Homeಕರ್ನಾಟಕಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಸ್ಕೃತ ಕಲಿತು ಸಂಸ್ಕೃತ ಮೇಷ್ಟ್ರಾಗಬೇಕೇ ಹೊರತು, ಬೇರೆ ಅವಕಾಶಗಳಿಲ್ಲ” ಎಂದು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಎಚ್‌.ವಿ.ವೇಣುಗೋಪಾಲ್‌ ತಿಳಿಸಿದ್ದಾರೆ.

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ವೇಣುಗೋಪಾಲ್ ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಹಾಗೂ ‘ನ್ಯಾಯಪಥ’ ವಾರಪತ್ರಿಕೆಯೊಂದಿಗೆ ಹಂಚಿಕೊಂಡರು.

“ಸಂಸ್ಕೃತವನ್ನು ಜ್ಞಾನಕ್ಕಾಗಿ ಕಲಿಯುತ್ತಾರಷ್ಟೇ. ಅದು ಒಂದೇ ಚಾನೆಲ್‌. ಒಂದು ಪೈಪ್‌ನೊಳಗೆ ಹಾಕಿ ಹುಡುಗರನ್ನು ಕಳಿಸಿದ ಹಾಗೆ ಆಗುತ್ತದೆ. ಈ ಕಡೆಯಿಂದ ಹೋದರೆ, ಆ ಕಡೆಯಿಂದ ಹೊರಗೆ ಬರಬೇಕಾಗುತ್ತದೆಯಷ್ಟೇ. ಇನ್ನೊಂದು ದಾರಿ ಇಲ್ಲವೇ ಇಲ್ಲ” ಎಂದರು.

“ಮೇಷ್ಟ್ರಾಗದಿದ್ದರೆ ಸಂಶೋಧನೆ ಮಾಡಿ, ಪೇಪರ್‌ ಪಬ್ಲಿಷ್ ಮಾಡಬಹುದು. ಆ ಮೇಲೆ ಪುಸ್ತಕ ಬರೆದು ಪಬ್ಲಿಷ್ ಮಾಡಿ, ಎಲ್ಲ ಜನರಿಗೂ ಹಂಚಬೇಕು. ಯಾರು ಕೊಂಡುಕೊಳ್ಳುತ್ತಾರೆ? ದೇವರ ಬಗ್ಗೆ, ವ್ರತದ ಬಗ್ಗೆ ಬರೆದರೆ ಹೆಚ್ಚು ಜನ ಕೊಂಡುಕೊಳ್ಳುತ್ತಾರೆ. ಬ್ರಹ್ಮಸೂತ್ರದಲ್ಲಿ ಹೀಗೆ ಹೇಳಿದೆ, ಶಂಕರಚಾರ್ಯರು ಹೀಗೆ ಹೇಳಿದ್ದಾರೆ ಎಂದು ಬರೆದರೆ ನಾಲ್ಕು ಜನ ಶಂಕರರು, ನಾಲ್ಕು ಜನ ಮಾಧ್ವರು ಕೊಂಡುಕೊಳ್ಳುತ್ತಾರಷ್ಟೇ” ಎಂದು ಪ್ರತಿಕ್ರಿಯಿಸಿದರು.

“ಸಾಮಾನ್ಯ ಜನರು, ಸಂಸ್ಕೃತ ಗೊತ್ತಿಲ್ಲದವರು ತಿಳಿದಿರುವಂತೆ ಸಂಸ್ಕೃತ ವಿವಿಯಲ್ಲಿ ಮಂತ್ರ ಕಲಿಸುತ್ತಾರೆ, ಪೂಜೆ ಮಾಡೋದನ್ನು ಕಲಿಸುತ್ತಾರೆ ಎಂಬುದು ತಪ್ಪು ಅಭಿಪ್ರಾಯ. ಪಾರಂಪರಿಕವಾದ ತರ್ಕ, ನ್ಯಾಯ, ವೇದವಿದ್ಯೆ ಮುಂತಾದವನ್ನು ಇಲ್ಲಿ ಕಲಿಸುತ್ತಾರೆ. ಅಂದರೆ ಜ್ಞಾನಶಾಖೆಗಳನ್ನು ಅಧ್ಯಯನ ಮಾಡಲಾಗುತ್ತದೆ. ಅದರಲ್ಲಿ ವಿಶೇಷವೇನೂ ಇಲ್ಲ. ಸಂಸ್ಕೃತ ವಿಶ್ವವಿದ್ಯಾನಿಲಯ ಇಲ್ಲದಿದ್ದರೂ ಈ ವಿಷಯಗಳನ್ನು ಆಸಕ್ತರು ಈವರೆಗೆ ಕಲಿಯುತ್ತಿದ್ದರು. ಮೊದಲೆಲ್ಲ ಸಂಸ್ಕೃತದ ಬಿ.ಎ., ಎಂ.ಎ. ಇರಲಿಲ್ಲ. ಸಂಸ್ಕೃತ ವಿವಿಯಿಂದ ಬಿ.ಎ., ಎಂ.ಎ. ಸಾಧ್ಯವಾಗುತ್ತದೆ. ಸಂಸ್ಕೃತ ವಿವಿಯಲ್ಲಿ ಕಲಿತು ಮೇಷ್ಟ್ರಾಗಬಹುದೇ ಹೊರತು ಬೇರೇನೂ ಆಗಲು ಸಾಧ್ಯವಿಲ್ಲ” ಎಂದು ಸುಮಾರು 38 ವರ್ಷಗಳ ಕಾಲ ಸಂಸ್ಕೃತ ಬೋಧಿಸಿರುವ ವೇಣುಗೋಪಾಲ್‌ ಹೇಳಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಬಹಳ ವರ್ಷಗಳಾಗಿವೆ. ಕೆಲಸವೂ ನಡೆಯುತ್ತಿವೆ. ಹೊಸದಾಗಿ ಸ್ಥಾಪನೆಯನ್ನೇನೂ ಮಾಡುತ್ತಿಲ್ಲ. ಆದರೆ ಅದನ್ನು ವಿಸ್ತಾರ ಮಾಡುತ್ತಿದ್ದಾರೆ. ಈಗ ಆಗುತ್ತಿರುವ ಚರ್ಚೆಯನ್ನು ಗಮನಿಸಿದೆ. ಕನ್ನಡಕ್ಕೆ ಆದ್ಯತೆ ಕೊಡಿ ಸಂಸ್ಕೃತ ಆಮೇಲಿಡಿ ಎಂಬ ವಾದ ಸರಿ ಇದೆ” ಎಂದು ಸ್ಪಷ್ಟಪಡಿಸಿದರು.

“ಈಗ ಬರುತ್ತಿರುವ ವಿರೋಧಗಳು ನಿಜವಾಗಿವೆ. ಹಣ ಹಾಗೂ ಜಾಗದ ದುರುಪಯೋಗದ ಪ್ರಶ್ನೆ ಮೇಲೆದ್ದಿರುವುದು ಸರಿಯೇ ಇದೆ. ಸಂಸ್ಕೃತ ವಿವಿ ಈಗ ಇರುವ ಮಾದರಿಯಲ್ಲೇ ಇದ್ದರೆ ನಷ್ಟವೇನೂ ಆಗಲ್ಲ. ಯಾಕೆಂದರೆ ಸಂಸ್ಕೃತ ಓದುತ್ತಿರುವವರೂ ಕಡಿಮೆ ಇದ್ದಾರೆ. ಸಂಸ್ಕೃತದಿಂದ ಉಪಯೋಗ ಪಡೆಯುವವರೂ ಕಡಿಮೆ” ಎಂದು ಹೇಳಿದರು.

“ತುಂಬಾ ಸಂಪ್ರದಾಯಸ್ಥರು ಸಂಸ್ಕೃತ ಓದುತ್ತಾರೆ. ತ್ರಿಮಸ್ಥರು ಬೇರೆ ಬೇರೆ ಸಂಸ್ಕೃತ ಕಾಲೇಜುಗಳನ್ನು ರೂಪಿಸಿಕೊಂಡು ಅವರಿಗೆ ಸಂಬಂಧಿಸಿದ್ದನ್ನು ಮಾತ್ರ ಬೋಧಿಸುತ್ತಾರೆ. ಇದೆಲ್ಲ ಮಾಮೂಲಿಯಾಗಿ ನಡೆದುಕೊಂಡು ಬಂದಿದೆ. ಇದರಿಂದ ಯಾರಿಗೇನೂ ತೊಂದರೆಯಾಗಿರಲಿಲ್ಲ. ಆದರೆ ಒಂದು ಸರ್ಕಾರ ಇಷ್ಟು ದೊಡ್ಡ ಪ್ರಮಾಣದ ದುಡ್ಡು ಕೊಟ್ಟು, ಜಾಗ ಕೊಟ್ಟು ಏನೋ ಮಾಡುತ್ತೇನೆ ಎನ್ನುವುದು ಸದ್ಯದ ಸಂದರ್ಭದಲ್ಲಿ ತಪ್ಪಾಗಿದೆ” ಎಂದು ಅಭಿಪ್ರಾಯಪಟ್ಟರು.

ಸಂಶೋಧನೆಗಳು ಮಗ್ಗುಮ್ಮಾಗಿ ನಡೆಯುತ್ತದೆ. ಇದಕ್ಕೆ ತಕರಾರು ತೆಗೆಯಬೇಕಿಲ್ಲ. ಕೆಲವರು ಸಂಶೋಧನೆಯಲ್ಲೇ ತೊಡಗಿಸಿಕೊಂಡು ಅದೇ ಕೆಲಸವನ್ನು ಮಾಡುತ್ತಿರುತ್ತಾರೆ. ಬೇರೆಯವರು ಆ ಕಡೆ ಹೋಗುವುದೂ ಇಲ್ಲ. ಹೋಗಬೇಕಾಗಿಯೂ ಇಲ್ಲ” ಎಂದು ವಿವರಿಸಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯವನ್ನು ವಿರೋಧಿಸುವುದಕ್ಕಿಂತ ವಿಶ್ವವಿದ್ಯಾನಿಲಯಕ್ಕೆ ಇಷ್ಟು ಜಾಗ ಕೊಟ್ಟು, ದುಡ್ಡು ಕೊಡುತ್ತಿರುವುದನ್ನು ವಿರೋಧಿಸಬೇಕು ಎನ್ನುವುದು ಸರಿ. ಸಂಸ್ಕೃತ ಸಂಶೋಧನೆಗೆ ಹಣ ಕೊಟ್ಟಿಲ್ಲ. ಸಂಶೋಧನೆಗೆ ಹಣ ಕೊಡಲಿ. ಈ ಹಿಂದಿನ ವಿದ್ವಾಂಸರು ತಮ್ಮ ವೈಯಕ್ತಿಕ ಖರ್ಚು ವೆಚ್ಚದಲ್ಲಿ ರೂಪಿಸಿದ ಸಂಸ್ಕೃತ ಕೃತಿಗಳನ್ನು ಓದುತ್ತಾ ಬಂದಿದ್ದೇವೆ. ಹೀಗಾಗಿ ಹೊಸ ಸಂಶೋಧನೆಗಳಿಗೆ ಸರ್ಕಾರ ಹಣ ನೀಡಬೇಕು” ಎಂದು ಆಗ್ರಹಿಸಿದರು.

ಕೊನೆಯದಾಗಿ, “ಇಷ್ಟೆಲ್ಲ ದೊಡ್ಡ ಮಟ್ಟದಲ್ಲಿ ಹಣ ಕೊಟ್ಟು, ಸಂಸ್ಕೃತ ವಿವಿಯನ್ನು ಬೃಹತ್ತಾಗಿ ರೂಪಿಸುತ್ತೇವೆ ಎಂದು ಭಾವಿಸೋಣ. ಇಷ್ಟಾದರೂ ಸಂಸ್ಕೃತ ಜನಭಾಷೆಯಾಗಿ ರೂಪುಗೊಳ್ಳಲು ಸಾಧ್ಯವೆ?” ಎಂದು ‘ನಾನುಗೌರಿ.ಕಾಂ’ ಪ್ರಶ್ನಿಸಿತು. ಇದಕ್ಕೆ ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ ವೇಣುಗೋಪಾಲ್‌ ಅವರು, “ಖಂಡಿತವಾಗಿಯೂ ಜನಭಾಷೆಯಾಗಿ ಸಂಸ್ಕೃತ ರೂಪುಗೊಳ್ಳುವುದಿಲ್ಲ. ಜನಭಾಷೆಯಾಗಿ ಮಾಡುವ ಅಗತ್ಯವೂ ಇಲ್ಲ. ಇಷ್ಟವಿದ್ದರೆ ಓದಿಕೊಳ್ಳಬಹುದು. ನನಗೆ ಇಷ್ಟವಿದೆ ಓದಿಕೊಳ್ಳುತ್ತೇನೆ. ನನಗೊಂದು ವಿಷಯ ಬೇಕಾದರೆ ಪುಸ್ತಕ ತಿರುವು ಹಾಕಿ ರೆಫರ್‌ ಮಾಡುತ್ತೇನೆ. ಅದು ಬಿಟ್ಟು ಸಂಸ್ಕೃತವನ್ನು ಇಂಜೆಕ್ಟ್‌ ಮಾಡಲು ಸಾಧ್ಯವಿಲ್ಲ- ನಿನಗೊಂದು ಡೋಸ್, ಸೆಕೆಂಡ್ ಡೋಸ್‌ ಎನ್ನಲು ಸಾಧ್ಯವಿಲ್ಲ” ಎಂದರು.


ಇದನ್ನೂ ಓದಿರಿ: ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಂಗೂ ಅನ್ನ ಕೊಟ್ಟ ತಪ್ಪಿಗೆ ಸಂಸ್ಕೃತಮಾತೆ ಪಶ್ವಾತ್ತಾಪ ಪಡುತ್ತಿರಬಹುದು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....