Homeಮುಖಪುಟರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಬಿಜೆಪಿ ನಾಯಕರಿಗೆ ಖರ್ಗೆ ಖಡಕ್...

ರಾಹುಲ್ ಗಾಂಧಿ ಯಾವುದೇ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ: ಬಿಜೆಪಿ ನಾಯಕರಿಗೆ ಖರ್ಗೆ ಖಡಕ್ ಉತ್ತರ

- Advertisement -
- Advertisement -

ಸಂಸದ ರಾಹುಲ್ ಗಾಂಧಿ ಅವರು ಯಾವುದೇ ಕಾರಣಕ್ಕೂ ಕ್ಷಮೆಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಬಿಜೆಪಿ ನಾಯಕರಿಗೆ ಖಡಕ್ ಉತ್ತರ ನೀಡಿದ್ದಾರೆ.

ಕಳೆದ ವಾರ ಲಂಡನ್‌ನಲ್ಲಿ ಪಕ್ಷದ ಸಂಸದ ರಾಹುಲ್ ಗಾಂಧಿಯವರು ಹೇಳಿದ ಮಾತುಗಳಿಗೆ  ಸಂಬಂಧಿಸಿದಂತೆ, ಹಿರಿಯ ಕ್ಯಾಬಿನೆಟ್ ಮಂತ್ರಿಗಳು ಸೇರಿದಂತೆ ಬಿಜೆಪಿ ಮುಖಂಡರು, ಸಂಸತ್ತನಲ್ಲಿ ಅವರನ್ನು ಗುರಿಯಾಗಿಸಿ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದಾರೆ. ಅದಕ್ಕೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಖರ್ಗೆ ಅವರು ತಿರುಗೇಟು ನೀಡಿದ್ದಾರೆ.

ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ ಅವರು, ”ದೇಶದ ಪ್ರಜಾಪ್ರಭುತ್ವದ ಮೂಲಭೂತ ರಚನೆಯ ಮೇಲೆ ಭಾರತ ಸರ್ಕಾರ ದಾಳಿ ಮಾಡುತ್ತಿದೆ” ಎಂದು ಹೇಳಿದ್ದರು.

”ಭಾರತ ಮೌನವಾಗಿರಬೇಕೆಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಬಯಸುತ್ತದೆ. ಭಾರತದಲ್ಲಿ ಎಲ್ಲೆಡೆ ಬಾಯಿ ಮುಚ್ಚಿಸಲಾಗುತ್ತಿದೆ. ಬಿಬಿಸಿ ಸಾಕ್ಷ್ಯಾಚಿತ್ರವೇ ಇದಕ್ಕೆ ಉದಾಹರಣೆ. ಪತ್ರಕರ್ತರನ್ನು (ಭಾರತದಲ್ಲಿ) ಬೆದರಿಸಲಾಗುತ್ತದೆ, ಅವರ ಮೇಲೆ ದಾಳಿ ಮಾಡಲಾಗುತ್ತದೆ. ಸರ್ಕಾರ ಹೇಳಿದಂತೆ ಕೇಳುವ ಪತ್ರಕರ್ತರಿಗೆ ಬಹುಮಾನ ನೀಡಲಾಗುತ್ತದೆ” ಎಂದು ಕೇಂದ್ರ ಬಿಜೆಪಿಯ ವಿರುದ್ಧ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಆಸ್ಕರ್ ವಿಜೇತ ನಾಟು ನಾಟು ಸಾಂಗ್, ದಿ ಎಲಿಫೆಂಟ್ ವಿಸ್ಪರರ್ಸ್ ಚಿತ್ರ ನಿದೇರ್ಶಿಸಿದ್ದು ಮೋದಿ ಎನ್ನಬೇಡಿ: ಖರ್ಗೆ ವ್ಯಂಗ್ಯ

ಫ್ಯಾಸಿಸ್ಟ್ ಆರ್‌ಎಸ್‌ಎಸ್‌ನ ಭಾಗವಾಗಿರುವ ಬಿಜೆಪಿ, ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವವನ್ನೇ ಬುಡಮೇಲು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ಧಾರೆ. ಲಂಡನ್ ಮೂಲದ ಚಿಂತಕರ ಚಾಥಮ್ ಹೌಸ್‌ನಲ್ಲಿ ನಡೆದ ಸಂವಾದದಲ್ಲಿ ನಡೆದ ಸಂವಾದದಲ್ಲಿ ಈ ಹೇಳಿಕೆ ನೀಡಿದ್ದರು.

”ಭಾರತದ ಸಂಸ್ಥೆಗಳನ್ನು ಸಂಪೂರ್ಣವಾಗಿ ಹಿಡಿತಕ್ಕೆ ತಗೆದುಕೊಂಡಿರುವ ಆರ್‌ಎಸ್‌ಎಸ್, ದೇಶದ ಪ್ರಜಾಸತ್ತಾತ್ಮಕ ಸ್ವರೂಪವನ್ನೇ ಬದಲಾಯಿಸಿದೆ” ಎಂದು ರಾಹುಲ್ ಹೇಳಿದ್ದಾರೆ.

ನೋಟು ಅಮಾನ್ಯೀಕರಣ, ಕಿಸಾನ್ ಮಸೂದೆ, ಜಿಎಸ್‌ಟಿ ಹೇರಿಕೆ ಮತ್ತು ಚೀನಾದ ಆಕ್ರಮಣದ ಕುರಿತಾದ ಚರ್ಚೆಗಳನ್ನು ನಡೆಸಲು ಪ್ರತಿಪಕ್ಷಗಳಿಗೆ ಯಾವುದೇ ಅವಕಾಶ ಇಲ್ಲದಂತಾಗಿದೆ ಎಂದು ಅವರು ಆರೋಪಿಸಿದ್ದರು.

ರಾಹುಲ್ ಗಾಂಧಿ ಅವರ ಈ ಹೇಳಿಕೆಗಳು ಸಂಸತ್ತಿನಲ್ಲಿ ಕೋಲಾಹಲಕ್ಕೆ ಕಾರಣವಾಗಿವೆ, ಎರಡೂ ಮನೆಗಳು ಸೋಮವಾರದಿಂದ ಪ್ರಾರಂಭವಾದ ಬಜೆಟ್ ಅಧಿವೇಶನದ ಎರಡನೇ ಹಂತದ ಮೊದಲ ಎರಡು ದಿನಗಳು ಗದ್ದಲ ಗಲಾಟೆ ನಡೆದಿದೆ. ಬುಧವಾರ ಕೂಡ ಬಿಜೆಪಿ ಸಂಸದರಿಂದ ಕ್ಷಮೆಯಾಚಿಸುವ ಬೇಡಿಕೆಯ ಮಧ್ಯೆ ಲೋಕಸಭಾ ಮತ್ತು ರಾಜ್ಯಸಭೆಯನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ರಾಹುಲ್ ಗಾಂಧಿಯವರು ವಿದೇಶಿ ನೆಲದಲ್ಲಿ ಭಾರತವನ್ನು ದೂಷಿಸುತ್ತಿದ್ದಾರೆಂದು ಬಿಜೆಪಿ ನಾಯಕರು ಮತ್ತು ಹಲವಾರು ಹಿರಿಯ ಮಂತ್ರಿಗಳು ಆರೋಪಿಸಿದರೆ, ಪ್ರಧಾನಿ ನರೇಂದ್ರ ಮೋದಿ ಅವರು ಹಲವಾರು ದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಂತರಿಕ ರಾಜಕೀಯದ ಬಗ್ಗೆ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

ಬುಧವಾರ, ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, ”ಮೋದಿ ಅವರು ವಿದೇಶದಲ್ಲಿ ತಮ್ಮ ಅಭಿಪ್ರಾಯಗಳೊಂದಿಗೆ ದೇಶದ ನಾಗರಿಕರನ್ನು ಅವಮಾನಿಸಿದ್ದಾರೆ” ಎಂದು ಹೇಳಿದರು.

“ಮೋದಿ ಜಿ ಐದು-ಆರು ದೇಶಗಳಿಗೆ ಹೋದಾಗ … ಭಾರತದಲ್ಲಿ ಜನಿಸುವುದು ಪಾಪ” ಎಂದಿರುವುದಾಗಿ ಖರ್ಗೆ ಹೇಳಿದರು.

ಹಿರಿಯ ಪತ್ರಕರ್ತೆ ಪಲ್ಲವಿ ಘೋಷ್ ಅವರು, ಈ ಹಿಂದೆ ನರೇಂದ್ರ ಮೋದಿ ಅವರು ವಿದೇಶದಲ್ಲಿ ಮಾತನಾಡಿದ ಕೆಲವು ಭಾ‍ಷಣದ ತುಣುಕುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

”ಇಲ್ಲಿ ಪ್ರಜಾಪ್ರಭುತ್ವ ಕಡಿಮೆಯಾಗುತ್ತಿದೆ, ಅಭಿವ್ಯಕ್ತಿ ಮತ್ತು ವಾಕ್ ಸ್ವಾತಂತ್ರ್ಯವನ್ನು ದುರ್ಬಲಗೊಳಿಸಲಾಗುತ್ತಿದೆ, ಟಿವಿ ಚಾನೆಲ್‌ಗಳು ಒತ್ತಡಕ್ಕೊಳಗಾಗುತ್ತಿವೆ ಮತ್ತು ಸತ್ಯವನ್ನು ಮಾತನಾಡುವ ಜನರು ಜೈಲಿನಲ್ಲಿದ್ದಾರೆ. ಹಾಗಾಗಿ ಇದನ್ನು ಪ್ರಜಾಪ್ರಭುತ್ವ ಕೊನೆಗೊಳಿಸುವ ಪ್ರಕ್ರಿಯೆ ಅನ್ನದೇ ಮತ್ತೇನನ್ನಬೇಕು? ಎಂದು ಖರ್ಗೆ ಖಾರವಾಗಿಯೇ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...