...