Homeಅಂತರಾಷ್ಟ್ರೀಯಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ವಿಲ್ ಸ್ಮಿತ್ 'ಕಿಂಗ್ ರಿಚರ್ಡ್ಸ್' ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಈ ಭಾರಿ ಆಸ್ಕರ್ ಪ್ರಶಸ್ತಿ ಗಳಿಸಿದ್ದಾರೆ.

- Advertisement -
- Advertisement -

ಈ ಬಾರಿಯ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್ ವೇದಿಕೆಯಲ್ಲಿಯೇ ಸಹ ನಟ ಮತ್ತು ನಿರೂಪಕ ಕ್ರಿಸ್ ರಾಕ್ ಕೆನ್ನೆಗೆ ಬಾರಿಸಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಕಿಂಗ್ ರಿಚರ್ಡ್ಸ್ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಪ್ರಶಸ್ತಿ ಗಳಿಸಿದ ವಿಲ್ ಸ್ಮಿತ್, ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ತಮ್ಮ ಪತ್ನಿ ಜಾಡಾ ಪಿಂಕೆಟ್‌ರೊಂದಿಗೆ ಆಗಮಿಸಿದ್ದರು. ಸಮಾರಂಭದ ಒಂದು ಘಟ್ಟದಲ್ಲಿ ನಿರೂಪಣೆ ಮಾಡುತ್ತಿದ್ದ ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್, ಜಾಡಾ ಪಿಂಕೆಟ್ ತಲೆಕೂದಲಿನ ಬಗೆಗೆ ಜೋಕ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ವಿಲ್ ಸ್ಮಿತ್ ವೇದಿಕೆಯೇರಿ ರಾಕ್ ಕೆನ್ನಗೆ ಬಾರಿಸಿದ್ದರು.

ಈ ಸಂದರ್ಭದಲ್ಲಿ ಆಘಾತಕ್ಕೊಳಗಾದ ರಾಕ್ ಸ್ವಲ್ಪ ಹೊತ್ತು ಮೌನವಾಗಿದ್ದರು. ಆಗ ಕೆಳಗಿದ್ದ ವಿಲ್ ಸ್ಮಿತ್, “ನನ್ನ ಪತ್ನಿಯ ಬಗ್ಗೆ ಹೇಳಬೇಡ, ನನ್ನ ಪತ್ನಿಯ ಬಗ್ಗೆ ನಿನ್ನ ಕೊಳಕು ಬಾಯಿಂದ ಮಾತನಾಡಬೇಡ” ಎಂದು ಕೂಗಿದ್ದರು. ಆಗ ಕ್ರಿಸ್ ರಾಕ್ ಒಕೆ ಒಕೆ ಎಂದಿದ್ದರು.

ಈ ಘಟನೆಯು ತಮಾಷೆಯೋ, ನಿಜವೋ ಎಂದು ಅರ್ಥೈಸುವಲ್ಲಿ ಪ್ರೇಕ್ಷಕರು ಗೊಂದಲದಲ್ಲಿದ್ದರು. ಆಸ್ಕರ್ ಪ್ರಶಸ್ತಿ ನೀಡುವ ಅಕಾಡೆಮಿ ಸಂಸ್ಥೆಯು ಈ ಕುರಿತು ಇಬ್ಬರನ್ನು ಮಾತನಾಡಿಸಿದ್ದಲ್ಲದೆ ತನಿಖೆಗೆ ಆದೇಶಿಸಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನಟ ವಿಲ್ ಸ್ಮಿತ್ ಕ್ರಿಸ್ ರಾಕ್ ಬಳಿ ಬೇಷರತ್ ಕ್ಷಮೆಯಾಚಿಸಿದ್ದಾರೆ. “ನಾನು ನಿಮ್ಮಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ ಕ್ರಿಸ್. ಆ ಸಂದರ್ಭದಲ್ಲಿ ನಾನು ಸ್ಥಿಮಿತತೆ ಕಳೆದುಕೊಂಡಿದ್ದೆ ಮತ್ತು ತಪ್ಪು ಮಾಡಿದ್ದೇನೆ. ಈ ಘಟನೆಯಿಂದ ನನಗೆ ಮುಜುಗರವಾಗಿದೆ. ನಾನು ಹೇಗಿರಬೇಕೆಂದು ಬಯಸುತ್ತೀನೊ ಅದಕ್ಕೆ ವಿರುದ್ಧವಾಗಿ ಅಂದು ನಡೆದುಕೊಂಡಿದ್ದೇನೆ” ಎಂದು ತಮ್ಮ Instagram ನಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಬಗೆಗಿನ ಜೋಕ್‌ಗಳು ನಮ್ಮ ಕೆಲಸದ ಭಾಗವಾಗಿವೆ. ಆದರೆ ಜಾಡಾ ಅವರ ವೈದ್ಯಕೀಯ ಸ್ಥಿತಿಯ ಬಗೆಗಿನ ಜೋಕ್ ನನಗೆ ಸಹಿಸಲಾಗಲಿಲ್ಲ ಮತ್ತು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದೆ. ಆದರೆ ಹಿಂಸಾಚಾರವು ಎಲ್ಲಾ ರೂಪಗಳಲ್ಲಿ ವಿಷಕಾರಿ ಮತ್ತು ವಿನಾಶಕಾರಿಯಾಗಿದೆ. ಕಳೆದ ರಾತ್ರಿಯ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ನನ್ನ ವರ್ತನೆಯು ಸ್ವೀಕಾರಾರ್ಹವಲ್ಲ ಮತ್ತು ಕ್ಷಮಿಸಲಾಗದಂತಿತ್ತು” ಎಂದು ಸ್ಮಿತ್ ಬರೆದಿದ್ದಾರೆ.

ಪ್ರೀತಿ ಮತ್ತು ದಯೆಯ ಜಗತ್ತಿನಲ್ಲಿ ಹಿಂಸೆಗೆ ಸ್ಥಳವಿಲ್ಲ. ಹಾಗಾಗಿ ಆಸ್ಕರ್ ಅಕಾಡೆಮಿ, ಕಾರ್ಯಕ್ರಮದ ನಿರ್ಮಾಪಕರು, ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಮತ್ತು ಪ್ರಪಂಚದಾದ್ಯಂತ ಕಾರ್ಯಕ್ರಮ ವೀಕ್ಷಿಸಿದ ಪ್ರತಿಯೊಬ್ಬರ ಬಳಿಯೂ ನಾನು ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ವಿಲಿಯಮ್ಸ್ ಕುಟುಂಬ ಮತ್ತು ನನ್ನ ಕಿಂಗ್ ರಿಚರ್ಡ್ ಕುಟುಂಬಕ್ಕೆ ಕ್ಷಮೆಯಾಚಿಸಲು ಬಯಸುತ್ತೇನೆ. ನನ್ನ ನಡವಳಿಕೆಯು ನಮಗೆಲ್ಲರಿಗೂ ಒಂದು ಸುಂದರವಾದ ಪ್ರಯಾಣವಾಗಿದೆ ಎಂದು ನಾನು ತೀವ್ರವಾಗಿ ವಿಷಾದಿಸುತ್ತೇನೆ. ಇದನ್ನು ತಿದ್ದಿಕೊಳ್ಳಲು ಕೆಲಸ ಮಾಡುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಈ ರೀತಿಯ ಅವರ ವಿನಯಪೂರ್ವಕ ಕ್ಷಮೆಯಾಚನೆಗೆ ಹಲವಾರು ಅಭಿಮಾನಿಗಳು ಬೆಂಬಲ ಸೂಚಿಸಿದ್ದಾರೆ.

ಸ್ಮಿತ್ ಪತ್ನಿ ಜಾಡ ಪಿಂಕೆಟ್ ಅವರು ಕೂದಲು ಉದುರುವಿಕೆಗೆ ಕಾರಣವಾಗುವ ಅಲೋಪೆಸಿಯಾ ರೋಗದಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರು ಭಾನುವಾರದ ಆಸ್ಕರ್ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಅವರ ಸಂಪೂರ್ಣ ತಲೆಗೂದಲು ಕತ್ತರಿಸಿದ್ದರು.

“94 ನೇ ಅಕಾಡೆಮಿ ಪ್ರಶಸ್ತಿಗಳು ಅಂತಿಮ ಘಳಿಗೆಯಲ್ಲಿದ್ದು, ಪಿಂಕೆಟ್ ಸ್ಮಿತ್ ಅವರು ‘G.I. ಜೇನ್ 2’ ನಲ್ಲಿ (ತಲೆ ಬೋಳಿಸಿಕೊಂಡ ಮಹಿಳಾ ಸೈನಿಕರ ಕುರಿತಾದ ಚಲನಚಿತ್ರದ ಮುಂದಿನ ಭಾಗ) ನಟಿಸಲು ಸಿದ್ಧರಾಗಿ ಕಾಣಿಸಿಕೊಂಡಿದ್ದಾರೆ” ಎಂದು ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್ ವ್ಯಂಗ್ಯವಾಡಿದ್ ರು. ಇದು ಇಡೀ ಪ್ರಕರಣಕ್ಕೆ ಕಾರಣವಾಗಿತ್ತು.


ಇದನ್ನೂ ಓದಿ; ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...