Homeಕರೋನಾ ತಲ್ಲಣಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

ಕೋವಿಡ್ ಸಾವಿನ ಸಂಖ್ಯೆಯ ಚರ್ಚೆ ಮಾಡಿದ್ರೆ ಮತ್ತೆ ಅವ್ರು ಹುಟ್ಟಿ ಬರುತ್ತಾರ?: ಹರಿಯಾಣ ಸಿಎಂ ಉದ್ಧಟತನ

- Advertisement -
- Advertisement -

“ಜನರು ಹೇಗೆ ಚೇತರಿಸಿಕೊಳ್ಳುತ್ತಾರೆ ಎಂಬುದನ್ನು ನಾವು ಗಮನಹರಿಸಬೇಕು. ಕೋವಿಡ್‌ನಿಂದ ಸತ್ತವರೆಷ್ಟು ಎಂದು ಚರ್ಚೆ ಮಾಡುತ್ತ ಕೋಲಾಹಲ ಎಬ್ಬಿಸಿದರೆ ಮತ್ತೆ ಅವರು ಹುಟ್ಟಿ ಬರುತ್ತಾರಾ? ಕೋವಿಡ್ ಸಾವಿನ ಸಂಖ್ಯೆಯ ಕುರಿತ ಚರ್ಚೆಯಲ್ಲಿ ಯಾವುದೇ ಅರ್ಥವಿಲ್ಲ …” ಎಂದು ಹೇಳುವ ಮೂಲಕ ಹರಿಯಾಣ ಮುಖ್ಯಮಂತ್ರಿ, ಬಿಜೆಪಿ ನಾಯಕ ಮನೋಹರ ಲಾಲ್ ಕಟ್ಟರ್ ವಿವಾದಕ್ಕೆ ಈಡಾಗಿದ್ದು, ಅವರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಆಮ್ಲಜನಕದ ಕೊರತೆಯಿಂದಾಗಿ ಹಿಸಾರ್ ಜಿಲ್ಲೆಯಲ್ಲಿ ಸೋಮವಾರ ಐದು ಸಾವುಗಳು ಸಂಭವಿಸಿದ ನಂತರ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದರು. ಆ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳು, ರಾಜ್ಯದಲ್ಲಿ ಕೋವಿಡ್ ಸಾವುಗಳ ಸಂಖ್ಯೆಯನ್ನು ಮುಚ್ಚಿಟ್ಟು ಕಡಿಮೆ ತೋರಿಸಲಾಗುತ್ತಿದೆ ಎಂಬ ಆರೋಪದ ಕುರಿತು ಕೇಳಿದಾಗ ಅವರು ಮೇಲಿನಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆಮ್ಲಜನಕದ ಕೊರತೆಯಿಂದಾಗಿ ಹಿಸಾರ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಐದು ಸಾವುಗಳನ್ನು ಉಲ್ಲೇಖಿಸಿದ ಅವರು, ಲಭ್ಯವಿರುವ ಮೂಲಸೌಕರ್ಯಗಳ ಮಿತಿಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. “ನಾವು ಯಾವ ರೀತಿಯ ಪರಿಸ್ಥಿತಿಯಲ್ಲಿದ್ದೇವೆ ಎಂದು ನೋಡಿ. ಡೇಟಾದೊಂದಿಗೆ ಆಟ ಆಡಲು ನಾವು ಬಯಸುವುದಿಲ್ಲ” ಎಂದು ಅವರು ಹೇಳಿದರು.

ಸೋಮವಾರ ಹಿಸಾರ್‌ನ ಖಾಸಗಿ ಆಸ್ಪತ್ರೆಯಲ್ಲಿ ಐದು ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ, ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಆಮ್ಲಜನಕದ ಕೊರತೆಯಿಂದಾಗಿ ಸಾವು ಸಂಭವಿಸಿವೆ. ಆದರೆ ಇದನ್ನು ನಿರಾಕರಿಸಿದ ಜಿಲ್ಲಾಡಳಿತವು ಆಸ್ಪತ್ರೆ ವಿರುದ್ಧ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

“ಕೋವಿಡ್ ರೋಗಿಗಳು ಹೇಗೆ ಗುಣಮುಖರಾಗುತ್ತಿದ್ದಾರೆ ಎಂಬುದಕ್ಕೆ ಮಹತ್ವ ನೀಡಬೇಕು. ಅದು ಬಿಟ್ಟು ಕೋವಿಡ್ ಕುರಿತ ಸಾವಿನ ಸಂಖ್ಯೆ ಬಗ್ಗೆ ಚರ್ಚೆ ಮಾಡಿ ಕೋಲಾಹಲ ಎಬ್ಬಿಸಿದರೆ, ಸತ್ತವರೇನು ಪುನರ್ಜನ್ಮ ಪಡೆಯುತ್ತಾರಾ?’ ಎಂದು ಪ್ರಶ್ನೆ ಮಾಡಿದ ಖಟ್ಟರ್, ಸಾಂಕ್ರಾಮಿಕದ ಬಗ್ಗೆ ನಿಮಗೆ ಅಥವಾ ನನಗೆ ಏನೂ ತಿಳಿದಿರಲಿಲ್ಲ. ಈ ಕಾಲದಲ್ಲಿ, ನೀವು (ಮೀಡಿಯಾ), ರೋಗಿಗಳು ಮತ್ತು ಎಲ್ಲರ ಸಹಕಾರ ನಮಗೆ ಬೇಕು’ ಎಂದು ಮನವಿ ಮಾಡಿದರು.

ಹರಿಯಾಣದಲ್ಲಿ ಸೋಮವಾರ 11,504 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 75 ಸಾವುಗಳು ದಾಖಲಾಗಿವೆ. ಹೋಲಿಕೆಯಲ್ಲಿ ತಮ್ಮಲ್ಲಿ ಪ್ರಕರಣ ಮತ್ತು ಸಾವು ಕಡಿಮೆ ಎಂದು ತೋರಿಸಲು ಅನೇಕ ರಾಜ್ಯಗಳು ಕೋವಿಡ್ ಸಾವುನೋವುಗಳನ್ನು ಕಡಿಮೆ ಸಂಖ್ಯೆಯಲ್ಲಿ ತೋರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಉತ್ತರಪ್ರದೇಶ, ಹರಿಯಾಣ ಮತ್ತು ಇತರ ಕೆಲವು ಬಿಜೆಪಿ ಆಡಳಿತ ಇರುವ ಸರ್ಕಾರಗಳು ಹೀಗೆ ಮಾಡುತ್ತ ಬಂದಿವೆ ಎಂದು ಆರೋಪಿಸಲಾಗಿದೆ.

“ನಾವು ಪ್ರತಿ ಜೀವವನ್ನು ಉಳಿಸಲು ಪ್ರಯತ್ನಿಸುತ್ತೇವೆ. ಸಾವುಗಳು ಕಡಿಮೆಯಿವೆ ಅಥವಾ ಹೆಚ್ಚಾಗಿವೆ ಎಂದು ಹೇಳುವುದರಿಂದ ಯಾವುದೇ ಪ್ರಯೋಜನವಿಲ್ಲ. ನಮ್ಮ ವ್ಯವಸ್ಥೆಗಳನ್ನು ಸರಿಪಡಿಸಲು ನಾವು ಸಮರ್ಥರಾಗಿದ್ದೇವೆ. ನಾವು ಏನು ಮಾಡಲು ಪ್ರಯತ್ನಿಸುತ್ತಿದ್ದೇವೆ ಎಂಬುದು ಮುಖ್ಯವಷ್ಟೇ” ಎಂದು ಖಟ್ಟರ್ ಹೇಳಿದ್ದಾರೆ.

ಕೋವಿಡ್ ರೋಗ ಮತ್ತು ಅದರ ಪರಿಣಾಮದ ಕುರಿತಾದ ಪ್ರಶ್ನೆಗಳಿಗೆ ತಮ್ಮ ಆಡಳಿತವು ಸ್ಪಂದಿಸುತ್ತಿಲ್ಲ ಎಂಬ ಆರೋಪವನ್ನು ಅವರು ನಿರಾಕರಿಸಿದ್ದಾರೆ.


ಇದನ್ನೂ ಓದಿ: ಕೋವಿಡ್ ಲಸಿಕೆ: ರಾಜ್ಯಗಳಿಗೆ ಸಹಾಯ ಮಾಡುವುದು ಕೇಂದ್ರದ ಮೂಲಭೂತ ಕರ್ತವ್ಯ – ಇದು ಕಂಪನಿಗಳು ಅತಿಹೆಚ್ಚು ಲಾಭ ಮಾಡುವ ಸಮಯವಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...