Homeಕರ್ನಾಟಕ'ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ' | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

- Advertisement -
- Advertisement -

ಬೆಂಗಳೂರಿನ ಬೀದಿ ವ್ಯಾಪಾರಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳ ಹಿನ್ನಲೆ, ವ್ಯಾಪಾರಿಗಳು ತಮ್ಮ ಹಕ್ಕಿಗಾಗಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಬೆಳಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ ಎಂದು ಪ್ರಶ್ನಿಸಿರುವ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ಹೇಳಿದ್ದು, ಬೀದಿ ವ್ಯಾಪಾರಿಗಳ ಎತ್ತಂಗಡಿ ನಿಲ್ಲಿಸಿ ಎಂದು ಆಗ್ರಹಿಸಿದೆ. ಬೀದಿ ಬದಿ ವ್ಯಾಪಾರಿಗಳಿಂದ

“ಬೆಂಗಳೂರು ನಗರದ ಬೀದಿ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ನಮ್ಮ ಹಕ್ಕಿಗಾಗಿ ದಿನಾಂಕ ಜೂನ್ 24ರ ಮಂಗಳವಾರ, ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಗರದ ಪ್ರಮುಖ ಮಾರುಕಟ್ಟೆಗಳಾದ ಕೆ.ಆರ್.ಮಾರುಕಟ್ಟೆ , ಜಯನಗರ ೪ ನೇ ಬಡಾವಣೆ , ವಿಜಯನಗರ , ಶಿವಾಜಿನಗರ, ಯೆಶವಂತಪುರ , ಗಾಂಧೀ ಬಜಾರ್ ಹಾಗು ಇನ್ನು ಹಲವು ಮಾರುಕಟ್ಟೆಗಳಿಂದ ಸಾವಿರಕ್ಕೂ ಹೆಚ್ಚು ವ್ಯಾಪಾರಿಗಳು ಮಂಗಳವಾರ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ಬೀದಿ ವ್ಯಾಪಾರಿಗಳ ಸಂಘ ಹೇಳಿದೆ.

“ಕರ್ನಾಟಕದ ಆರ್ಥಿಕತೆಯಲ್ಲಿ ಬೀದಿಬದಿ ವ್ಯಾಪಾರಸ್ಥರು ಪ್ರಮುಖ ಕೊಡುಗೆಯನ್ನು ನೀಡುತ್ತಲೆ ಇದ್ದಾರೆ. ರೈತರಿಂದ, ಹೋಲ್‌ಸೇಲ್ ವಸ್ತುಗಳನ್ನು ಪಡೆದು ನಮ್ಮ ನಗರಗಳಲ್ಲಿ ಅಗತ್ಯ ವಸ್ತುಗಳು ಹಾಗೂ ಸೇವೆಯನ್ನು ಕೈಗೆಟಕುವ ಬೆಲೆಯಲ್ಲಿ ನೀಡುತ್ತಾ, ಬೀದಿ ವ್ಯಾಪಾರ ರಾಜ್ಯದ ಆರ್ಥಿಕ ಆರೋಗ್ಯದ ಜೊತೆಗೆ ಹೆಣೆದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರದ ನಡೆಯು ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಧಕ್ಕೆಯನ್ನುಂಟು ಮಾಡಲು ಹೊರಟಿದೆ” ಎಂದು ಸಂಘ ಹೇಳಿದೆ.

“ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳು ರಸ್ತೆ ಬದಿ / ಫುಟ್‌ಪಾತ್ ಮೇಲೆ ವ್ಯಾಪಾರ ಮಾಡಬಾರದು, ವೆಂಡಿಂಗ್ ಜೋನ್‌ನಲ್ಲಿ ಮಾತ್ರ ವ್ಯಾಪಾರ ಮಾಡಬೇಕು ಅಥವಾ ದಿನವಿಡೀ ಗಾಡಿಗಳನ್ನು ತಳ್ಳಿಕೊಂಡು ವ್ಯಾಪಾರ ಮಾಡಬೇಕು ಹಾಗೂ ಗುರುತಿನ ಚೀಟಿ ಇಲ್ಲದವರಿಗೆ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮದಲ್ಲಿ ಹೇಳಿಕೆಯನ್ನು ನೀಡಿದ್ದಾರೆ” ಎಂದು ಸಂಘ ಹೇಳಿದೆ.

“ಫುಟ್ಪಾತ್ತ್ ಅಥವಾ ಬೀದಿ ಬದಿ ಬಿಟ್ಟು ಬೇರೆ ಯಾವ ಜಾಗದಲ್ಲಿ ವ್ಯಾಪಾರ ಮಾಡಲು ಸಾಧ್ಯ? ಇದು ಬೀದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ, 2014ರ ಉಲ್ಲಂಘನೆ. ಈ ಹೇಳಿಕೆಯಿಂದ ಅಧಿಕಾರಿಗಳು ಬೀದಿ ವ್ಯಾಪಾರಿಗಳ ಮೇಲೆ ಹೇರುವ ಕಿರುಕುಳ ಹೆಚ್ಚಾಗಿದ್ದು, ಬೀದಿ ವ್ಯಾಪಾರಿಗಳು ಆತಂಕ್ಕೊಳಗಾಗಿದ್ದಾರೆ” ಎಂದು ಸಂಘವು ಹೇಳಿದೆ.

“ಅಕ್ಟೋಬರ್ 2024ರಿಂದ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದು ಫೆಬ್ರವರಿ 2025 ಮುಕ್ತಾಯಗೊಂಡಿದ್ದು, ಸುಮಾರು 34,000 ಬೀದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಮತ್ತು ಇತರೆ ಸಾವಿರಾರು ವ್ಯಾಪಾರಿಗಳನ್ನು ಸಮೀಕ್ಷೆಯಿಂದ ಸ್ವೀಕರಿಸಲಾಗದ ವಿವಿಧ ಕಾರಣಗಳಿಂದಾಗಿ ಹೊರಗಿಡಲಾಗಿದೆ. ಪಿ.ಎಂ-ಸ್ವಾನಿಧಿ ಸಾಲವನ್ನು 70,000ಕೂ ಹೆಚ್ಚು ಜನರಿಗೆ ನೀಡಿಲಾಗಿದ್ದು, ಕನಿಷ್ಠ 70,000 ಬೀದಿ ವ್ಯಾಪಾರಿಗಳು ಸಮೀಕ್ಷೆಯಲ್ಲಿ ಒಳಗೊಂಡಿರಬೇಕಲ್ಲವೇ?” ಎಂದು ಸಂಘವು ಪ್ರಶ್ನಿಸಿದೆ.

“ಬೆಂಗಳೂರಿನಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನ ಬೀದಿ ವ್ಯಾಪಾರದ ಮೇಲೆ ಅವಲಂಬಿತರಾಗಿದ್ದು, ಸಮೀಕ್ಷೆಯಲ್ಲಿ ಒಳಗೊಳ್ಳದ ಬೀದಿ ವ್ಯಾಪಾರಿಗಳು ಯಾವುದೇ ರೀತಿಯ ಕಾನೂನಿನ ರಕ್ಷಣೆ ಇಲ್ಲದಂತೆ ಬೇಕು ಅಂತಲೇ ಹೊರದಬ್ಬಲಾಗಿದೆ. ಜೊತೆಗೆ ಸಮೀಕ್ಷೆಯಲ್ಲಿ ಒಳಗೊಂಡ ವ್ಯಾಪಾರಿಗಳಿಗೆ ಇದುವರೆಗೂ ಗುರುತಿನ ಚೀಟಿ ಅಥವಾ ವ್ಯಾಪಾರದ ಪ್ರಮಾಣ ಪತ್ರವನ್ನು ವಿತರಿಸಿರುವುದಿಲ್ಲ” ಎಂದು ಸಂಘವು ಹೇಳಿದೆ.

ಅಷ್ಟೆ ಅಲ್ಲದೆ, ಚರ್ಚ್ ಸ್ಟ್ರೀಟ್‌ನಲ್ಲಿ ಕಳೆದ ವಾರ ಬಿಬಿಎಂಪಿ ಅಧಿಕಾರಿಗಳು ಕಾನೂನು ಬಾಹಿರವಾಗಿ ಬೀದಿ ವ್ಯಾಪಾರಿಗಳ ಸರಕನ್ನು ವಶಪಡಿಸಿಕೊಂಡು ಇನ್ನು ಸಹ ಹಿಂತಿರಿಗಿಸಿಲ್ಲ ಎಂದು ಸಂಘವು ಹೇಳಿದ್ದು, ಜಯನಗರ ೯ ನೇ ಬಡಾವಣೆ ಹಾಗು ಸಾರಕ್ಕಿ ಮಾರುಕಟ್ಟೆಯಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ವ್ಯಾಪಾರಿಗಳ ಸಾವಿರಾರು ರೂಪಾಯಿ ಮೊತ್ತದ ಹಣ್ಣನ್ನು ಕದ್ದಿದ್ದಾರೆ ಎಂದು ಹೇಳಿದೆ.

ಹಲವಾರು ಮಾರುಕಟ್ಟೆಗಳಲ್ಲಿ ಶೌಚಾಲಯ, ನೀರು, ಬೆಳಕು ಮುಂತಾದ ಮೂಲಸೌಕರ್ಯವಿಲ್ಲ. ಬೀದಿ ವ್ಯಾಪಾರಿಗಳಿಗೆ ಯಾವುದೇ ಸಾಮಾಜಿಕ ಭದ್ರತೆಯಿಲ್ಲ ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ. ಈ ಹಿನ್ನಲೆಯಲ್ಲಿ ವ್ಯಾಪಾರಿಗಳ ಘನತೆಗಾಗಿ, ಬೀದಿ ವ್ಯಾಪಾರದ ಹಕ್ಕಿಗಾಗಿ, ಮಾರುಕಟ್ಟೆಗಳಲ್ಲಿ ಮೂಲಭೂತ ಸೌಕರ್ಯಕ್ಕಾಗಿ, ಸಾಮಾಜಿಕ ಭಾದ್ರತೆಗಾಗಿ ಈ ಹೋರಾಟವನ್ನು ನಡೆಸುತ್ತಿರುವುದಾಗಿ ಬೀದಿಬದಿ ವ್ಯಾಪಾರಿಗಳ ಸಂಘವು ಹೇಳಿದೆ. ಬೀದಿ ಬದಿ ವ್ಯಾಪಾರಿಗಳಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...