Homeಚಳವಳಿಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು....

ಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು….

- Advertisement -
- Advertisement -

ಮೊದಲನೆಯ ಫೋಟೋದಲ್ಲಿರುವವರ ಹೆಸರು ಗೋಪಾಲಿಕ ಅಂತರ್ಜನಂ..ಸಂಪ್ರದಾಯವಾದಿ ನಂಬೂದಿರಿ ಬ್ರಾಹ್ಮಣ ಕುಟುಂಬದ ಮಗಳು.
ಕಳೆದ 29 ವರ್ಷದಿಂದ ಮಲಪ್ಪುರಂ ಜಿಲ್ಲೆಯ ಸರಕಾರೀ ಶಾಲೆಯೊಂದರಲ್ಲಿ ಅರೇಬಿಕ್ ಶಿಕ್ಷಕಿ..
ಅನ್ಯಮತೀಯ ಅದ್ಯಾಪಕಿಗೆ ಮೊದಲು ಕರ್ಮಠರಿಂದ ವಿರೋಧ ವ್ಯಕ್ತವಾದರೂ ನಂತರ ಊರವರ , ವಿದ್ಯಾರ್ಥಿಗಳ ಹೆಮ್ಮೆಗೆ ಪಾತ್ರವಾದ ಈ ಅಧ್ಯಾಪಕಿಯನ್ನು ವಿಶ್ವ ಅರೇಬಿಕ್ ದಿನದಂದು ಮಲಪ್ಪುರಂ ಜಿಲ್ಲೆಯ ಸಮಸ್ತ ಮುಸ್ಲಿಂ ಸಂಘಟನೆಗಳು ಆದರಿಸಿ ಸನ್ಮಾನಿಸಿತ್ತು..

ಎರಡನೆಯ ಚಿತ್ರದಲ್ಲಿರುವವರು ಡಾ. ಫಿರೋಜ್ ಖಾನ್.
ತಾತ ಪ್ರಸಿದ್ಧ ಭಜನೆಕಾರ ಗಫೂರ್ ಖಾನರಿಂದ ತೊಡಗಿ ಸ್ವಯಂ ಸಂಸ್ಕೃತ ಅಭ್ಯಸಿಸಿದ್ದ ತಂದೆ ರಂಜಾನ್ ಖಾನ್ ರವರೆಗೆ ಸಂಸ್ಕೃತದ ಸೆಳೆತ ರಕ್ತದಲ್ಲೇ ಇದ್ದ ವಿದ್ಯಾರ್ಥಿ.

ಸಂಸ್ಕೃತ ಅಧ್ಯಯನದಲ್ಲಿ ಶಾಸ್ತ್ರಿ, ಶಿಕ್ಷಾ ಶಾಸ್ತ್ರಿ, ಆಚಾರ್ಯ ಅಧ್ಯಯನ ಮುಗಿಸಿ ಜೈಪುರದ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದಿಂದ ಪಿಹೆಚ್ ಡಿ ಪದವಿ ಪಡೆದ ಪ್ರತಿಭಾವಂತ.
ತನ್ನ ಅರ್ಹತೆಯ ಮೇರೆಗೆ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಸಹಾಯಕ ಪ್ರೊಫೆಸರ್ ಆಗಿ ಆಯ್ಕೆಯಾದ ಫಿರೋಜ್ ಮುಸಲ್ಮಾನ ಎನ್ನುವ ಒಂದೇ ಕಾರಣಕ್ಕಾಗಿ ಅಲ್ಲಿಯ “ದೇಶಪ್ರೇಮಿ” ವಿದ್ಯಾರ್ಥಿಗಳ ವಿರೋಧದಿಂದಾಗಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡುವಂತಾಯಿತು…
ಮೊದಲನೆಯವರಿಗೆ ಸಮಾಜ, ಸಮುದಾಯ ಎರಡೂ ಸ್ವಾಗತಿಸಿ ಗೌರವಿಸಿದರೆ ಎರಡನೆಯವರು ಮೋದಿಜಿಯ ಸ್ವಂತ ಕ್ಷೇತ್ರದಲ್ಲೇ ಯಾರ ಸಹಕಾರವೂ ದೊರೆಯದೆ ತನ್ನ ಧರ್ಮದ ಕಾರಣದಿಂದ ಸೋಲೊಪ್ಪಿಕೊಂಡರು…

ವ್ಯತ್ಯಾಸ ಇಷ್ಟೇ.. ಮೊದಲನೆಯದು ನಡೆದದ್ದು ಕೇರಳದಲ್ಲಿ .. ಎರಡನೆಯದು ಯೋಗಿಯ ರಾಮರಾಜ್ಯದಲ್ಲಿ… ಎಂದು ಕಿಶನ್‌ ಕುಮಾರ್‌ ಹೆಗಡೆಯವರು ಪ್ರಸ್ತುತ ವಿದ್ಯಾಮಾನಕ್ಕೆ ಮೌಲಿಕ ಬೆಳಕು ಚೆಲ್ಲಿದ್ದಾರೆ.

ಇದನ್ನೂ ಓದಿ: ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಇನ್ನು “ಆಚಂಗಿ ನಾರಾಯಣ ಶಾಸ್ತ್ರಿಗಳು ಸಂಸ್ಕೃತ ವನ್ನು ಮಡಿಬಟ್ಟೆಯಲ್ಲಿ ಸುತ್ತಿಟ್ಟಿದ್ದರೆ. ನಮಗೆ ಎಸ್.ಕೆ. ಕರೀಂಖಾನರಂತ ಮೇರು ವ್ಯಕ್ತಿಗಳು ದೊರೆಯುತ್ತಿರಲಿಲ್ಲ”

ತಾನು ಗಳಿಸಿದ ಜ್ಞಾನವನ್ಬು ಇತರರಿಗೆ ಹಂಚಲೇಬೇಕೆಂದು ಈ ನೆಲದಲ್ಲಿ ಕಾನೂನಿಲ್ಲ. ಆದರೆ ಅದು ಆಶಯ. ಸಂವಿಧಾನದ ಆಶಯ ಕೂಡಾ. ನಾರಾಯಣ ಶಾಸ್ತ್ರಿಯವರು ಕರೀಂಖಾನರಿಗೆ ಸಂಸ್ಕೃತ ಕಲಿಸಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ. ಇನ್ನೂ ಸಂವಿಧಾನ ರಚನೆಯೂ ಆಗಿರಲಿಲ್ಲ.

ನಾರಾಯಣ ಶಾಸ್ತ್ರಿಗಳ ನಡೆ ನಮ್ಮ ಪರಂಪರೆಯಾಗಬೇಕಿತ್ತು. ದುರಾದೃಷ್ಡವೆಂದರೆ ಅವರ ಮುಂದುವರಿಕೆಯಾಗಬೇಕಾದವರು ಮುಸ್ಲಿಮನಿಂದ ಸಂಸ್ಕೃತ ಕಲಿಯಲಾರೆವೆಂದು ಹೋಮ ಹವನ ಮಾಡುತ್ತ ಕುಳಿತಿದ್ದಾರೆ ” ಎಂದು ಪ್ರಸಾದ್ ರಕ್ಷಿದಿಯವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸಂಸ್ಕೃತ ಕಲಿಸಲು ಮುಸ್ಲಿಂ ಪ್ರಾಧ್ಯಾಪಕರನ್ನು ನೇಮಿಸಿಕೊಂಡ ಬಂಗಾಳದ ರಾಮಕೃಷ್ಣ ಮಿಷನ್ ವಿದ್ಯಾಮಂದಿರ..

ಸಂಸ್ಕೃತದಿಂದ ಸಂಸ್ಕೃತಿ ಎಂಬ ಮಾತು ಅರ್ಥಹೀನ ಎಂಬುದಕ್ಕೆ ಬನಾರಸ್ ವಿಶ್ವವಿದ್ಯಾಲಯದ
ಈ ಅಸಂಸ್ಕೃತ ವಿದ್ಯಾರ್ಥಿಗಳೇ ಸಾಕ್ಷಿ. ಉರ್ದು ಜ್ಞಾನಪೀಠ ಪ್ರಶಸ್ತಿ‌ ಪುರಸ್ಕೃತರು
ಪ್ರೊ ಗೋಪಿಚಂದ್ ನಾರಂಗ್. ಭಾಷೆಗೂ ಮತಧರ್ಮಕ್ಕೂ ಸಂಬಂಧವಿಲ್ಲ. ವಿಶ್ವವಿದ್ಯಾನಿಲಯಗಳ ಜೊತೆ ಮತಧರ್ಮಗಳ ಹೆಸರುಗಳನ್ನು ಮೊದಲು ಕಿತ್ತೊಗೆಯಬೇಕು. ಅವು ಮತಧರ್ಮ ನಿರಪೇಕ್ಷತೆಗೆ ಸಲ್ಲುವುದಿಲ್ಲ. ಬನಾರಸ್ ಸಂಸ್ಕೃತ ವಿದ್ಯಾರ್ಥಿಗಳ ವರ್ತನೆ ಜಗತ್ತಿನ ಎದುರು ಭಾರತ ತಲೆತಗ್ಗಿಸುವಂತೆ ಮಾಡಿದೆ ಎಂದು ಪಂಡಿತಾರಾಧ್ಯ ಮೈಸೂರುರವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...