Homeಕರ್ನಾಟಕಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಸ್ಕೃತ ಕಲಿತು ಸಂಸ್ಕೃತ ಮೇಷ್ಟ್ರಾಗಬೇಕೇ ಹೊರತು, ಬೇರೆ ಅವಕಾಶಗಳಿಲ್ಲ” ಎಂದು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಎಚ್‌.ವಿ.ವೇಣುಗೋಪಾಲ್‌ ತಿಳಿಸಿದ್ದಾರೆ.

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ವೇಣುಗೋಪಾಲ್ ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಹಾಗೂ ‘ನ್ಯಾಯಪಥ’ ವಾರಪತ್ರಿಕೆಯೊಂದಿಗೆ ಹಂಚಿಕೊಂಡರು.

“ಸಂಸ್ಕೃತವನ್ನು ಜ್ಞಾನಕ್ಕಾಗಿ ಕಲಿಯುತ್ತಾರಷ್ಟೇ. ಅದು ಒಂದೇ ಚಾನೆಲ್‌. ಒಂದು ಪೈಪ್‌ನೊಳಗೆ ಹಾಕಿ ಹುಡುಗರನ್ನು ಕಳಿಸಿದ ಹಾಗೆ ಆಗುತ್ತದೆ. ಈ ಕಡೆಯಿಂದ ಹೋದರೆ, ಆ ಕಡೆಯಿಂದ ಹೊರಗೆ ಬರಬೇಕಾಗುತ್ತದೆಯಷ್ಟೇ. ಇನ್ನೊಂದು ದಾರಿ ಇಲ್ಲವೇ ಇಲ್ಲ” ಎಂದರು.

“ಮೇಷ್ಟ್ರಾಗದಿದ್ದರೆ ಸಂಶೋಧನೆ ಮಾಡಿ, ಪೇಪರ್‌ ಪಬ್ಲಿಷ್ ಮಾಡಬಹುದು. ಆ ಮೇಲೆ ಪುಸ್ತಕ ಬರೆದು ಪಬ್ಲಿಷ್ ಮಾಡಿ, ಎಲ್ಲ ಜನರಿಗೂ ಹಂಚಬೇಕು. ಯಾರು ಕೊಂಡುಕೊಳ್ಳುತ್ತಾರೆ? ದೇವರ ಬಗ್ಗೆ, ವ್ರತದ ಬಗ್ಗೆ ಬರೆದರೆ ಹೆಚ್ಚು ಜನ ಕೊಂಡುಕೊಳ್ಳುತ್ತಾರೆ. ಬ್ರಹ್ಮಸೂತ್ರದಲ್ಲಿ ಹೀಗೆ ಹೇಳಿದೆ, ಶಂಕರಚಾರ್ಯರು ಹೀಗೆ ಹೇಳಿದ್ದಾರೆ ಎಂದು ಬರೆದರೆ ನಾಲ್ಕು ಜನ ಶಂಕರರು, ನಾಲ್ಕು ಜನ ಮಾಧ್ವರು ಕೊಂಡುಕೊಳ್ಳುತ್ತಾರಷ್ಟೇ” ಎಂದು ಪ್ರತಿಕ್ರಿಯಿಸಿದರು.

“ಸಾಮಾನ್ಯ ಜನರು, ಸಂಸ್ಕೃತ ಗೊತ್ತಿಲ್ಲದವರು ತಿಳಿದಿರುವಂತೆ ಸಂಸ್ಕೃತ ವಿವಿಯಲ್ಲಿ ಮಂತ್ರ ಕಲಿಸುತ್ತಾರೆ, ಪೂಜೆ ಮಾಡೋದನ್ನು ಕಲಿಸುತ್ತಾರೆ ಎಂಬುದು ತಪ್ಪು ಅಭಿಪ್ರಾಯ. ಪಾರಂಪರಿಕವಾದ ತರ್ಕ, ನ್ಯಾಯ, ವೇದವಿದ್ಯೆ ಮುಂತಾದವನ್ನು ಇಲ್ಲಿ ಕಲಿಸುತ್ತಾರೆ. ಅಂದರೆ ಜ್ಞಾನಶಾಖೆಗಳನ್ನು ಅಧ್ಯಯನ ಮಾಡಲಾಗುತ್ತದೆ. ಅದರಲ್ಲಿ ವಿಶೇಷವೇನೂ ಇಲ್ಲ. ಸಂಸ್ಕೃತ ವಿಶ್ವವಿದ್ಯಾನಿಲಯ ಇಲ್ಲದಿದ್ದರೂ ಈ ವಿಷಯಗಳನ್ನು ಆಸಕ್ತರು ಈವರೆಗೆ ಕಲಿಯುತ್ತಿದ್ದರು. ಮೊದಲೆಲ್ಲ ಸಂಸ್ಕೃತದ ಬಿ.ಎ., ಎಂ.ಎ. ಇರಲಿಲ್ಲ. ಸಂಸ್ಕೃತ ವಿವಿಯಿಂದ ಬಿ.ಎ., ಎಂ.ಎ. ಸಾಧ್ಯವಾಗುತ್ತದೆ. ಸಂಸ್ಕೃತ ವಿವಿಯಲ್ಲಿ ಕಲಿತು ಮೇಷ್ಟ್ರಾಗಬಹುದೇ ಹೊರತು ಬೇರೇನೂ ಆಗಲು ಸಾಧ್ಯವಿಲ್ಲ” ಎಂದು ಸುಮಾರು 38 ವರ್ಷಗಳ ಕಾಲ ಸಂಸ್ಕೃತ ಬೋಧಿಸಿರುವ ವೇಣುಗೋಪಾಲ್‌ ಹೇಳಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಬಹಳ ವರ್ಷಗಳಾಗಿವೆ. ಕೆಲಸವೂ ನಡೆಯುತ್ತಿವೆ. ಹೊಸದಾಗಿ ಸ್ಥಾಪನೆಯನ್ನೇನೂ ಮಾಡುತ್ತಿಲ್ಲ. ಆದರೆ ಅದನ್ನು ವಿಸ್ತಾರ ಮಾಡುತ್ತಿದ್ದಾರೆ. ಈಗ ಆಗುತ್ತಿರುವ ಚರ್ಚೆಯನ್ನು ಗಮನಿಸಿದೆ. ಕನ್ನಡಕ್ಕೆ ಆದ್ಯತೆ ಕೊಡಿ ಸಂಸ್ಕೃತ ಆಮೇಲಿಡಿ ಎಂಬ ವಾದ ಸರಿ ಇದೆ” ಎಂದು ಸ್ಪಷ್ಟಪಡಿಸಿದರು.

“ಈಗ ಬರುತ್ತಿರುವ ವಿರೋಧಗಳು ನಿಜವಾಗಿವೆ. ಹಣ ಹಾಗೂ ಜಾಗದ ದುರುಪಯೋಗದ ಪ್ರಶ್ನೆ ಮೇಲೆದ್ದಿರುವುದು ಸರಿಯೇ ಇದೆ. ಸಂಸ್ಕೃತ ವಿವಿ ಈಗ ಇರುವ ಮಾದರಿಯಲ್ಲೇ ಇದ್ದರೆ ನಷ್ಟವೇನೂ ಆಗಲ್ಲ. ಯಾಕೆಂದರೆ ಸಂಸ್ಕೃತ ಓದುತ್ತಿರುವವರೂ ಕಡಿಮೆ ಇದ್ದಾರೆ. ಸಂಸ್ಕೃತದಿಂದ ಉಪಯೋಗ ಪಡೆಯುವವರೂ ಕಡಿಮೆ” ಎಂದು ಹೇಳಿದರು.

“ತುಂಬಾ ಸಂಪ್ರದಾಯಸ್ಥರು ಸಂಸ್ಕೃತ ಓದುತ್ತಾರೆ. ತ್ರಿಮಸ್ಥರು ಬೇರೆ ಬೇರೆ ಸಂಸ್ಕೃತ ಕಾಲೇಜುಗಳನ್ನು ರೂಪಿಸಿಕೊಂಡು ಅವರಿಗೆ ಸಂಬಂಧಿಸಿದ್ದನ್ನು ಮಾತ್ರ ಬೋಧಿಸುತ್ತಾರೆ. ಇದೆಲ್ಲ ಮಾಮೂಲಿಯಾಗಿ ನಡೆದುಕೊಂಡು ಬಂದಿದೆ. ಇದರಿಂದ ಯಾರಿಗೇನೂ ತೊಂದರೆಯಾಗಿರಲಿಲ್ಲ. ಆದರೆ ಒಂದು ಸರ್ಕಾರ ಇಷ್ಟು ದೊಡ್ಡ ಪ್ರಮಾಣದ ದುಡ್ಡು ಕೊಟ್ಟು, ಜಾಗ ಕೊಟ್ಟು ಏನೋ ಮಾಡುತ್ತೇನೆ ಎನ್ನುವುದು ಸದ್ಯದ ಸಂದರ್ಭದಲ್ಲಿ ತಪ್ಪಾಗಿದೆ” ಎಂದು ಅಭಿಪ್ರಾಯಪಟ್ಟರು.

ಸಂಶೋಧನೆಗಳು ಮಗ್ಗುಮ್ಮಾಗಿ ನಡೆಯುತ್ತದೆ. ಇದಕ್ಕೆ ತಕರಾರು ತೆಗೆಯಬೇಕಿಲ್ಲ. ಕೆಲವರು ಸಂಶೋಧನೆಯಲ್ಲೇ ತೊಡಗಿಸಿಕೊಂಡು ಅದೇ ಕೆಲಸವನ್ನು ಮಾಡುತ್ತಿರುತ್ತಾರೆ. ಬೇರೆಯವರು ಆ ಕಡೆ ಹೋಗುವುದೂ ಇಲ್ಲ. ಹೋಗಬೇಕಾಗಿಯೂ ಇಲ್ಲ” ಎಂದು ವಿವರಿಸಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯವನ್ನು ವಿರೋಧಿಸುವುದಕ್ಕಿಂತ ವಿಶ್ವವಿದ್ಯಾನಿಲಯಕ್ಕೆ ಇಷ್ಟು ಜಾಗ ಕೊಟ್ಟು, ದುಡ್ಡು ಕೊಡುತ್ತಿರುವುದನ್ನು ವಿರೋಧಿಸಬೇಕು ಎನ್ನುವುದು ಸರಿ. ಸಂಸ್ಕೃತ ಸಂಶೋಧನೆಗೆ ಹಣ ಕೊಟ್ಟಿಲ್ಲ. ಸಂಶೋಧನೆಗೆ ಹಣ ಕೊಡಲಿ. ಈ ಹಿಂದಿನ ವಿದ್ವಾಂಸರು ತಮ್ಮ ವೈಯಕ್ತಿಕ ಖರ್ಚು ವೆಚ್ಚದಲ್ಲಿ ರೂಪಿಸಿದ ಸಂಸ್ಕೃತ ಕೃತಿಗಳನ್ನು ಓದುತ್ತಾ ಬಂದಿದ್ದೇವೆ. ಹೀಗಾಗಿ ಹೊಸ ಸಂಶೋಧನೆಗಳಿಗೆ ಸರ್ಕಾರ ಹಣ ನೀಡಬೇಕು” ಎಂದು ಆಗ್ರಹಿಸಿದರು.

ಕೊನೆಯದಾಗಿ, “ಇಷ್ಟೆಲ್ಲ ದೊಡ್ಡ ಮಟ್ಟದಲ್ಲಿ ಹಣ ಕೊಟ್ಟು, ಸಂಸ್ಕೃತ ವಿವಿಯನ್ನು ಬೃಹತ್ತಾಗಿ ರೂಪಿಸುತ್ತೇವೆ ಎಂದು ಭಾವಿಸೋಣ. ಇಷ್ಟಾದರೂ ಸಂಸ್ಕೃತ ಜನಭಾಷೆಯಾಗಿ ರೂಪುಗೊಳ್ಳಲು ಸಾಧ್ಯವೆ?” ಎಂದು ‘ನಾನುಗೌರಿ.ಕಾಂ’ ಪ್ರಶ್ನಿಸಿತು. ಇದಕ್ಕೆ ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ ವೇಣುಗೋಪಾಲ್‌ ಅವರು, “ಖಂಡಿತವಾಗಿಯೂ ಜನಭಾಷೆಯಾಗಿ ಸಂಸ್ಕೃತ ರೂಪುಗೊಳ್ಳುವುದಿಲ್ಲ. ಜನಭಾಷೆಯಾಗಿ ಮಾಡುವ ಅಗತ್ಯವೂ ಇಲ್ಲ. ಇಷ್ಟವಿದ್ದರೆ ಓದಿಕೊಳ್ಳಬಹುದು. ನನಗೆ ಇಷ್ಟವಿದೆ ಓದಿಕೊಳ್ಳುತ್ತೇನೆ. ನನಗೊಂದು ವಿಷಯ ಬೇಕಾದರೆ ಪುಸ್ತಕ ತಿರುವು ಹಾಕಿ ರೆಫರ್‌ ಮಾಡುತ್ತೇನೆ. ಅದು ಬಿಟ್ಟು ಸಂಸ್ಕೃತವನ್ನು ಇಂಜೆಕ್ಟ್‌ ಮಾಡಲು ಸಾಧ್ಯವಿಲ್ಲ- ನಿನಗೊಂದು ಡೋಸ್, ಸೆಕೆಂಡ್ ಡೋಸ್‌ ಎನ್ನಲು ಸಾಧ್ಯವಿಲ್ಲ” ಎಂದರು.


ಇದನ್ನೂ ಓದಿರಿ: ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಂಗೂ ಅನ್ನ ಕೊಟ್ಟ ತಪ್ಪಿಗೆ ಸಂಸ್ಕೃತಮಾತೆ ಪಶ್ವಾತ್ತಾಪ ಪಡುತ್ತಿರಬಹುದು.

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...