Homeಮುಖಪುಟಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದಂದು ದೆಹಲಿಯ ಎಲ್ಲಾ ಗಡಿಗಳಲ್ಲಿ ಮತ್ತು ಭಾರತದಾದ್ಯಂತ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಆಚರಿಸಲಾಯಿತು.

- Advertisement -
- Advertisement -

ತಮ್ಮ ಚುನಾಯಿತ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಸಲುವಾಗಿಯೇ ದೇಶದ ಎಲ್ಲಾ ಮೂಲೆಗಳಿಂದ ರೈತರು ದೆಹಲಿಯ ಗಡಿಗಳಿಗೆ ಬಂದಿದ್ದಾರೆ. ಆದ್ದರಿಂದ, ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತ ಸಂಘಟನೆಗಳು ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

‘ಕೃಷಿ ಕಾನೂನುಗಳ ಅನುಷ್ಠಾನವನ್ನು 18 ತಿಂಗಳುಗಳ ಕಾಲ ಅಮಾನತಿನಲ್ಲಿರಿಸುವ ತಮ್ಮ ಸರ್ಕಾರದ ಪ್ರಸ್ತಾವನೆ ಹಾಗೆ ಇದೆ. ಕೋಪಗೊಂಡ ರೈತರೊಂದಿಗೆ ವಾರಗಳ ಕಾಲ ಸ್ಥಗಿತಗೊಂಡಿರುವ ಮಾತುಕತೆ ಮುಂದುವರೆಸುವ ಪ್ರಯತ್ನ ಸಾಗಿವೆ’ ಎಂದು ನಿನ್ನೆ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ರೈತ ಮುಖಂಡರು ಮೂರು ಕಾನೂನುಗಳನ್ನು ರದ್ದುಗೊಳಿಸುವವರೆಗೂ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಜಾರಿಗೊಳಿಸುವವರೆಗೂ ಮಾತುಕತೆ ಮತ್ತು ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಹೋರಾಟದ 67ನೇ ದಿನದ ಪತ್ರಿಕಾ ಹೇಳಿಕೆಯಲ್ಲಿ “ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದಂದು ಮಹಾತ್ಮ ಗಾಂಧಿ ಮತ್ತು ರೈತ ಚಳವಳಿಯಲ್ಲಿ ಹುತಾತ್ಮಾದವರಿಗೆ ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು. ದೆಹಲಿಯ ಎಲ್ಲಾ ಗಡಿಗಳಲ್ಲಿ ಮತ್ತು ಭಾರತದಾದ್ಯಂತ ಒಂದು ದಿನದ ಉಪವಾಸವನ್ನು ಆಚರಿಸಲಾಯಿತು. ಗಾಂಧೀಜಿಯವರ ಜೀವನದಿಂದ ಕಲಿತು ರೈತರು ಈ ಆಂದೋಲನವನ್ನು ಶಾಂತಿಯುತವಾಗಿ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದರು” ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದ್ದಾರೆ.

ಸದ್ಭಾವನಾ ದಿವಾಸ್ ವರದಿಗಳು ದೇಶದಾದ್ಯಂತ ಬರುತ್ತಿವೆ. ಮಹಾರಾಷ್ಟ್ರದಲ್ಲಿ ಮುಂಬೈ, ಥಾಣೆ, ಪುಣೆ, ಅಹ್ಮದ್‌ನಗರ, ನಂದೂರ್‌ಬಾರ್, ಸತಾರಾ, ಔರಂಗಾಬಾದ್, ನಾಸಿಕ್ ಇತ್ಯಾದಿಗಳಿಂದ ವರದಿಗಳು ಬಂದಿವೆ. ತಮಿಳುನಾಡಿನಲ್ಲಿ, ಕರೂರ್ ಮತ್ತು ಕಲ್ಲಕುರುಚಿಯಂತಹ ಜಿಲ್ಲೆಗಳಲ್ಲಿ ದಿನವನ್ನು ಆಚರಿಸಲಾಯಿತು. ಕರ್ನಾಟಕದ ಮೈಸೂರು, ಶಿವಮೊಗ್ಗ, ಚಿಕ್ಕಬಲ್ಲಾಪುರ, ಬೆಂಗಳೂರು ಮತ್ತು ಇತರ ಸ್ಥಳಗಳಲ್ಲಿ ಸದ್ಭಾವನಾ ದಿವಾಸ್ ಆಚರಿಸಲಾಗಿದೆ. ಗುಜರಾತ್‌ನಲ್ಲೂ ರೈತರು ಇಂದು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.  ಸಬೆರ್‌ಕಂತದಲ್ಲಿ ತಮ್ಮ ಎಂದಿನ ದಮನಕಾರಿ ಮನೋಭಾವವನ್ನು ಪ್ರದರ್ಶಿಸಿದ ಗುಜರಾತ್ ಪೊಲೀಸರು ಸತ್ಯಾಗ್ರಹಿಗಳನ್ನು ಬಂಧಿಸಿದ್ದಾರೆ. ಹರಿಯಾಣದಿಂದಲೂ ಉಪವಾಸ ಸತ್ಯಾಗ್ರಹದ ವರದಿಗಳು ಬಂದಿವೆ. ಬಿಹಾರದಲ್ಲಿ, ಮುಜಫರ್ಪುರ್, ನಳಂದ ಮುಂತಾದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ಭಾವನಾ ದಿವಾಸ್ ಅನ್ನು ಉದ್ದನೆಯ ಮಾನವ ಸರಪಳಿಗಳಿಂದ ಆಚರಿಸಲಾಗಿದೆ. ಮಧ್ಯಪ್ರದೇಶದಲ್ಲಿಯೂ ಸಹ ಭೋಪಾಲ್, ಬೆತುಲ್, ಮುಲ್ತೈ ಮತ್ತು ಇತರ ಸ್ಥಳಗಳಲ್ಲಿ ಉಪವಾಸ ಆಚರಿಸಲಾಯಿತು. ಇಂದಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಪ್ರತಿಯೊಬ್ಬ ನಾಗರಿಕರ ಭಾಗವಹಿಸುವಿಕೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಅಭಿನಂದಿಸುತ್ತದೆ ಎಂದು ತಿಳಿಸಿದ್ದಾರೆ.

ಭದ್ರತಾ ಪಡೆಗಳ ಕಾನೂನುಬಾಹಿರ ಬಳಕೆಯಿಂದ ಈ ಆಂದೋಲನವನ್ನು ದುರ್ಬಲಗೊಳಿಸಲು ಮತ್ತು ನಾಶಪಡಿಸುವ ಪೊಲೀಸರ ಪ್ರಯತ್ನಗಳನ್ನು ನಾವು ಖಂಡಿಸುತ್ತೇವೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸರು ವಿವಿಧ ದಾಳಿಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಪೋಲಿಸ್ ಮತ್ತು ಬಿಜೆಪಿ ಗೂಂಡಾಗಳ ನಿರಂತರ ಹಿಂಸಾಚಾರವು ಸರ್ಕಾರದೊಳಗಿನ ಸ್ಪಷ್ಟ ಭಯವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಪ್ರತಿಭಟನಾಕಾರರನ್ನು ಮತ್ತು ಪತ್ರಕರ್ತರನ್ನು ಪೊಲೀಸರು ಸಿಕ್ಕಸಿಕ್ಕಲ್ಲಿ ಬಂಧಿಸುತ್ತಿದ್ದಾರೆ. ಎಲ್ಲಾ ಶಾಂತಿಯುತ ಪ್ರತಿಭಟನಾಕಾರರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ರೈತರ ಪ್ರತಿಭಟನೆಯನ್ನು ನಿರಂತರವಾಗಿ ವರದಿ ಮಾಡುತ್ತಿರುವ ಪತ್ರಕರ್ತರ ಮೇಲಿನ ಪೊಲೀಸ್ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಪರವಾಗಿ ಡಾ. ದರ್ಶನ್ ಪಾಲ್ ತಿಳಿಸಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...