Homeಕರೋನಾ ತಲ್ಲಣಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

ಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

- Advertisement -
- Advertisement -

“ಜನರು ಹೇಗೆ ಚೇತರಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಗಮನಹರಿಸಬೇಕು. ಕೋವಿಡ್‌ನಿಂದ ಸತ್ತವರೆಷ್ಟು ಎಂದು ಚರ್ಚೆ ಮಾಡುತ್ತ ಕೋಲಾಹಲ ಎಬ್ಬಿಸಿದರೆ ಮತ್ತೆ ಅವರು ಹುಟ್ಟಿ ಬರುತ್ತಾರಾ? ಕೋವಿಡ್ ಸಾವಿನ ಸಂಖ್ಯೆಯ ಕುರಿತ ಚರ್ಚೆಯಲ್ಲಿ ಯಾವುದೇ ಅರ್ಥವಿಲ್ಲ …” ಎಂದು ಹೇಳುವ ಮೂಲಕ ಹರಿಯಾಣ ಮುಖ್ಯಮಂತ್ರಿ, ಬಿಜೆಪಿ ನಾಯಕ ಮನೋಹರ ಲಾಲ್ ಕಟ್ಟರ್ ವಿವಾದಕ್ಕೆ ಈಡಾಗಿದ್ದು, ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಆಮ್ಲಜನಕದ ಕೊರತೆಯಿಂದಾಗಿ ಹಿಸಾರ್ ಜಿಲ್ಲೆಯಲ್ಲಿ ಸೋಮವಾರ ಐದು ಸಾವುಗಳು ಸಂಭವಿಸಿದ ನಂತರ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ರಾಜ್ಯದಲ್ಲಿ ಕೋವಿಡ್ ಸಾವುಗಳ ಸಂಖ್ಯೆಯನ್ನು ಮುಚ್ಚಿಟ್ಟು ಕಡಿಮೆ ತೋರಿಸಲಾಗುತ್ತಿದೆ ಎಂಬ ಆರೋಪದ ಕುರಿತು ಕೇಳಿದಾಗ ಅವರು ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಮ್ಲಜನಕದ ಕೊರತೆಯಿಂದಾಗಿ ಹಿಸಾರ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಐದು ಸಾವುಗಳನ್ನು ಉಲ್ಲೇಖಿಸಿದ ಅವರು, ಲಭ್ಯವಿರುವ ಮೂಲಸೌಕರ್ಯಗಳ ಮಿತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. “ನಾವು ಯಾವ ರೀತಿಯ ಪರಿಸ್ಥಿತಿಯಲ್ಲಿದ್ದೇವೆ ಎಂದು ನೋಡಿ. ಡೇಟಾದೊಂದಿಗೆ ಆಟ ಆಡಲು ನಾವು ಬಯಸುವುದಿಲ್ಲ” ಎಂದು ಅವರು ಹೇಳಿದರು.

ಸೋಮವಾರ ಹಿಸಾರ್‌ನ ಖಾಸಗಿ ಆಸ್ಪತ್ರೆಯಲ್ಲಿ ಐದು ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ, ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಆಮ್ಲಜನಕದ ಕೊರತೆಯಿಂದಾಗಿ ಸಾವು ಸಂಭವಿಸಿವೆ. ಆದರೆ ಇದನ್ನು ನಿರಾಕರಿಸಿದ ಜಿಲ್ಲಾಡಳಿತವು ಆಸ್ಪತ್ರೆ ವಿರುದ್ಧ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

“ಕೋವಿಡ್ ರೋಗಿಗಳು ಹೇಗೆ ಗುಣಮುಖರಾಗುತ್ತಿದ್ದಾರೆ ಎಂಬುದಕ್ಕೆ ಮಹತ್ವ ನೀಡಬೇಕು. ಅದು ಬಿಟ್ಟು ಕೋವಿಡ್ ಕುರಿತ ಸಾವಿನ ಸಂಖ್ಯೆ ಬಗ್ಗೆ ಚರ್ಚೆ ಮಾಡಿ ಕೋಲಾಹಲ ಎಬ್ಬಿಸಿದರೆ, ಸತ್ತವರೇನು ಪುನರ್ಜನ್ಮ ಪಡೆಯುತ್ತಾರಾ?’ ಎಂದು ಪ್ರಶ್ನೆ ಮಾಡಿದ ಖಟ್ಟರ್, ಸಾಂಕ್ರಾಮಿಕದ ಬಗ್ಗೆ ನಿಮಗೆ ಅಥವಾ ನನಗೆ ಏನೂ ತಿಳಿದಿರಲಿಲ್ಲ. ಈ ಕಾಲದಲ್ಲಿ, ನೀವು (ಮೀಡಿಯಾ), ರೋಗಿಗಳು ಮತ್ತು ಎಲ್ಲರ ಸಹಕಾರ ನಮಗೆ ಬೇಕು’ ಎಂದು ಮನವಿ ಮಾಡಿದರು.

ಹರಿಯಾಣದಲ್ಲಿ ಸೋಮವಾರ 11,504 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 75 ಸಾವುಗಳು ದಾಖಲಾಗಿವೆ. ಹೋಲಿಕೆಯಲ್ಲಿ ತಮ್ಮಲ್ಲಿ ಪ್ರಕರಣ ಮತ್ತು ಸಾವು ಕಡಿಮೆ ಎಂದು ತೋರಿಸಲು ಅನೇಕ ರಾಜ್ಯಗಳು ಕೋವಿಡ್ ಸಾವುನೋವುಗಳನ್ನು ಕಡಿಮೆ ಸಂಖ್ಯೆಯಲ್ಲಿ ತೋರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಉತ್ತರಪ್ರದೇಶ, ಹರಿಯಾಣ ಮತ್ತು ಇತರ ಕೆಲವು ಬಿಜೆಪಿ ಆಡಳಿತ ಇರುವ ಸರ್ಕಾರಗಳು ಹೀಗೆ ಮಾಡುತ್ತ ಬಂದಿವೆ ಎಂದು ಆರೋಪಿಸಲಾಗಿದೆ.

“ನಾವು ಪ್ರತಿ ಜೀವವನ್ನು ಉಳಿಸಲು ಪ್ರಯತ್ನಿಸುತ್ತೇವೆ. ಸಾವುಗಳು ಕಡಿಮೆಯಿವೆ ಅಥವಾ ಹೆಚ್ಚಾಗಿವೆ ಎಂದು ಹೇಳುವುದರಿಂದ ಯಾವುದೇ ಪ್ರಯೋಜನವಿಲ್ಲ. ನಮ್ಮ ವ್ಯವಸ್ಥೆಗಳನ್ನು ಸರಿಪಡಿಸಲು ನಾವು ಸಮರ್ಥರಾಗಿದ್ದೇವೆ. ನಾವು ಏನು ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂಬುದು ಮುಖ್ಯವಷ್ಟೇ” ಎಂದು ಖಟ್ಟರ್ ಹೇಳಿದ್ದಾರೆ.

ಕೋವಿಡ್ ರೋಗ ಮತ್ತು ಅದರ ಪರಿಣಾಮದ ಕುರಿತಾದ ಪ್ರಶ್ನೆಗಳಿಗೆ ತಮ್ಮ ಆಡಳಿತವು ಸ್ಪಂದಿಸುತ್ತಿಲ್ಲ ಎಂಬ ಆರೋಪವನ್ನು ಅವರು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಲಸಿಕೆ: ರಾಜ್ಯಗಳಿಗೆ ಸಹಾಯ ಮಾಡುವುದು ಕೇಂದ್ರದ ಮೂಲಭೂತ ಕರ್ತವ್ಯ – ಇದು ಕಂಪನಿಗಳು ಅತಿಹೆಚ್ಚು ಲಾಭ ಮಾಡುವ ಸಮಯವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...