Homeಕರೋನಾ ತಲ್ಲಣಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

ಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

- Advertisement -
- Advertisement -

“ಜನರು ಹೇಗೆ ಚೇತರಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಗಮನಹರಿಸಬೇಕು. ಕೋವಿಡ್‌ನಿಂದ ಸತ್ತವರೆಷ್ಟು ಎಂದು ಚರ್ಚೆ ಮಾಡುತ್ತ ಕೋಲಾಹಲ ಎಬ್ಬಿಸಿದರೆ ಮತ್ತೆ ಅವರು ಹುಟ್ಟಿ ಬರುತ್ತಾರಾ? ಕೋವಿಡ್ ಸಾವಿನ ಸಂಖ್ಯೆಯ ಕುರಿತ ಚರ್ಚೆಯಲ್ಲಿ ಯಾವುದೇ ಅರ್ಥವಿಲ್ಲ …” ಎಂದು ಹೇಳುವ ಮೂಲಕ ಹರಿಯಾಣ ಮುಖ್ಯಮಂತ್ರಿ, ಬಿಜೆಪಿ ನಾಯಕ ಮನೋಹರ ಲಾಲ್ ಕಟ್ಟರ್ ವಿವಾದಕ್ಕೆ ಈಡಾಗಿದ್ದು, ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಆಮ್ಲಜನಕದ ಕೊರತೆಯಿಂದಾಗಿ ಹಿಸಾರ್ ಜಿಲ್ಲೆಯಲ್ಲಿ ಸೋಮವಾರ ಐದು ಸಾವುಗಳು ಸಂಭವಿಸಿದ ನಂತರ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ರಾಜ್ಯದಲ್ಲಿ ಕೋವಿಡ್ ಸಾವುಗಳ ಸಂಖ್ಯೆಯನ್ನು ಮುಚ್ಚಿಟ್ಟು ಕಡಿಮೆ ತೋರಿಸಲಾಗುತ್ತಿದೆ ಎಂಬ ಆರೋಪದ ಕುರಿತು ಕೇಳಿದಾಗ ಅವರು ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಮ್ಲಜನಕದ ಕೊರತೆಯಿಂದಾಗಿ ಹಿಸಾರ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಐದು ಸಾವುಗಳನ್ನು ಉಲ್ಲೇಖಿಸಿದ ಅವರು, ಲಭ್ಯವಿರುವ ಮೂಲಸೌಕರ್ಯಗಳ ಮಿತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. “ನಾವು ಯಾವ ರೀತಿಯ ಪರಿಸ್ಥಿತಿಯಲ್ಲಿದ್ದೇವೆ ಎಂದು ನೋಡಿ. ಡೇಟಾದೊಂದಿಗೆ ಆಟ ಆಡಲು ನಾವು ಬಯಸುವುದಿಲ್ಲ” ಎಂದು ಅವರು ಹೇಳಿದರು.

ಸೋಮವಾರ ಹಿಸಾರ್‌ನ ಖಾಸಗಿ ಆಸ್ಪತ್ರೆಯಲ್ಲಿ ಐದು ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ, ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಆಮ್ಲಜನಕದ ಕೊರತೆಯಿಂದಾಗಿ ಸಾವು ಸಂಭವಿಸಿವೆ. ಆದರೆ ಇದನ್ನು ನಿರಾಕರಿಸಿದ ಜಿಲ್ಲಾಡಳಿತವು ಆಸ್ಪತ್ರೆ ವಿರುದ್ಧ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

“ಕೋವಿಡ್ ರೋಗಿಗಳು ಹೇಗೆ ಗುಣಮುಖರಾಗುತ್ತಿದ್ದಾರೆ ಎಂಬುದಕ್ಕೆ ಮಹತ್ವ ನೀಡಬೇಕು. ಅದು ಬಿಟ್ಟು ಕೋವಿಡ್ ಕುರಿತ ಸಾವಿನ ಸಂಖ್ಯೆ ಬಗ್ಗೆ ಚರ್ಚೆ ಮಾಡಿ ಕೋಲಾಹಲ ಎಬ್ಬಿಸಿದರೆ, ಸತ್ತವರೇನು ಪುನರ್ಜನ್ಮ ಪಡೆಯುತ್ತಾರಾ?’ ಎಂದು ಪ್ರಶ್ನೆ ಮಾಡಿದ ಖಟ್ಟರ್, ಸಾಂಕ್ರಾಮಿಕದ ಬಗ್ಗೆ ನಿಮಗೆ ಅಥವಾ ನನಗೆ ಏನೂ ತಿಳಿದಿರಲಿಲ್ಲ. ಈ ಕಾಲದಲ್ಲಿ, ನೀವು (ಮೀಡಿಯಾ), ರೋಗಿಗಳು ಮತ್ತು ಎಲ್ಲರ ಸಹಕಾರ ನಮಗೆ ಬೇಕು’ ಎಂದು ಮನವಿ ಮಾಡಿದರು.

ಹರಿಯಾಣದಲ್ಲಿ ಸೋಮವಾರ 11,504 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 75 ಸಾವುಗಳು ದಾಖಲಾಗಿವೆ. ಹೋಲಿಕೆಯಲ್ಲಿ ತಮ್ಮಲ್ಲಿ ಪ್ರಕರಣ ಮತ್ತು ಸಾವು ಕಡಿಮೆ ಎಂದು ತೋರಿಸಲು ಅನೇಕ ರಾಜ್ಯಗಳು ಕೋವಿಡ್ ಸಾವುನೋವುಗಳನ್ನು ಕಡಿಮೆ ಸಂಖ್ಯೆಯಲ್ಲಿ ತೋರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಉತ್ತರಪ್ರದೇಶ, ಹರಿಯಾಣ ಮತ್ತು ಇತರ ಕೆಲವು ಬಿಜೆಪಿ ಆಡಳಿತ ಇರುವ ಸರ್ಕಾರಗಳು ಹೀಗೆ ಮಾಡುತ್ತ ಬಂದಿವೆ ಎಂದು ಆರೋಪಿಸಲಾಗಿದೆ.

“ನಾವು ಪ್ರತಿ ಜೀವವನ್ನು ಉಳಿಸಲು ಪ್ರಯತ್ನಿಸುತ್ತೇವೆ. ಸಾವುಗಳು ಕಡಿಮೆಯಿವೆ ಅಥವಾ ಹೆಚ್ಚಾಗಿವೆ ಎಂದು ಹೇಳುವುದರಿಂದ ಯಾವುದೇ ಪ್ರಯೋಜನವಿಲ್ಲ. ನಮ್ಮ ವ್ಯವಸ್ಥೆಗಳನ್ನು ಸರಿಪಡಿಸಲು ನಾವು ಸಮರ್ಥರಾಗಿದ್ದೇವೆ. ನಾವು ಏನು ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂಬುದು ಮುಖ್ಯವಷ್ಟೇ” ಎಂದು ಖಟ್ಟರ್ ಹೇಳಿದ್ದಾರೆ.

ಕೋವಿಡ್ ರೋಗ ಮತ್ತು ಅದರ ಪರಿಣಾಮದ ಕುರಿತಾದ ಪ್ರಶ್ನೆಗಳಿಗೆ ತಮ್ಮ ಆಡಳಿತವು ಸ್ಪಂದಿಸುತ್ತಿಲ್ಲ ಎಂಬ ಆರೋಪವನ್ನು ಅವರು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಲಸಿಕೆ: ರಾಜ್ಯಗಳಿಗೆ ಸಹಾಯ ಮಾಡುವುದು ಕೇಂದ್ರದ ಮೂಲಭೂತ ಕರ್ತವ್ಯ – ಇದು ಕಂಪನಿಗಳು ಅತಿಹೆಚ್ಚು ಲಾಭ ಮಾಡುವ ಸಮಯವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...