Homeಕರ್ನಾಟಕ'ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ' | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

- Advertisement -
- Advertisement -

ಬೆಂಗಳೂರಿನ ಬೀದಿ ವ್ಯಾಪಾರಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳ ಹಿನ್ನಲೆ, ವ್ಯಾಪಾರಿಗಳು ತಮ್ಮ ಹಕ್ಕಿಗಾಗಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಬೆಳಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ ಎಂದು ಪ್ರಶ್ನಿಸಿರುವ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ಹೇಳಿದ್ದು, ಬೀದಿ ವ್ಯಾಪಾರಿಗಳ ಎತ್ತಂಗಡಿ ನಿಲ್ಲಿಸಿ ಎಂದು ಆಗ್ರಹಿಸಿದೆ. ಬೀದಿ ಬದಿ ವ್ಯಾಪಾರಿಗಳಿಂದ

“ಬೆಂಗಳೂರು ನಗರದ ಬೀದಿ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ನಮ್ಮ ಹಕ್ಕಿಗಾಗಿ ದಿನಾಂಕ ಜೂನ್ 24ರ ಮಂಗಳವಾರ, ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಗರದ ಪ್ರಮುಖ ಮಾರುಕಟ್ಟೆಗಳಾದ ಕೆ.ಆರ್.ಮಾರುಕಟ್ಟೆ , ಜಯನಗರ ೪ ನೇ ಬಡಾವಣೆ , ವಿಜಯನಗರ , ಶಿವಾಜಿನಗರ, ಯೆಶವಂತಪುರ , ಗಾಂಧೀ ಬಜಾರ್ ಹಾಗು ಇನ್ನು ಹಲವು ಮಾರುಕಟ್ಟೆಗಳಿಂದ ಸಾವಿರಕ್ಕೂ ಹೆಚ್ಚು ವ್ಯಾಪಾರಿಗಳು ಮಂಗಳವಾರ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ಬೀದಿ ವ್ಯಾಪಾರಿಗಳ ಸಂಘ ಹೇಳಿದೆ.

“ಕರ್ನಾಟಕದ ಆರ್ಥಿಕತೆಯಲ್ಲಿ ಬೀದಿಬದಿ ವ್ಯಾಪಾರಸ್ಥರು ಪ್ರಮುಖ ಕೊಡುಗೆಯನ್ನು ನೀಡುತ್ತಲೆ ಇದ್ದಾರೆ. ರೈತರಿಂದ, ಹೋಲ್‌ಸೇಲ್ ವಸ್ತುಗಳನ್ನು ಪಡೆದು ನಮ್ಮ ನಗರಗಳಲ್ಲಿ ಅಗತ್ಯ ವಸ್ತುಗಳು ಹಾಗೂ ಸೇವೆಯನ್ನು ಕೈಗೆಟಕುವ ಬೆಲೆಯಲ್ಲಿ ನೀಡುತ್ತಾ, ಬೀದಿ ವ್ಯಾಪಾರ ರಾಜ್ಯದ ಆರ್ಥಿಕ ಆರೋಗ್ಯದ ಜೊತೆಗೆ ಹೆಣೆದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರದ ನಡೆಯು ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಧಕ್ಕೆಯನ್ನುಂಟು ಮಾಡಲು ಹೊರಟಿದೆ” ಎಂದು ಸಂಘ ಹೇಳಿದೆ.

“ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳು ರಸ್ತೆ ಬದಿ / ಫುಟ್‌ಪಾತ್ ಮೇಲೆ ವ್ಯಾಪಾರ ಮಾಡಬಾರದು, ವೆಂಡಿಂಗ್ ಜೋನ್‌ನಲ್ಲಿ ಮಾತ್ರ ವ್ಯಾಪಾರ ಮಾಡಬೇಕು ಅಥವಾ ದಿನವಿಡೀ ಗಾಡಿಗಳನ್ನು ತಳ್ಳಿಕೊಂಡು ವ್ಯಾಪಾರ ಮಾಡಬೇಕು ಹಾಗೂ ಗುರುತಿನ ಚೀಟಿ ಇಲ್ಲದವರಿಗೆ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮದಲ್ಲಿ ಹೇಳಿಕೆಯನ್ನು ನೀಡಿದ್ದಾರೆ” ಎಂದು ಸಂಘ ಹೇಳಿದೆ.

“ಫುಟ್ಪಾತ್ತ್ ಅಥವಾ ಬೀದಿ ಬದಿ ಬಿಟ್ಟು ಬೇರೆ ಯಾವ ಜಾಗದಲ್ಲಿ ವ್ಯಾಪಾರ ಮಾಡಲು ಸಾಧ್ಯ? ಇದು ಬೀದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ, 2014ರ ಉಲ್ಲಂಘನೆ. ಈ ಹೇಳಿಕೆಯಿಂದ ಅಧಿಕಾರಿಗಳು ಬೀದಿ ವ್ಯಾಪಾರಿಗಳ ಮೇಲೆ ಹೇರುವ ಕಿರುಕುಳ ಹೆಚ್ಚಾಗಿದ್ದು, ಬೀದಿ ವ್ಯಾಪಾರಿಗಳು ಆತಂಕ್ಕೊಳಗಾಗಿದ್ದಾರೆ” ಎಂದು ಸಂಘವು ಹೇಳಿದೆ.

“ಅಕ್ಟೋಬರ್ 2024ರಿಂದ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದು ಫೆಬ್ರವರಿ 2025 ಮುಕ್ತಾಯಗೊಂಡಿದ್ದು, ಸುಮಾರು 34,000 ಬೀದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಮತ್ತು ಇತರೆ ಸಾವಿರಾರು ವ್ಯಾಪಾರಿಗಳನ್ನು ಸಮೀಕ್ಷೆಯಿಂದ ಸ್ವೀಕರಿಸಲಾಗದ ವಿವಿಧ ಕಾರಣಗಳಿಂದಾಗಿ ಹೊರಗಿಡಲಾಗಿದೆ. ಪಿ.ಎಂ-ಸ್ವಾನಿಧಿ ಸಾಲವನ್ನು 70,000ಕೂ ಹೆಚ್ಚು ಜನರಿಗೆ ನೀಡಿಲಾಗಿದ್ದು, ಕನಿಷ್ಠ 70,000 ಬೀದಿ ವ್ಯಾಪಾರಿಗಳು ಸಮೀಕ್ಷೆಯಲ್ಲಿ ಒಳಗೊಂಡಿರಬೇಕಲ್ಲವೇ?” ಎಂದು ಸಂಘವು ಪ್ರಶ್ನಿಸಿದೆ.

“ಬೆಂಗಳೂರಿನಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನ ಬೀದಿ ವ್ಯಾಪಾರದ ಮೇಲೆ ಅವಲಂಬಿತರಾಗಿದ್ದು, ಸಮೀಕ್ಷೆಯಲ್ಲಿ ಒಳಗೊಳ್ಳದ ಬೀದಿ ವ್ಯಾಪಾರಿಗಳು ಯಾವುದೇ ರೀತಿಯ ಕಾನೂನಿನ ರಕ್ಷಣೆ ಇಲ್ಲದಂತೆ ಬೇಕು ಅಂತಲೇ ಹೊರದಬ್ಬಲಾಗಿದೆ. ಜೊತೆಗೆ ಸಮೀಕ್ಷೆಯಲ್ಲಿ ಒಳಗೊಂಡ ವ್ಯಾಪಾರಿಗಳಿಗೆ ಇದುವರೆಗೂ ಗುರುತಿನ ಚೀಟಿ ಅಥವಾ ವ್ಯಾಪಾರದ ಪ್ರಮಾಣ ಪತ್ರವನ್ನು ವಿತರಿಸಿರುವುದಿಲ್ಲ” ಎಂದು ಸಂಘವು ಹೇಳಿದೆ.

ಅಷ್ಟೆ ಅಲ್ಲದೆ, ಚರ್ಚ್ ಸ್ಟ್ರೀಟ್‌ನಲ್ಲಿ ಕಳೆದ ವಾರ ಬಿಬಿಎಂಪಿ ಅಧಿಕಾರಿಗಳು ಕಾನೂನು ಬಾಹಿರವಾಗಿ ಬೀದಿ ವ್ಯಾಪಾರಿಗಳ ಸರಕನ್ನು ವಶಪಡಿಸಿಕೊಂಡು ಇನ್ನು ಸಹ ಹಿಂತಿರಿಗಿಸಿಲ್ಲ ಎಂದು ಸಂಘವು ಹೇಳಿದ್ದು, ಜಯನಗರ ೯ ನೇ ಬಡಾವಣೆ ಹಾಗು ಸಾರಕ್ಕಿ ಮಾರುಕಟ್ಟೆಯಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ವ್ಯಾಪಾರಿಗಳ ಸಾವಿರಾರು ರೂಪಾಯಿ ಮೊತ್ತದ ಹಣ್ಣನ್ನು ಕದ್ದಿದ್ದಾರೆ ಎಂದು ಹೇಳಿದೆ.

ಹಲವಾರು ಮಾರುಕಟ್ಟೆಗಳಲ್ಲಿ ಶೌಚಾಲಯ, ನೀರು, ಬೆಳಕು ಮುಂತಾದ ಮೂಲಸೌಕರ್ಯವಿಲ್ಲ. ಬೀದಿ ವ್ಯಾಪಾರಿಗಳಿಗೆ ಯಾವುದೇ ಸಾಮಾಜಿಕ ಭದ್ರತೆಯಿಲ್ಲ ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ. ಈ ಹಿನ್ನಲೆಯಲ್ಲಿ ವ್ಯಾಪಾರಿಗಳ ಘನತೆಗಾಗಿ, ಬೀದಿ ವ್ಯಾಪಾರದ ಹಕ್ಕಿಗಾಗಿ, ಮಾರುಕಟ್ಟೆಗಳಲ್ಲಿ ಮೂಲಭೂತ ಸೌಕರ್ಯಕ್ಕಾಗಿ, ಸಾಮಾಜಿಕ ಭಾದ್ರತೆಗಾಗಿ ಈ ಹೋರಾಟವನ್ನು ನಡೆಸುತ್ತಿರುವುದಾಗಿ ಬೀದಿಬದಿ ವ್ಯಾಪಾರಿಗಳ ಸಂಘವು ಹೇಳಿದೆ. ಬೀದಿ ಬದಿ ವ್ಯಾಪಾರಿಗಳಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...

‘ಲ್ಯಾಂಡ್ ಲಾರ್ಡ್’ ತೆರಿಗೆ ವಿನಾಯಿತಿಗೆ ಡಿಎಸ್ಎಸ್ ಮನವಿ: ಒಪ್ಪಿದ ಸಿಎಂ ಸಿದ್ದರಾಮಯ್ಯ

ಸಾಮಾಜಿಕ ನ್ಯಾಯ ಮತ್ತು ಸಂವಿಧಾನಾತ್ಮಕ ಮೌಲ್ಯಗಳನ್ನು ಪ್ರತಿಪಾದಿಸುವ 'ಲ್ಯಾಂಡ್ ಲಾರ್ಡ್' ಕನ್ನಡ ಸಿನಿಮಾಗೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುವಂತೆ ಡಿಎಸ್ಎಸ್ ಅಂಬೇಡ್ಕರ್ ವಾದ ಮತ್ತು ದಲಿತ ಹೋರಾಟಗಾರರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ...

‘ಮೋದಿ ಅಂತಿಮವಾಗಿ ಶರಣಾಗಿದ್ದಾರೆ’: ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಎಲ್ಲಾ ಒಪ್ಪಂದಗಳ ಪಿತಾಮಹನಾಗಲು ಸಾಧ್ಯವಿಲ್ಲ: ಕಾಂಗ್ರೆಸ್

ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇಂಡೋ-ಯುಎಸ್ ವ್ಯಾಪಾರ ಒಪ್ಪಂದ ಘೋಷಣೆಗೆ ಸಂಬಂಧಿಸಿದಂತೆ ಸೋಮವಾರ ರಾತ್ರಿ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್, ಪ್ರಧಾನಿ ನರೇಂದ್ರ ಮೋದಿ "ಅಂತಿಮವಾಗಿ ಶರಣಾಗಿದ್ದಾರೆ" ಮತ್ತು ಈ...

ಎಪ್‌ಸ್ಟೀನ್ ಜೊತೆಗಿನ ಸಂಪರ್ಕ ಬಹಿರಂಗ : ಲೇಬರ್ ಪಕ್ಷಕ್ಕೆ ಲಾರ್ಡ್ ಮ್ಯಾಂಡೆಲ್ಸನ್ ರಾಜೀನಾಮೆ

ಅಮೆರಿಕದ ಮಕ್ಕಳ ಲೈಂಗಿಕ ಹಗರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ದಾಖಲೆಗಳು ಬಹಿರಂಗಗೊಂಡ ಬೆನ್ನಲ್ಲೇ ಬ್ರಿಟನ್ ರಾಜಕಾರಣಿ ಲಾರ್ಡ್ ಪೀಟರ್ ಮ್ಯಾಂಡೆಲ್ಸನ್ ಲೇಬರ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಎಪ್‌ಸ್ಟೀನ್‌ ಜೊತೆಗಿನ ಸಂಪರ್ಕ...

ಭಾರತದ ಕಾರ್ಯತಂತ್ರದ ಸ್ವಾಯತ್ತತೆಗೆ ಏನಾಯಿತು; ಅಮೆರಿಕದೊಂದಿಗಿನ ವ್ಯಾಪಾರ ಒಪ್ಪಂದದ ಕುರಿತು ಬಿಜೆಪಿಯನ್ನು ಪ್ರಶ್ನಿಸಿದ ಮನೀಶ್ ತಿವಾರಿ

ಮಂಗಳವಾರ ಅಮೆರಿಕ ಜೊತೆಗಿನ ಹೊಸ ವ್ಯಾಪಾರ ಒಪ್ಪಂದದ ಬಗ್ಗೆ ಕಾಂಗ್ರೆಸ್ ಸಂಸದ ಮನೀಶ್ ತಿವಾರಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು ಮತ್ತು ವ್ಯಾಪಾರ ಒಪ್ಪಂದಕ್ಕಾಗಿ ನವದೆಹಲಿ ತನ್ನ ಕಾರ್ಯತಂತ್ರದ ಸ್ವಾಯತ್ತತೆಯನ್ನು ತ್ಯಾಗ ಮಾಡಿದೆಯೇ ಎಂದು...

ಖಾಸಗಿ ಜಾಗದಲ್ಲಿ ಪ್ರಾರ್ಥನಾ ಸಭೆ ನಡೆಸಲು ಅನುಮತಿ ಅಗತ್ಯವಿಲ್ಲ : ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ ಖಾಸಗಿ ಆಸ್ತಿಯಲ್ಲಿ ಧಾರ್ಮಿಕ ಪ್ರಾರ್ಥನಾ ಸಭೆ ನಡೆಸಲು ಯಾವುದೇ ಅನುಮತಿ ಅಗತ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. ಆದರೆ, ಕಾರ್ಯಕ್ರಮಕ್ಕೆ ಸಾರ್ವಜನಿಕ ರಸ್ತೆ ಅಥವಾ ಸಾರ್ವಜನಿಕ ಆಸ್ತಿ ಬಳಸಿಕೊಳ್ಳುವುದಾದರೆ ಕನಿಷ್ಠ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....