Homeಚಳವಳಿಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು....

ಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು….

- Advertisement -
- Advertisement -

ಮೊದಲನೆಯ ಫೋಟೋದಲ್ಲಿರುವವರ ಹೆಸರು ಗೋಪಾಲಿಕ ಅಂತರ್ಜನಂ..ಸಂಪ್ರದಾಯವಾದಿ ನಂಬೂದಿರಿ ಬ್ರಾಹ್ಮಣ ಕುಟುಂಬದ ಮಗಳು.
ಕಳೆದ 29 ವರ್ಷದಿಂದ ಮಲಪ್ಪುರಂ ಜಿಲ್ಲೆಯ ಸರಕಾರೀ ಶಾಲೆಯೊಂದರಲ್ಲಿ ಅರೇಬಿಕ್ ಶಿಕ್ಷಕಿ..
ಅನ್ಯಮತೀಯ ಅದ್ಯಾಪಕಿಗೆ ಮೊದಲು ಕರ್ಮಠರಿಂದ ವಿರೋಧ ವ್ಯಕ್ತವಾದರೂ ನಂತರ ಊರವರ , ವಿದ್ಯಾರ್ಥಿಗಳ ಹೆಮ್ಮೆಗೆ ಪಾತ್ರವಾದ ಈ ಅಧ್ಯಾಪಕಿಯನ್ನು ವಿಶ್ವ ಅರೇಬಿಕ್ ದಿನದಂದು ಮಲಪ್ಪುರಂ ಜಿಲ್ಲೆಯ ಸಮಸ್ತ ಮುಸ್ಲಿಂ ಸಂಘಟನೆಗಳು ಆದರಿಸಿ ಸನ್ಮಾನಿಸಿತ್ತು..

ಎರಡನೆಯ ಚಿತ್ರದಲ್ಲಿರುವವರು ಡಾ. ಫಿರೋಜ್ ಖಾನ್.
ತಾತ ಪ್ರಸಿದ್ಧ ಭಜನೆಕಾರ ಗಫೂರ್ ಖಾನರಿಂದ ತೊಡಗಿ ಸ್ವಯಂ ಸಂಸ್ಕೃತ ಅಭ್ಯಸಿಸಿದ್ದ ತಂದೆ ರಂಜಾನ್ ಖಾನ್ ರವರೆಗೆ ಸಂಸ್ಕೃತದ ಸೆಳೆತ ರಕ್ತದಲ್ಲೇ ಇದ್ದ ವಿದ್ಯಾರ್ಥಿ.

ಸಂಸ್ಕೃತ ಅಧ್ಯಯನದಲ್ಲಿ ಶಾಸ್ತ್ರಿ, ಶಿಕ್ಷಾ ಶಾಸ್ತ್ರಿ, ಆಚಾರ್ಯ ಅಧ್ಯಯನ ಮುಗಿಸಿ ಜೈಪುರದ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದಿಂದ ಪಿಹೆಚ್ ಡಿ ಪದವಿ ಪಡೆದ ಪ್ರತಿಭಾವಂತ.
ತನ್ನ ಅರ್ಹತೆಯ ಮೇರೆಗೆ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಸಹಾಯಕ ಪ್ರೊಫೆಸರ್ ಆಗಿ ಆಯ್ಕೆಯಾದ ಫಿರೋಜ್ ಮುಸಲ್ಮಾನ ಎನ್ನುವ ಒಂದೇ ಕಾರಣಕ್ಕಾಗಿ ಅಲ್ಲಿಯ “ದೇಶಪ್ರೇಮಿ” ವಿದ್ಯಾರ್ಥಿಗಳ ವಿರೋಧದಿಂದಾಗಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡುವಂತಾಯಿತು…
ಮೊದಲನೆಯವರಿಗೆ ಸಮಾಜ, ಸಮುದಾಯ ಎರಡೂ ಸ್ವಾಗತಿಸಿ ಗೌರವಿಸಿದರೆ ಎರಡನೆಯವರು ಮೋದಿಜಿಯ ಸ್ವಂತ ಕ್ಷೇತ್ರದಲ್ಲೇ ಯಾರ ಸಹಕಾರವೂ ದೊರೆಯದೆ ತನ್ನ ಧರ್ಮದ ಕಾರಣದಿಂದ ಸೋಲೊಪ್ಪಿಕೊಂಡರು…

ವ್ಯತ್ಯಾಸ ಇಷ್ಟೇ.. ಮೊದಲನೆಯದು ನಡೆದದ್ದು ಕೇರಳದಲ್ಲಿ .. ಎರಡನೆಯದು ಯೋಗಿಯ ರಾಮರಾಜ್ಯದಲ್ಲಿ… ಎಂದು ಕಿಶನ್‌ ಕುಮಾರ್‌ ಹೆಗಡೆಯವರು ಪ್ರಸ್ತುತ ವಿದ್ಯಾಮಾನಕ್ಕೆ ಮೌಲಿಕ ಬೆಳಕು ಚೆಲ್ಲಿದ್ದಾರೆ.

ಇದನ್ನೂ ಓದಿ: ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಇನ್ನು “ಆಚಂಗಿ ನಾರಾಯಣ ಶಾಸ್ತ್ರಿಗಳು ಸಂಸ್ಕೃತ ವನ್ನು ಮಡಿಬಟ್ಟೆಯಲ್ಲಿ ಸುತ್ತಿಟ್ಟಿದ್ದರೆ. ನಮಗೆ ಎಸ್.ಕೆ. ಕರೀಂಖಾನರಂತ ಮೇರು ವ್ಯಕ್ತಿಗಳು ದೊರೆಯುತ್ತಿರಲಿಲ್ಲ”

ತಾನು ಗಳಿಸಿದ ಜ್ಞಾನವನ್ಬು ಇತರರಿಗೆ ಹಂಚಲೇಬೇಕೆಂದು ಈ ನೆಲದಲ್ಲಿ ಕಾನೂನಿಲ್ಲ. ಆದರೆ ಅದು ಆಶಯ. ಸಂವಿಧಾನದ ಆಶಯ ಕೂಡಾ. ನಾರಾಯಣ ಶಾಸ್ತ್ರಿಯವರು ಕರೀಂಖಾನರಿಗೆ ಸಂಸ್ಕೃತ ಕಲಿಸಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ. ಇನ್ನೂ ಸಂವಿಧಾನ ರಚನೆಯೂ ಆಗಿರಲಿಲ್ಲ.

ನಾರಾಯಣ ಶಾಸ್ತ್ರಿಗಳ ನಡೆ ನಮ್ಮ ಪರಂಪರೆಯಾಗಬೇಕಿತ್ತು. ದುರಾದೃಷ್ಡವೆಂದರೆ ಅವರ ಮುಂದುವರಿಕೆಯಾಗಬೇಕಾದವರು ಮುಸ್ಲಿಮನಿಂದ ಸಂಸ್ಕೃತ ಕಲಿಯಲಾರೆವೆಂದು ಹೋಮ ಹವನ ಮಾಡುತ್ತ ಕುಳಿತಿದ್ದಾರೆ ” ಎಂದು ಪ್ರಸಾದ್ ರಕ್ಷಿದಿಯವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸಂಸ್ಕೃತ ಕಲಿಸಲು ಮುಸ್ಲಿಂ ಪ್ರಾಧ್ಯಾಪಕರನ್ನು ನೇಮಿಸಿಕೊಂಡ ಬಂಗಾಳದ ರಾಮಕೃಷ್ಣ ಮಿಷನ್ ವಿದ್ಯಾಮಂದಿರ..

ಸಂಸ್ಕೃತದಿಂದ ಸಂಸ್ಕೃತಿ ಎಂಬ ಮಾತು ಅರ್ಥಹೀನ ಎಂಬುದಕ್ಕೆ ಬನಾರಸ್ ವಿಶ್ವವಿದ್ಯಾಲಯದ
ಈ ಅಸಂಸ್ಕೃತ ವಿದ್ಯಾರ್ಥಿಗಳೇ ಸಾಕ್ಷಿ. ಉರ್ದು ಜ್ಞಾನಪೀಠ ಪ್ರಶಸ್ತಿ‌ ಪುರಸ್ಕೃತರು
ಪ್ರೊ ಗೋಪಿಚಂದ್ ನಾರಂಗ್. ಭಾಷೆಗೂ ಮತಧರ್ಮಕ್ಕೂ ಸಂಬಂಧವಿಲ್ಲ. ವಿಶ್ವವಿದ್ಯಾನಿಲಯಗಳ ಜೊತೆ ಮತಧರ್ಮಗಳ ಹೆಸರುಗಳನ್ನು ಮೊದಲು ಕಿತ್ತೊಗೆಯಬೇಕು. ಅವು ಮತಧರ್ಮ ನಿರಪೇಕ್ಷತೆಗೆ ಸಲ್ಲುವುದಿಲ್ಲ. ಬನಾರಸ್ ಸಂಸ್ಕೃತ ವಿದ್ಯಾರ್ಥಿಗಳ ವರ್ತನೆ ಜಗತ್ತಿನ ಎದುರು ಭಾರತ ತಲೆತಗ್ಗಿಸುವಂತೆ ಮಾಡಿದೆ ಎಂದು ಪಂಡಿತಾರಾಧ್ಯ ಮೈಸೂರುರವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...