Homeಕರೋನಾ ತಲ್ಲಣಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

ಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

- Advertisement -
- Advertisement -

“ಜನರು ಹೇಗೆ ಚೇತರಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಗಮನಹರಿಸಬೇಕು. ಕೋವಿಡ್‌ನಿಂದ ಸತ್ತವರೆಷ್ಟು ಎಂದು ಚರ್ಚೆ ಮಾಡುತ್ತ ಕೋಲಾಹಲ ಎಬ್ಬಿಸಿದರೆ ಮತ್ತೆ ಅವರು ಹುಟ್ಟಿ ಬರುತ್ತಾರಾ? ಕೋವಿಡ್ ಸಾವಿನ ಸಂಖ್ಯೆಯ ಕುರಿತ ಚರ್ಚೆಯಲ್ಲಿ ಯಾವುದೇ ಅರ್ಥವಿಲ್ಲ …” ಎಂದು ಹೇಳುವ ಮೂಲಕ ಹರಿಯಾಣ ಮುಖ್ಯಮಂತ್ರಿ, ಬಿಜೆಪಿ ನಾಯಕ ಮನೋಹರ ಲಾಲ್ ಕಟ್ಟರ್ ವಿವಾದಕ್ಕೆ ಈಡಾಗಿದ್ದು, ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಆಮ್ಲಜನಕದ ಕೊರತೆಯಿಂದಾಗಿ ಹಿಸಾರ್ ಜಿಲ್ಲೆಯಲ್ಲಿ ಸೋಮವಾರ ಐದು ಸಾವುಗಳು ಸಂಭವಿಸಿದ ನಂತರ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ರಾಜ್ಯದಲ್ಲಿ ಕೋವಿಡ್ ಸಾವುಗಳ ಸಂಖ್ಯೆಯನ್ನು ಮುಚ್ಚಿಟ್ಟು ಕಡಿಮೆ ತೋರಿಸಲಾಗುತ್ತಿದೆ ಎಂಬ ಆರೋಪದ ಕುರಿತು ಕೇಳಿದಾಗ ಅವರು ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಮ್ಲಜನಕದ ಕೊರತೆಯಿಂದಾಗಿ ಹಿಸಾರ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಐದು ಸಾವುಗಳನ್ನು ಉಲ್ಲೇಖಿಸಿದ ಅವರು, ಲಭ್ಯವಿರುವ ಮೂಲಸೌಕರ್ಯಗಳ ಮಿತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. “ನಾವು ಯಾವ ರೀತಿಯ ಪರಿಸ್ಥಿತಿಯಲ್ಲಿದ್ದೇವೆ ಎಂದು ನೋಡಿ. ಡೇಟಾದೊಂದಿಗೆ ಆಟ ಆಡಲು ನಾವು ಬಯಸುವುದಿಲ್ಲ” ಎಂದು ಅವರು ಹೇಳಿದರು.

ಸೋಮವಾರ ಹಿಸಾರ್‌ನ ಖಾಸಗಿ ಆಸ್ಪತ್ರೆಯಲ್ಲಿ ಐದು ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ, ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಆಮ್ಲಜನಕದ ಕೊರತೆಯಿಂದಾಗಿ ಸಾವು ಸಂಭವಿಸಿವೆ. ಆದರೆ ಇದನ್ನು ನಿರಾಕರಿಸಿದ ಜಿಲ್ಲಾಡಳಿತವು ಆಸ್ಪತ್ರೆ ವಿರುದ್ಧ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

“ಕೋವಿಡ್ ರೋಗಿಗಳು ಹೇಗೆ ಗುಣಮುಖರಾಗುತ್ತಿದ್ದಾರೆ ಎಂಬುದಕ್ಕೆ ಮಹತ್ವ ನೀಡಬೇಕು. ಅದು ಬಿಟ್ಟು ಕೋವಿಡ್ ಕುರಿತ ಸಾವಿನ ಸಂಖ್ಯೆ ಬಗ್ಗೆ ಚರ್ಚೆ ಮಾಡಿ ಕೋಲಾಹಲ ಎಬ್ಬಿಸಿದರೆ, ಸತ್ತವರೇನು ಪುನರ್ಜನ್ಮ ಪಡೆಯುತ್ತಾರಾ?’ ಎಂದು ಪ್ರಶ್ನೆ ಮಾಡಿದ ಖಟ್ಟರ್, ಸಾಂಕ್ರಾಮಿಕದ ಬಗ್ಗೆ ನಿಮಗೆ ಅಥವಾ ನನಗೆ ಏನೂ ತಿಳಿದಿರಲಿಲ್ಲ. ಈ ಕಾಲದಲ್ಲಿ, ನೀವು (ಮೀಡಿಯಾ), ರೋಗಿಗಳು ಮತ್ತು ಎಲ್ಲರ ಸಹಕಾರ ನಮಗೆ ಬೇಕು’ ಎಂದು ಮನವಿ ಮಾಡಿದರು.

ಹರಿಯಾಣದಲ್ಲಿ ಸೋಮವಾರ 11,504 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 75 ಸಾವುಗಳು ದಾಖಲಾಗಿವೆ. ಹೋಲಿಕೆಯಲ್ಲಿ ತಮ್ಮಲ್ಲಿ ಪ್ರಕರಣ ಮತ್ತು ಸಾವು ಕಡಿಮೆ ಎಂದು ತೋರಿಸಲು ಅನೇಕ ರಾಜ್ಯಗಳು ಕೋವಿಡ್ ಸಾವುನೋವುಗಳನ್ನು ಕಡಿಮೆ ಸಂಖ್ಯೆಯಲ್ಲಿ ತೋರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಉತ್ತರಪ್ರದೇಶ, ಹರಿಯಾಣ ಮತ್ತು ಇತರ ಕೆಲವು ಬಿಜೆಪಿ ಆಡಳಿತ ಇರುವ ಸರ್ಕಾರಗಳು ಹೀಗೆ ಮಾಡುತ್ತ ಬಂದಿವೆ ಎಂದು ಆರೋಪಿಸಲಾಗಿದೆ.

“ನಾವು ಪ್ರತಿ ಜೀವವನ್ನು ಉಳಿಸಲು ಪ್ರಯತ್ನಿಸುತ್ತೇವೆ. ಸಾವುಗಳು ಕಡಿಮೆಯಿವೆ ಅಥವಾ ಹೆಚ್ಚಾಗಿವೆ ಎಂದು ಹೇಳುವುದರಿಂದ ಯಾವುದೇ ಪ್ರಯೋಜನವಿಲ್ಲ. ನಮ್ಮ ವ್ಯವಸ್ಥೆಗಳನ್ನು ಸರಿಪಡಿಸಲು ನಾವು ಸಮರ್ಥರಾಗಿದ್ದೇವೆ. ನಾವು ಏನು ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂಬುದು ಮುಖ್ಯವಷ್ಟೇ” ಎಂದು ಖಟ್ಟರ್ ಹೇಳಿದ್ದಾರೆ.

ಕೋವಿಡ್ ರೋಗ ಮತ್ತು ಅದರ ಪರಿಣಾಮದ ಕುರಿತಾದ ಪ್ರಶ್ನೆಗಳಿಗೆ ತಮ್ಮ ಆಡಳಿತವು ಸ್ಪಂದಿಸುತ್ತಿಲ್ಲ ಎಂಬ ಆರೋಪವನ್ನು ಅವರು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಲಸಿಕೆ: ರಾಜ್ಯಗಳಿಗೆ ಸಹಾಯ ಮಾಡುವುದು ಕೇಂದ್ರದ ಮೂಲಭೂತ ಕರ್ತವ್ಯ – ಇದು ಕಂಪನಿಗಳು ಅತಿಹೆಚ್ಚು ಲಾಭ ಮಾಡುವ ಸಮಯವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...