Homeಚಳವಳಿಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು....

ಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು….

- Advertisement -
- Advertisement -

ಮೊದಲನೆಯ ಫೋಟೋದಲ್ಲಿರುವವರ ಹೆಸರು ಗೋಪಾಲಿಕ ಅಂತರ್ಜನಂ..ಸಂಪ್ರದಾಯವಾದಿ ನಂಬೂದಿರಿ ಬ್ರಾಹ್ಮಣ ಕುಟುಂಬದ ಮಗಳು.
ಕಳೆದ 29 ವರ್ಷದಿಂದ ಮಲಪ್ಪುರಂ ಜಿಲ್ಲೆಯ ಸರಕಾರೀ ಶಾಲೆಯೊಂದರಲ್ಲಿ ಅರೇಬಿಕ್ ಶಿಕ್ಷಕಿ..
ಅನ್ಯಮತೀಯ ಅದ್ಯಾಪಕಿಗೆ ಮೊದಲು ಕರ್ಮಠರಿಂದ ವಿರೋಧ ವ್ಯಕ್ತವಾದರೂ ನಂತರ ಊರವರ , ವಿದ್ಯಾರ್ಥಿಗಳ ಹೆಮ್ಮೆಗೆ ಪಾತ್ರವಾದ ಈ ಅಧ್ಯಾಪಕಿಯನ್ನು ವಿಶ್ವ ಅರೇಬಿಕ್ ದಿನದಂದು ಮಲಪ್ಪುರಂ ಜಿಲ್ಲೆಯ ಸಮಸ್ತ ಮುಸ್ಲಿಂ ಸಂಘಟನೆಗಳು ಆದರಿಸಿ ಸನ್ಮಾನಿಸಿತ್ತು..

ಎರಡನೆಯ ಚಿತ್ರದಲ್ಲಿರುವವರು ಡಾ. ಫಿರೋಜ್ ಖಾನ್.
ತಾತ ಪ್ರಸಿದ್ಧ ಭಜನೆಕಾರ ಗಫೂರ್ ಖಾನರಿಂದ ತೊಡಗಿ ಸ್ವಯಂ ಸಂಸ್ಕೃತ ಅಭ್ಯಸಿಸಿದ್ದ ತಂದೆ ರಂಜಾನ್ ಖಾನ್ ರವರೆಗೆ ಸಂಸ್ಕೃತದ ಸೆಳೆತ ರಕ್ತದಲ್ಲೇ ಇದ್ದ ವಿದ್ಯಾರ್ಥಿ.

ಸಂಸ್ಕೃತ ಅಧ್ಯಯನದಲ್ಲಿ ಶಾಸ್ತ್ರಿ, ಶಿಕ್ಷಾ ಶಾಸ್ತ್ರಿ, ಆಚಾರ್ಯ ಅಧ್ಯಯನ ಮುಗಿಸಿ ಜೈಪುರದ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದಿಂದ ಪಿಹೆಚ್ ಡಿ ಪದವಿ ಪಡೆದ ಪ್ರತಿಭಾವಂತ.
ತನ್ನ ಅರ್ಹತೆಯ ಮೇರೆಗೆ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಸಹಾಯಕ ಪ್ರೊಫೆಸರ್ ಆಗಿ ಆಯ್ಕೆಯಾದ ಫಿರೋಜ್ ಮುಸಲ್ಮಾನ ಎನ್ನುವ ಒಂದೇ ಕಾರಣಕ್ಕಾಗಿ ಅಲ್ಲಿಯ “ದೇಶಪ್ರೇಮಿ” ವಿದ್ಯಾರ್ಥಿಗಳ ವಿರೋಧದಿಂದಾಗಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡುವಂತಾಯಿತು…
ಮೊದಲನೆಯವರಿಗೆ ಸಮಾಜ, ಸಮುದಾಯ ಎರಡೂ ಸ್ವಾಗತಿಸಿ ಗೌರವಿಸಿದರೆ ಎರಡನೆಯವರು ಮೋದಿಜಿಯ ಸ್ವಂತ ಕ್ಷೇತ್ರದಲ್ಲೇ ಯಾರ ಸಹಕಾರವೂ ದೊರೆಯದೆ ತನ್ನ ಧರ್ಮದ ಕಾರಣದಿಂದ ಸೋಲೊಪ್ಪಿಕೊಂಡರು…

ವ್ಯತ್ಯಾಸ ಇಷ್ಟೇ.. ಮೊದಲನೆಯದು ನಡೆದದ್ದು ಕೇರಳದಲ್ಲಿ .. ಎರಡನೆಯದು ಯೋಗಿಯ ರಾಮರಾಜ್ಯದಲ್ಲಿ… ಎಂದು ಕಿಶನ್‌ ಕುಮಾರ್‌ ಹೆಗಡೆಯವರು ಪ್ರಸ್ತುತ ವಿದ್ಯಾಮಾನಕ್ಕೆ ಮೌಲಿಕ ಬೆಳಕು ಚೆಲ್ಲಿದ್ದಾರೆ.

ಇದನ್ನೂ ಓದಿ: ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಇನ್ನು “ಆಚಂಗಿ ನಾರಾಯಣ ಶಾಸ್ತ್ರಿಗಳು ಸಂಸ್ಕೃತ ವನ್ನು ಮಡಿಬಟ್ಟೆಯಲ್ಲಿ ಸುತ್ತಿಟ್ಟಿದ್ದರೆ. ನಮಗೆ ಎಸ್.ಕೆ. ಕರೀಂಖಾನರಂತ ಮೇರು ವ್ಯಕ್ತಿಗಳು ದೊರೆಯುತ್ತಿರಲಿಲ್ಲ”

ತಾನು ಗಳಿಸಿದ ಜ್ಞಾನವನ್ಬು ಇತರರಿಗೆ ಹಂಚಲೇಬೇಕೆಂದು ಈ ನೆಲದಲ್ಲಿ ಕಾನೂನಿಲ್ಲ. ಆದರೆ ಅದು ಆಶಯ. ಸಂವಿಧಾನದ ಆಶಯ ಕೂಡಾ. ನಾರಾಯಣ ಶಾಸ್ತ್ರಿಯವರು ಕರೀಂಖಾನರಿಗೆ ಸಂಸ್ಕೃತ ಕಲಿಸಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ. ಇನ್ನೂ ಸಂವಿಧಾನ ರಚನೆಯೂ ಆಗಿರಲಿಲ್ಲ.

ನಾರಾಯಣ ಶಾಸ್ತ್ರಿಗಳ ನಡೆ ನಮ್ಮ ಪರಂಪರೆಯಾಗಬೇಕಿತ್ತು. ದುರಾದೃಷ್ಡವೆಂದರೆ ಅವರ ಮುಂದುವರಿಕೆಯಾಗಬೇಕಾದವರು ಮುಸ್ಲಿಮನಿಂದ ಸಂಸ್ಕೃತ ಕಲಿಯಲಾರೆವೆಂದು ಹೋಮ ಹವನ ಮಾಡುತ್ತ ಕುಳಿತಿದ್ದಾರೆ ” ಎಂದು ಪ್ರಸಾದ್ ರಕ್ಷಿದಿಯವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸಂಸ್ಕೃತ ಕಲಿಸಲು ಮುಸ್ಲಿಂ ಪ್ರಾಧ್ಯಾಪಕರನ್ನು ನೇಮಿಸಿಕೊಂಡ ಬಂಗಾಳದ ರಾಮಕೃಷ್ಣ ಮಿಷನ್ ವಿದ್ಯಾಮಂದಿರ..

ಸಂಸ್ಕೃತದಿಂದ ಸಂಸ್ಕೃತಿ ಎಂಬ ಮಾತು ಅರ್ಥಹೀನ ಎಂಬುದಕ್ಕೆ ಬನಾರಸ್ ವಿಶ್ವವಿದ್ಯಾಲಯದ
ಈ ಅಸಂಸ್ಕೃತ ವಿದ್ಯಾರ್ಥಿಗಳೇ ಸಾಕ್ಷಿ. ಉರ್ದು ಜ್ಞಾನಪೀಠ ಪ್ರಶಸ್ತಿ‌ ಪುರಸ್ಕೃತರು
ಪ್ರೊ ಗೋಪಿಚಂದ್ ನಾರಂಗ್. ಭಾಷೆಗೂ ಮತಧರ್ಮಕ್ಕೂ ಸಂಬಂಧವಿಲ್ಲ. ವಿಶ್ವವಿದ್ಯಾನಿಲಯಗಳ ಜೊತೆ ಮತಧರ್ಮಗಳ ಹೆಸರುಗಳನ್ನು ಮೊದಲು ಕಿತ್ತೊಗೆಯಬೇಕು. ಅವು ಮತಧರ್ಮ ನಿರಪೇಕ್ಷತೆಗೆ ಸಲ್ಲುವುದಿಲ್ಲ. ಬನಾರಸ್ ಸಂಸ್ಕೃತ ವಿದ್ಯಾರ್ಥಿಗಳ ವರ್ತನೆ ಜಗತ್ತಿನ ಎದುರು ಭಾರತ ತಲೆತಗ್ಗಿಸುವಂತೆ ಮಾಡಿದೆ ಎಂದು ಪಂಡಿತಾರಾಧ್ಯ ಮೈಸೂರುರವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...