Homeಕರೋನಾ ತಲ್ಲಣಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

ಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

- Advertisement -
- Advertisement -

“ಜನರು ಹೇಗೆ ಚೇತರಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಗಮನಹರಿಸಬೇಕು. ಕೋವಿಡ್‌ನಿಂದ ಸತ್ತವರೆಷ್ಟು ಎಂದು ಚರ್ಚೆ ಮಾಡುತ್ತ ಕೋಲಾಹಲ ಎಬ್ಬಿಸಿದರೆ ಮತ್ತೆ ಅವರು ಹುಟ್ಟಿ ಬರುತ್ತಾರಾ? ಕೋವಿಡ್ ಸಾವಿನ ಸಂಖ್ಯೆಯ ಕುರಿತ ಚರ್ಚೆಯಲ್ಲಿ ಯಾವುದೇ ಅರ್ಥವಿಲ್ಲ …” ಎಂದು ಹೇಳುವ ಮೂಲಕ ಹರಿಯಾಣ ಮುಖ್ಯಮಂತ್ರಿ, ಬಿಜೆಪಿ ನಾಯಕ ಮನೋಹರ ಲಾಲ್ ಕಟ್ಟರ್ ವಿವಾದಕ್ಕೆ ಈಡಾಗಿದ್ದು, ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಆಮ್ಲಜನಕದ ಕೊರತೆಯಿಂದಾಗಿ ಹಿಸಾರ್ ಜಿಲ್ಲೆಯಲ್ಲಿ ಸೋಮವಾರ ಐದು ಸಾವುಗಳು ಸಂಭವಿಸಿದ ನಂತರ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ರಾಜ್ಯದಲ್ಲಿ ಕೋವಿಡ್ ಸಾವುಗಳ ಸಂಖ್ಯೆಯನ್ನು ಮುಚ್ಚಿಟ್ಟು ಕಡಿಮೆ ತೋರಿಸಲಾಗುತ್ತಿದೆ ಎಂಬ ಆರೋಪದ ಕುರಿತು ಕೇಳಿದಾಗ ಅವರು ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಮ್ಲಜನಕದ ಕೊರತೆಯಿಂದಾಗಿ ಹಿಸಾರ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಐದು ಸಾವುಗಳನ್ನು ಉಲ್ಲೇಖಿಸಿದ ಅವರು, ಲಭ್ಯವಿರುವ ಮೂಲಸೌಕರ್ಯಗಳ ಮಿತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. “ನಾವು ಯಾವ ರೀತಿಯ ಪರಿಸ್ಥಿತಿಯಲ್ಲಿದ್ದೇವೆ ಎಂದು ನೋಡಿ. ಡೇಟಾದೊಂದಿಗೆ ಆಟ ಆಡಲು ನಾವು ಬಯಸುವುದಿಲ್ಲ” ಎಂದು ಅವರು ಹೇಳಿದರು.

ಸೋಮವಾರ ಹಿಸಾರ್‌ನ ಖಾಸಗಿ ಆಸ್ಪತ್ರೆಯಲ್ಲಿ ಐದು ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ, ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಆಮ್ಲಜನಕದ ಕೊರತೆಯಿಂದಾಗಿ ಸಾವು ಸಂಭವಿಸಿವೆ. ಆದರೆ ಇದನ್ನು ನಿರಾಕರಿಸಿದ ಜಿಲ್ಲಾಡಳಿತವು ಆಸ್ಪತ್ರೆ ವಿರುದ್ಧ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

“ಕೋವಿಡ್ ರೋಗಿಗಳು ಹೇಗೆ ಗುಣಮುಖರಾಗುತ್ತಿದ್ದಾರೆ ಎಂಬುದಕ್ಕೆ ಮಹತ್ವ ನೀಡಬೇಕು. ಅದು ಬಿಟ್ಟು ಕೋವಿಡ್ ಕುರಿತ ಸಾವಿನ ಸಂಖ್ಯೆ ಬಗ್ಗೆ ಚರ್ಚೆ ಮಾಡಿ ಕೋಲಾಹಲ ಎಬ್ಬಿಸಿದರೆ, ಸತ್ತವರೇನು ಪುನರ್ಜನ್ಮ ಪಡೆಯುತ್ತಾರಾ?’ ಎಂದು ಪ್ರಶ್ನೆ ಮಾಡಿದ ಖಟ್ಟರ್, ಸಾಂಕ್ರಾಮಿಕದ ಬಗ್ಗೆ ನಿಮಗೆ ಅಥವಾ ನನಗೆ ಏನೂ ತಿಳಿದಿರಲಿಲ್ಲ. ಈ ಕಾಲದಲ್ಲಿ, ನೀವು (ಮೀಡಿಯಾ), ರೋಗಿಗಳು ಮತ್ತು ಎಲ್ಲರ ಸಹಕಾರ ನಮಗೆ ಬೇಕು’ ಎಂದು ಮನವಿ ಮಾಡಿದರು.

ಹರಿಯಾಣದಲ್ಲಿ ಸೋಮವಾರ 11,504 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 75 ಸಾವುಗಳು ದಾಖಲಾಗಿವೆ. ಹೋಲಿಕೆಯಲ್ಲಿ ತಮ್ಮಲ್ಲಿ ಪ್ರಕರಣ ಮತ್ತು ಸಾವು ಕಡಿಮೆ ಎಂದು ತೋರಿಸಲು ಅನೇಕ ರಾಜ್ಯಗಳು ಕೋವಿಡ್ ಸಾವುನೋವುಗಳನ್ನು ಕಡಿಮೆ ಸಂಖ್ಯೆಯಲ್ಲಿ ತೋರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಉತ್ತರಪ್ರದೇಶ, ಹರಿಯಾಣ ಮತ್ತು ಇತರ ಕೆಲವು ಬಿಜೆಪಿ ಆಡಳಿತ ಇರುವ ಸರ್ಕಾರಗಳು ಹೀಗೆ ಮಾಡುತ್ತ ಬಂದಿವೆ ಎಂದು ಆರೋಪಿಸಲಾಗಿದೆ.

“ನಾವು ಪ್ರತಿ ಜೀವವನ್ನು ಉಳಿಸಲು ಪ್ರಯತ್ನಿಸುತ್ತೇವೆ. ಸಾವುಗಳು ಕಡಿಮೆಯಿವೆ ಅಥವಾ ಹೆಚ್ಚಾಗಿವೆ ಎಂದು ಹೇಳುವುದರಿಂದ ಯಾವುದೇ ಪ್ರಯೋಜನವಿಲ್ಲ. ನಮ್ಮ ವ್ಯವಸ್ಥೆಗಳನ್ನು ಸರಿಪಡಿಸಲು ನಾವು ಸಮರ್ಥರಾಗಿದ್ದೇವೆ. ನಾವು ಏನು ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂಬುದು ಮುಖ್ಯವಷ್ಟೇ” ಎಂದು ಖಟ್ಟರ್ ಹೇಳಿದ್ದಾರೆ.

ಕೋವಿಡ್ ರೋಗ ಮತ್ತು ಅದರ ಪರಿಣಾಮದ ಕುರಿತಾದ ಪ್ರಶ್ನೆಗಳಿಗೆ ತಮ್ಮ ಆಡಳಿತವು ಸ್ಪಂದಿಸುತ್ತಿಲ್ಲ ಎಂಬ ಆರೋಪವನ್ನು ಅವರು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಲಸಿಕೆ: ರಾಜ್ಯಗಳಿಗೆ ಸಹಾಯ ಮಾಡುವುದು ಕೇಂದ್ರದ ಮೂಲಭೂತ ಕರ್ತವ್ಯ – ಇದು ಕಂಪನಿಗಳು ಅತಿಹೆಚ್ಚು ಲಾಭ ಮಾಡುವ ಸಮಯವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...