Homeಮುಖಪುಟಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ಸರ್ಕಾರದೊಂದಿಗೆ ಮಾತುಕತೆಯ ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ: ಸಂಯುಕ್ತ ಕಿಸಾನ್ ಮೋರ್ಚಾ

ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದಂದು ದೆಹಲಿಯ ಎಲ್ಲಾ ಗಡಿಗಳಲ್ಲಿ ಮತ್ತು ಭಾರತದಾದ್ಯಂತ ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಆಚರಿಸಲಾಯಿತು.

- Advertisement -
- Advertisement -

ತಮ್ಮ ಚುನಾಯಿತ ಸರ್ಕಾರದೊಂದಿಗೆ ಮಾತುಕತೆ ನಡೆಸುವ ಸಲುವಾಗಿಯೇ ದೇಶದ ಎಲ್ಲಾ ಮೂಲೆಗಳಿಂದ ರೈತರು ದೆಹಲಿಯ ಗಡಿಗಳಿಗೆ ಬಂದಿದ್ದಾರೆ. ಆದ್ದರಿಂದ, ಸರ್ಕಾರದೊಂದಿಗೆ ಮಾತುಕತೆ ನಡೆಸಲು ರೈತ ಸಂಘಟನೆಗಳು ಬಾಗಿಲು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆಯಲ್ಲಿ ತಿಳಿಸಿದೆ.

‘ಕೃಷಿ ಕಾನೂನುಗಳ ಅನುಷ್ಠಾನವನ್ನು 18 ತಿಂಗಳುಗಳ ಕಾಲ ಅಮಾನತಿನಲ್ಲಿರಿಸುವ ತಮ್ಮ ಸರ್ಕಾರದ ಪ್ರಸ್ತಾವನೆ ಹಾಗೆ ಇದೆ. ಕೋಪಗೊಂಡ ರೈತರೊಂದಿಗೆ ವಾರಗಳ ಕಾಲ ಸ್ಥಗಿತಗೊಂಡಿರುವ ಮಾತುಕತೆ ಮುಂದುವರೆಸುವ ಪ್ರಯತ್ನ ಸಾಗಿವೆ’ ಎಂದು ನಿನ್ನೆ ಸರ್ವಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ರೈತ ಮುಖಂಡರು ಮೂರು ಕಾನೂನುಗಳನ್ನು ರದ್ದುಗೊಳಿಸುವವರೆಗೂ ಮತ್ತು ಎಂಎಸ್‌ಪಿ ಖಾತ್ರಿಗಾಗಿ ಕಾನೂನು ಜಾರಿಗೊಳಿಸುವವರೆಗೂ ಮಾತುಕತೆ ಮತ್ತು ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

ಹೋರಾಟದ 67ನೇ ದಿನದ ಪತ್ರಿಕಾ ಹೇಳಿಕೆಯಲ್ಲಿ “ಮಹಾತ್ಮ ಗಾಂಧೀಜಿಯವರ ಹುತಾತ್ಮ ದಿನದಂದು ಮಹಾತ್ಮ ಗಾಂಧಿ ಮತ್ತು ರೈತ ಚಳವಳಿಯಲ್ಲಿ ಹುತಾತ್ಮಾದವರಿಗೆ ಎರಡು ನಿಮಿಷಗಳ ಮೌನಾಚರಣೆ ನಡೆಸಲಾಯಿತು. ದೆಹಲಿಯ ಎಲ್ಲಾ ಗಡಿಗಳಲ್ಲಿ ಮತ್ತು ಭಾರತದಾದ್ಯಂತ ಒಂದು ದಿನದ ಉಪವಾಸವನ್ನು ಆಚರಿಸಲಾಯಿತು. ಗಾಂಧೀಜಿಯವರ ಜೀವನದಿಂದ ಕಲಿತು ರೈತರು ಈ ಆಂದೋಲನವನ್ನು ಶಾಂತಿಯುತವಾಗಿ ಹೋರಾಡುವುದಾಗಿ ಪ್ರತಿಜ್ಞೆ ಮಾಡಿದರು” ಎಂದು ರೈತ ಮುಖಂಡ ದರ್ಶನ್ ಪಾಲ್ ತಿಳಿಸಿದ್ದಾರೆ.

ಸದ್ಭಾವನಾ ದಿವಾಸ್ ವರದಿಗಳು ದೇಶದಾದ್ಯಂತ ಬರುತ್ತಿವೆ. ಮಹಾರಾಷ್ಟ್ರದಲ್ಲಿ ಮುಂಬೈ, ಥಾಣೆ, ಪುಣೆ, ಅಹ್ಮದ್‌ನಗರ, ನಂದೂರ್‌ಬಾರ್, ಸತಾರಾ, ಔರಂಗಾಬಾದ್, ನಾಸಿಕ್ ಇತ್ಯಾದಿಗಳಿಂದ ವರದಿಗಳು ಬಂದಿವೆ. ತಮಿಳುನಾಡಿನಲ್ಲಿ, ಕರೂರ್ ಮತ್ತು ಕಲ್ಲಕುರುಚಿಯಂತಹ ಜಿಲ್ಲೆಗಳಲ್ಲಿ ದಿನವನ್ನು ಆಚರಿಸಲಾಯಿತು. ಕರ್ನಾಟಕದ ಮೈಸೂರು, ಶಿವಮೊಗ್ಗ, ಚಿಕ್ಕಬಲ್ಲಾಪುರ, ಬೆಂಗಳೂರು ಮತ್ತು ಇತರ ಸ್ಥಳಗಳಲ್ಲಿ ಸದ್ಭಾವನಾ ದಿವಾಸ್ ಆಚರಿಸಲಾಗಿದೆ. ಗುಜರಾತ್‌ನಲ್ಲೂ ರೈತರು ಇಂದು ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.  ಸಬೆರ್‌ಕಂತದಲ್ಲಿ ತಮ್ಮ ಎಂದಿನ ದಮನಕಾರಿ ಮನೋಭಾವವನ್ನು ಪ್ರದರ್ಶಿಸಿದ ಗುಜರಾತ್ ಪೊಲೀಸರು ಸತ್ಯಾಗ್ರಹಿಗಳನ್ನು ಬಂಧಿಸಿದ್ದಾರೆ. ಹರಿಯಾಣದಿಂದಲೂ ಉಪವಾಸ ಸತ್ಯಾಗ್ರಹದ ವರದಿಗಳು ಬಂದಿವೆ. ಬಿಹಾರದಲ್ಲಿ, ಮುಜಫರ್ಪುರ್, ನಳಂದ ಮುಂತಾದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸದ್ಭಾವನಾ ದಿವಾಸ್ ಅನ್ನು ಉದ್ದನೆಯ ಮಾನವ ಸರಪಳಿಗಳಿಂದ ಆಚರಿಸಲಾಗಿದೆ. ಮಧ್ಯಪ್ರದೇಶದಲ್ಲಿಯೂ ಸಹ ಭೋಪಾಲ್, ಬೆತುಲ್, ಮುಲ್ತೈ ಮತ್ತು ಇತರ ಸ್ಥಳಗಳಲ್ಲಿ ಉಪವಾಸ ಆಚರಿಸಲಾಯಿತು. ಇಂದಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಪ್ರತಿಯೊಬ್ಬ ನಾಗರಿಕರ ಭಾಗವಹಿಸುವಿಕೆಯನ್ನು ಸಂಯುಕ್ತ ಕಿಸಾನ್ ಮೋರ್ಚಾ ಅಭಿನಂದಿಸುತ್ತದೆ ಎಂದು ತಿಳಿಸಿದ್ದಾರೆ.

ಭದ್ರತಾ ಪಡೆಗಳ ಕಾನೂನುಬಾಹಿರ ಬಳಕೆಯಿಂದ ಈ ಆಂದೋಲನವನ್ನು ದುರ್ಬಲಗೊಳಿಸಲು ಮತ್ತು ನಾಶಪಡಿಸುವ ಪೊಲೀಸರ ಪ್ರಯತ್ನಗಳನ್ನು ನಾವು ಖಂಡಿಸುತ್ತೇವೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಪೊಲೀಸರು ವಿವಿಧ ದಾಳಿಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಪೋಲಿಸ್ ಮತ್ತು ಬಿಜೆಪಿ ಗೂಂಡಾಗಳ ನಿರಂತರ ಹಿಂಸಾಚಾರವು ಸರ್ಕಾರದೊಳಗಿನ ಸ್ಪಷ್ಟ ಭಯವನ್ನು ಸ್ಪಷ್ಟವಾಗಿ ತೋರಿಸುತ್ತದೆ. ಪ್ರತಿಭಟನಾಕಾರರನ್ನು ಮತ್ತು ಪತ್ರಕರ್ತರನ್ನು ಪೊಲೀಸರು ಸಿಕ್ಕಸಿಕ್ಕಲ್ಲಿ ಬಂಧಿಸುತ್ತಿದ್ದಾರೆ. ಎಲ್ಲಾ ಶಾಂತಿಯುತ ಪ್ರತಿಭಟನಾಕಾರರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ನಾವು ಒತ್ತಾಯಿಸುತ್ತೇವೆ. ರೈತರ ಪ್ರತಿಭಟನೆಯನ್ನು ನಿರಂತರವಾಗಿ ವರದಿ ಮಾಡುತ್ತಿರುವ ಪತ್ರಕರ್ತರ ಮೇಲಿನ ಪೊಲೀಸ್ ದಾಳಿಯನ್ನು ನಾವು ಖಂಡಿಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾದ ಪರವಾಗಿ ಡಾ. ದರ್ಶನ್ ಪಾಲ್ ತಿಳಿಸಿದ್ದಾರೆ.


ಇದನ್ನೂ ಓದಿ: ಕೃಷಿ ಕಾಯ್ದೆಗಳ ರದ್ದತಿ: ಇಂದಿನ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...