Homeಅಂತರಾಷ್ಟ್ರೀಯಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ವಿಲ್ ಸ್ಮಿತ್ 'ಕಿಂಗ್ ರಿಚರ್ಡ್ಸ್' ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಈ ಭಾರಿ ಆಸ್ಕರ್ ಪ್ರಶಸ್ತಿ ಗಳಿಸಿದ್ದಾರೆ.

- Advertisement -
- Advertisement -

ಈ ಬಾರಿಯ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್ ವೇದಿಕೆಯಲ್ಲಿಯೇ ಸಹ ನಟ ಮತ್ತು ನಿರೂಪಕ ಕ್ರಿಸ್ ರಾಕ್ ಕೆನ್ನೆಗೆ ಬಾರಿಸಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಕಿಂಗ್ ರಿಚರ್ಡ್ಸ್ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಪ್ರಶಸ್ತಿ ಗಳಿಸಿದ ವಿಲ್ ಸ್ಮಿತ್, ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ತಮ್ಮ ಪತ್ನಿ ಜಾಡಾ ಪಿಂಕೆಟ್‌ರೊಂದಿಗೆ ಆಗಮಿಸಿದ್ದರು. ಸಮಾರಂಭದ ಒಂದು ಘಟ್ಟದಲ್ಲಿ ನಿರೂಪಣೆ ಮಾಡುತ್ತಿದ್ದ ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್, ಜಾಡಾ ಪಿಂಕೆಟ್ ತಲೆಕೂದಲಿನ ಬಗೆಗೆ ಜೋಕ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ವಿಲ್ ಸ್ಮಿತ್ ವೇದಿಕೆಯೇರಿ ರಾಕ್ ಕೆನ್ನಗೆ ಬಾರಿಸಿದ್ದರು.

ಈ ಸಂದರ್ಭದಲ್ಲಿ ಆಘಾತಕ್ಕೊಳಗಾದ ರಾಕ್ ಸ್ವಲ್ಪ ಹೊತ್ತು ಮೌನವಾಗಿದ್ದರು. ಆಗ ಕೆಳಗಿದ್ದ ವಿಲ್ ಸ್ಮಿತ್, “ನನ್ನ ಪತ್ನಿಯ ಬಗ್ಗೆ ಹೇಳಬೇಡ, ನನ್ನ ಪತ್ನಿಯ ಬಗ್ಗೆ ನಿನ್ನ ಕೊಳಕು ಬಾಯಿಂದ ಮಾತನಾಡಬೇಡ” ಎಂದು ಕೂಗಿದ್ದರು. ಆಗ ಕ್ರಿಸ್ ರಾಕ್ ಒಕೆ ಒಕೆ ಎಂದಿದ್ದರು.

ಈ ಘಟನೆಯು ತಮಾಷೆಯೋ, ನಿಜವೋ ಎಂದು ಅರ್ಥೈಸುವಲ್ಲಿ ಪ್ರೇಕ್ಷಕರು ಗೊಂದಲದಲ್ಲಿದ್ದರು. ಆಸ್ಕರ್ ಪ್ರಶಸ್ತಿ ನೀಡುವ ಅಕಾಡೆಮಿ ಸಂಸ್ಥೆಯು ಈ ಕುರಿತು ಇಬ್ಬರನ್ನು ಮಾತನಾಡಿಸಿದ್ದಲ್ಲದೆ ತನಿಖೆಗೆ ಆದೇಶಿಸಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನಟ ವಿಲ್ ಸ್ಮಿತ್ ಕ್ರಿಸ್ ರಾಕ್ ಬಳಿ ಬೇಷರತ್ ಕ್ಷಮೆಯಾಚಿಸಿದ್ದಾರೆ. “ನಾನು ನಿಮ್ಮಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ ಕ್ರಿಸ್. ಆ ಸಂದರ್ಭದಲ್ಲಿ ನಾನು ಸ್ಥಿಮಿತತೆ ಕಳೆದುಕೊಂಡಿದ್ದೆ ಮತ್ತು ತಪ್ಪು ಮಾಡಿದ್ದೇನೆ. ಈ ಘಟನೆಯಿಂದ ನನಗೆ ಮುಜುಗರವಾಗಿದೆ. ನಾನು ಹೇಗಿರಬೇಕೆಂದು ಬಯಸುತ್ತೀನೊ ಅದಕ್ಕೆ ವಿರುದ್ಧವಾಗಿ ಅಂದು ನಡೆದುಕೊಂಡಿದ್ದೇನೆ” ಎಂದು ತಮ್ಮ Instagram ನಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಬಗೆಗಿನ ಜೋಕ್‌ಗಳು ನಮ್ಮ ಕೆಲಸದ ಭಾಗವಾಗಿವೆ. ಆದರೆ ಜಾಡಾ ಅವರ ವೈದ್ಯಕೀಯ ಸ್ಥಿತಿಯ ಬಗೆಗಿನ ಜೋಕ್ ನನಗೆ ಸಹಿಸಲಾಗಲಿಲ್ಲ ಮತ್ತು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದೆ. ಆದರೆ ಹಿಂಸಾಚಾರವು ಎಲ್ಲಾ ರೂಪಗಳಲ್ಲಿ ವಿಷಕಾರಿ ಮತ್ತು ವಿನಾಶಕಾರಿಯಾಗಿದೆ. ಕಳೆದ ರಾತ್ರಿಯ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ನನ್ನ ವರ್ತನೆಯು ಸ್ವೀಕಾರಾರ್ಹವಲ್ಲ ಮತ್ತು ಕ್ಷಮಿಸಲಾಗದಂತಿತ್ತು” ಎಂದು ಸ್ಮಿತ್ ಬರೆದಿದ್ದಾರೆ.

ಪ್ರೀತಿ ಮತ್ತು ದಯೆಯ ಜಗತ್ತಿನಲ್ಲಿ ಹಿಂಸೆಗೆ ಸ್ಥಳವಿಲ್ಲ. ಹಾಗಾಗಿ ಆಸ್ಕರ್ ಅಕಾಡೆಮಿ, ಕಾರ್ಯಕ್ರಮದ ನಿರ್ಮಾಪಕರು, ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಮತ್ತು ಪ್ರಪಂಚದಾದ್ಯಂತ ಕಾರ್ಯಕ್ರಮ ವೀಕ್ಷಿಸಿದ ಪ್ರತಿಯೊಬ್ಬರ ಬಳಿಯೂ ನಾನು ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ವಿಲಿಯಮ್ಸ್ ಕುಟುಂಬ ಮತ್ತು ನನ್ನ ಕಿಂಗ್ ರಿಚರ್ಡ್ ಕುಟುಂಬಕ್ಕೆ ಕ್ಷಮೆಯಾಚಿಸಲು ಬಯಸುತ್ತೇನೆ. ನನ್ನ ನಡವಳಿಕೆಯು ನಮಗೆಲ್ಲರಿಗೂ ಒಂದು ಸುಂದರವಾದ ಪ್ರಯಾಣವಾಗಿದೆ ಎಂದು ನಾನು ತೀವ್ರವಾಗಿ ವಿಷಾದಿಸುತ್ತೇನೆ. ಇದನ್ನು ತಿದ್ದಿಕೊಳ್ಳಲು ಕೆಲಸ ಮಾಡುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಈ ರೀತಿಯ ಅವರ ವಿನಯಪೂರ್ವಕ ಕ್ಷಮೆಯಾಚನೆಗೆ ಹಲವಾರು ಅಭಿಮಾನಿಗಳು ಬೆಂಬಲ ಸೂಚಿಸಿದ್ದಾರೆ.

ಸ್ಮಿತ್ ಪತ್ನಿ ಜಾಡ ಪಿಂಕೆಟ್ ಅವರು ಕೂದಲು ಉದುರುವಿಕೆಗೆ ಕಾರಣವಾಗುವ ಅಲೋಪೆಸಿಯಾ ರೋಗದಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರು ಭಾನುವಾರದ ಆಸ್ಕರ್ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಅವರ ಸಂಪೂರ್ಣ ತಲೆಗೂದಲು ಕತ್ತರಿಸಿದ್ದರು.

“94 ನೇ ಅಕಾಡೆಮಿ ಪ್ರಶಸ್ತಿಗಳು ಅಂತಿಮ ಘಳಿಗೆಯಲ್ಲಿದ್ದು, ಪಿಂಕೆಟ್ ಸ್ಮಿತ್ ಅವರು ‘G.I. ಜೇನ್ 2’ ನಲ್ಲಿ (ತಲೆ ಬೋಳಿಸಿಕೊಂಡ ಮಹಿಳಾ ಸೈನಿಕರ ಕುರಿತಾದ ಚಲನಚಿತ್ರದ ಮುಂದಿನ ಭಾಗ) ನಟಿಸಲು ಸಿದ್ಧರಾಗಿ ಕಾಣಿಸಿಕೊಂಡಿದ್ದಾರೆ” ಎಂದು ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್ ವ್ಯಂಗ್ಯವಾಡಿದ್ ರು. ಇದು ಇಡೀ ಪ್ರಕರಣಕ್ಕೆ ಕಾರಣವಾಗಿತ್ತು.


ಇದನ್ನೂ ಓದಿ; ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...