Homeಮುಖಪುಟಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

ಕೇರಳದ ಗ್ರಾಮಗಳ ಹೆಸರು ಬದಲಾವಣೆ ಇಲ್ಲವೆಂದು ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟನೆ

- Advertisement -
- Advertisement -

ಕೇರಳ ಸರ್ಕಾರ ಕಾಸರಗೋಡು ಜಿಲ್ಲೆಯ ಕೆಲವು ಹಳ್ಳಿಗಳ ಕನ್ನಡದ ಹೆಸರನ್ನು ಬದಲಾಯಿಸಲು ಮುಂದಾಗಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರು ಕೇರಳ ಸರ್ಕಾರಕ್ಕೆ ಪತ್ರವನ್ನು ಬರೆಯುವುದಾಗಿಯೂ ಹೇಳಿದ್ದರು. ಈಗ ಕನ್ನಡದ ಹೆಸರು ಬದಲಾವಣೆ ಇಲ್ಲವೆಂದು ಕೇರಳದ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟಪಡಿಸಿದ್ದಾರೆ.

ಕೇರಳ ಸರ್ಕಾರ ಗ್ರಾಮಗಳ ಕನ್ನಡದ ಹೆಸರನ್ನು ಬದಲಾಯಿಸುವ ಯಾವ ಆದೇಶಗಳನ್ನು, ಅಧಿಸೂಚನೆಗಳನ್ನು ಹೊರಡಿಸಿಲ್ಲ ಎಂದು ಅವರು ತಿಳಿಸಿದ್ದು, ಒಂದು ವೇಳೆ ಕೇರಳ ಸರ್ಕಾರ ಊರುಗಳ ಹೆಸರನ್ನು ಬದಲಾಯಿಸಲು ಮುಂದಾದರೆ ಹೋರಾಟವನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.

ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕನ್ನಡ ಭಾಷೆಯ ಉಳಿವಿಗಾಗಿ ಹೋರಾಟವನ್ನು ನಡೆಸುತ್ತಲೇ ಬಂದಿದ್ದೇನೆ. ಕೆಲವು ನಾಯಕರು ಭಾಷೆಯ ವಿಷಯದಲ್ಲಿ ಗೊಂದಲವನ್ನು ಹುಟ್ಟಿಸುವ ಹೇಳಿಕೆಯನ್ನು ನೀಡುತ್ತಿದ್ದಾರೆ. ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಿಗೆ ಕರೆ ಮಾಡಿ ಊರುಗಳ ಕನ್ನಡ ಹೆಸರನ್ನು ಬದಲಾಯಿಸುವ ಪ್ರಸ್ತಾಪದ ಕುರಿತು ವಿಚಾರಿಸಿದ್ದೇನೆ. ಕೇರಳ ಸರ್ಕಾರದ ಮುಂದೆ ಅಂತಹ ಪ್ರಸ್ತಾಪಗಳಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಸ್ಪಷ್ಟಪಡಿಸಿದೆ. ಒಂದು ವೇಳೆ ಕಾಸರಗೋಡಿನಲ್ಲಿ ಭಾಷಾ ಅಲ್ಪಸಂಖ್ಯಾತರಿಗೆ ಅನ್ಯಾಯವಾಗುವ ಯಾವುದಾದರೂ ಘಟನೆ ನಡೆದರೆ ಅದರ ವಿರುದ್ಧ ಹೋರಾಟ ನಡೆಸುತ್ತೇನೆ. ಕನ್ನಡಿಗನಾಗಿ ಕನ್ನಡದ ಹಿತಾಸಕ್ತಿಗಳ ರಕ್ಷಣೆಗೆ ಬದ್ಧರಾಗಿರುವುದಾಗಿ ಅವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿಯವರು ಕೇರಳ ಶಾಸಕ ಎ.ಕೆ.ಎಂ. ಅಶ್ರಫ್ ಅವರ ಕನ್ನಡ ಪ್ರೇಮಕ್ಕೆ ಮೆಚ್ಚುಗೆಯನ್ನು ಸೂಚಿಸಿದ್ದು, ಇಷ್ಟುಬೇಗ ಕೇರಳದಿಂದ ಪ್ರತಿಕ್ರಿಯೆ ಬಂದಿರುವುದು ಸಂತೊಷದ ವಿಷಯ ಎಂದು ತಿಳಿಸಿದ್ದಾರೆ. ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ‘ಕನ್ನಡ, ಕನ್ನಡಿಗ, ಕರ್ನಾಟಕ‘ಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್‌ ಅವರಿರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ ಎಂದು ಕುಮಾರಸ್ವಾಮಿಯವರು ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

 

ಕೇರಳ ಸರ್ಕಾರ ಕಾಸರಗೋಡು ಜೆಲ್ಲೆಯ ಊರುಗಳ ಕನ್ನಡ ಹೆಸರನ್ನು ಮಲಾಯಳೀಕರಣಗೊಳಿಸುವ ತೀರ್ಮಾನವನ್ನು ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ನಿನ್ನೆ ಕೇರಳ ಸರ್ಕಾರವನ್ನು ಒತ್ತಾಯಿಸಿದ್ದರು.

 

ಕನ್ನಡದ ಊರುಗಳ ಹೆಸರನ್ನು ಮಲಯಾಳೀಕರಣಗೊಳಿಸುತ್ತಿರುವ ವಿಷಯದ ಕುರಿತಾಗಿ  ಮಾಹಿತಿಯನ್ನು ಸಂಗ್ರಹಿಸಿ ಕೆಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ನೀಡಲಾಗುವದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.

ಭಾಷೆಯಂತಹ ಸೂಕ್ಷ್ಮ ವಿಷಯದಲ್ಲಿ ನಿನ್ನೆ ಹುಟ್ಟಿಕೊಂಡಿದ್ದ ಚರ್ಚೆ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಅವರ ಪ್ರಯತ್ನದ ಫಲವಾಗಿ ಯಾವುದೇ ವಿವಾದಗಳಿಲ್ಲದೇ ಬಗೆಹರಿದಿದೆ. ಅಶ್ರಫ್‌ ಅವರು ಶಾಸಕರಾಗಿ ಆಯ್ಕೆಯಾದ ಸಂದರ್ಭದಲ್ಲಿ ಕೇರಳ ವಿಧಾನ ಸಭೆಯಲ್ಲಿ ಕನ್ನಡ ಭಾಷೆಯಲ್ಲಿಯೇ ಪ್ರಮಾಣವಚನ ಸ್ವೀಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...