Homeಕರ್ನಾಟಕ‘ಶುದ್ಧ ಕನ್ನಡ’ | ಪೋಸ್ಟರ್‌ ಪರಿಶೀಲಿಸುವೆ: ಕನ್ನಡ-ಸಂಸ್ಕೃತಿ ಇಲಾಖೆ ನಿರ್ದೇಶಕ

‘ಶುದ್ಧ ಕನ್ನಡ’ | ಪೋಸ್ಟರ್‌ ಪರಿಶೀಲಿಸುವೆ: ಕನ್ನಡ-ಸಂಸ್ಕೃತಿ ಇಲಾಖೆ ನಿರ್ದೇಶಕ

- Advertisement -
- Advertisement -

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸೃತಿ ಇಲಾಖೆಯು `ಕನ್ನಡಕ್ಕಾಗಿ ನಾವು’ ಅಭಿಯಾನ ಆರಂಭಿಸಿದ್ದು, ಈ ಅಭಿಯಾನದ ಭಾಗವಾಗಿ ಹಮ್ಮಿಕೊಂಡಿರುವ ‘ಶುದ್ಧ ಕನ್ನಡ ಮಾತನಾಡುವ ಸ್ಪರ್ಧೆ’ ಈಗ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಎಸ್‌.ರಂಗಪ್ಪ ಮಾತನಾಡಿದ್ದರೆ.

“ಶುದ್ಧ, ಅಶುದ್ಧ ಎಂದು ಹೇಳಿಲ್ಲ. ಕನ್ನಡ ಭಾಷೆಯ ಕುರಿತು ನವೆಂಬರ್‌ ತಿಂಗಳು ಜಾಗೃತಿ ಮೂಡಿಸುವ ಉದ್ದೇಶದಿಂದ ಕನ್ನಡ ಪದಗಳನ್ನೇ ಬಳಸಿ ಸ್ಪರ್ಧೆ ನಡೆಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಒಂದು ಸಮಿತಿ ಇರುತ್ತದೆ. ಅದು ಆಯ್ಕೆ ಮಾಡುತ್ತದೆ. ಇಂಗ್ಲಿಷ್‌, ಹಿಂದಿ, ಉರ್ದು, ಮರಾಠಿ ಇದ್ಯಾವುದನ್ನೂ ಬಳಸದೆ ಮಾತನಾಡುವ ಸ್ಪರ್ಧೆ ಅದು” ಎದು ತಿಳಿಸಿದ್ದಾರೆ.

ಸಂಸ್ಕೃತ ಭಾಷೆಯಿಂದ ಸಾಕಷ್ಟು ಪದಗಳು ಬಂದಿವೆ. ಜನರು ಸಾಮಾನ್ಯವಾಗಿ ಬಳಸುವ ಇಂಜಿಯರಿಂಗ್ ಎಂಬುದನ್ನು ‘ಅಭಿಯಂತರ’ ಎಂದು ತರ್ಜುಮೆ ಮಾಡಿದೆ ಸಂಸ್ಕೃತ ಆಗುತ್ತದೆಯಲ್ಲ, ಕನ್ನಡ ಬಳಕೆ ಹೇಗೆ ಸಾಧ್ಯ? ಎಂದು ಕೇಳಿದಾಗ, “ನೀವು ಹೇಳುವುದು ಸತ್ಯವಿದೆ. ಒಂದು ಸಮಿತಿ ಮಾಡಿದ್ದೇವೆ. ಕೆಲವು ಪದಗಳು ಕನ್ನಡಮಯ ಆಗಿ ಹೋಗಿವೆ. ಅವುಗಳನ್ನು ಬೇರ್ಪಡಿಸಲು ಸಾಧ್ಯವಿಲ್ಲ” ಎಂದರು.

ಮುಂದುವರಿದು, “ಸ್ಪರ್ಧೆಯಲ್ಲಿ ಯಾರು ಹೆಚ್ಚು ಕನ್ನಡ ಬಳಸುತ್ತಾರೆ, ಕಡಿಮೆ ಯಾರು ಬಳಸುತ್ತಾರೆ ಎಂಬುದನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಇರುವವರು ಪರಿಶೀಲಿಸುತ್ತಾರೆ. ನಾನು ಮಾತನಾಡುವಾಗಲೂ ಮಧ್ಯೆ ಮಧ್ಯೆ  ಇಂಗ್ಲಿಷ್‌ ಪದ ಬಳಸುತ್ತೇನೆ. ಆದರೂ ಹೆಚ್ಚು ಕನ್ನಡ ಪದಗಳನ್ನು ಬಳಸಿರುತ್ತೇನೆಲ್ಲವೇ? ಅದರ ಆಧಾರದಲ್ಲಿ ಸಮಿತಿ ನಿರ್ಧಾರ ಮಾಡುತ್ತದೆ” ಎಂದು ಪ್ರತಿಕ್ರಿಯಿಸಿದರು.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ‘ಶುದ್ಧ ಕನ್ನಡ ಪದಗಳ ಸ್ಪರ್ಧೆ’ ಒಕ್ಕಣೆ ಇರುವ ಪೋಸ್ಟರ್‌ ಕುರಿತು ಕೇಳಿದಾಗ, “ಶುದ್ಧ, ಅಶುದ್ಧ ಎನ್ನಲು ಸಾಧ್ಯವಿಲ್ಲ. ಕನ್ನಡ ಪದಗಳು ಯಾವುದೂ ಅಶುದ್ಧವಲ್ಲ. ಪೋಸ್ಟರ್‌ಅನ್ನು ಪರಿಶೀಲಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.

ಏನಿದು ಸ್ಪರ್ಧೆ?

ಅನ್ಯಭಾಷೆಯ ಪದಗಳ ಬಳಕೆ ಮಾಡದೆ ನಿರರ್ಗಳವಾಗಿ ಕನ್ನಡದಲ್ಲಿ ನಾಲ್ಕು ನಿಮಿಷಗಳ ಕಾಲ ಕನ್ನಡ ನಾಡು, ನುಡಿ, ಪರಂಪರೆಗೆ ಸಂಬಂಧಿಸಿದ ವಿಷಯಗಳ ಕುರಿತ ವಿಡಿಯೊ ಸೆಲ್ಫಿ ತೆಗೆದು ಕಳುಹಿಸಬೇಕು. ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಮೂವರಿಗೆ ಐದು ಸಾವಿರ ರೂ., ಮೂರು ಸಾವಿರ ರೂ. ಮತ್ತು ಎರಡು ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೇಳಿತ್ತು.

ಜಿಲ್ಲಾ ಮಟ್ಟದಲ್ಲಿ ವಿಜೇತರಾದವರನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಿ ಅಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 50 ಸಾವಿರ ರೂ. ದ್ವಿತೀಯ ಬಹುಮಾನ 30 ಸಾವಿರ ರೂ., ತೃತೀಯ ಬಹುಮಾನ 20 ಸಾವಿರ ರೂ. ನೀಡಲಾಗುತ್ತದೆ. ಅ.28ರೊಳಗೆ ವಿಡಿಯೋ ಕಳುಹಿಸಬೇಕು ಎಂದು ಇಲಾಖೆ ತಿಳಿಸಿದೆ. ಅಲ್ಲದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಫೇಸ್‌ಬುಕ್‌ ಪೇಜ್‌ನಲ್ಲಿ ‘ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ’ಯ ಪೋಸ್ಟರ್‌ ಹಂಚಿಕೊಳ್ಳಲಾಗಿತ್ತು. ಸಚಿವ ಸುನೀಲ್‌ಕುಮಾರ್ ಭಾವಚಿತ್ರ, ಸರ್ಕಾರದ ಲೋಗೋವನ್ನು ಕಾಣಬಹುದಾಗಿತ್ತು.


ಇದನ್ನೂ ಓದಿರಿ: ‘ಶುದ್ಧ ಕನ್ನಡ’ ವಿವಾದ: ಕನ್ನಡ-ಸಂಸ್ಕೃತಿ ಇಲಾಖೆಗೆ ಸಾಹಿತಿಗಳ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...