Homeಕರ್ನಾಟಕ'ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ' | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

‘ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ’ | ಬೀದಿ ಬದಿ ವ್ಯಾಪಾರಿಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಪ್ರತಿಭಟನೆ

- Advertisement -
- Advertisement -

ಬೆಂಗಳೂರಿನ ಬೀದಿ ವ್ಯಾಪಾರಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳ ಹಿನ್ನಲೆ, ವ್ಯಾಪಾರಿಗಳು ತಮ್ಮ ಹಕ್ಕಿಗಾಗಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರ ಬೆಳಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಬ್ರಾಂಡ್ ಬೆಂಗಳೂರಿನಲ್ಲಿ ಬಡವರಿಗೆ ಜಾಗವಿಲ್ಲವೆ ಎಂದು ಪ್ರಶ್ನಿಸಿರುವ ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘ ಹೇಳಿದ್ದು, ಬೀದಿ ವ್ಯಾಪಾರಿಗಳ ಎತ್ತಂಗಡಿ ನಿಲ್ಲಿಸಿ ಎಂದು ಆಗ್ರಹಿಸಿದೆ. ಬೀದಿ ಬದಿ ವ್ಯಾಪಾರಿಗಳಿಂದ

“ಬೆಂಗಳೂರು ನಗರದ ಬೀದಿ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ನಮ್ಮ ಹಕ್ಕಿಗಾಗಿ ದಿನಾಂಕ ಜೂನ್ 24ರ ಮಂಗಳವಾರ, ಫ್ರೀಡಂ ಪಾರ್ಕ್‌ನಲ್ಲಿ ಬೆಳಗ್ಗೆ 11ಕ್ಕೆ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಗರದ ಪ್ರಮುಖ ಮಾರುಕಟ್ಟೆಗಳಾದ ಕೆ.ಆರ್.ಮಾರುಕಟ್ಟೆ , ಜಯನಗರ ೪ ನೇ ಬಡಾವಣೆ , ವಿಜಯನಗರ , ಶಿವಾಜಿನಗರ, ಯೆಶವಂತಪುರ , ಗಾಂಧೀ ಬಜಾರ್ ಹಾಗು ಇನ್ನು ಹಲವು ಮಾರುಕಟ್ಟೆಗಳಿಂದ ಸಾವಿರಕ್ಕೂ ಹೆಚ್ಚು ವ್ಯಾಪಾರಿಗಳು ಮಂಗಳವಾರ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ” ಎಂದು ಬೀದಿ ವ್ಯಾಪಾರಿಗಳ ಸಂಘ ಹೇಳಿದೆ.

“ಕರ್ನಾಟಕದ ಆರ್ಥಿಕತೆಯಲ್ಲಿ ಬೀದಿಬದಿ ವ್ಯಾಪಾರಸ್ಥರು ಪ್ರಮುಖ ಕೊಡುಗೆಯನ್ನು ನೀಡುತ್ತಲೆ ಇದ್ದಾರೆ. ರೈತರಿಂದ, ಹೋಲ್‌ಸೇಲ್ ವಸ್ತುಗಳನ್ನು ಪಡೆದು ನಮ್ಮ ನಗರಗಳಲ್ಲಿ ಅಗತ್ಯ ವಸ್ತುಗಳು ಹಾಗೂ ಸೇವೆಯನ್ನು ಕೈಗೆಟಕುವ ಬೆಲೆಯಲ್ಲಿ ನೀಡುತ್ತಾ, ಬೀದಿ ವ್ಯಾಪಾರ ರಾಜ್ಯದ ಆರ್ಥಿಕ ಆರೋಗ್ಯದ ಜೊತೆಗೆ ಹೆಣೆದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಜ್ಯ ಸರ್ಕಾರದ ನಡೆಯು ಬೀದಿ ಬದಿ ವ್ಯಾಪಾರಿಗಳ ಜೀವನೋಪಾಯಕ್ಕೆ ಧಕ್ಕೆಯನ್ನುಂಟು ಮಾಡಲು ಹೊರಟಿದೆ” ಎಂದು ಸಂಘ ಹೇಳಿದೆ.

“ಬೆಂಗಳೂರಿನ ಬೀದಿ ಬದಿ ವ್ಯಾಪಾರಿಗಳು ರಸ್ತೆ ಬದಿ / ಫುಟ್‌ಪಾತ್ ಮೇಲೆ ವ್ಯಾಪಾರ ಮಾಡಬಾರದು, ವೆಂಡಿಂಗ್ ಜೋನ್‌ನಲ್ಲಿ ಮಾತ್ರ ವ್ಯಾಪಾರ ಮಾಡಬೇಕು ಅಥವಾ ದಿನವಿಡೀ ಗಾಡಿಗಳನ್ನು ತಳ್ಳಿಕೊಂಡು ವ್ಯಾಪಾರ ಮಾಡಬೇಕು ಹಾಗೂ ಗುರುತಿನ ಚೀಟಿ ಇಲ್ಲದವರಿಗೆ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮದಲ್ಲಿ ಹೇಳಿಕೆಯನ್ನು ನೀಡಿದ್ದಾರೆ” ಎಂದು ಸಂಘ ಹೇಳಿದೆ.

“ಫುಟ್ಪಾತ್ತ್ ಅಥವಾ ಬೀದಿ ಬದಿ ಬಿಟ್ಟು ಬೇರೆ ಯಾವ ಜಾಗದಲ್ಲಿ ವ್ಯಾಪಾರ ಮಾಡಲು ಸಾಧ್ಯ? ಇದು ಬೀದಿ ವ್ಯಾಪಾರಿಗಳ ಜೀವನೋಪಾಯದ ರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ, 2014ರ ಉಲ್ಲಂಘನೆ. ಈ ಹೇಳಿಕೆಯಿಂದ ಅಧಿಕಾರಿಗಳು ಬೀದಿ ವ್ಯಾಪಾರಿಗಳ ಮೇಲೆ ಹೇರುವ ಕಿರುಕುಳ ಹೆಚ್ಚಾಗಿದ್ದು, ಬೀದಿ ವ್ಯಾಪಾರಿಗಳು ಆತಂಕ್ಕೊಳಗಾಗಿದ್ದಾರೆ” ಎಂದು ಸಂಘವು ಹೇಳಿದೆ.

“ಅಕ್ಟೋಬರ್ 2024ರಿಂದ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆಯನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಅದು ಫೆಬ್ರವರಿ 2025 ಮುಕ್ತಾಯಗೊಂಡಿದ್ದು, ಸುಮಾರು 34,000 ಬೀದಿ ವ್ಯಾಪಾರಿಗಳನ್ನು ಗುರುತಿಸಲಾಗಿದೆ ಮತ್ತು ಇತರೆ ಸಾವಿರಾರು ವ್ಯಾಪಾರಿಗಳನ್ನು ಸಮೀಕ್ಷೆಯಿಂದ ಸ್ವೀಕರಿಸಲಾಗದ ವಿವಿಧ ಕಾರಣಗಳಿಂದಾಗಿ ಹೊರಗಿಡಲಾಗಿದೆ. ಪಿ.ಎಂ-ಸ್ವಾನಿಧಿ ಸಾಲವನ್ನು 70,000ಕೂ ಹೆಚ್ಚು ಜನರಿಗೆ ನೀಡಿಲಾಗಿದ್ದು, ಕನಿಷ್ಠ 70,000 ಬೀದಿ ವ್ಯಾಪಾರಿಗಳು ಸಮೀಕ್ಷೆಯಲ್ಲಿ ಒಳಗೊಂಡಿರಬೇಕಲ್ಲವೇ?” ಎಂದು ಸಂಘವು ಪ್ರಶ್ನಿಸಿದೆ.

“ಬೆಂಗಳೂರಿನಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನ ಬೀದಿ ವ್ಯಾಪಾರದ ಮೇಲೆ ಅವಲಂಬಿತರಾಗಿದ್ದು, ಸಮೀಕ್ಷೆಯಲ್ಲಿ ಒಳಗೊಳ್ಳದ ಬೀದಿ ವ್ಯಾಪಾರಿಗಳು ಯಾವುದೇ ರೀತಿಯ ಕಾನೂನಿನ ರಕ್ಷಣೆ ಇಲ್ಲದಂತೆ ಬೇಕು ಅಂತಲೇ ಹೊರದಬ್ಬಲಾಗಿದೆ. ಜೊತೆಗೆ ಸಮೀಕ್ಷೆಯಲ್ಲಿ ಒಳಗೊಂಡ ವ್ಯಾಪಾರಿಗಳಿಗೆ ಇದುವರೆಗೂ ಗುರುತಿನ ಚೀಟಿ ಅಥವಾ ವ್ಯಾಪಾರದ ಪ್ರಮಾಣ ಪತ್ರವನ್ನು ವಿತರಿಸಿರುವುದಿಲ್ಲ” ಎಂದು ಸಂಘವು ಹೇಳಿದೆ.

ಅಷ್ಟೆ ಅಲ್ಲದೆ, ಚರ್ಚ್ ಸ್ಟ್ರೀಟ್‌ನಲ್ಲಿ ಕಳೆದ ವಾರ ಬಿಬಿಎಂಪಿ ಅಧಿಕಾರಿಗಳು ಕಾನೂನು ಬಾಹಿರವಾಗಿ ಬೀದಿ ವ್ಯಾಪಾರಿಗಳ ಸರಕನ್ನು ವಶಪಡಿಸಿಕೊಂಡು ಇನ್ನು ಸಹ ಹಿಂತಿರಿಗಿಸಿಲ್ಲ ಎಂದು ಸಂಘವು ಹೇಳಿದ್ದು, ಜಯನಗರ ೯ ನೇ ಬಡಾವಣೆ ಹಾಗು ಸಾರಕ್ಕಿ ಮಾರುಕಟ್ಟೆಯಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ವ್ಯಾಪಾರಿಗಳ ಸಾವಿರಾರು ರೂಪಾಯಿ ಮೊತ್ತದ ಹಣ್ಣನ್ನು ಕದ್ದಿದ್ದಾರೆ ಎಂದು ಹೇಳಿದೆ.

ಹಲವಾರು ಮಾರುಕಟ್ಟೆಗಳಲ್ಲಿ ಶೌಚಾಲಯ, ನೀರು, ಬೆಳಕು ಮುಂತಾದ ಮೂಲಸೌಕರ್ಯವಿಲ್ಲ. ಬೀದಿ ವ್ಯಾಪಾರಿಗಳಿಗೆ ಯಾವುದೇ ಸಾಮಾಜಿಕ ಭದ್ರತೆಯಿಲ್ಲ ಎಂದು ಸಂಘವು ಬೇಸರ ವ್ಯಕ್ತಪಡಿಸಿದೆ. ಈ ಹಿನ್ನಲೆಯಲ್ಲಿ ವ್ಯಾಪಾರಿಗಳ ಘನತೆಗಾಗಿ, ಬೀದಿ ವ್ಯಾಪಾರದ ಹಕ್ಕಿಗಾಗಿ, ಮಾರುಕಟ್ಟೆಗಳಲ್ಲಿ ಮೂಲಭೂತ ಸೌಕರ್ಯಕ್ಕಾಗಿ, ಸಾಮಾಜಿಕ ಭಾದ್ರತೆಗಾಗಿ ಈ ಹೋರಾಟವನ್ನು ನಡೆಸುತ್ತಿರುವುದಾಗಿ ಬೀದಿಬದಿ ವ್ಯಾಪಾರಿಗಳ ಸಂಘವು ಹೇಳಿದೆ. ಬೀದಿ ಬದಿ ವ್ಯಾಪಾರಿಗಳಿಂದ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ಕಳ್ಳತನದ ಆರೋಪ; 10 ವರ್ಷದ ಬುಡಕಟ್ಟು ಬಾಲಕಿಗೆ ಬಿಸಿ ಕಬ್ಬಿಣದಿಂದ ಬರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...