Homeಅಂತರಾಷ್ಟ್ರೀಯಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ಆಸ್ಕರ್ ವೇದಿಕೆಯಲ್ಲಿ ನಿರೂಪಕನಿಗೆ ಕಪಾಳಮೋಕ್ಷ ಪ್ರಕರಣ: ಕ್ಷಮೆಯಾಚಿಸಿದ ನಟ ವಿಲ್ ಸ್ಮಿತ್

ವಿಲ್ ಸ್ಮಿತ್ 'ಕಿಂಗ್ ರಿಚರ್ಡ್ಸ್' ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಈ ಭಾರಿ ಆಸ್ಕರ್ ಪ್ರಶಸ್ತಿ ಗಳಿಸಿದ್ದಾರೆ.

- Advertisement -
- Advertisement -

ಈ ಬಾರಿಯ ಆಸ್ಕರ್ ಪ್ರಶಸ್ತಿ ವಿಜೇತ ನಟ ವಿಲ್ ಸ್ಮಿತ್ ವೇದಿಕೆಯಲ್ಲಿಯೇ ಸಹ ನಟ ಮತ್ತು ನಿರೂಪಕ ಕ್ರಿಸ್ ರಾಕ್ ಕೆನ್ನೆಗೆ ಬಾರಿಸಿದ್ದಕ್ಕಾಗಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಕಿಂಗ್ ರಿಚರ್ಡ್ಸ್ ಚಿತ್ರದ ನಟನೆಗಾಗಿ ಅತ್ಯುತ್ತಮ ನಟ ವಿಭಾಗದಲ್ಲಿ ಪ್ರಶಸ್ತಿ ಗಳಿಸಿದ ವಿಲ್ ಸ್ಮಿತ್, ಆಸ್ಕರ್ ಪ್ರಶಸ್ತಿ ಪ್ರಧಾನ ಕಾರ್ಯಕ್ರಮಕ್ಕೆ ತಮ್ಮ ಪತ್ನಿ ಜಾಡಾ ಪಿಂಕೆಟ್‌ರೊಂದಿಗೆ ಆಗಮಿಸಿದ್ದರು. ಸಮಾರಂಭದ ಒಂದು ಘಟ್ಟದಲ್ಲಿ ನಿರೂಪಣೆ ಮಾಡುತ್ತಿದ್ದ ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್, ಜಾಡಾ ಪಿಂಕೆಟ್ ತಲೆಕೂದಲಿನ ಬಗೆಗೆ ಜೋಕ್ ಮಾಡಿದ್ದರು. ಇದರಿಂದ ಸಿಟ್ಟಿಗೆದ್ದ ವಿಲ್ ಸ್ಮಿತ್ ವೇದಿಕೆಯೇರಿ ರಾಕ್ ಕೆನ್ನಗೆ ಬಾರಿಸಿದ್ದರು.

ಈ ಸಂದರ್ಭದಲ್ಲಿ ಆಘಾತಕ್ಕೊಳಗಾದ ರಾಕ್ ಸ್ವಲ್ಪ ಹೊತ್ತು ಮೌನವಾಗಿದ್ದರು. ಆಗ ಕೆಳಗಿದ್ದ ವಿಲ್ ಸ್ಮಿತ್, “ನನ್ನ ಪತ್ನಿಯ ಬಗ್ಗೆ ಹೇಳಬೇಡ, ನನ್ನ ಪತ್ನಿಯ ಬಗ್ಗೆ ನಿನ್ನ ಕೊಳಕು ಬಾಯಿಂದ ಮಾತನಾಡಬೇಡ” ಎಂದು ಕೂಗಿದ್ದರು. ಆಗ ಕ್ರಿಸ್ ರಾಕ್ ಒಕೆ ಒಕೆ ಎಂದಿದ್ದರು.

ಈ ಘಟನೆಯು ತಮಾಷೆಯೋ, ನಿಜವೋ ಎಂದು ಅರ್ಥೈಸುವಲ್ಲಿ ಪ್ರೇಕ್ಷಕರು ಗೊಂದಲದಲ್ಲಿದ್ದರು. ಆಸ್ಕರ್ ಪ್ರಶಸ್ತಿ ನೀಡುವ ಅಕಾಡೆಮಿ ಸಂಸ್ಥೆಯು ಈ ಕುರಿತು ಇಬ್ಬರನ್ನು ಮಾತನಾಡಿಸಿದ್ದಲ್ಲದೆ ತನಿಖೆಗೆ ಆದೇಶಿಸಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ನಟ ವಿಲ್ ಸ್ಮಿತ್ ಕ್ರಿಸ್ ರಾಕ್ ಬಳಿ ಬೇಷರತ್ ಕ್ಷಮೆಯಾಚಿಸಿದ್ದಾರೆ. “ನಾನು ನಿಮ್ಮಲ್ಲಿ ಸಾರ್ವಜನಿಕವಾಗಿ ಕ್ಷಮೆಯಾಚಿಸಲು ಬಯಸುತ್ತೇನೆ ಕ್ರಿಸ್. ಆ ಸಂದರ್ಭದಲ್ಲಿ ನಾನು ಸ್ಥಿಮಿತತೆ ಕಳೆದುಕೊಂಡಿದ್ದೆ ಮತ್ತು ತಪ್ಪು ಮಾಡಿದ್ದೇನೆ. ಈ ಘಟನೆಯಿಂದ ನನಗೆ ಮುಜುಗರವಾಗಿದೆ. ನಾನು ಹೇಗಿರಬೇಕೆಂದು ಬಯಸುತ್ತೀನೊ ಅದಕ್ಕೆ ವಿರುದ್ಧವಾಗಿ ಅಂದು ನಡೆದುಕೊಂಡಿದ್ದೇನೆ” ಎಂದು ತಮ್ಮ Instagram ನಲ್ಲಿ ಬರೆದುಕೊಂಡಿದ್ದಾರೆ.

“ನನ್ನ ಬಗೆಗಿನ ಜೋಕ್‌ಗಳು ನಮ್ಮ ಕೆಲಸದ ಭಾಗವಾಗಿವೆ. ಆದರೆ ಜಾಡಾ ಅವರ ವೈದ್ಯಕೀಯ ಸ್ಥಿತಿಯ ಬಗೆಗಿನ ಜೋಕ್ ನನಗೆ ಸಹಿಸಲಾಗಲಿಲ್ಲ ಮತ್ತು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದೆ. ಆದರೆ ಹಿಂಸಾಚಾರವು ಎಲ್ಲಾ ರೂಪಗಳಲ್ಲಿ ವಿಷಕಾರಿ ಮತ್ತು ವಿನಾಶಕಾರಿಯಾಗಿದೆ. ಕಳೆದ ರಾತ್ರಿಯ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ನನ್ನ ವರ್ತನೆಯು ಸ್ವೀಕಾರಾರ್ಹವಲ್ಲ ಮತ್ತು ಕ್ಷಮಿಸಲಾಗದಂತಿತ್ತು” ಎಂದು ಸ್ಮಿತ್ ಬರೆದಿದ್ದಾರೆ.

ಪ್ರೀತಿ ಮತ್ತು ದಯೆಯ ಜಗತ್ತಿನಲ್ಲಿ ಹಿಂಸೆಗೆ ಸ್ಥಳವಿಲ್ಲ. ಹಾಗಾಗಿ ಆಸ್ಕರ್ ಅಕಾಡೆಮಿ, ಕಾರ್ಯಕ್ರಮದ ನಿರ್ಮಾಪಕರು, ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ಮತ್ತು ಪ್ರಪಂಚದಾದ್ಯಂತ ಕಾರ್ಯಕ್ರಮ ವೀಕ್ಷಿಸಿದ ಪ್ರತಿಯೊಬ್ಬರ ಬಳಿಯೂ ನಾನು ಕ್ಷಮೆಯಾಚಿಸಲು ಬಯಸುತ್ತೇನೆ. ನಾನು ವಿಲಿಯಮ್ಸ್ ಕುಟುಂಬ ಮತ್ತು ನನ್ನ ಕಿಂಗ್ ರಿಚರ್ಡ್ ಕುಟುಂಬಕ್ಕೆ ಕ್ಷಮೆಯಾಚಿಸಲು ಬಯಸುತ್ತೇನೆ. ನನ್ನ ನಡವಳಿಕೆಯು ನಮಗೆಲ್ಲರಿಗೂ ಒಂದು ಸುಂದರವಾದ ಪ್ರಯಾಣವಾಗಿದೆ ಎಂದು ನಾನು ತೀವ್ರವಾಗಿ ವಿಷಾದಿಸುತ್ತೇನೆ. ಇದನ್ನು ತಿದ್ದಿಕೊಳ್ಳಲು ಕೆಲಸ ಮಾಡುತ್ತೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ಈ ರೀತಿಯ ಅವರ ವಿನಯಪೂರ್ವಕ ಕ್ಷಮೆಯಾಚನೆಗೆ ಹಲವಾರು ಅಭಿಮಾನಿಗಳು ಬೆಂಬಲ ಸೂಚಿಸಿದ್ದಾರೆ.

ಸ್ಮಿತ್ ಪತ್ನಿ ಜಾಡ ಪಿಂಕೆಟ್ ಅವರು ಕೂದಲು ಉದುರುವಿಕೆಗೆ ಕಾರಣವಾಗುವ ಅಲೋಪೆಸಿಯಾ ರೋಗದಿಂದ ಬಳಲುತ್ತಿದ್ದಾರೆ. ಹಾಗಾಗಿ ಅವರು ಭಾನುವಾರದ ಆಸ್ಕರ್ ಸಮಾರಂಭದಲ್ಲಿ ಭಾಗವಹಿಸುವ ಮುನ್ನ ಅವರ ಸಂಪೂರ್ಣ ತಲೆಗೂದಲು ಕತ್ತರಿಸಿದ್ದರು.

“94 ನೇ ಅಕಾಡೆಮಿ ಪ್ರಶಸ್ತಿಗಳು ಅಂತಿಮ ಘಳಿಗೆಯಲ್ಲಿದ್ದು, ಪಿಂಕೆಟ್ ಸ್ಮಿತ್ ಅವರು ‘G.I. ಜೇನ್ 2’ ನಲ್ಲಿ (ತಲೆ ಬೋಳಿಸಿಕೊಂಡ ಮಹಿಳಾ ಸೈನಿಕರ ಕುರಿತಾದ ಚಲನಚಿತ್ರದ ಮುಂದಿನ ಭಾಗ) ನಟಿಸಲು ಸಿದ್ಧರಾಗಿ ಕಾಣಿಸಿಕೊಂಡಿದ್ದಾರೆ” ಎಂದು ನಟ ಮತ್ತು ಕಾಮಿಡಿಯನ್ ಕ್ರಿಸ್ ರಾಕ್ ವ್ಯಂಗ್ಯವಾಡಿದ್ ರು. ಇದು ಇಡೀ ಪ್ರಕರಣಕ್ಕೆ ಕಾರಣವಾಗಿತ್ತು.


ಇದನ್ನೂ ಓದಿ; ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...