Homeಚಳವಳಿಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು....

ಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು….

- Advertisement -
- Advertisement -

ಮೊದಲನೆಯ ಫೋಟೋದಲ್ಲಿರುವವರ ಹೆಸರು ಗೋಪಾಲಿಕ ಅಂತರ್ಜನಂ..ಸಂಪ್ರದಾಯವಾದಿ ನಂಬೂದಿರಿ ಬ್ರಾಹ್ಮಣ ಕುಟುಂಬದ ಮಗಳು.
ಕಳೆದ 29 ವರ್ಷದಿಂದ ಮಲಪ್ಪುರಂ ಜಿಲ್ಲೆಯ ಸರಕಾರೀ ಶಾಲೆಯೊಂದರಲ್ಲಿ ಅರೇಬಿಕ್ ಶಿಕ್ಷಕಿ..
ಅನ್ಯಮತೀಯ ಅದ್ಯಾಪಕಿಗೆ ಮೊದಲು ಕರ್ಮಠರಿಂದ ವಿರೋಧ ವ್ಯಕ್ತವಾದರೂ ನಂತರ ಊರವರ , ವಿದ್ಯಾರ್ಥಿಗಳ ಹೆಮ್ಮೆಗೆ ಪಾತ್ರವಾದ ಈ ಅಧ್ಯಾಪಕಿಯನ್ನು ವಿಶ್ವ ಅರೇಬಿಕ್ ದಿನದಂದು ಮಲಪ್ಪುರಂ ಜಿಲ್ಲೆಯ ಸಮಸ್ತ ಮುಸ್ಲಿಂ ಸಂಘಟನೆಗಳು ಆದರಿಸಿ ಸನ್ಮಾನಿಸಿತ್ತು..

ಎರಡನೆಯ ಚಿತ್ರದಲ್ಲಿರುವವರು ಡಾ. ಫಿರೋಜ್ ಖಾನ್.
ತಾತ ಪ್ರಸಿದ್ಧ ಭಜನೆಕಾರ ಗಫೂರ್ ಖಾನರಿಂದ ತೊಡಗಿ ಸ್ವಯಂ ಸಂಸ್ಕೃತ ಅಭ್ಯಸಿಸಿದ್ದ ತಂದೆ ರಂಜಾನ್ ಖಾನ್ ರವರೆಗೆ ಸಂಸ್ಕೃತದ ಸೆಳೆತ ರಕ್ತದಲ್ಲೇ ಇದ್ದ ವಿದ್ಯಾರ್ಥಿ.

ಸಂಸ್ಕೃತ ಅಧ್ಯಯನದಲ್ಲಿ ಶಾಸ್ತ್ರಿ, ಶಿಕ್ಷಾ ಶಾಸ್ತ್ರಿ, ಆಚಾರ್ಯ ಅಧ್ಯಯನ ಮುಗಿಸಿ ಜೈಪುರದ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದಿಂದ ಪಿಹೆಚ್ ಡಿ ಪದವಿ ಪಡೆದ ಪ್ರತಿಭಾವಂತ.
ತನ್ನ ಅರ್ಹತೆಯ ಮೇರೆಗೆ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಸಹಾಯಕ ಪ್ರೊಫೆಸರ್ ಆಗಿ ಆಯ್ಕೆಯಾದ ಫಿರೋಜ್ ಮುಸಲ್ಮಾನ ಎನ್ನುವ ಒಂದೇ ಕಾರಣಕ್ಕಾಗಿ ಅಲ್ಲಿಯ “ದೇಶಪ್ರೇಮಿ” ವಿದ್ಯಾರ್ಥಿಗಳ ವಿರೋಧದಿಂದಾಗಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡುವಂತಾಯಿತು…
ಮೊದಲನೆಯವರಿಗೆ ಸಮಾಜ, ಸಮುದಾಯ ಎರಡೂ ಸ್ವಾಗತಿಸಿ ಗೌರವಿಸಿದರೆ ಎರಡನೆಯವರು ಮೋದಿಜಿಯ ಸ್ವಂತ ಕ್ಷೇತ್ರದಲ್ಲೇ ಯಾರ ಸಹಕಾರವೂ ದೊರೆಯದೆ ತನ್ನ ಧರ್ಮದ ಕಾರಣದಿಂದ ಸೋಲೊಪ್ಪಿಕೊಂಡರು…

ವ್ಯತ್ಯಾಸ ಇಷ್ಟೇ.. ಮೊದಲನೆಯದು ನಡೆದದ್ದು ಕೇರಳದಲ್ಲಿ .. ಎರಡನೆಯದು ಯೋಗಿಯ ರಾಮರಾಜ್ಯದಲ್ಲಿ… ಎಂದು ಕಿಶನ್‌ ಕುಮಾರ್‌ ಹೆಗಡೆಯವರು ಪ್ರಸ್ತುತ ವಿದ್ಯಾಮಾನಕ್ಕೆ ಮೌಲಿಕ ಬೆಳಕು ಚೆಲ್ಲಿದ್ದಾರೆ.

ಇದನ್ನೂ ಓದಿ: ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಇನ್ನು “ಆಚಂಗಿ ನಾರಾಯಣ ಶಾಸ್ತ್ರಿಗಳು ಸಂಸ್ಕೃತ ವನ್ನು ಮಡಿಬಟ್ಟೆಯಲ್ಲಿ ಸುತ್ತಿಟ್ಟಿದ್ದರೆ. ನಮಗೆ ಎಸ್.ಕೆ. ಕರೀಂಖಾನರಂತ ಮೇರು ವ್ಯಕ್ತಿಗಳು ದೊರೆಯುತ್ತಿರಲಿಲ್ಲ”

ತಾನು ಗಳಿಸಿದ ಜ್ಞಾನವನ್ಬು ಇತರರಿಗೆ ಹಂಚಲೇಬೇಕೆಂದು ಈ ನೆಲದಲ್ಲಿ ಕಾನೂನಿಲ್ಲ. ಆದರೆ ಅದು ಆಶಯ. ಸಂವಿಧಾನದ ಆಶಯ ಕೂಡಾ. ನಾರಾಯಣ ಶಾಸ್ತ್ರಿಯವರು ಕರೀಂಖಾನರಿಗೆ ಸಂಸ್ಕೃತ ಕಲಿಸಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ. ಇನ್ನೂ ಸಂವಿಧಾನ ರಚನೆಯೂ ಆಗಿರಲಿಲ್ಲ.

ನಾರಾಯಣ ಶಾಸ್ತ್ರಿಗಳ ನಡೆ ನಮ್ಮ ಪರಂಪರೆಯಾಗಬೇಕಿತ್ತು. ದುರಾದೃಷ್ಡವೆಂದರೆ ಅವರ ಮುಂದುವರಿಕೆಯಾಗಬೇಕಾದವರು ಮುಸ್ಲಿಮನಿಂದ ಸಂಸ್ಕೃತ ಕಲಿಯಲಾರೆವೆಂದು ಹೋಮ ಹವನ ಮಾಡುತ್ತ ಕುಳಿತಿದ್ದಾರೆ ” ಎಂದು ಪ್ರಸಾದ್ ರಕ್ಷಿದಿಯವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸಂಸ್ಕೃತ ಕಲಿಸಲು ಮುಸ್ಲಿಂ ಪ್ರಾಧ್ಯಾಪಕರನ್ನು ನೇಮಿಸಿಕೊಂಡ ಬಂಗಾಳದ ರಾಮಕೃಷ್ಣ ಮಿಷನ್ ವಿದ್ಯಾಮಂದಿರ..

ಸಂಸ್ಕೃತದಿಂದ ಸಂಸ್ಕೃತಿ ಎಂಬ ಮಾತು ಅರ್ಥಹೀನ ಎಂಬುದಕ್ಕೆ ಬನಾರಸ್ ವಿಶ್ವವಿದ್ಯಾಲಯದ
ಈ ಅಸಂಸ್ಕೃತ ವಿದ್ಯಾರ್ಥಿಗಳೇ ಸಾಕ್ಷಿ. ಉರ್ದು ಜ್ಞಾನಪೀಠ ಪ್ರಶಸ್ತಿ‌ ಪುರಸ್ಕೃತರು
ಪ್ರೊ ಗೋಪಿಚಂದ್ ನಾರಂಗ್. ಭಾಷೆಗೂ ಮತಧರ್ಮಕ್ಕೂ ಸಂಬಂಧವಿಲ್ಲ. ವಿಶ್ವವಿದ್ಯಾನಿಲಯಗಳ ಜೊತೆ ಮತಧರ್ಮಗಳ ಹೆಸರುಗಳನ್ನು ಮೊದಲು ಕಿತ್ತೊಗೆಯಬೇಕು. ಅವು ಮತಧರ್ಮ ನಿರಪೇಕ್ಷತೆಗೆ ಸಲ್ಲುವುದಿಲ್ಲ. ಬನಾರಸ್ ಸಂಸ್ಕೃತ ವಿದ್ಯಾರ್ಥಿಗಳ ವರ್ತನೆ ಜಗತ್ತಿನ ಎದುರು ಭಾರತ ತಲೆತಗ್ಗಿಸುವಂತೆ ಮಾಡಿದೆ ಎಂದು ಪಂಡಿತಾರಾಧ್ಯ ಮೈಸೂರುರವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...