Homeಚಳವಳಿಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು....

ಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು….

- Advertisement -
- Advertisement -

ಮೊದಲನೆಯ ಫೋಟೋದಲ್ಲಿರುವವರ ಹೆಸರು ಗೋಪಾಲಿಕ ಅಂತರ್ಜನಂ..ಸಂಪ್ರದಾಯವಾದಿ ನಂಬೂದಿರಿ ಬ್ರಾಹ್ಮಣ ಕುಟುಂಬದ ಮಗಳು.
ಕಳೆದ 29 ವರ್ಷದಿಂದ ಮಲಪ್ಪುರಂ ಜಿಲ್ಲೆಯ ಸರಕಾರೀ ಶಾಲೆಯೊಂದರಲ್ಲಿ ಅರೇಬಿಕ್ ಶಿಕ್ಷಕಿ..
ಅನ್ಯಮತೀಯ ಅದ್ಯಾಪಕಿಗೆ ಮೊದಲು ಕರ್ಮಠರಿಂದ ವಿರೋಧ ವ್ಯಕ್ತವಾದರೂ ನಂತರ ಊರವರ , ವಿದ್ಯಾರ್ಥಿಗಳ ಹೆಮ್ಮೆಗೆ ಪಾತ್ರವಾದ ಈ ಅಧ್ಯಾಪಕಿಯನ್ನು ವಿಶ್ವ ಅರೇಬಿಕ್ ದಿನದಂದು ಮಲಪ್ಪುರಂ ಜಿಲ್ಲೆಯ ಸಮಸ್ತ ಮುಸ್ಲಿಂ ಸಂಘಟನೆಗಳು ಆದರಿಸಿ ಸನ್ಮಾನಿಸಿತ್ತು..

ಎರಡನೆಯ ಚಿತ್ರದಲ್ಲಿರುವವರು ಡಾ. ಫಿರೋಜ್ ಖಾನ್.
ತಾತ ಪ್ರಸಿದ್ಧ ಭಜನೆಕಾರ ಗಫೂರ್ ಖಾನರಿಂದ ತೊಡಗಿ ಸ್ವಯಂ ಸಂಸ್ಕೃತ ಅಭ್ಯಸಿಸಿದ್ದ ತಂದೆ ರಂಜಾನ್ ಖಾನ್ ರವರೆಗೆ ಸಂಸ್ಕೃತದ ಸೆಳೆತ ರಕ್ತದಲ್ಲೇ ಇದ್ದ ವಿದ್ಯಾರ್ಥಿ.

ಸಂಸ್ಕೃತ ಅಧ್ಯಯನದಲ್ಲಿ ಶಾಸ್ತ್ರಿ, ಶಿಕ್ಷಾ ಶಾಸ್ತ್ರಿ, ಆಚಾರ್ಯ ಅಧ್ಯಯನ ಮುಗಿಸಿ ಜೈಪುರದ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದಿಂದ ಪಿಹೆಚ್ ಡಿ ಪದವಿ ಪಡೆದ ಪ್ರತಿಭಾವಂತ.
ತನ್ನ ಅರ್ಹತೆಯ ಮೇರೆಗೆ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಸಹಾಯಕ ಪ್ರೊಫೆಸರ್ ಆಗಿ ಆಯ್ಕೆಯಾದ ಫಿರೋಜ್ ಮುಸಲ್ಮಾನ ಎನ್ನುವ ಒಂದೇ ಕಾರಣಕ್ಕಾಗಿ ಅಲ್ಲಿಯ “ದೇಶಪ್ರೇಮಿ” ವಿದ್ಯಾರ್ಥಿಗಳ ವಿರೋಧದಿಂದಾಗಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡುವಂತಾಯಿತು…
ಮೊದಲನೆಯವರಿಗೆ ಸಮಾಜ, ಸಮುದಾಯ ಎರಡೂ ಸ್ವಾಗತಿಸಿ ಗೌರವಿಸಿದರೆ ಎರಡನೆಯವರು ಮೋದಿಜಿಯ ಸ್ವಂತ ಕ್ಷೇತ್ರದಲ್ಲೇ ಯಾರ ಸಹಕಾರವೂ ದೊರೆಯದೆ ತನ್ನ ಧರ್ಮದ ಕಾರಣದಿಂದ ಸೋಲೊಪ್ಪಿಕೊಂಡರು…

ವ್ಯತ್ಯಾಸ ಇಷ್ಟೇ.. ಮೊದಲನೆಯದು ನಡೆದದ್ದು ಕೇರಳದಲ್ಲಿ .. ಎರಡನೆಯದು ಯೋಗಿಯ ರಾಮರಾಜ್ಯದಲ್ಲಿ… ಎಂದು ಕಿಶನ್‌ ಕುಮಾರ್‌ ಹೆಗಡೆಯವರು ಪ್ರಸ್ತುತ ವಿದ್ಯಾಮಾನಕ್ಕೆ ಮೌಲಿಕ ಬೆಳಕು ಚೆಲ್ಲಿದ್ದಾರೆ.

ಇದನ್ನೂ ಓದಿ: ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಇನ್ನು “ಆಚಂಗಿ ನಾರಾಯಣ ಶಾಸ್ತ್ರಿಗಳು ಸಂಸ್ಕೃತ ವನ್ನು ಮಡಿಬಟ್ಟೆಯಲ್ಲಿ ಸುತ್ತಿಟ್ಟಿದ್ದರೆ. ನಮಗೆ ಎಸ್.ಕೆ. ಕರೀಂಖಾನರಂತ ಮೇರು ವ್ಯಕ್ತಿಗಳು ದೊರೆಯುತ್ತಿರಲಿಲ್ಲ”

ತಾನು ಗಳಿಸಿದ ಜ್ಞಾನವನ್ಬು ಇತರರಿಗೆ ಹಂಚಲೇಬೇಕೆಂದು ಈ ನೆಲದಲ್ಲಿ ಕಾನೂನಿಲ್ಲ. ಆದರೆ ಅದು ಆಶಯ. ಸಂವಿಧಾನದ ಆಶಯ ಕೂಡಾ. ನಾರಾಯಣ ಶಾಸ್ತ್ರಿಯವರು ಕರೀಂಖಾನರಿಗೆ ಸಂಸ್ಕೃತ ಕಲಿಸಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ. ಇನ್ನೂ ಸಂವಿಧಾನ ರಚನೆಯೂ ಆಗಿರಲಿಲ್ಲ.

ನಾರಾಯಣ ಶಾಸ್ತ್ರಿಗಳ ನಡೆ ನಮ್ಮ ಪರಂಪರೆಯಾಗಬೇಕಿತ್ತು. ದುರಾದೃಷ್ಡವೆಂದರೆ ಅವರ ಮುಂದುವರಿಕೆಯಾಗಬೇಕಾದವರು ಮುಸ್ಲಿಮನಿಂದ ಸಂಸ್ಕೃತ ಕಲಿಯಲಾರೆವೆಂದು ಹೋಮ ಹವನ ಮಾಡುತ್ತ ಕುಳಿತಿದ್ದಾರೆ ” ಎಂದು ಪ್ರಸಾದ್ ರಕ್ಷಿದಿಯವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸಂಸ್ಕೃತ ಕಲಿಸಲು ಮುಸ್ಲಿಂ ಪ್ರಾಧ್ಯಾಪಕರನ್ನು ನೇಮಿಸಿಕೊಂಡ ಬಂಗಾಳದ ರಾಮಕೃಷ್ಣ ಮಿಷನ್ ವಿದ್ಯಾಮಂದಿರ..

ಸಂಸ್ಕೃತದಿಂದ ಸಂಸ್ಕೃತಿ ಎಂಬ ಮಾತು ಅರ್ಥಹೀನ ಎಂಬುದಕ್ಕೆ ಬನಾರಸ್ ವಿಶ್ವವಿದ್ಯಾಲಯದ
ಈ ಅಸಂಸ್ಕೃತ ವಿದ್ಯಾರ್ಥಿಗಳೇ ಸಾಕ್ಷಿ. ಉರ್ದು ಜ್ಞಾನಪೀಠ ಪ್ರಶಸ್ತಿ‌ ಪುರಸ್ಕೃತರು
ಪ್ರೊ ಗೋಪಿಚಂದ್ ನಾರಂಗ್. ಭಾಷೆಗೂ ಮತಧರ್ಮಕ್ಕೂ ಸಂಬಂಧವಿಲ್ಲ. ವಿಶ್ವವಿದ್ಯಾನಿಲಯಗಳ ಜೊತೆ ಮತಧರ್ಮಗಳ ಹೆಸರುಗಳನ್ನು ಮೊದಲು ಕಿತ್ತೊಗೆಯಬೇಕು. ಅವು ಮತಧರ್ಮ ನಿರಪೇಕ್ಷತೆಗೆ ಸಲ್ಲುವುದಿಲ್ಲ. ಬನಾರಸ್ ಸಂಸ್ಕೃತ ವಿದ್ಯಾರ್ಥಿಗಳ ವರ್ತನೆ ಜಗತ್ತಿನ ಎದುರು ಭಾರತ ತಲೆತಗ್ಗಿಸುವಂತೆ ಮಾಡಿದೆ ಎಂದು ಪಂಡಿತಾರಾಧ್ಯ ಮೈಸೂರುರವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...