Homeಅಂತರಾಷ್ಟ್ರೀಯಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ವಿಲ್ ಸ್ಮಿತ್ 'ಕಿಂಗ್ ರಿಚರ್ಡ್ಸ್' ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಈ ಭಾರಿ ಆಸ್ಕರ್ ಪ್ರಶಸ್ತಿ ಗಳಿಸಿದ್ದಾರೆ.

- Advertisement -
- Advertisement -

ಈ ಬಾರಿಯ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್ ವೇದಿಕೆಯಲ್ಲಿಯೇ ಸಹ ನಟ ಮತ್ತು ನಿರೂಪಕ ಕ್ರಿಸ್ ರಾಕ್ ಕೆನ್ನೆಗೆ ಬಾರಿಸಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಕಿಂಗ್ ರಿಚರ್ಡ್ಸ್ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಪ್ರಶಸ್ತಿ ಗಳಿಸಿದ ವಿಲ್ ಸ್ಮಿತ್, ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ತಮ್ಮ ಪತ್ನಿ ಜಾಡಾ ಪಿಂಕೆಟ್‌ರೊಂದಿಗೆ ಆಗಮಿಸಿದ್ದರು. ಸಮಾರಂಭದ ಒಂದು ಘಟ್ಟದಲ್ಲಿ ನಿರೂಪಣೆ ಮಾಡುತ್ತಿದ್ದ ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್, ಜಾಡಾ ಪಿಂಕೆಟ್ ತಲೆಕೂದಲಿನ ಬಗೆಗೆ ಜೋಕ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ವಿಲ್ ಸ್ಮಿತ್ ವೇದಿಕೆಯೇರಿ ರಾಕ್ ಕೆನ್ನಗೆ ಬಾರಿಸಿದ್ದರು.

ಈ ಸಂದರ್ಭದಲ್ಲಿ ಆಘಾತಕ್ಕೊಳಗಾದ ರಾಕ್ ಸ್ವಲ್ಪ ಹೊತ್ತು ಮೌನವಾಗಿದ್ದರು. ಆಗ ಕೆಳಗಿದ್ದ ವಿಲ್ ಸ್ಮಿತ್, “ನನ್ನ ಪತ್ನಿಯ ಬಗ್ಗೆ ಹೇಳಬೇಡ, ನನ್ನ ಪತ್ನಿಯ ಬಗ್ಗೆ ನಿನ್ನ ಕೊಳಕು ಬಾಯಿಂದ ಮಾತನಾಡಬೇಡ” ಎಂದು ಕೂಗಿದ್ದರು. ಆಗ ಕ್ರಿಸ್ ರಾಕ್ ಒಕೆ ಒಕೆ ಎಂದಿದ್ದರು.

ಈ ಘಟನೆಯು ತಮಾಷೆಯೋ, ನಿಜವೋ ಎಂದು ಅರ್ಥೈಸುವಲ್ಲಿ ಪ್ರೇಕ್ಷಕರು ಗೊಂದಲದಲ್ಲಿದ್ದರು. ಆಸ್ಕರ್ ಪ್ರಶಸ್ತಿ ನೀಡುವ ಅಕಾಡೆಮಿ ಸಂಸ್ಥೆಯು ಈ ಕುರಿತು ಇಬ್ಬರನ್ನು ಮಾತನಾಡಿಸಿದ್ದಲ್ಲದೆ ತನಿಖೆಗೆ ಆದೇಶಿಸಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನಟ ವಿಲ್ ಸ್ಮಿತ್ ಕ್ರಿಸ್ ರಾಕ್ ಬಳಿ ಬೇಷರತ್ ಕ್ಷಮೆಯಾಚಿಸಿದ್ದಾರೆ. “ನಾನು ನಿಮ್ಮಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ ಕ್ರಿಸ್. ಆ ಸಂದರ್ಭದಲ್ಲಿ ನಾನು ಸ್ಥಿಮಿತತೆ ಕಳೆದುಕೊಂಡಿದ್ದೆ ಮತ್ತು ತಪ್ಪು ಮಾಡಿದ್ದೇನೆ. ಈ ಘಟನೆಯಿಂದ ನನಗೆ ಮುಜುಗರವಾಗಿದೆ. ನಾನು ಹೇಗಿರಬೇಕೆಂದು ಬಯಸುತ್ತೀನೊ ಅದಕ್ಕೆ ವಿರುದ್ಧವಾಗಿ ಅಂದು ನಡೆದುಕೊಂಡಿದ್ದೇನೆ” ಎಂದು ತಮ್ಮ Instagram ನಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಬಗೆಗಿನ ಜೋಕ್‌ಗಳು ನಮ್ಮ ಕೆಲಸದ ಭಾಗವಾಗಿವೆ. ಆದರೆ ಜಾಡಾ ಅವರ ವೈದ್ಯಕೀಯ ಸ್ಥಿತಿಯ ಬಗೆಗಿನ ಜೋಕ್ ನನಗೆ ಸಹಿಸಲಾಗಲಿಲ್ಲ ಮತ್ತು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದೆ. ಆದರೆ ಹಿಂಸಾಚಾರವು ಎಲ್ಲಾ ರೂಪಗಳಲ್ಲಿ ವಿಷಕಾರಿ ಮತ್ತು ವಿನಾಶಕಾರಿಯಾಗಿದೆ. ಕಳೆದ ರಾತ್ರಿಯ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ನನ್ನ ವರ್ತನೆಯು ಸ್ವೀಕಾರಾರ್ಹವಲ್ಲ ಮತ್ತು ಕ್ಷಮಿಸಲಾಗದಂತಿತ್ತು” ಎಂದು ಸ್ಮಿತ್ ಬರೆದಿದ್ದಾರೆ.

ಪ್ರೀತಿ ಮತ್ತು ದಯೆಯ ಜಗತ್ತಿನಲ್ಲಿ ಹಿಂಸೆಗೆ ಸ್ಥಳವಿಲ್ಲ. ಹಾಗಾಗಿ ಆಸ್ಕರ್ ಅಕಾಡೆಮಿ, ಕಾರ್ಯಕ್ರಮದ ನಿರ್ಮಾಪಕರು, ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಮತ್ತು ಪ್ರಪಂಚದಾದ್ಯಂತ ಕಾರ್ಯಕ್ರಮ ವೀಕ್ಷಿಸಿದ ಪ್ರತಿಯೊಬ್ಬರ ಬಳಿಯೂ ನಾನು ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ವಿಲಿಯಮ್ಸ್ ಕುಟುಂಬ ಮತ್ತು ನನ್ನ ಕಿಂಗ್ ರಿಚರ್ಡ್ ಕುಟುಂಬಕ್ಕೆ ಕ್ಷಮೆಯಾಚಿಸಲು ಬಯಸುತ್ತೇನೆ. ನನ್ನ ನಡವಳಿಕೆಯು ನಮಗೆಲ್ಲರಿಗೂ ಒಂದು ಸುಂದರವಾದ ಪ್ರಯಾಣವಾಗಿದೆ ಎಂದು ನಾನು ತೀವ್ರವಾಗಿ ವಿಷಾದಿಸುತ್ತೇನೆ. ಇದನ್ನು ತಿದ್ದಿಕೊಳ್ಳಲು ಕೆಲಸ ಮಾಡುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಈ ರೀತಿಯ ಅವರ ವಿನಯಪೂರ್ವಕ ಕ್ಷಮೆಯಾಚನೆಗೆ ಹಲವಾರು ಅಭಿಮಾನಿಗಳು ಬೆಂಬಲ ಸೂಚಿಸಿದ್ದಾರೆ.

ಸ್ಮಿತ್ ಪತ್ನಿ ಜಾಡ ಪಿಂಕೆಟ್ ಅವರು ಕೂದಲು ಉದುರುವಿಕೆಗೆ ಕಾರಣವಾಗುವ ಅಲೋಪೆಸಿಯಾ ರೋಗದಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರು ಭಾನುವಾರದ ಆಸ್ಕರ್ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಅವರ ಸಂಪೂರ್ಣ ತಲೆಗೂದಲು ಕತ್ತರಿಸಿದ್ದರು.

“94 ನೇ ಅಕಾಡೆಮಿ ಪ್ರಶಸ್ತಿಗಳು ಅಂತಿಮ ಘಳಿಗೆಯಲ್ಲಿದ್ದು, ಪಿಂಕೆಟ್ ಸ್ಮಿತ್ ಅವರು ‘G.I. ಜೇನ್ 2’ ನಲ್ಲಿ (ತಲೆ ಬೋಳಿಸಿಕೊಂಡ ಮಹಿಳಾ ಸೈನಿಕರ ಕುರಿತಾದ ಚಲನಚಿತ್ರದ ಮುಂದಿನ ಭಾಗ) ನಟಿಸಲು ಸಿದ್ಧರಾಗಿ ಕಾಣಿಸಿಕೊಂಡಿದ್ದಾರೆ” ಎಂದು ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್ ವ್ಯಂಗ್ಯವಾಡಿದ್ ರು. ಇದು ಇಡೀ ಪ್ರಕರಣಕ್ಕೆ ಕಾರಣವಾಗಿತ್ತು.


ಇದನ್ನೂ ಓದಿ; ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...