Homeಚಳವಳಿಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು....

ಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು….

- Advertisement -
- Advertisement -

ಮೊದಲನೆಯ ಫೋಟೋದಲ್ಲಿರುವವರ ಹೆಸರು ಗೋಪಾಲಿಕ ಅಂತರ್ಜನಂ..ಸಂಪ್ರದಾಯವಾದಿ ನಂಬೂದಿರಿ ಬ್ರಾಹ್ಮಣ ಕುಟುಂಬದ ಮಗಳು.
ಕಳೆದ 29 ವರ್ಷದಿಂದ ಮಲಪ್ಪುರಂ ಜಿಲ್ಲೆಯ ಸರಕಾರೀ ಶಾಲೆಯೊಂದರಲ್ಲಿ ಅರೇಬಿಕ್ ಶಿಕ್ಷಕಿ..
ಅನ್ಯಮತೀಯ ಅದ್ಯಾಪಕಿಗೆ ಮೊದಲು ಕರ್ಮಠರಿಂದ ವಿರೋಧ ವ್ಯಕ್ತವಾದರೂ ನಂತರ ಊರವರ , ವಿದ್ಯಾರ್ಥಿಗಳ ಹೆಮ್ಮೆಗೆ ಪಾತ್ರವಾದ ಈ ಅಧ್ಯಾಪಕಿಯನ್ನು ವಿಶ್ವ ಅರೇಬಿಕ್ ದಿನದಂದು ಮಲಪ್ಪುರಂ ಜಿಲ್ಲೆಯ ಸಮಸ್ತ ಮುಸ್ಲಿಂ ಸಂಘಟನೆಗಳು ಆದರಿಸಿ ಸನ್ಮಾನಿಸಿತ್ತು..

ಎರಡನೆಯ ಚಿತ್ರದಲ್ಲಿರುವವರು ಡಾ. ಫಿರೋಜ್ ಖಾನ್.
ತಾತ ಪ್ರಸಿದ್ಧ ಭಜನೆಕಾರ ಗಫೂರ್ ಖಾನರಿಂದ ತೊಡಗಿ ಸ್ವಯಂ ಸಂಸ್ಕೃತ ಅಭ್ಯಸಿಸಿದ್ದ ತಂದೆ ರಂಜಾನ್ ಖಾನ್ ರವರೆಗೆ ಸಂಸ್ಕೃತದ ಸೆಳೆತ ರಕ್ತದಲ್ಲೇ ಇದ್ದ ವಿದ್ಯಾರ್ಥಿ.

ಸಂಸ್ಕೃತ ಅಧ್ಯಯನದಲ್ಲಿ ಶಾಸ್ತ್ರಿ, ಶಿಕ್ಷಾ ಶಾಸ್ತ್ರಿ, ಆಚಾರ್ಯ ಅಧ್ಯಯನ ಮುಗಿಸಿ ಜೈಪುರದ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದಿಂದ ಪಿಹೆಚ್ ಡಿ ಪದವಿ ಪಡೆದ ಪ್ರತಿಭಾವಂತ.
ತನ್ನ ಅರ್ಹತೆಯ ಮೇರೆಗೆ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಸಹಾಯಕ ಪ್ರೊಫೆಸರ್ ಆಗಿ ಆಯ್ಕೆಯಾದ ಫಿರೋಜ್ ಮುಸಲ್ಮಾನ ಎನ್ನುವ ಒಂದೇ ಕಾರಣಕ್ಕಾಗಿ ಅಲ್ಲಿಯ “ದೇಶಪ್ರೇಮಿ” ವಿದ್ಯಾರ್ಥಿಗಳ ವಿರೋಧದಿಂದಾಗಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡುವಂತಾಯಿತು…
ಮೊದಲನೆಯವರಿಗೆ ಸಮಾಜ, ಸಮುದಾಯ ಎರಡೂ ಸ್ವಾಗತಿಸಿ ಗೌರವಿಸಿದರೆ ಎರಡನೆಯವರು ಮೋದಿಜಿಯ ಸ್ವಂತ ಕ್ಷೇತ್ರದಲ್ಲೇ ಯಾರ ಸಹಕಾರವೂ ದೊರೆಯದೆ ತನ್ನ ಧರ್ಮದ ಕಾರಣದಿಂದ ಸೋಲೊಪ್ಪಿಕೊಂಡರು…

ವ್ಯತ್ಯಾಸ ಇಷ್ಟೇ.. ಮೊದಲನೆಯದು ನಡೆದದ್ದು ಕೇರಳದಲ್ಲಿ .. ಎರಡನೆಯದು ಯೋಗಿಯ ರಾಮರಾಜ್ಯದಲ್ಲಿ… ಎಂದು ಕಿಶನ್‌ ಕುಮಾರ್‌ ಹೆಗಡೆಯವರು ಪ್ರಸ್ತುತ ವಿದ್ಯಾಮಾನಕ್ಕೆ ಮೌಲಿಕ ಬೆಳಕು ಚೆಲ್ಲಿದ್ದಾರೆ.

ಇದನ್ನೂ ಓದಿ: ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಇನ್ನು “ಆಚಂಗಿ ನಾರಾಯಣ ಶಾಸ್ತ್ರಿಗಳು ಸಂಸ್ಕೃತ ವನ್ನು ಮಡಿಬಟ್ಟೆಯಲ್ಲಿ ಸುತ್ತಿಟ್ಟಿದ್ದರೆ. ನಮಗೆ ಎಸ್.ಕೆ. ಕರೀಂಖಾನರಂತ ಮೇರು ವ್ಯಕ್ತಿಗಳು ದೊರೆಯುತ್ತಿರಲಿಲ್ಲ”

ತಾನು ಗಳಿಸಿದ ಜ್ಞಾನವನ್ಬು ಇತರರಿಗೆ ಹಂಚಲೇಬೇಕೆಂದು ಈ ನೆಲದಲ್ಲಿ ಕಾನೂನಿಲ್ಲ. ಆದರೆ ಅದು ಆಶಯ. ಸಂವಿಧಾನದ ಆಶಯ ಕೂಡಾ. ನಾರಾಯಣ ಶಾಸ್ತ್ರಿಯವರು ಕರೀಂಖಾನರಿಗೆ ಸಂಸ್ಕೃತ ಕಲಿಸಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ. ಇನ್ನೂ ಸಂವಿಧಾನ ರಚನೆಯೂ ಆಗಿರಲಿಲ್ಲ.

ನಾರಾಯಣ ಶಾಸ್ತ್ರಿಗಳ ನಡೆ ನಮ್ಮ ಪರಂಪರೆಯಾಗಬೇಕಿತ್ತು. ದುರಾದೃಷ್ಡವೆಂದರೆ ಅವರ ಮುಂದುವರಿಕೆಯಾಗಬೇಕಾದವರು ಮುಸ್ಲಿಮನಿಂದ ಸಂಸ್ಕೃತ ಕಲಿಯಲಾರೆವೆಂದು ಹೋಮ ಹವನ ಮಾಡುತ್ತ ಕುಳಿತಿದ್ದಾರೆ ” ಎಂದು ಪ್ರಸಾದ್ ರಕ್ಷಿದಿಯವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸಂಸ್ಕೃತ ಕಲಿಸಲು ಮುಸ್ಲಿಂ ಪ್ರಾಧ್ಯಾಪಕರನ್ನು ನೇಮಿಸಿಕೊಂಡ ಬಂಗಾಳದ ರಾಮಕೃಷ್ಣ ಮಿಷನ್ ವಿದ್ಯಾಮಂದಿರ..

ಸಂಸ್ಕೃತದಿಂದ ಸಂಸ್ಕೃತಿ ಎಂಬ ಮಾತು ಅರ್ಥಹೀನ ಎಂಬುದಕ್ಕೆ ಬನಾರಸ್ ವಿಶ್ವವಿದ್ಯಾಲಯದ
ಈ ಅಸಂಸ್ಕೃತ ವಿದ್ಯಾರ್ಥಿಗಳೇ ಸಾಕ್ಷಿ. ಉರ್ದು ಜ್ಞಾನಪೀಠ ಪ್ರಶಸ್ತಿ‌ ಪುರಸ್ಕೃತರು
ಪ್ರೊ ಗೋಪಿಚಂದ್ ನಾರಂಗ್. ಭಾಷೆಗೂ ಮತಧರ್ಮಕ್ಕೂ ಸಂಬಂಧವಿಲ್ಲ. ವಿಶ್ವವಿದ್ಯಾನಿಲಯಗಳ ಜೊತೆ ಮತಧರ್ಮಗಳ ಹೆಸರುಗಳನ್ನು ಮೊದಲು ಕಿತ್ತೊಗೆಯಬೇಕು. ಅವು ಮತಧರ್ಮ ನಿರಪೇಕ್ಷತೆಗೆ ಸಲ್ಲುವುದಿಲ್ಲ. ಬನಾರಸ್ ಸಂಸ್ಕೃತ ವಿದ್ಯಾರ್ಥಿಗಳ ವರ್ತನೆ ಜಗತ್ತಿನ ಎದುರು ಭಾರತ ತಲೆತಗ್ಗಿಸುವಂತೆ ಮಾಡಿದೆ ಎಂದು ಪಂಡಿತಾರಾಧ್ಯ ಮೈಸೂರುರವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...