Homeಕರ್ನಾಟಕಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಸಂಸ್ಕೃತ ಕಲಿತು ಮೇಷ್ಟ್ರಾಗಬೇಕಷ್ಟೇ, ಬೇರೆ ಅವಕಾಶಗಳಿಲ್ಲ: ಸಂಸ್ಕೃತ ಪ್ರಾಧ್ಯಾಪಕ ವೇಣುಗೋಪಾಲ್

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ಇಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
- Advertisement -

“ಸಂಸ್ಕೃತ ಕಲಿತು ಸಂಸ್ಕೃತ ಮೇಷ್ಟ್ರಾಗಬೇಕೇ ಹೊರತು, ಬೇರೆ ಅವಕಾಶಗಳಿಲ್ಲ” ಎಂದು ನಿವೃತ್ತ ಸಂಸ್ಕೃತ ಪ್ರಾಧ್ಯಾಪಕ ಎಚ್‌.ವಿ.ವೇಣುಗೋಪಾಲ್‌ ತಿಳಿಸಿದ್ದಾರೆ.

ಎಚ್‌.ವಿ.ವೇಣುಗೋಪಾಲ್ ಅವರು ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದವರು. ಕಾಲೇಜಿನ ಪ್ರಾಂಶುಪಾಲರೂ ಆಗಿದ್ದರು. ಸಂಸ್ಕೃತ ವಿವಿ ವಿವಾದಕ್ಕೆ ಸಂಬಂಧಿಸಿದಂತೆ ವೇಣುಗೋಪಾಲ್ ಅವರು ತಮ್ಮ ಅಭಿಪ್ರಾಯಗಳನ್ನು ‘ನಾನುಗೌರಿ.ಕಾಂ’ ಹಾಗೂ ‘ನ್ಯಾಯಪಥ’ ವಾರಪತ್ರಿಕೆಯೊಂದಿಗೆ ಹಂಚಿಕೊಂಡರು.

“ಸಂಸ್ಕೃತವನ್ನು ಜ್ಞಾನಕ್ಕಾಗಿ ಕಲಿಯುತ್ತಾರಷ್ಟೇ. ಅದು ಒಂದೇ ಚಾನೆಲ್‌. ಒಂದು ಪೈಪ್‌ನೊಳಗೆ ಹಾಕಿ ಹುಡುಗರನ್ನು ಕಳಿಸಿದ ಹಾಗೆ ಆಗುತ್ತದೆ. ಈ ಕಡೆಯಿಂದ ಹೋದರೆ, ಆ ಕಡೆಯಿಂದ ಹೊರಗೆ ಬರಬೇಕಾಗುತ್ತದೆಯಷ್ಟೇ. ಇನ್ನೊಂದು ದಾರಿ ಇಲ್ಲವೇ ಇಲ್ಲ” ಎಂದರು.

“ಮೇಷ್ಟ್ರಾಗದಿದ್ದರೆ ಸಂಶೋಧನೆ ಮಾಡಿ, ಪೇಪರ್‌ ಪಬ್ಲಿಷ್ ಮಾಡಬಹುದು. ಆ ಮೇಲೆ ಪುಸ್ತಕ ಬರೆದು ಪಬ್ಲಿಷ್ ಮಾಡಿ, ಎಲ್ಲ ಜನರಿಗೂ ಹಂಚಬೇಕು. ಯಾರು ಕೊಂಡುಕೊಳ್ಳುತ್ತಾರೆ? ದೇವರ ಬಗ್ಗೆ, ವ್ರತದ ಬಗ್ಗೆ ಬರೆದರೆ ಹೆಚ್ಚು ಜನ ಕೊಂಡುಕೊಳ್ಳುತ್ತಾರೆ. ಬ್ರಹ್ಮಸೂತ್ರದಲ್ಲಿ ಹೀಗೆ ಹೇಳಿದೆ, ಶಂಕರಚಾರ್ಯರು ಹೀಗೆ ಹೇಳಿದ್ದಾರೆ ಎಂದು ಬರೆದರೆ ನಾಲ್ಕು ಜನ ಶಂಕರರು, ನಾಲ್ಕು ಜನ ಮಾಧ್ವರು ಕೊಂಡುಕೊಳ್ಳುತ್ತಾರಷ್ಟೇ” ಎಂದು ಪ್ರತಿಕ್ರಿಯಿಸಿದರು.

“ಸಾಮಾನ್ಯ ಜನರು, ಸಂಸ್ಕೃತ ಗೊತ್ತಿಲ್ಲದವರು ತಿಳಿದಿರುವಂತೆ ಸಂಸ್ಕೃತ ವಿವಿಯಲ್ಲಿ ಮಂತ್ರ ಕಲಿಸುತ್ತಾರೆ, ಪೂಜೆ ಮಾಡೋದನ್ನು ಕಲಿಸುತ್ತಾರೆ ಎಂಬುದು ತಪ್ಪು ಅಭಿಪ್ರಾಯ. ಪಾರಂಪರಿಕವಾದ ತರ್ಕ, ನ್ಯಾಯ, ವೇದವಿದ್ಯೆ ಮುಂತಾದವನ್ನು ಇಲ್ಲಿ ಕಲಿಸುತ್ತಾರೆ. ಅಂದರೆ ಜ್ಞಾನಶಾಖೆಗಳನ್ನು ಅಧ್ಯಯನ ಮಾಡಲಾಗುತ್ತದೆ. ಅದರಲ್ಲಿ ವಿಶೇಷವೇನೂ ಇಲ್ಲ. ಸಂಸ್ಕೃತ ವಿಶ್ವವಿದ್ಯಾನಿಲಯ ಇಲ್ಲದಿದ್ದರೂ ಈ ವಿಷಯಗಳನ್ನು ಆಸಕ್ತರು ಈವರೆಗೆ ಕಲಿಯುತ್ತಿದ್ದರು. ಮೊದಲೆಲ್ಲ ಸಂಸ್ಕೃತದ ಬಿ.ಎ., ಎಂ.ಎ. ಇರಲಿಲ್ಲ. ಸಂಸ್ಕೃತ ವಿವಿಯಿಂದ ಬಿ.ಎ., ಎಂ.ಎ. ಸಾಧ್ಯವಾಗುತ್ತದೆ. ಸಂಸ್ಕೃತ ವಿವಿಯಲ್ಲಿ ಕಲಿತು ಮೇಷ್ಟ್ರಾಗಬಹುದೇ ಹೊರತು ಬೇರೇನೂ ಆಗಲು ಸಾಧ್ಯವಿಲ್ಲ” ಎಂದು ಸುಮಾರು 38 ವರ್ಷಗಳ ಕಾಲ ಸಂಸ್ಕೃತ ಬೋಧಿಸಿರುವ ವೇಣುಗೋಪಾಲ್‌ ಹೇಳಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಿ ಬಹಳ ವರ್ಷಗಳಾಗಿವೆ. ಕೆಲಸವೂ ನಡೆಯುತ್ತಿವೆ. ಹೊಸದಾಗಿ ಸ್ಥಾಪನೆಯನ್ನೇನೂ ಮಾಡುತ್ತಿಲ್ಲ. ಆದರೆ ಅದನ್ನು ವಿಸ್ತಾರ ಮಾಡುತ್ತಿದ್ದಾರೆ. ಈಗ ಆಗುತ್ತಿರುವ ಚರ್ಚೆಯನ್ನು ಗಮನಿಸಿದೆ. ಕನ್ನಡಕ್ಕೆ ಆದ್ಯತೆ ಕೊಡಿ ಸಂಸ್ಕೃತ ಆಮೇಲಿಡಿ ಎಂಬ ವಾದ ಸರಿ ಇದೆ” ಎಂದು ಸ್ಪಷ್ಟಪಡಿಸಿದರು.

“ಈಗ ಬರುತ್ತಿರುವ ವಿರೋಧಗಳು ನಿಜವಾಗಿವೆ. ಹಣ ಹಾಗೂ ಜಾಗದ ದುರುಪಯೋಗದ ಪ್ರಶ್ನೆ ಮೇಲೆದ್ದಿರುವುದು ಸರಿಯೇ ಇದೆ. ಸಂಸ್ಕೃತ ವಿವಿ ಈಗ ಇರುವ ಮಾದರಿಯಲ್ಲೇ ಇದ್ದರೆ ನಷ್ಟವೇನೂ ಆಗಲ್ಲ. ಯಾಕೆಂದರೆ ಸಂಸ್ಕೃತ ಓದುತ್ತಿರುವವರೂ ಕಡಿಮೆ ಇದ್ದಾರೆ. ಸಂಸ್ಕೃತದಿಂದ ಉಪಯೋಗ ಪಡೆಯುವವರೂ ಕಡಿಮೆ” ಎಂದು ಹೇಳಿದರು.

“ತುಂಬಾ ಸಂಪ್ರದಾಯಸ್ಥರು ಸಂಸ್ಕೃತ ಓದುತ್ತಾರೆ. ತ್ರಿಮಸ್ಥರು ಬೇರೆ ಬೇರೆ ಸಂಸ್ಕೃತ ಕಾಲೇಜುಗಳನ್ನು ರೂಪಿಸಿಕೊಂಡು ಅವರಿಗೆ ಸಂಬಂಧಿಸಿದ್ದನ್ನು ಮಾತ್ರ ಬೋಧಿಸುತ್ತಾರೆ. ಇದೆಲ್ಲ ಮಾಮೂಲಿಯಾಗಿ ನಡೆದುಕೊಂಡು ಬಂದಿದೆ. ಇದರಿಂದ ಯಾರಿಗೇನೂ ತೊಂದರೆಯಾಗಿರಲಿಲ್ಲ. ಆದರೆ ಒಂದು ಸರ್ಕಾರ ಇಷ್ಟು ದೊಡ್ಡ ಪ್ರಮಾಣದ ದುಡ್ಡು ಕೊಟ್ಟು, ಜಾಗ ಕೊಟ್ಟು ಏನೋ ಮಾಡುತ್ತೇನೆ ಎನ್ನುವುದು ಸದ್ಯದ ಸಂದರ್ಭದಲ್ಲಿ ತಪ್ಪಾಗಿದೆ” ಎಂದು ಅಭಿಪ್ರಾಯಪಟ್ಟರು.

ಸಂಶೋಧನೆಗಳು ಮಗ್ಗುಮ್ಮಾಗಿ ನಡೆಯುತ್ತದೆ. ಇದಕ್ಕೆ ತಕರಾರು ತೆಗೆಯಬೇಕಿಲ್ಲ. ಕೆಲವರು ಸಂಶೋಧನೆಯಲ್ಲೇ ತೊಡಗಿಸಿಕೊಂಡು ಅದೇ ಕೆಲಸವನ್ನು ಮಾಡುತ್ತಿರುತ್ತಾರೆ. ಬೇರೆಯವರು ಆ ಕಡೆ ಹೋಗುವುದೂ ಇಲ್ಲ. ಹೋಗಬೇಕಾಗಿಯೂ ಇಲ್ಲ” ಎಂದು ವಿವರಿಸಿದರು.

“ಸಂಸ್ಕೃತ ವಿಶ್ವವಿದ್ಯಾನಿಲಯವನ್ನು ವಿರೋಧಿಸುವುದಕ್ಕಿಂತ ವಿಶ್ವವಿದ್ಯಾನಿಲಯಕ್ಕೆ ಇಷ್ಟು ಜಾಗ ಕೊಟ್ಟು, ದುಡ್ಡು ಕೊಡುತ್ತಿರುವುದನ್ನು ವಿರೋಧಿಸಬೇಕು ಎನ್ನುವುದು ಸರಿ. ಸಂಸ್ಕೃತ ಸಂಶೋಧನೆಗೆ ಹಣ ಕೊಟ್ಟಿಲ್ಲ. ಸಂಶೋಧನೆಗೆ ಹಣ ಕೊಡಲಿ. ಈ ಹಿಂದಿನ ವಿದ್ವಾಂಸರು ತಮ್ಮ ವೈಯಕ್ತಿಕ ಖರ್ಚು ವೆಚ್ಚದಲ್ಲಿ ರೂಪಿಸಿದ ಸಂಸ್ಕೃತ ಕೃತಿಗಳನ್ನು ಓದುತ್ತಾ ಬಂದಿದ್ದೇವೆ. ಹೀಗಾಗಿ ಹೊಸ ಸಂಶೋಧನೆಗಳಿಗೆ ಸರ್ಕಾರ ಹಣ ನೀಡಬೇಕು” ಎಂದು ಆಗ್ರಹಿಸಿದರು.

ಕೊನೆಯದಾಗಿ, “ಇಷ್ಟೆಲ್ಲ ದೊಡ್ಡ ಮಟ್ಟದಲ್ಲಿ ಹಣ ಕೊಟ್ಟು, ಸಂಸ್ಕೃತ ವಿವಿಯನ್ನು ಬೃಹತ್ತಾಗಿ ರೂಪಿಸುತ್ತೇವೆ ಎಂದು ಭಾವಿಸೋಣ. ಇಷ್ಟಾದರೂ ಸಂಸ್ಕೃತ ಜನಭಾಷೆಯಾಗಿ ರೂಪುಗೊಳ್ಳಲು ಸಾಧ್ಯವೆ?” ಎಂದು ‘ನಾನುಗೌರಿ.ಕಾಂ’ ಪ್ರಶ್ನಿಸಿತು. ಇದಕ್ಕೆ ಸ್ಪಷ್ಟವಾಗಿ ಪ್ರತಿಕ್ರಿಯೆ ನೀಡಿದ ವೇಣುಗೋಪಾಲ್‌ ಅವರು, “ಖಂಡಿತವಾಗಿಯೂ ಜನಭಾಷೆಯಾಗಿ ಸಂಸ್ಕೃತ ರೂಪುಗೊಳ್ಳುವುದಿಲ್ಲ. ಜನಭಾಷೆಯಾಗಿ ಮಾಡುವ ಅಗತ್ಯವೂ ಇಲ್ಲ. ಇಷ್ಟವಿದ್ದರೆ ಓದಿಕೊಳ್ಳಬಹುದು. ನನಗೆ ಇಷ್ಟವಿದೆ ಓದಿಕೊಳ್ಳುತ್ತೇನೆ. ನನಗೊಂದು ವಿಷಯ ಬೇಕಾದರೆ ಪುಸ್ತಕ ತಿರುವು ಹಾಕಿ ರೆಫರ್‌ ಮಾಡುತ್ತೇನೆ. ಅದು ಬಿಟ್ಟು ಸಂಸ್ಕೃತವನ್ನು ಇಂಜೆಕ್ಟ್‌ ಮಾಡಲು ಸಾಧ್ಯವಿಲ್ಲ- ನಿನಗೊಂದು ಡೋಸ್, ಸೆಕೆಂಡ್ ಡೋಸ್‌ ಎನ್ನಲು ಸಾಧ್ಯವಿಲ್ಲ” ಎಂದರು.


ಇದನ್ನೂ ಓದಿರಿ: ನಾರಾಯಣ ಗುರುಗಳ ಟ್ಯಾಬ್ಲೊ ನಿರಾಕರಣೆ ವಿವಾದ: ಸುಳ್ಳು ಹೇಳಿದ ಸಚಿವ ಸುನಿಲ್ ಕುಮಾರ್‌?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಿಂಗೂ ಅನ್ನ ಕೊಟ್ಟ ತಪ್ಪಿಗೆ ಸಂಸ್ಕೃತಮಾತೆ ಪಶ್ವಾತ್ತಾಪ ಪಡುತ್ತಿರಬಹುದು.

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...