Homeಕರ್ನಾಟಕ‘ಶುದ್ಧ ಕನ್ನಡ’ | ಪೋಸ್ಟರ್‌ ಪರಿಶೀಲಿಸುವೆ: ಕನ್ನಡ-ಸಂಸ್ಕೃತಿ ಇಲಾಖೆ ನಿರ್ದೇಶಕ

‘ಶುದ್ಧ ಕನ್ನಡ’ | ಪೋಸ್ಟರ್‌ ಪರಿಶೀಲಿಸುವೆ: ಕನ್ನಡ-ಸಂಸ್ಕೃತಿ ಇಲಾಖೆ ನಿರ್ದೇಶಕ

- Advertisement -
- Advertisement -

ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸೃತಿ ಇಲಾಖೆಯು `ಕನ್ನಡಕ್ಕಾಗಿ ನಾವು’ ಅಭಿಯಾನ ಆರಂಭಿಸಿದ್ದು, ಈ ಅಭಿಯಾನದ ಭಾಗವಾಗಿ ಹಮ್ಮಿಕೊಂಡಿರುವ ‘ಶುದ್ಧ ಕನ್ನಡ ಮಾತನಾಡುವ ಸ್ಪರ್ಧೆ’ ಈಗ ವಿವಾದಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ‘ನಾನುಗೌರಿ.ಕಾಂ’ ಜೊತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಎಸ್‌.ರಂಗಪ್ಪ ಮಾತನಾಡಿದ್ದರೆ.

“ಶುದ್ಧ, ಅಶುದ್ಧ ಎಂದು ಹೇಳಿಲ್ಲ. ಕನ್ನಡ ಭಾಷೆಯ ಕುರಿತು ನವೆಂಬರ್‌ ತಿಂಗಳು ಜಾಗೃತಿ ಮೂಡಿಸುವ ಉದ್ದೇಶದಿಂದ ಕನ್ನಡ ಪದಗಳನ್ನೇ ಬಳಸಿ ಸ್ಪರ್ಧೆ ನಡೆಸಲಾಗುತ್ತದೆ. ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ನಡೆಯುತ್ತದೆ. ಜಿಲ್ಲಾ ಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಒಂದು ಸಮಿತಿ ಇರುತ್ತದೆ. ಅದು ಆಯ್ಕೆ ಮಾಡುತ್ತದೆ. ಇಂಗ್ಲಿಷ್‌, ಹಿಂದಿ, ಉರ್ದು, ಮರಾಠಿ ಇದ್ಯಾವುದನ್ನೂ ಬಳಸದೆ ಮಾತನಾಡುವ ಸ್ಪರ್ಧೆ ಅದು” ಎದು ತಿಳಿಸಿದ್ದಾರೆ.

ಸಂಸ್ಕೃತ ಭಾಷೆಯಿಂದ ಸಾಕಷ್ಟು ಪದಗಳು ಬಂದಿವೆ. ಜನರು ಸಾಮಾನ್ಯವಾಗಿ ಬಳಸುವ ಇಂಜಿಯರಿಂಗ್ ಎಂಬುದನ್ನು ‘ಅಭಿಯಂತರ’ ಎಂದು ತರ್ಜುಮೆ ಮಾಡಿದೆ ಸಂಸ್ಕೃತ ಆಗುತ್ತದೆಯಲ್ಲ, ಕನ್ನಡ ಬಳಕೆ ಹೇಗೆ ಸಾಧ್ಯ? ಎಂದು ಕೇಳಿದಾಗ, “ನೀವು ಹೇಳುವುದು ಸತ್ಯವಿದೆ. ಒಂದು ಸಮಿತಿ ಮಾಡಿದ್ದೇವೆ. ಕೆಲವು ಪದಗಳು ಕನ್ನಡಮಯ ಆಗಿ ಹೋಗಿವೆ. ಅವುಗಳನ್ನು ಬೇರ್ಪಡಿಸಲು ಸಾಧ್ಯವಿಲ್ಲ” ಎಂದರು.

ಮುಂದುವರಿದು, “ಸ್ಪರ್ಧೆಯಲ್ಲಿ ಯಾರು ಹೆಚ್ಚು ಕನ್ನಡ ಬಳಸುತ್ತಾರೆ, ಕಡಿಮೆ ಯಾರು ಬಳಸುತ್ತಾರೆ ಎಂಬುದನ್ನು ಜಿಲ್ಲಾ ಮಟ್ಟದ ಸಮಿತಿಯಲ್ಲಿ ಇರುವವರು ಪರಿಶೀಲಿಸುತ್ತಾರೆ. ನಾನು ಮಾತನಾಡುವಾಗಲೂ ಮಧ್ಯೆ ಮಧ್ಯೆ  ಇಂಗ್ಲಿಷ್‌ ಪದ ಬಳಸುತ್ತೇನೆ. ಆದರೂ ಹೆಚ್ಚು ಕನ್ನಡ ಪದಗಳನ್ನು ಬಳಸಿರುತ್ತೇನೆಲ್ಲವೇ? ಅದರ ಆಧಾರದಲ್ಲಿ ಸಮಿತಿ ನಿರ್ಧಾರ ಮಾಡುತ್ತದೆ” ಎಂದು ಪ್ರತಿಕ್ರಿಯಿಸಿದರು.

ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿರುವ ‘ಶುದ್ಧ ಕನ್ನಡ ಪದಗಳ ಸ್ಪರ್ಧೆ’ ಒಕ್ಕಣೆ ಇರುವ ಪೋಸ್ಟರ್‌ ಕುರಿತು ಕೇಳಿದಾಗ, “ಶುದ್ಧ, ಅಶುದ್ಧ ಎನ್ನಲು ಸಾಧ್ಯವಿಲ್ಲ. ಕನ್ನಡ ಪದಗಳು ಯಾವುದೂ ಅಶುದ್ಧವಲ್ಲ. ಪೋಸ್ಟರ್‌ಅನ್ನು ಪರಿಶೀಲಿಸಲಾಗುವುದು” ಎಂದು ಸ್ಪಷ್ಟಪಡಿಸಿದರು.

ಏನಿದು ಸ್ಪರ್ಧೆ?

ಅನ್ಯಭಾಷೆಯ ಪದಗಳ ಬಳಕೆ ಮಾಡದೆ ನಿರರ್ಗಳವಾಗಿ ಕನ್ನಡದಲ್ಲಿ ನಾಲ್ಕು ನಿಮಿಷಗಳ ಕಾಲ ಕನ್ನಡ ನಾಡು, ನುಡಿ, ಪರಂಪರೆಗೆ ಸಂಬಂಧಿಸಿದ ವಿಷಯಗಳ ಕುರಿತ ವಿಡಿಯೊ ಸೆಲ್ಫಿ ತೆಗೆದು ಕಳುಹಿಸಬೇಕು. ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಮೂವರಿಗೆ ಐದು ಸಾವಿರ ರೂ., ಮೂರು ಸಾವಿರ ರೂ. ಮತ್ತು ಎರಡು ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹೇಳಿತ್ತು.

ಜಿಲ್ಲಾ ಮಟ್ಟದಲ್ಲಿ ವಿಜೇತರಾದವರನ್ನು ರಾಜ್ಯ ಮಟ್ಟದ ಸ್ಪರ್ಧೆಗೆ ಪರಿಗಣಿಸಿ ಅಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 50 ಸಾವಿರ ರೂ. ದ್ವಿತೀಯ ಬಹುಮಾನ 30 ಸಾವಿರ ರೂ., ತೃತೀಯ ಬಹುಮಾನ 20 ಸಾವಿರ ರೂ. ನೀಡಲಾಗುತ್ತದೆ. ಅ.28ರೊಳಗೆ ವಿಡಿಯೋ ಕಳುಹಿಸಬೇಕು ಎಂದು ಇಲಾಖೆ ತಿಳಿಸಿದೆ. ಅಲ್ಲದೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಫೇಸ್‌ಬುಕ್‌ ಪೇಜ್‌ನಲ್ಲಿ ‘ಶುದ್ಧ ಕನ್ನಡದಲ್ಲಿ ಮಾತನಾಡುವ ಸ್ಪರ್ಧೆ’ಯ ಪೋಸ್ಟರ್‌ ಹಂಚಿಕೊಳ್ಳಲಾಗಿತ್ತು. ಸಚಿವ ಸುನೀಲ್‌ಕುಮಾರ್ ಭಾವಚಿತ್ರ, ಸರ್ಕಾರದ ಲೋಗೋವನ್ನು ಕಾಣಬಹುದಾಗಿತ್ತು.


ಇದನ್ನೂ ಓದಿರಿ: ‘ಶುದ್ಧ ಕನ್ನಡ’ ವಿವಾದ: ಕನ್ನಡ-ಸಂಸ್ಕೃತಿ ಇಲಾಖೆಗೆ ಸಾಹಿತಿಗಳ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...