Homeಚಳವಳಿಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು....

ಭಾಷೆಗೆ ಧರ್ಮದ ಹಂಗಿಲ್ಲ: ಫಿರೋಜ್‌ ಖಾನ್‌ ಪ್ರಕರಣದಲ್ಲಿ ನೆಟ್ಟಿಗರ ಅಭಿಪ್ರಾಯಗಳು….

- Advertisement -
- Advertisement -

ಮೊದಲನೆಯ ಫೋಟೋದಲ್ಲಿರುವವರ ಹೆಸರು ಗೋಪಾಲಿಕ ಅಂತರ್ಜನಂ..ಸಂಪ್ರದಾಯವಾದಿ ನಂಬೂದಿರಿ ಬ್ರಾಹ್ಮಣ ಕುಟುಂಬದ ಮಗಳು.
ಕಳೆದ 29 ವರ್ಷದಿಂದ ಮಲಪ್ಪುರಂ ಜಿಲ್ಲೆಯ ಸರಕಾರೀ ಶಾಲೆಯೊಂದರಲ್ಲಿ ಅರೇಬಿಕ್ ಶಿಕ್ಷಕಿ..
ಅನ್ಯಮತೀಯ ಅದ್ಯಾಪಕಿಗೆ ಮೊದಲು ಕರ್ಮಠರಿಂದ ವಿರೋಧ ವ್ಯಕ್ತವಾದರೂ ನಂತರ ಊರವರ , ವಿದ್ಯಾರ್ಥಿಗಳ ಹೆಮ್ಮೆಗೆ ಪಾತ್ರವಾದ ಈ ಅಧ್ಯಾಪಕಿಯನ್ನು ವಿಶ್ವ ಅರೇಬಿಕ್ ದಿನದಂದು ಮಲಪ್ಪುರಂ ಜಿಲ್ಲೆಯ ಸಮಸ್ತ ಮುಸ್ಲಿಂ ಸಂಘಟನೆಗಳು ಆದರಿಸಿ ಸನ್ಮಾನಿಸಿತ್ತು..

ಎರಡನೆಯ ಚಿತ್ರದಲ್ಲಿರುವವರು ಡಾ. ಫಿರೋಜ್ ಖಾನ್.
ತಾತ ಪ್ರಸಿದ್ಧ ಭಜನೆಕಾರ ಗಫೂರ್ ಖಾನರಿಂದ ತೊಡಗಿ ಸ್ವಯಂ ಸಂಸ್ಕೃತ ಅಭ್ಯಸಿಸಿದ್ದ ತಂದೆ ರಂಜಾನ್ ಖಾನ್ ರವರೆಗೆ ಸಂಸ್ಕೃತದ ಸೆಳೆತ ರಕ್ತದಲ್ಲೇ ಇದ್ದ ವಿದ್ಯಾರ್ಥಿ.

ಸಂಸ್ಕೃತ ಅಧ್ಯಯನದಲ್ಲಿ ಶಾಸ್ತ್ರಿ, ಶಿಕ್ಷಾ ಶಾಸ್ತ್ರಿ, ಆಚಾರ್ಯ ಅಧ್ಯಯನ ಮುಗಿಸಿ ಜೈಪುರದ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದಿಂದ ಪಿಹೆಚ್ ಡಿ ಪದವಿ ಪಡೆದ ಪ್ರತಿಭಾವಂತ.
ತನ್ನ ಅರ್ಹತೆಯ ಮೇರೆಗೆ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯಕ್ಕೆ ಸಹಾಯಕ ಪ್ರೊಫೆಸರ್ ಆಗಿ ಆಯ್ಕೆಯಾದ ಫಿರೋಜ್ ಮುಸಲ್ಮಾನ ಎನ್ನುವ ಒಂದೇ ಕಾರಣಕ್ಕಾಗಿ ಅಲ್ಲಿಯ “ದೇಶಪ್ರೇಮಿ” ವಿದ್ಯಾರ್ಥಿಗಳ ವಿರೋಧದಿಂದಾಗಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡುವಂತಾಯಿತು…
ಮೊದಲನೆಯವರಿಗೆ ಸಮಾಜ, ಸಮುದಾಯ ಎರಡೂ ಸ್ವಾಗತಿಸಿ ಗೌರವಿಸಿದರೆ ಎರಡನೆಯವರು ಮೋದಿಜಿಯ ಸ್ವಂತ ಕ್ಷೇತ್ರದಲ್ಲೇ ಯಾರ ಸಹಕಾರವೂ ದೊರೆಯದೆ ತನ್ನ ಧರ್ಮದ ಕಾರಣದಿಂದ ಸೋಲೊಪ್ಪಿಕೊಂಡರು…

ವ್ಯತ್ಯಾಸ ಇಷ್ಟೇ.. ಮೊದಲನೆಯದು ನಡೆದದ್ದು ಕೇರಳದಲ್ಲಿ .. ಎರಡನೆಯದು ಯೋಗಿಯ ರಾಮರಾಜ್ಯದಲ್ಲಿ… ಎಂದು ಕಿಶನ್‌ ಕುಮಾರ್‌ ಹೆಗಡೆಯವರು ಪ್ರಸ್ತುತ ವಿದ್ಯಾಮಾನಕ್ಕೆ ಮೌಲಿಕ ಬೆಳಕು ಚೆಲ್ಲಿದ್ದಾರೆ.

ಇದನ್ನೂ ಓದಿ: ಈ ಧರ್ಮದವರು ನಮಗೆ ಪಾಠ ಬೋಧಿಸುವುದು ಬೇಡ: ಬನಾರಸ್ ವಿ.ವಿ.ಯಲ್ಲಿ ABVPಯ ತಗಾದೆ

ಇನ್ನು “ಆಚಂಗಿ ನಾರಾಯಣ ಶಾಸ್ತ್ರಿಗಳು ಸಂಸ್ಕೃತ ವನ್ನು ಮಡಿಬಟ್ಟೆಯಲ್ಲಿ ಸುತ್ತಿಟ್ಟಿದ್ದರೆ. ನಮಗೆ ಎಸ್.ಕೆ. ಕರೀಂಖಾನರಂತ ಮೇರು ವ್ಯಕ್ತಿಗಳು ದೊರೆಯುತ್ತಿರಲಿಲ್ಲ”

ತಾನು ಗಳಿಸಿದ ಜ್ಞಾನವನ್ಬು ಇತರರಿಗೆ ಹಂಚಲೇಬೇಕೆಂದು ಈ ನೆಲದಲ್ಲಿ ಕಾನೂನಿಲ್ಲ. ಆದರೆ ಅದು ಆಶಯ. ಸಂವಿಧಾನದ ಆಶಯ ಕೂಡಾ. ನಾರಾಯಣ ಶಾಸ್ತ್ರಿಯವರು ಕರೀಂಖಾನರಿಗೆ ಸಂಸ್ಕೃತ ಕಲಿಸಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ. ಇನ್ನೂ ಸಂವಿಧಾನ ರಚನೆಯೂ ಆಗಿರಲಿಲ್ಲ.

ನಾರಾಯಣ ಶಾಸ್ತ್ರಿಗಳ ನಡೆ ನಮ್ಮ ಪರಂಪರೆಯಾಗಬೇಕಿತ್ತು. ದುರಾದೃಷ್ಡವೆಂದರೆ ಅವರ ಮುಂದುವರಿಕೆಯಾಗಬೇಕಾದವರು ಮುಸ್ಲಿಮನಿಂದ ಸಂಸ್ಕೃತ ಕಲಿಯಲಾರೆವೆಂದು ಹೋಮ ಹವನ ಮಾಡುತ್ತ ಕುಳಿತಿದ್ದಾರೆ ” ಎಂದು ಪ್ರಸಾದ್ ರಕ್ಷಿದಿಯವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸಂಸ್ಕೃತ ಕಲಿಸಲು ಮುಸ್ಲಿಂ ಪ್ರಾಧ್ಯಾಪಕರನ್ನು ನೇಮಿಸಿಕೊಂಡ ಬಂಗಾಳದ ರಾಮಕೃಷ್ಣ ಮಿಷನ್ ವಿದ್ಯಾಮಂದಿರ..

ಸಂಸ್ಕೃತದಿಂದ ಸಂಸ್ಕೃತಿ ಎಂಬ ಮಾತು ಅರ್ಥಹೀನ ಎಂಬುದಕ್ಕೆ ಬನಾರಸ್ ವಿಶ್ವವಿದ್ಯಾಲಯದ
ಈ ಅಸಂಸ್ಕೃತ ವಿದ್ಯಾರ್ಥಿಗಳೇ ಸಾಕ್ಷಿ. ಉರ್ದು ಜ್ಞಾನಪೀಠ ಪ್ರಶಸ್ತಿ‌ ಪುರಸ್ಕೃತರು
ಪ್ರೊ ಗೋಪಿಚಂದ್ ನಾರಂಗ್. ಭಾಷೆಗೂ ಮತಧರ್ಮಕ್ಕೂ ಸಂಬಂಧವಿಲ್ಲ. ವಿಶ್ವವಿದ್ಯಾನಿಲಯಗಳ ಜೊತೆ ಮತಧರ್ಮಗಳ ಹೆಸರುಗಳನ್ನು ಮೊದಲು ಕಿತ್ತೊಗೆಯಬೇಕು. ಅವು ಮತಧರ್ಮ ನಿರಪೇಕ್ಷತೆಗೆ ಸಲ್ಲುವುದಿಲ್ಲ. ಬನಾರಸ್ ಸಂಸ್ಕೃತ ವಿದ್ಯಾರ್ಥಿಗಳ ವರ್ತನೆ ಜಗತ್ತಿನ ಎದುರು ಭಾರತ ತಲೆತಗ್ಗಿಸುವಂತೆ ಮಾಡಿದೆ ಎಂದು ಪಂಡಿತಾರಾಧ್ಯ ಮೈಸೂರುರವರು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...