Homeಕರ್ನಾಟಕಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಸ್ಕೃತ ಕಲಿತು ಸಂಸ್ಕೃತ ಮೇಷ್ಟ್ರಾಗಬೇಕೇ ಹೊರತು, ಬೇರೆ ಅವಕಾಶಗಳಿಲ್ಲ” ಎಂದು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಎಚ್‌.ವಿ.ವೇಣುಗೋಪಾಲ್‌ ತಿಳಿಸಿದ್ದಾರೆ.

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ವೇಣುಗೋಪಾಲ್ ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಹಾಗೂ ‘ನ್ಯಾಯಪಥ’ ವಾರಪತ್ರಿಕೆಯೊಂದಿಗೆ ಹಂಚಿಕೊಂಡರು.

“ಸಂಸ್ಕೃತವನ್ನು ಜ್ಞಾನಕ್ಕಾಗಿ ಕಲಿಯುತ್ತಾರಷ್ಟೇ. ಅದು ಒಂದೇ ಚಾನೆಲ್‌. ಒಂದು ಪೈಪ್‌ನೊಳಗೆ ಹಾಕಿ ಹುಡುಗರನ್ನು ಕಳಿಸಿದ ಹಾಗೆ ಆಗುತ್ತದೆ. ಈ ಕಡೆಯಿಂದ ಹೋದರೆ, ಆ ಕಡೆಯಿಂದ ಹೊರಗೆ ಬರಬೇಕಾಗುತ್ತದೆಯಷ್ಟೇ. ಇನ್ನೊಂದು ದಾರಿ ಇಲ್ಲವೇ ಇಲ್ಲ” ಎಂದರು.

“ಮೇಷ್ಟ್ರಾಗದಿದ್ದರೆ ಸಂಶೋಧನೆ ಮಾಡಿ, ಪೇಪರ್‌ ಪಬ್ಲಿಷ್ ಮಾಡಬಹುದು. ಆ ಮೇಲೆ ಪುಸ್ತಕ ಬರೆದು ಪಬ್ಲಿಷ್ ಮಾಡಿ, ಎಲ್ಲ ಜನರಿಗೂ ಹಂಚಬೇಕು. ಯಾರು ಕೊಂಡುಕೊಳ್ಳುತ್ತಾರೆ? ದೇವರ ಬಗ್ಗೆ, ವ್ರತದ ಬಗ್ಗೆ ಬರೆದರೆ ಹೆಚ್ಚು ಜನ ಕೊಂಡುಕೊಳ್ಳುತ್ತಾರೆ. ಬ್ರಹ್ಮಸೂತ್ರದಲ್ಲಿ ಹೀಗೆ ಹೇಳಿದೆ, ಶಂಕರಚಾರ್ಯರು ಹೀಗೆ ಹೇಳಿದ್ದಾರೆ ಎಂದು ಬರೆದರೆ ನಾಲ್ಕು ಜನ ಶಂಕರರು, ನಾಲ್ಕು ಜನ ಮಾಧ್ವರು ಕೊಂಡುಕೊಳ್ಳುತ್ತಾರಷ್ಟೇ” ಎಂದು ಪ್ರತಿಕ್ರಿಯಿಸಿದರು.

“ಸಾಮಾನ್ಯ ಜನರು, ಸಂಸ್ಕೃತ ಗೊತ್ತಿಲ್ಲದವರು ತಿಳಿದಿರುವಂತೆ ಸಂಸ್ಕೃತ ವಿವಿಯಲ್ಲಿ ಮಂತ್ರ ಕಲಿಸುತ್ತಾರೆ, ಪೂಜೆ ಮಾಡೋದನ್ನು ಕಲಿಸುತ್ತಾರೆ ಎಂಬುದು ತಪ್ಪು ಅಭಿಪ್ರಾಯ. ಪಾರಂಪರಿಕವಾದ ತರ್ಕ, ನ್ಯಾಯ, ವೇದವಿದ್ಯೆ ಮುಂತಾದವನ್ನು ಇಲ್ಲಿ ಕಲಿಸುತ್ತಾರೆ. ಅಂದರೆ ಜ್ಞಾನಶಾಖೆಗಳನ್ನು ಅಧ್ಯಯನ ಮಾಡಲಾಗುತ್ತದೆ. ಅದರಲ್ಲಿ ವಿಶೇಷವೇನೂ ಇಲ್ಲ. ಸಂಸ್ಕೃತ ವಿಶ್ವವಿದ್ಯಾನಿಲಯ ಇಲ್ಲದಿದ್ದರೂ ಈ ವಿಷಯಗಳನ್ನು ಆಸಕ್ತರು ಈವರೆಗೆ ಕಲಿಯುತ್ತಿದ್ದರು. ಮೊದಲೆಲ್ಲ ಸಂಸ್ಕೃತದ ಬಿ.ಎ., ಎಂ.ಎ. ಇರಲಿಲ್ಲ. ಸಂಸ್ಕೃತ ವಿವಿಯಿಂದ ಬಿ.ಎ., ಎಂ.ಎ. ಸಾಧ್ಯವಾಗುತ್ತದೆ. ಸಂಸ್ಕೃತ ವಿವಿಯಲ್ಲಿ ಕಲಿತು ಮೇಷ್ಟ್ರಾಗಬಹುದೇ ಹೊರತು ಬೇರೇನೂ ಆಗಲು ಸಾಧ್ಯವಿಲ್ಲ” ಎಂದು ಸುಮಾರು 38 ವರ್ಷಗಳ ಕಾಲ ಸಂಸ್ಕೃತ ಬೋಧಿಸಿರುವ ವೇಣುಗೋಪಾಲ್‌ ಹೇಳಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಬಹಳ ವರ್ಷಗಳಾಗಿವೆ. ಕೆಲಸವೂ ನಡೆಯುತ್ತಿವೆ. ಹೊಸದಾಗಿ ಸ್ಥಾಪನೆಯನ್ನೇನೂ ಮಾಡುತ್ತಿಲ್ಲ. ಆದರೆ ಅದನ್ನು ವಿಸ್ತಾರ ಮಾಡುತ್ತಿದ್ದಾರೆ. ಈಗ ಆಗುತ್ತಿರುವ ಚರ್ಚೆಯನ್ನು ಗಮನಿಸಿದೆ. ಕನ್ನಡಕ್ಕೆ ಆದ್ಯತೆ ಕೊಡಿ ಸಂಸ್ಕೃತ ಆಮೇಲಿಡಿ ಎಂಬ ವಾದ ಸರಿ ಇದೆ” ಎಂದು ಸ್ಪಷ್ಟಪಡಿಸಿದರು.

“ಈಗ ಬರುತ್ತಿರುವ ವಿರೋಧಗಳು ನಿಜವಾಗಿವೆ. ಹಣ ಹಾಗೂ ಜಾಗದ ದುರುಪಯೋಗದ ಪ್ರಶ್ನೆ ಮೇಲೆದ್ದಿರುವುದು ಸರಿಯೇ ಇದೆ. ಸಂಸ್ಕೃತ ವಿವಿ ಈಗ ಇರುವ ಮಾದರಿಯಲ್ಲೇ ಇದ್ದರೆ ನಷ್ಟವೇನೂ ಆಗಲ್ಲ. ಯಾಕೆಂದರೆ ಸಂಸ್ಕೃತ ಓದುತ್ತಿರುವವರೂ ಕಡಿಮೆ ಇದ್ದಾರೆ. ಸಂಸ್ಕೃತದಿಂದ ಉಪಯೋಗ ಪಡೆಯುವವರೂ ಕಡಿಮೆ” ಎಂದು ಹೇಳಿದರು.

“ತುಂಬಾ ಸಂಪ್ರದಾಯಸ್ಥರು ಸಂಸ್ಕೃತ ಓದುತ್ತಾರೆ. ತ್ರಿಮಸ್ಥರು ಬೇರೆ ಬೇರೆ ಸಂಸ್ಕೃತ ಕಾಲೇಜುಗಳನ್ನು ರೂಪಿಸಿಕೊಂಡು ಅವರಿಗೆ ಸಂಬಂಧಿಸಿದ್ದನ್ನು ಮಾತ್ರ ಬೋಧಿಸುತ್ತಾರೆ. ಇದೆಲ್ಲ ಮಾಮೂಲಿಯಾಗಿ ನಡೆದುಕೊಂಡು ಬಂದಿದೆ. ಇದರಿಂದ ಯಾರಿಗೇನೂ ತೊಂದರೆಯಾಗಿರಲಿಲ್ಲ. ಆದರೆ ಒಂದು ಸರ್ಕಾರ ಇಷ್ಟು ದೊಡ್ಡ ಪ್ರಮಾಣದ ದುಡ್ಡು ಕೊಟ್ಟು, ಜಾಗ ಕೊಟ್ಟು ಏನೋ ಮಾಡುತ್ತೇನೆ ಎನ್ನುವುದು ಸದ್ಯದ ಸಂದರ್ಭದಲ್ಲಿ ತಪ್ಪಾಗಿದೆ” ಎಂದು ಅಭಿಪ್ರಾಯಪಟ್ಟರು.

ಸಂಶೋಧನೆಗಳು ಮಗ್ಗುಮ್ಮಾಗಿ ನಡೆಯುತ್ತದೆ. ಇದಕ್ಕೆ ತಕರಾರು ತೆಗೆಯಬೇಕಿಲ್ಲ. ಕೆಲವರು ಸಂಶೋಧನೆಯಲ್ಲೇ ತೊಡಗಿಸಿಕೊಂಡು ಅದೇ ಕೆಲಸವನ್ನು ಮಾಡುತ್ತಿರುತ್ತಾರೆ. ಬೇರೆಯವರು ಆ ಕಡೆ ಹೋಗುವುದೂ ಇಲ್ಲ. ಹೋಗಬೇಕಾಗಿಯೂ ಇಲ್ಲ” ಎಂದು ವಿವರಿಸಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯವನ್ನು ವಿರೋಧಿಸುವುದಕ್ಕಿಂತ ವಿಶ್ವವಿದ್ಯಾನಿಲಯಕ್ಕೆ ಇಷ್ಟು ಜಾಗ ಕೊಟ್ಟು, ದುಡ್ಡು ಕೊಡುತ್ತಿರುವುದನ್ನು ವಿರೋಧಿಸಬೇಕು ಎನ್ನುವುದು ಸರಿ. ಸಂಸ್ಕೃತ ಸಂಶೋಧನೆಗೆ ಹಣ ಕೊಟ್ಟಿಲ್ಲ. ಸಂಶೋಧನೆಗೆ ಹಣ ಕೊಡಲಿ. ಈ ಹಿಂದಿನ ವಿದ್ವಾಂಸರು ತಮ್ಮ ವೈಯಕ್ತಿಕ ಖರ್ಚು ವೆಚ್ಚದಲ್ಲಿ ರೂಪಿಸಿದ ಸಂಸ್ಕೃತ ಕೃತಿಗಳನ್ನು ಓದುತ್ತಾ ಬಂದಿದ್ದೇವೆ. ಹೀಗಾಗಿ ಹೊಸ ಸಂಶೋಧನೆಗಳಿಗೆ ಸರ್ಕಾರ ಹಣ ನೀಡಬೇಕು” ಎಂದು ಆಗ್ರಹಿಸಿದರು.

ಕೊನೆಯದಾಗಿ, “ಇಷ್ಟೆಲ್ಲ ದೊಡ್ಡ ಮಟ್ಟದಲ್ಲಿ ಹಣ ಕೊಟ್ಟು, ಸಂಸ್ಕೃತ ವಿವಿಯನ್ನು ಬೃಹತ್ತಾಗಿ ರೂಪಿಸುತ್ತೇವೆ ಎಂದು ಭಾವಿಸೋಣ. ಇಷ್ಟಾದರೂ ಸಂಸ್ಕೃತ ಜನಭಾಷೆಯಾಗಿ ರೂಪುಗೊಳ್ಳಲು ಸಾಧ್ಯವೆ?” ಎಂದು ‘ನಾನುಗೌರಿ.ಕಾಂ’ ಪ್ರಶ್ನಿಸಿತು. ಇದಕ್ಕೆ ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ ವೇಣುಗೋಪಾಲ್‌ ಅವರು, “ಖಂಡಿತವಾಗಿಯೂ ಜನಭಾಷೆಯಾಗಿ ಸಂಸ್ಕೃತ ರೂಪುಗೊಳ್ಳುವುದಿಲ್ಲ. ಜನಭಾಷೆಯಾಗಿ ಮಾಡುವ ಅಗತ್ಯವೂ ಇಲ್ಲ. ಇಷ್ಟವಿದ್ದರೆ ಓದಿಕೊಳ್ಳಬಹುದು. ನನಗೆ ಇಷ್ಟವಿದೆ ಓದಿಕೊಳ್ಳುತ್ತೇನೆ. ನನಗೊಂದು ವಿಷಯ ಬೇಕಾದರೆ ಪುಸ್ತಕ ತಿರುವು ಹಾಕಿ ರೆಫರ್‌ ಮಾಡುತ್ತೇನೆ. ಅದು ಬಿಟ್ಟು ಸಂಸ್ಕೃತವನ್ನು ಇಂಜೆಕ್ಟ್‌ ಮಾಡಲು ಸಾಧ್ಯವಿಲ್ಲ- ನಿನಗೊಂದು ಡೋಸ್, ಸೆಕೆಂಡ್ ಡೋಸ್‌ ಎನ್ನಲು ಸಾಧ್ಯವಿಲ್ಲ” ಎಂದರು.


ಇದನ್ನೂ ಓದಿರಿ: ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಂಗೂ ಅನ್ನ ಕೊಟ್ಟ ತಪ್ಪಿಗೆ ಸಂಸ್ಕೃತಮಾತೆ ಪಶ್ವಾತ್ತಾಪ ಪಡುತ್ತಿರಬಹುದು.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....