Homeಅಂತರಾಷ್ಟ್ರೀಯಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ವಿಲ್ ಸ್ಮಿತ್ 'ಕಿಂಗ್ ರಿಚರ್ಡ್ಸ್' ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಈ ಭಾರಿ ಆಸ್ಕರ್ ಪ್ರಶಸ್ತಿ ಗಳಿಸಿದ್ದಾರೆ.

- Advertisement -
- Advertisement -

ಈ ಬಾರಿಯ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್ ವೇದಿಕೆಯಲ್ಲಿಯೇ ಸಹ ನಟ ಮತ್ತು ನಿರೂಪಕ ಕ್ರಿಸ್ ರಾಕ್ ಕೆನ್ನೆಗೆ ಬಾರಿಸಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಕಿಂಗ್ ರಿಚರ್ಡ್ಸ್ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಪ್ರಶಸ್ತಿ ಗಳಿಸಿದ ವಿಲ್ ಸ್ಮಿತ್, ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ತಮ್ಮ ಪತ್ನಿ ಜಾಡಾ ಪಿಂಕೆಟ್‌ರೊಂದಿಗೆ ಆಗಮಿಸಿದ್ದರು. ಸಮಾರಂಭದ ಒಂದು ಘಟ್ಟದಲ್ಲಿ ನಿರೂಪಣೆ ಮಾಡುತ್ತಿದ್ದ ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್, ಜಾಡಾ ಪಿಂಕೆಟ್ ತಲೆಕೂದಲಿನ ಬಗೆಗೆ ಜೋಕ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ವಿಲ್ ಸ್ಮಿತ್ ವೇದಿಕೆಯೇರಿ ರಾಕ್ ಕೆನ್ನಗೆ ಬಾರಿಸಿದ್ದರು.

ಈ ಸಂದರ್ಭದಲ್ಲಿ ಆಘಾತಕ್ಕೊಳಗಾದ ರಾಕ್ ಸ್ವಲ್ಪ ಹೊತ್ತು ಮೌನವಾಗಿದ್ದರು. ಆಗ ಕೆಳಗಿದ್ದ ವಿಲ್ ಸ್ಮಿತ್, “ನನ್ನ ಪತ್ನಿಯ ಬಗ್ಗೆ ಹೇಳಬೇಡ, ನನ್ನ ಪತ್ನಿಯ ಬಗ್ಗೆ ನಿನ್ನ ಕೊಳಕು ಬಾಯಿಂದ ಮಾತನಾಡಬೇಡ” ಎಂದು ಕೂಗಿದ್ದರು. ಆಗ ಕ್ರಿಸ್ ರಾಕ್ ಒಕೆ ಒಕೆ ಎಂದಿದ್ದರು.

ಈ ಘಟನೆಯು ತಮಾಷೆಯೋ, ನಿಜವೋ ಎಂದು ಅರ್ಥೈಸುವಲ್ಲಿ ಪ್ರೇಕ್ಷಕರು ಗೊಂದಲದಲ್ಲಿದ್ದರು. ಆಸ್ಕರ್ ಪ್ರಶಸ್ತಿ ನೀಡುವ ಅಕಾಡೆಮಿ ಸಂಸ್ಥೆಯು ಈ ಕುರಿತು ಇಬ್ಬರನ್ನು ಮಾತನಾಡಿಸಿದ್ದಲ್ಲದೆ ತನಿಖೆಗೆ ಆದೇಶಿಸಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನಟ ವಿಲ್ ಸ್ಮಿತ್ ಕ್ರಿಸ್ ರಾಕ್ ಬಳಿ ಬೇಷರತ್ ಕ್ಷಮೆಯಾಚಿಸಿದ್ದಾರೆ. “ನಾನು ನಿಮ್ಮಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ ಕ್ರಿಸ್. ಆ ಸಂದರ್ಭದಲ್ಲಿ ನಾನು ಸ್ಥಿಮಿತತೆ ಕಳೆದುಕೊಂಡಿದ್ದೆ ಮತ್ತು ತಪ್ಪು ಮಾಡಿದ್ದೇನೆ. ಈ ಘಟನೆಯಿಂದ ನನಗೆ ಮುಜುಗರವಾಗಿದೆ. ನಾನು ಹೇಗಿರಬೇಕೆಂದು ಬಯಸುತ್ತೀನೊ ಅದಕ್ಕೆ ವಿರುದ್ಧವಾಗಿ ಅಂದು ನಡೆದುಕೊಂಡಿದ್ದೇನೆ” ಎಂದು ತಮ್ಮ Instagram ನಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಬಗೆಗಿನ ಜೋಕ್‌ಗಳು ನಮ್ಮ ಕೆಲಸದ ಭಾಗವಾಗಿವೆ. ಆದರೆ ಜಾಡಾ ಅವರ ವೈದ್ಯಕೀಯ ಸ್ಥಿತಿಯ ಬಗೆಗಿನ ಜೋಕ್ ನನಗೆ ಸಹಿಸಲಾಗಲಿಲ್ಲ ಮತ್ತು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದೆ. ಆದರೆ ಹಿಂಸಾಚಾರವು ಎಲ್ಲಾ ರೂಪಗಳಲ್ಲಿ ವಿಷಕಾರಿ ಮತ್ತು ವಿನಾಶಕಾರಿಯಾಗಿದೆ. ಕಳೆದ ರಾತ್ರಿಯ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ನನ್ನ ವರ್ತನೆಯು ಸ್ವೀಕಾರಾರ್ಹವಲ್ಲ ಮತ್ತು ಕ್ಷಮಿಸಲಾಗದಂತಿತ್ತು” ಎಂದು ಸ್ಮಿತ್ ಬರೆದಿದ್ದಾರೆ.

ಪ್ರೀತಿ ಮತ್ತು ದಯೆಯ ಜಗತ್ತಿನಲ್ಲಿ ಹಿಂಸೆಗೆ ಸ್ಥಳವಿಲ್ಲ. ಹಾಗಾಗಿ ಆಸ್ಕರ್ ಅಕಾಡೆಮಿ, ಕಾರ್ಯಕ್ರಮದ ನಿರ್ಮಾಪಕರು, ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಮತ್ತು ಪ್ರಪಂಚದಾದ್ಯಂತ ಕಾರ್ಯಕ್ರಮ ವೀಕ್ಷಿಸಿದ ಪ್ರತಿಯೊಬ್ಬರ ಬಳಿಯೂ ನಾನು ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ವಿಲಿಯಮ್ಸ್ ಕುಟುಂಬ ಮತ್ತು ನನ್ನ ಕಿಂಗ್ ರಿಚರ್ಡ್ ಕುಟುಂಬಕ್ಕೆ ಕ್ಷಮೆಯಾಚಿಸಲು ಬಯಸುತ್ತೇನೆ. ನನ್ನ ನಡವಳಿಕೆಯು ನಮಗೆಲ್ಲರಿಗೂ ಒಂದು ಸುಂದರವಾದ ಪ್ರಯಾಣವಾಗಿದೆ ಎಂದು ನಾನು ತೀವ್ರವಾಗಿ ವಿಷಾದಿಸುತ್ತೇನೆ. ಇದನ್ನು ತಿದ್ದಿಕೊಳ್ಳಲು ಕೆಲಸ ಮಾಡುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಈ ರೀತಿಯ ಅವರ ವಿನಯಪೂರ್ವಕ ಕ್ಷಮೆಯಾಚನೆಗೆ ಹಲವಾರು ಅಭಿಮಾನಿಗಳು ಬೆಂಬಲ ಸೂಚಿಸಿದ್ದಾರೆ.

ಸ್ಮಿತ್ ಪತ್ನಿ ಜಾಡ ಪಿಂಕೆಟ್ ಅವರು ಕೂದಲು ಉದುರುವಿಕೆಗೆ ಕಾರಣವಾಗುವ ಅಲೋಪೆಸಿಯಾ ರೋಗದಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರು ಭಾನುವಾರದ ಆಸ್ಕರ್ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಅವರ ಸಂಪೂರ್ಣ ತಲೆಗೂದಲು ಕತ್ತರಿಸಿದ್ದರು.

“94 ನೇ ಅಕಾಡೆಮಿ ಪ್ರಶಸ್ತಿಗಳು ಅಂತಿಮ ಘಳಿಗೆಯಲ್ಲಿದ್ದು, ಪಿಂಕೆಟ್ ಸ್ಮಿತ್ ಅವರು ‘G.I. ಜೇನ್ 2’ ನಲ್ಲಿ (ತಲೆ ಬೋಳಿಸಿಕೊಂಡ ಮಹಿಳಾ ಸೈನಿಕರ ಕುರಿತಾದ ಚಲನಚಿತ್ರದ ಮುಂದಿನ ಭಾಗ) ನಟಿಸಲು ಸಿದ್ಧರಾಗಿ ಕಾಣಿಸಿಕೊಂಡಿದ್ದಾರೆ” ಎಂದು ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್ ವ್ಯಂಗ್ಯವಾಡಿದ್ ರು. ಇದು ಇಡೀ ಪ್ರಕರಣಕ್ಕೆ ಕಾರಣವಾಗಿತ್ತು.


ಇದನ್ನೂ ಓದಿ; ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...